Posted by vidyamaana on 2024-07-25 16:34:52 |
ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ
ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.
ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.
ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
Posted by Vidyamaana on 2023-09-14 22:22:47 |
ಮಂಗಳೂರು: ನಗರದ ಪಡೀಲ್ ಅಂಡ ಪಾಸ್ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವುದಾಗಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ. ಗಾಲ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಕಲಿಯುತ್ತಿದ್ದ ಭವಿನ್ ರಾಜ್ ಗುರುವಾರ ಮಧ್ಯಾಹ್ನ ತನ್ನ ಗೆಳೆಯರ ಜತೆ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಪಡೀಲ್ ಅಂಡರ್ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಅಂಡರ್ಪಾಸ್ ಫುಟ್ಪಾತ್ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಮೂವರು ಕೂಡ ಗಾಯಗೊಂಡಿದ್ದು, ಈ ಪೈಕಿ ಭವಿನ್ ರಾಜ್ ಮೃತಪಟ್ಟಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-09-25 18:31:43 |
ಬೆಂಗಳೂರು: ಸೆ.26ರಂದು ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ನಾಳೆ ಬಂದ್ ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತ ಎಂದಿ ಎಚ್ಚರಿಸಿದರು.
ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆ” ಎಂದು ತಿಳಿಸಿದರು.
”2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆ” ಎಂದು ಹೇಳಿದರು.
Posted by Vidyamaana on 2024-07-19 16:28:31 |
ನವದೆಹಲಿ : ಮೈಕ್ರೋಸಾಫ್ಟ್ ಕಾರ್ಪೊರೇಷನ್ನ ಕ್ಲೌಡ್ ಸೇವೆಗಳಲ್ಲಿನ ಪ್ರಮುಖ ಅಡಚಣೆಯು ಭಾರತ ಸೇರಿದಂತೆ ವಿಶ್ವದಾದ್ಯಂತ ವ್ಯಾಪಕ ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾಯಿತು. ಈ ಸ್ಥಗಿತದಿಂದಾಗಿ ಇಂಡಿಗೊ, ಅಕಾಸಾ ಏರ್ಲೈನ್ಸ್ ಮತ್ತು ಸ್ಪೈಸ್ ಜೆಟ್ ಸೇರಿದಂತೆ ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನಗಳ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ.
ಮೈಕ್ರೋಸಾಫ್ಟ್ನ ಕ್ಲೌಡ್ ಸೇವೆಗಳಲ್ಲಿನ ಪ್ರಮುಖ ಅಡಚಣೆಯು ಭಾರತ ಸೇರಿದಂತೆ ವಿಶ್ವದಾದ್ಯಂತ ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾಯಿತು. ಈ ಸ್ಥಗಿತವು ಹಲವಾರು ವಿಮಾನಯಾನ ಸಂಸ್ಥೆಗಳ ಮೇಲೆ ಪರಿಣಾಮ ಬೀರಿತು, ವಿಮಾನಗಳನ್ನು ಗ್ರೌಂಡ್ ಮಾಡಿತು ಮತ್ತು ದೆಹಲಿ ಮತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಯಿತು
Posted by Vidyamaana on 2024-02-03 13:35:15 |
ಮುಂಬೈ : ಬಾಲಿವುಡ್ ನಟಿ, ಮಾದಕ ಚೆಲುವೆ ಪೂನಂ ಪಾಂಡೆ ಸತ್ತಿಲ್ಲ ಬದುಕಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ರಿವೀಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟಿ ಪೂನಂ ಪಾಂಡೆ ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ.ನಿಮ್ಮೆಲ್ಲರೊಂದಿಗೆ ಮಹತ್ವದ ವಿಷಯವನ್ನು ಹಂಚಿಕೊಳ್ಳಲು ಬಯಸಿದ್ದು, ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ನಿಂದ ನಾನು ಬಳಲುತ್ತಿಲ್ಲ. ಆದರೆ, ದುರಂತವೆಂದರೆ ಈ ರೋಗವನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಜ್ಞಾನದ ಕೊರತೆಯಿಂದ ಸಾವಿರಾರು ಮಹಿಳೆಯರ ಜೀವವನ್ನು ಈ ರೋಗ ಬಲಿ ಪಡೆದುಕೊಂಡಿದೆ.
ಇತರ ಕೆಲವು ಕ್ಯಾನ್ಸರ್ಗಳಿಗಿಂತ ಭಿನ್ನವಾಗಿ, ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಗಟ್ಟಬಲ್ಲದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳು ಪ್ರಮುಖವಾಗಿದ್ದು, ಈ ಕಾಯಿಲೆಯಿಂದ ಯಾರೂ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳಲು ನಾವು ಎಚ್ಚರದಿಂದಿರಬೇಕು. ವಿಮರ್ಶಾತ್ಮಕ ಅರಿವಿನೊಂದಿಗೆ ಒಬ್ಬರಿಗೊಬ್ಬರು ಜಾಗೃತಿ ಮೂಡಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹಿಳೆಯರಿಗೆ ತಿಳಿಸೋಣ ಏನು ಮಾಡಬಹುದೆಂಬುದನ್ನು ಒಟ್ಟಾಗಿ, ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಶ್ರಮಿಸೋಣ ಎಂದು ಹೇಳಿದ್ದಾರೆ.
Posted by Vidyamaana on 2024-05-16 07:36:18 |
ನವದೆಹಲಿ, ಮೇ.16: ನಾನು ಯಾವತ್ತೂ ಹಿಂದು- ಮುಸ್ಲಿಂ ಅಂತ ಭೇದ ಮಾಡಿಲ್ಲ. ಹಾಗೊಂದ್ವೇಳೆ, ಹಿಂದು – ಮುಸ್ಲಿಂ ಭೇದ ಮಾಡಿದರೆ, ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ಯೋಗ್ಯನಲ್ಲ ಎಂದು ಭಾವಿಸುತ್ತೇನೆ. ಇದು ನನ್ನ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಒಂದರಲ್ಲಿ ಹೇಳಿರುವ ವಿಡಿಯೋವನ್ನು ಮೋದಿ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ರಾಜಸ್ಥಾನದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಜನರ ಬಳಿಯಿರುವ ಚಿನ್ನದ ