ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಅಲ್ಲ: ರಘುಪತಿ ಭಟ್

Posted by Vidyamaana on 2024-05-31 07:57:34 |

Share: | | | | |


ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಅಲ್ಲ: ರಘುಪತಿ ಭಟ್

ಕುಂದಾಪುರ : ನಾನು ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ ಎಂದು ಹಿಜಾಬ್ ಪರ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಮಾಜಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗುವ ಮೊದಲು ಆ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು.

ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಕೇಂದ್ರಕ್ಕೆ ಸೇರಿದ್ದು

Posted by Vidyamaana on 2024-02-27 16:21:42 |

Share: | | | | |


ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಕೇಂದ್ರಕ್ಕೆ ಸೇರಿದ್ದು

ಪುತ್ತೂರು: ಪುತ್ತೂರಿನ ರಾಜಕೀಯದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸಲು ಮತ್ತು ಪುತ್ತೂರು ಬಿಜೆಪಿಯಲ್ಲಿ ತನ್ಙ ಯಾಜಮಾನ್ಯ ಪುನರ್ ಸ್ಥಾಪಿಸಲು ಹೆಣಗಾಡುವ ಸಂಜೀವ ಮಠಂದೂರು ಅವರ, ಪ್ರಯತ್ನದ ಅಂಗವಾಗಿ ಅಡಿಕೆಯ ಬೆಲೆ ಕುಸಿತವನ್ನು ಬಳಸಿಕೊಂಡು ಕರ್ನಾಟಕ ಸರಕಾರವನ್ನು ರೈತ ವಿರೋಧಿ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಸಿಯುತ್ತಿರುವ ಅಡಿಕೆ ಬೆಲೆಗೆ ಕರ್ನಾಟಕ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಲ್ಲಿ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಒಂದು ಕಡೆ ಹೇಳುವ ಸಂಜೀವ ಮಠಂದೂರ್ರವರು ಎಪಿಎಂಸಿಯಲ್ಲಿ  ಸಂಗ್ರಹವಾಗುವ ಸೆಸ್ ಹಣ  ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಈ ಹಣದ ಆವರ್ತನ ನಿಧಿಯಿಂದ ರಾಜ್ಯ ಸರ್ಕಾರ ಅಡಿಕೆಗೆ ಬೆಂಬಲ ಬೆಲೆ ನೀಡಬೇಕು ಎಂದು ಹೇಳುತ್ತಾರೆ. ಹೀಗೆ ಸ್ಪಷ್ಟತೆ ಇಲ್ಲದೆ ಮಾತನಾಡಿದ ಸಂಜೀವ ಮಠಂದೂರ್ರವರಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಅಂದರೆ ಏನು ಅನ್ನುವುದೇ ಗೊತ್ತಿಲ್ಲ. ಎಪಿಎಂಸಿಯಲ್ಲಿ ಏನು ಆಗುತ್ತಿದೆ ಅನ್ನುವುದೂ ಗೊತ್ತಿಲ್ಲ ಅನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಕುಟುಕಿದರು.

ರಾಜ್ಯ ಸರ್ಕಾರ ನಿರ್ದಿಷ್ಟ ಬೆಳೆಯ ಮಾರುಕಟ್ಟೆ ದರ ಕುಸಿದಿರುವುದನ್ನು ಉಲ್ಲೇಖಿಸಿ ಕೇಂದ್ರ ಸರಕಾರಕ್ಕೆ ಮಾರುಕಟ್ಟೆ ಮಧ್ಯ ಪ್ರವೇಶಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಬೇಕಾಗುತ್ತದೆ. ಇದಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿ ಶೇಕಡ 50:50ರ ಅನುಪಾತದ ಪಾಲುಗಾರಿಕೆಯಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಹಿಂದೆ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರಕಾರ ಅಡಿಕೆಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು ಇದೇ ವ್ಯವಸ್ಥೆಯಲ್ಲಿ. ಈಗ ಭಾರತದ ಗಡಿಗಳಲ್ಲಿ ವಿದೇಶೀ ಅಡಿಕೆ  ಭಾರತದ ಮಾರುಕಟ್ಟೆಗೆ ಕಳ್ಳಸಾಗಾಟದ ಮುಖಾಂತರ ಬಂದು ಮಾರುಕಟ್ಟೆ ದರ ತೀವ್ರವಾಗಿ ಕುಸಿದ ಈ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಲ್ಲಿ ರಾಜ್ಯ ಸರ್ಕಾರ ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಸಂಜೀವ ಮಠಂದೂರ್ರವರು ಒತ್ತಾಯಿಸುತ್ತಿರುವುದು ಮತ್ತು ಈಗ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಬೆಂಬಲ ಬೆಲೆಗಾಗಿ ಸರಕಾರವನ್ನು ಒತ್ತಾಯಿಸಲಿದ್ದಾರೆ ಎಂದು ಹೇಳಿರುವುದು ನಗೆ ಪಾಟಲಿನ ವಿಚಾರವಾಗಿದೆ ಎಂದರು.

ಸಂಜೀವ ಮಠಂದೂರ್ರವರಿಗೆ ಈ ರಾಜ್ಯದಲ್ಲಿ ಏನು ಆಗುತ್ತಾ ಇದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಯಾವ ರೀತಿಯಲ್ಲಿ ರೈತರ ಪರವಾಗಿ ಕೆಲಸ ಮಾಡುತ್ತಿದೆ ಅನ್ನುವುದರ ಅರಿವೇ ಇಲ್ಲ. ಅವರು ದಯವಿಟ್ಟು ಮೊನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಮಾಡಿದ ಬಜೆಟ್ ಭಾಷಣವನ್ನು ಒಮ್ಮೆ ಸರಿಯಾಗಿ ಕೇಳಬೇಕು. ಕೇಳುವುದಕ್ಕೆ ಸಾಧ್ಯವಿಲ್ಲವೆಂದಾದರೆ ಬಜೆಟ್ ಪ್ರತಿಯನ್ನು ಪಡೆದು ಅದನ್ನು ಓದಬೇಕು. ಈ ಬಾರಿಯ  ಕರ್ನಾಟಕ ರಾಜ್ಯ ಸರ್ಕಾರದ ಬಜೆಟಿನಲ್ಲಿ ಇತರ ಕೆಲವು ಬೆಳೆಗಳು ಸೇರಿದಂತೆ ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುವುದಕ್ಕಾಗಿ ಈಗಾಗಲೇ ಪ್ರಸ್ತಾವನೆಯನ್ನು ಕಳುಹಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಅಧಿಕೃತವಾಗಿ ಮತ್ತು ಸ್ಪಷ್ಟವಾಗಿ ಘೋಷಿಸಿದ್ದಾರೆ.  ಇದರ ಅರಿವಿಲ್ಲದ ಮಾಜಿ ಶಾಸಕರು ಈಗ ಬೆಂಬಲೆ ಬೆಲೆಗಾಗಿ ಬೇಡಿಕೆ ಇಟ್ಟಿದ್ದಾರೆ. 

ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂಬ ಪ್ರಸ್ತಾವನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿ ಆಗಿದೆ. ಆದ್ದರಿಂದ ಸಂಜೀವಣ್ಣ, ನಿದ್ದೆಯಿಂದ ಬೇಗ ಏಳಬೇಕಿತ್ತು ಎಂದು ಲೇವಡಿ ಮಾಡಿದರು.

ಕರ್ನಾಟಕ ಸರಕಾರದ ಈ ಪ್ರಸ್ತಾವನೆಯನ್ನು ಅಂಗೀಕರಿಸಿ ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಇರುವುದು ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರಕ್ಕೆ. ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆಯೇ ಹೊರತು ರಾಜ್ಯ ಸರಕಾರದಿಂದ ಯಾವ ನಿರ್ಲಕ್ಷವೂ ಆಗಿಲ್ಲ. ಸಂಜೀವ ಮಠಂದೂರ್ರವರಿಗೆ ಈ ಹಂತದಲ್ಲಿ ಅಡಿಕೆಗೆ ಬೆಂಬಲ ಬೆಲೆ ಸಿಗಬೇಕೆಂಬ  ಅವರ ಮಾತಿನಲ್ಲಿ ಕಿಂಚಿತ್ತಾದರೂ ಸತ್ಯ ಇರುವುದಾದರೆ, ಅಡಿಕೆ ಬೆಳೆಗಾರರ ಬಗ್ಗೆ ನಿಜವಾಗಿಯೂ ಕಾಳಜಿ ಇರುವುದಾದರೆ ಅವರು ಒತ್ತಾಯ ಮಾಡಬೇಕಾಗಿರುವುದು ಕರ್ನಾಟಕ ಕಾಂಗ್ರೆಸ್ ಸರಕಾರವನ್ನಲ್ಲ,  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ಮೋದಿ ಅವರ ಆಡಳಿತವನ್ನು. ಕಳ್ಳ ಸಾಗಾಟದ ಮೂಲಕ ದೇಶವನ್ನು ಪ್ರವೇಶಿಸಿ ಇಲ್ಲಿನ ಅಡಿಕೆ ಮಾರುಕಟ್ಟೆಯನ್ನು ಕೆಡಿಸುತ್ತಿರುವ ವಿದೇಶೀ ಅಡಿಕೆಯನ್ನು ದೇಶ ಪ್ರವೇಶಿಸದಂತೆ ತಡೆಯುವುದಕ್ಕೆ ಸಾದ್ಯವಾಗದ ಕೇಂದ್ರ ಸರಕಾರದ ವೈಫಲ್ಯಗಳನ್ನು ಮರೆಮಾಚಿ ಜನರ ಕಣ್ಣಿಗೆ ಮಣ್ಣೆರಚುವ ಉದ್ದೇಶದಿಂದ ಸಂಜೀವ ಮಠಂದೂರು ಈ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದರು.

ಅಕ್ರಮ ಅಡಕೆ ಅಂದರೆ ಕಳ್ಳಸಾಗಾಣಿಕೆಯೇ!!:

ಅಡಿಕೆ ಮಾರುಕಟ್ಟೆ ಪುನಶ್ಚೇತನಕ್ಕೆ ಈಗ ಆಗಬೇಕಾಗಿರುವುದಾದರೂ ಏನು?: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರಿಂದ ತೊಡಗಿ ಅಡಿಕೆಯ ಕಟ್ಟ ಕಡೆಯ ಕೃಷಿಕರವರೆಗೆ  ಭಾರತಕ್ಕೆ ಕಳ್ಳ ಸಾಗಾಣಿಕೆಯ ಮೂಲಕ ಅವ್ಯಾಹತವಾಗಿ  ಕಳಪೆ ಗುಣಮಟ್ಟದ ಅಡಿಕೆ ಪೂರೈಕೆ ಆಗುತ್ತಿದೆ. ಈ ಕಳಪೆ ಗುಣಮಟ್ಟದ ಅಡಿಕೆಯನ್ನು ನಮ್ಮ ರೈತರು ಬೆಳೆದ ಶ್ರೇಷ್ಠ ಗುಣಮಟ್ಟದ ಅಡಿಕೆಗೆ ಮಿಶ್ರಣ ಮಾಡಿ, ಅಡಿಕೆಯ ಮಾರುಕಟ್ಟೆಯನ್ನು ಹಾಳುಗೆಡಹಿ ಅಡಿಕೆಯ ಬೆಲೆಯ ಕುಸಿತಕ್ಕೆ ಕಾರಣವಾಗಿದೆ ಎಂದು ಸ್ಪಷ್ಟವಾಗಿ ಗೊತ್ತಿದೆ. ಆದ್ದರಿಂದ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ತಕ್ಷಣ ದೇಶದ ಗಡಿಗಳನ್ನು ಭದ್ರಪಡಿಸಿ, ವಿದೇಶೀ ಅಡಿಕೆಯ ಅಕ್ರಮ ಕಳ್ಳಸಾಗಾಟವನ್ನು ತಡೆದು, ತನ್ಮೂಲಕ ಅಡಿಕೆಯ ಕಲಬೆರಕೆಯನ್ನು ನಿಲ್ಲಿಸಿ ಮಾರುಕಟ್ಟೆ ಚೇತರಿಕೆಗೆ ಕ್ರಮ ಕೈಗೊಳ್ಳುವುದೇ ಅಡಿಕೆ ಮಾರುಕಟ್ಟೆಯ ಪುನಶ್ಚೇತನಕ್ಕೆ ಅಗತ್ಯವಾಗಿ ಆಗಬೇಕಾಗಿರುವುದಾಗಿದೆ. ಇದನ್ನೇ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಹೇಳಿದ್ದಾರೆ. ಯಾವ ಕ್ಷಣದಲ್ಲಿ ಸಂಜೀವ ಮಠಂದೂರ್ರವರು ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದರೋ ಅದರ ಮರು ದಿವಸವೇ ಕ್ಯಾಂಪ್ಕೋ ಅಧ್ಯಕ್ಷರು ಅಡಿಕೆ ಮಾರುಕಟ್ಟೆಯ ಪುನಶ್ಚೇತನಕ್ಕೆ ಕಳ್ಳ ಸಾಗಾಣಿಕೆಯನ್ನು  ತಡೆಯುವಬೇಕು ಎಂದು ಹೇಳಿಕೆ ನೀಡಿ ಸಂಜೀವ ಮಠಂದೂರ್ರವರ ವಾದವನ್ನು ಸುಳ್ಳು ಎಂದು ನಿರೂಪಿಸಿದ್ದಾರೆ ಎಂದರು.

ಅಡಿಕೆಯ ಕಳ್ಳ ಸಾಗಾಣಿಕೆಯಿಂದಾಗಿ  ಅಡಿಕೆಯ ಮಾರುಕಟ್ಟೆ ಕುಸಿದಿದೆ ಎಂದು ಕ್ಯಾಂಪ್ಕೋದ ಅಧ್ಯಕ್ಷರೇ ಮತ್ತೆ ಮತ್ತೆ ಹೇಳುತ್ತಿದ್ದರೂ  ದಕ್ಷಿಣ ಕನ್ನಡ ಜಿಲ್ಲೆಯ ಸಂಸತ್ ಸದಸ್ಯರಾದ ಮಾನ್ಯ ನಳಿನ್ ಕುಮಾರ್ ಕಟೀಲ್ ಆಗಲಿ ಕೇಂದ್ರದ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆಯವರಾಗಲಿ ಈ ವಿಚಾರದಲ್ಲಿ ಯಾಕೆ ಬಾಯಿಯನ್ನೇ ಬಿಡುತ್ತಿಲ್ಲ?  ಅಡಿಕೆ ಕಳ್ಳ ಸಾಗಾಣಿಕೆಯ ಕಿಂಗ್ ಪಿನ್ನುಗಳು ಇವರ ಬಾಯಿಯನ್ನು ಮುಚ್ಚಿದ್ದಾರೆಯೇ?  ಊರಿಗೆಲ್ಲ ತಿಳಿದಿರುವಂತೆ ಬಿಜೆಪಿಯ ದೊಡ್ಡ ದೊಡ್ಡ ಕುಳಗಳು  ಅಡಿಕೆ ಮಾರುಕಟ್ಟೆಯಲ್ಲಿ ಕೈಯಾಡಿಸುತ್ತಿರುವುದೇ ಇದಕ್ಕೆ ಕಾರಣ. ಬಿಜೆಪಿಯ ಚುನಾವಣಾ ಚಾಣಕ್ಯರ ಸುಪುತ್ರ ನಡೆಸುತ್ತಿರುವ ಅಡಿಕೆ ವ್ಯವಹಾರಕ್ಕೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದಲೇ ಈ ಅಡಿಕೆ ಕಳ್ಳ ಸಾಗಾಣಿಕೆಯನ್ನು ಕೇಂದ್ರ ಸರಕಾರ  ಕಂಡು ಕಾಣದಂತೆ ಕಣ್ಣು ಮುಚ್ಚಿ  ಕುಳಿತಿದೆ.  ಇದೇ ಕಾರಣಕ್ಕಾಗಿಯೇ ಕ್ಯಾಂಪ್ಕೋ ಅಧ್ಯಕ್ಷರಾದಿಯಾಗಿ ಬಿಜೆಪಿಯವರೆಲ್ಲರೂ  ಅಡಿಕೆ ಅಕ್ರಮವಾಗಿ ಆಮದಾಗುತ್ತಿದೆ ಎಂದು ಹೇಳುತ್ತಾರಷ್ಟೇ ಹೊರತು  ಅಂತರಾಷ್ಟ್ರೀಯ ಗಡಿಗಳಲ್ಲಿ ವಿದೇಶಿ ಅಡಿಕೆ ಕಳ್ಳ ಸಾಗಾಣಿಕೆಯಾಗಿ ಭಾರತಕ್ಕೆ  ಬಂದು ನಮ್ಮ ಮಾರುಕಟ್ಟೆಯನ್ನು ಹಾಳುಗೆಡಹುತ್ತಿದೆ ಎಂದು ಹೇಳುತ್ತಿಲ್ಲ . ಅಕ್ರಮ ಆಮದು ಎಂದರೆ ಕಳ್ಳ ಸಾಗಾಣಿಕೆಯಲ್ಲದೆ ಮತ್ತೇನು ? ಎಂದು ಪ್ರಶ್ನಿಸಿದರು.

ಎ.ಪಿ.ಎಂ.ಸಿ. ಸೆಸ್ : 

ಎಪಿಎಂಸಿಯಲ್ಲಿ ಸೆಸ್ ರೂಪದಲ್ಲಿ ಹಣ ಸಂಗ್ರಹವಾಗುತ್ತದೆ,  ಈ ಹಣ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ,  ಈ ಹಣದಲ್ಲಿ ರಾಜ್ಯ ಸರಕಾರ ಬೆಂಬಲ ಬೆಲೆ ನೀಡಬೇಕು ಎಂದು ಹೇಳುತ್ತಿರುವ ಮಾನ್ಯ ಸಂಜೀವ ಮಠಂದೂರ್ರವರಿಗೆ  ಎಪಿಎಂಸಿಯ ಪರಿಸ್ಥಿತಿಯ ಬಗ್ಗೆ ಯಾವುದೇ ರೀತಿಯ ತಿಳುವಳಿಕೆ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಎಪಿಎಂಸಿಯಲ್ಲಿ ಸೆಸ್ ರೂಪದಲ್ಲಿ  ಸಂಗ್ರಹವಾಗುವ  ಹಣ ಇಂದು ರಾಜ್ಯ ಸರ್ಕಾರಕ್ಕೆ ಹೋಗುತ್ತಿಲ್ಲ.  ಸೆಸ್ ಹಣ ಒಂದಷ್ಟು ರಸ್ತೆಗಳನ್ನು ನಿರ್ಮಿಸುವುದಕ್ಕೆ ಎಪಿಎಂಸಿ ಸದಸ್ಯರಿಗೆ ನೀಡುವ ಅನುದಾನ, ರೈತರು ಅಪಘಾತದಿಂದ ಅಕಾಲಿಕ ಮರಣ ಹೊಂದಿದಾಗ ನೀಡುವ ಪರಿಹಾರ, ಇತ್ಯಾದಿ ಬಳಕೆಗೆ ಎಪಿಎಂಸಿ ಸೆಸ್ ಹಣ ಬಳಕೆಯಾಗುತ್ತದೆಯಷ್ಟೇ ಹೊರತು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆ ಹಣ ಹೋಗುತ್ತಿಲ್ಲ ಎನ್ನುವ  ಪ್ರಾಥಮಿಕ ಜ್ಞಾನವೂ ಮಾಜಿ ಶಾಸಕರಿಗೆ ಇಲ್ಲದಿರುವುದು ದುರ್ದೈವದ ಸಂಗತಿಯಾಗಿದೆ. ಕೇಂದ್ರ ಸರಕಾರ 3 ಕರಾಳ  ಕೃಷಿ ಕಾಯಿದೆಗಳನ್ನು ತಂದು ಎಪಿಎಂಸಿ ಕಾಯ್ದೆಯನ್ನ ತಿದ್ದುಪಡಿ ಮಾಡುವವರೆಗೆ ಎಪಿಎಂಸಿಗೆ ಸೆಸ್ ರೂಪದಲ್ಲಿ ಪ್ರತಿ ವರ್ಷ ಕೋಟ್ಯಂತರ ರೂಪಾಯಿ  ಆದಾಯ ಬರುತ್ತಿತ್ತು.  ಕೇಂದ್ರ ಸರ್ಕಾರವನ್ನು ಅನುಸರಿಸಿ ಕರ್ನಾಟಕ ರಾಜ್ಯವನ್ನು ಆಗ ಆಳುತ್ತಿದ್ದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ  ಕರ್ನಾಟಕ ಎಪಿಎಂಸಿ ಕಾಯ್ದೆಗೂ ತಿದ್ದುಪಡಿ ತಂದಿದ್ದು,   ರೈತರ ಪ್ರತಿಭಟನೆಗಳ ನಂತರ ಕೇಂದ್ರ ಸರ್ಕಾರ ಈ ವಿವಾದಿತ ಎಪಿಎಂಸಿ ಮಸೂದೆಯನ್ನು ಹಿಂತೆಗೆದುಕೊಂಡರೂ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ತಾನು ತಂದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆದುಕೊಂಡಿರಲಿಲ್ಲ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು  ಎಪಿಎಂಸಿಯಲ್ಲಿಯೇ  ಮಾರಾಟ ಮಾಡಬೇಕೆಂದೇನಿಲ್ಲ , ಎಲ್ಲಿ ಬೇಕಿದ್ದರೂ ಮಾರಬಹುದು ಎಂಬ ಕಾನೂನು ಬಂದ ನಂತರ ನಗರ ಮತ್ತು ಹಳ್ಳಿಗಳ ಅಡಿಕೆ ವ್ಯಾಪಾರಿಗಳ ಮೇಲಿದ್ದ ಎಪಿಎಂಸಿ ಹಿಡಿತ ತಪ್ಪಿ ಹೋಗಿ ಏಪಿಎಂಸಿಗೆ ಬರುತ್ತಿದ್ದ ಆದಾಯ ಕುಸಿದು ಹೋಯಿತು. ಇದರ ಜೊತೆಗೆ 2020ರಲ್ಲಿ  ಬಿಜೆಪಿ ಸರಕಾರವು 1.5℅  ಇದ್ದ ಸೆಸ್ ಧರವನ್ನು 1℅ ಕ್ಕೆ , ತದನಂತರ 0.35ಕ್ಕೆ ಇಳಿಸಿ  ಎಪಿಎಂಸಿ ಆದಾಯವನ್ನು ಕನಿಷ್ಠ ಮಟ್ಟಕ್ಕೆ ತಂದು ಹಾಕಿತು. 2020ನೇ ಇಸವಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಅಂದಿನ ಬಿಜೆಪಿ ಸರಕಾರದ ಕಾನೂನು ಸಚಿವರಾದ ಮಾಧುಸ್ವಾಮಿಯವರು ವ್ಯಾಪಾರಿಗಳ ಒತ್ತಡದಿಂದಾಗಿ ಈ ಸೆಸ್ ದರವನ್ನು ಇಳಿಕೆ ಮಾಡಲಾಗಿದೆ ಮತ್ತು ಇದರಿಂದಾಗಿ ಎಪಿಎಂಸಿಯನ್ನು ನಡೆಸುವುದೇ ನಮಗೆ ಕಷ್ಟವಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದನ್ನು ಗಮನಿಸಬಹುದಾಗಿದೆ. ಹೀಗಿದ್ದರೂ ಸಂಜೀವ ಮಠಂದೂರ್ರವರು ಎಪಿಎಂಸಿ ಸೆಸ್ ಹಣದಲ್ಲಿ ಬೆಂಬಲ ಬೆಲೆ ನೀಡಿ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಲೇವಡಿ ಮಾಡಿದರು.

ಅಡಿಕೆ ಬೆಳೆಗಾರರ ಲಾಬಿಯಂತೆ :  

ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರ್ರವರು, ಅಡಿಕೆ ವ್ಯಾಪಾರಿಗಳ ಲಾಬಿ ಇದೆ, ಬೆಳೆಗಾರರ ಲಾಬಿ ಇಲ್ಲ ಎಂಬ ಮಾತನ್ನು ಹೇಳಿದ್ದಾರೆ.  ಈ ಮಾತನ್ನು ಹೇಳಲು ಅವರಿಗೆ ನಾಚಿಕೆ ಆಗಬೇಕು.  ವ್ಯಾಪಾರಿಗಳ ಲಾಭಿಯನ್ನು ವ್ಯಾಪಾರಿಗಳೇ ತಮ್ಮ ಹಣ ಬಲದಿಂದ ಮಾಡುತ್ತಾರೆ.  ಆದರೆ ಅಡಿಕೆ ಬೆಳೆಗಾರರ ಲಾಭಿಯನ್ನು ಮಾಡಬೇಕಾದವರು ಯಾರು?  ಅಡಿಕೆ ಬೆಳೆಗಾರರ ಲಾಬಿಯನ್ನು ಮಾಡಬೇಕಾದವರು ನಮ್ಮ ಜನಪ್ರತಿನಿಧಿಗಳು. ಅಡಿಕೆ ಬೆಳೆಗಾರರಿಗೆ ಸಮಸ್ಯೆ ಬಂದಾಗ, ಅಡಿಕೆ ಮಾರುಕಟ್ಟೆ ಕುಸಿದು ಹೋದಾಗ, ಸರಕಾರಗಳಿಗೆ ಒತ್ತಡವನ್ನು ತಂದು, ಬೆಳಗಾರರ ಹಿತರಕ್ಷಣೆಗೆ ಜನಪ್ರತಿನಿಧಿಗಳೇ ಪ್ರಯತ್ನಿಸಬೇಕು. ಇದೇ ಲಾಬಿ.  ಇಂದು ಅಡಿಕೆ ಬೆಳೆಗಾರರಿಗೆ ಲಾಬಿ ಇಲ್ಲ ಎಂದು ಹೇಳುತ್ತಿರುವ ಮಾನ್ಯ ಸಂಜೀವ ಮಠಂದೂರ್ರವರು  ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಯಾವುದೇ ಲಾಬಿಯನ್ನು ಮಾಡಿದವರಲ್ಲ.  ವಿಧಾನಸಭೆಯಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಯಾವುದೇ ಒತ್ತಡವನ್ನು ಸರಕಾರದ ಮೇಲೆ ತಂದಿಲ್ಲ.  "ಅಡಿಕೆ ಒಂದು ಜಗಿದು ಉಗಿಯುವ ವಸ್ತು" ಎಂದು ಮತ್ತೆ ಮತ್ತೆ ಹೀಯಾಳಿಸಿದವರು ಮಾನ್ಯ ಸಂಜೀವ ಮಠಂದೂರ್ರವರು.  ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲೂ  ಪತ್ರಕರ್ತರ ತೀವ್ರ ಆಕ್ಷೇಪದ ಹೊರತಾಗಿಯೂ ಮಾನ್ಯ ಸಂಜೀವ ಮಠಂದೂರ್ರವರು  "ಅಡಿಕೆ ಒಂದು ಜಗಿದು ಉಗುಳುವ ವಸ್ತು" ಎಂದು ಮತ್ತೆ ಮತ್ತೆ ಪ್ರತಿಪಾದಿಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಅಡಿಕೆಯನ್ನು ಹೀಯಾಳಿಸಿದವರು ಅಡಿಕೆ ಬೆಳೆಗಾರರ ಪರವಾಗಿ ಇರುವುದಕ್ಕೆ ಸಾಧ್ಯವೇ?  ಕಳೆದ ವರ್ಷ ನಡೆದ ಕ್ಯಾಂಪ್ಕೋ  ಮಹಾಸಭೆಯಲ್ಲಿ ಮಾನ್ಯ ಸಂಜೀವ ಮಠಂದೂರ್ರವರು  ಎಲೆ ಚುಕ್ಕಿ ರೋಗ ಮತ್ತು  ಅಡಿಕೆಯ ಹಳದಿ ರೋಗಕ್ಕೆ  ಸಂಶೋಧನೆಗಳನ್ನು ನಡೆಸಬೇಕೆಂದು  ಒತ್ತಾಯಿಸಿದಾಗ ಸಭಾಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಂಪ್ಕೋದ ಅಧ್ಯಕ್ಷರು  ನಾವು 3-4 ಬಾರಿ ಒತ್ತಾಯಿಸಿದರೂ ಅಡಿಕೆಯ ಬಗ್ಗೆ ವಿಧಾನಸಭೆಯಲ್ಲಿ ನೀವೆಷ್ಟು ಮಾತನಾಡಿದ್ದೀರಿ ಎಂದು ಛೇಡಿಸುವ ಮೂಲಕ  ಮಾನ್ಯ ಸಂಜೀವ ಮಠಂದೂರ್ರವರ ನಿಜ ಬಣ್ಣವನ್ನು ಸಾರ್ವಜನಿಕವಾಗಿ ಬಯಲುಗೊಳಿಸಿದ್ದರು. ಅಡಿಕೆಯನ್ನು ಜಗಿದು ಉಗಿಯುವ ವಸ್ತು ಎಂದು ಹೀಯಾಳಿಸಿ ಬೆಳೆಗಾರರ ಮನಸ್ಸನ್ನು ನೋಯಿಸಿದ ಕಾರಣಕ್ಕಾಗಿಯೇ ಅವರನ್ನು ಅವರ ಕಳೆದ ಚುನಾವಣೆಯಲ್ಲಿ ಪಕ್ಷ ಜಗಿದು ಉಗಿದಿದೆ. ಅಡಿಕೆ ಬೆಳೆಗಾರರ ಪರವಾದ ಲಾಭಿ ಮಾಡುವುದೆಂದರೆ  ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಸಮರ್ಥವಾಗಿ ಸರಕಾರಗಳ ಮುಂದೆ ಇಡುವುದು. ವ್ಯಾಪಾರಿಗಳು ಹಣಬಲದಿಂದ ತಮ್ಮ ಲಾಬಿಯನ್ನು ನಡೆಸಿದರೆ ಜನಪ್ರತಿನಿಧಿಗಳು ಜನ ಬಲದಿಂದ ಬೆಳೆಗಾರರ ಲಾಬಿಯನ್ನು ನಡೆಸಬೇಕಾಗಿದೆ. ಈಗ ಅಡಿಕೆ ಬೆಳೆಗಾರರ ಪರವಾದ ಲಾಬಿ ಪುತ್ತೂರಿನಿಂದ  ಆರಂಭವಾಗಿದೆ. ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈಯವರು ಅಡಿಕೆ ಬೆಳೆಗಾರರ ಪರವಾದ ಲಾಬಿಯ ನೇತೃತ್ವವನ್ನು ವಹಿಸಿದ್ದಾರೆ. ತಾವು ಎದುರಿಸಿದ ಮೊದಲನೆಯ ಅಧಿವೇಶನದಲ್ಲಿಯೇ ಅಡಿಕೆ ಹಳದಿ ರೋಗದ ಬಗ್ಗೆ ವಿಧಾನಸಭೆಯಲ್ಲಿ ಧ್ವನಿಯೆತ್ತಿದ ಮಾನ್ಯ ಶಾಸಕರು, ಇತ್ತೀಚೆಗೆ ಅಡಕೆಯ ಕಲಬೆರಕೆಯ ವಿಚಾರದಲ್ಲಿ ಧ್ವನಿ ಎತ್ತಿ ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದು ಅಡಿಕೆಯ ಆಮದು ನಿಲ್ಲಿಸಬೇಕೆಂದು ಕೇಂದ್ರ ಸರಕಾರಕ್ಕೆ ಒತ್ತಡ ಹಾಕಿ ಅಡಿಕೆ ಕಳ್ಳಸಾಗಾಣಿಕೆಯ ವಿರುದ್ಧ ಮಾತನಾಡಿದ ಮೊದಲ ಮತ್ತು ಏಕೈಕ ಶಾಸಕರಾಗಿದ್ದಾರೆ.  ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಅಕ್ರಮ ಸಕ್ರಮ ಯೋಜನೆಯಲ್ಲಿ ತೊಡಕಾಗಿರುವ ಕುಮ್ಕಿ ಭೂಮಿಯ ವಿಚಾರವನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸಿ ಕುಮ್ಕಿ ಭೂಮಿಯನ್ನು ಸಕ್ರಮಗೊಳಿಸಿ ರೈತರಿಗೆ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ. ಮೊನ್ನೆ ನಡೆದ ಬಜೆಟ್ ಅಧಿವೇಶಕ್ಕೆ  ಪೂರ್ವಭಾವಿಯಾಗಿ,  ಸರಕಾರದ ಮೇಲೆ ಒತ್ತಡ ತಂದು,  ಬಜೆಟ್ ಭಾಷಣದಲ್ಲಿ ಅಡಿಕೆಯ ಬೆಂಬಲ ಬೆಲೆಯ ವಿಚಾರ ಪ್ರಸ್ತಾಪವಾಗುವುದಕ್ಕೆ, ಅಡಿಕೆಯ ಬೆಂಬಲ ಬೆಲೆಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆಯನ್ನು ಈಗಾಗಲೇ ಸಲ್ಲಿಸಲಿರುವುದಕ್ಕೆ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಮೂಲ ಕಾರಣಕರ್ತರಾಗಿದ್ದಾರೆ. ಸಂಜೀವ ಮಠಂದೂರ್ರವರು ಅಡಿಕೆ ಬೆಳೆಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದನ್ನು ತೊರೆದು ಇನ್ನಾದರೂ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಿಸಾನ್ ಘಟಕದ ಅಧ್ಯಕ್ಷ ಮುರಳೀಧರ್ ಶೆಟ್ಟಿ, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಎಪಿಎಂಸಿ ಮಾಜಿ ಸದಸ್ಯ ಶಶಿಕಿರಣ್ ರೈ ಉಪಸ್ಥಿತರಿದ್ದರು.

T20 World Cup 2024 :ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

Posted by Vidyamaana on 2024-06-30 09:17:37 |

Share: | | | | |


T20 World Cup 2024 :ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

 ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಲ್ಲಿ ಜೂನ್ 29 ರಂದು ನಡೆದ ಐಸಿಸಿ ಪುರುಷರ ವಿಶ್ವಕಪ್ 2024 ರ (T20 World Cup 2024) ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿ ಚಾಂಪಿಯನ್ ಆಯಿತು.

ಇದರೊಂದಿಗೆ ಭಾರತವು 13 ವರ್ಷಗಳ ವಿಶ್ವ ಕಪ್ ಹಾಗೂ 17 ವರ್ಷಗಳ ಟಿ20 ವಿಶ್ವ ಕಪ್​ ಕೊರತೆಯನ್ನು ನೀಗಿಸಿತು. ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ.ಗುಂಪು ಹಂತದಲ್ಲಿ ಭಾರತ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿತ್ತು. ಒಂದು ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಗಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​​ನಲ್ಲಿ ಗೆಲ್ಲುವ ಮೊದಲು ಭಾರತವು ಸೂಪರ್ ಎಂಟರ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ಸೆಮಿಯಲ್ಲಿ ಇಂಗ್ಲೆಂಡ್ ಅನ್ನು 68 ರನ್​ಗಳಿಂದ ಸೋಲಿಸಿತ್ತು.

ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆ ದರೋಡೆ

Posted by Vidyamaana on 2024-02-08 11:26:13 |

Share: | | | | |


ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆ ದರೋಡೆ

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಫೆ 8ರಂದು ನಡೆದಿದೆ.

ಗ್ಯಾಸ್ ಕಟ್ಟರ್ ಮೂಲಕ ಬ್ಯಾಂಕ್ ಶಾಖಾ ಕಟ್ಟಡದ ಹಿಂಬದಿಯ ಕಿಟಕಿ ತುಂಡರಿಸಿ  ದರೋಡೆಕೋರರು

 ಒಳನುಗ್ಗಿದ್ದಾರೆನ್ನಲಾಗಿದೆ.ಗ್ಯಾಸ್ ಕಟ್ಟರ್ ಮೂಲಕ ಸೇಫ್ ಲಾಕರ್ ನಲ್ಲಿದ್ದ  ಅಪಾರ ಪ್ರಮಾಣದ ಸೊತ್ತು ದರೋಡೆಕೋರರ ಪಾಲುಗಿದೆ ಎಂದು ತಿಳಿದು ಬಂದಿದೆ


ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ. ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳಕ್ಕೆ ವಿಟ್ಲ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳ ಆಗಮಿಸಿ ತನಿಖೆ ಕೈಗೊಂಡಿದ್ದಾರೆ


ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ

Posted by Vidyamaana on 2023-12-01 12:52:33 |

Share: | | | | |


ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು: ಶುಕ್ರವಾರ ಬೆಂಗಳೂರಿನಾದ್ಯಂತ 15 ಕ್ಕೂ ಹೆಚ್ಚು ಶಾಲೆಗಳಿಗೆ ಅನಾಮಧೇಯ ಇ- ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪರಿಣಾಮ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಅಧಿಕಾರಿಗಳಲ್ಲಿ ಭಯಭೀತರಾಗಿದ್ದಾರೆ.



ಇಂದು( ಶುಕ್ರವಾರ) ಬೆಳಿಗ್ಗೆ ಮಕ್ಕಳು ಶಾಲೆಗಳಿಗೆ ಬಂದಿದ್ದು ಇನ್ನೂ ಕೆಲವು ಮಕ್ಕಳು ಶಾಖೆಗೆ ಬರುತ್ತಿದ್ದರು ಅಷ್ಟೋತ್ತಿಗೆ ಇ ಮೇಲ್ ಪರಿಶೀಲಿಸಿದ ಶಾಲಾ ಅಧಿಕಾರಿಗಳಿಗೆ ಶಾಕ್ ಆಗಿದೆ. ಇ ಮೇಲ್ ನಲ್ಲಿ ಶಾಲೆಗಳಿಗೆ ಬಾಂಬ್ ಹಾಕುವ ಬೆದರಿಕೆ ಹಾಕಲಾಗಿದ್ದು ಕಂಗಾಲಾದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ತೆರಳುವಂತೆ ಸೂಚಿಸಿದ್ದಾರೆ ಅಲ್ಲದೆ ಕೆಲವು ಮಕ್ಕಳು ಶಾಲೆಗೆ ಬರುತ್ತಿದ್ದು ಆ ಮಕ್ಕಳನ್ನು ಗೇಟ್ ನಿಂದಲೇ ಹಿಂದೆ ಕಳುಹಿಸಿದ್ದಾರೆ.


ಇದೇ ರೀತಿ ಸುಮಾರು ಹದಿನೈದಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎನ್ನಲಾಗಿದ್ದು ಕೂಡಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳ ತಂಡ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದೆ.


ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ ಸೇರಿದಂತೆ ಹಲವಾರು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳಿಂದ ಬೆದರಿಕೆ. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಆಗಮಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿ ಇರುವ ಶಾಲೆಗೂ ಬಾಂಬ್ ಬೆದರಿಕೆ ಇದೆ ಎನ್ನಲಾಗಿದೆ.



ಸದ್ಯ ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.


ಆತಂಕ ಬೇಡ:

ಮಕ್ಕಳು, ಪೋಷಕರು ಭಯ, ಆತಂಕಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆಯೋ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ. ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಆಗ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

Posted by Vidyamaana on 2024-05-22 14:53:49 |

Share: | | | | |


ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

ಜಾರ್ಜಿಯಾ: ಕಾರು ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಆರ್ಯನ್ ಜೋಶಿ ಹಾಗೂ ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮ ಎಂಬ ವಿದ್ಯಾರ್ಥಿಯು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ



Leave a Comment: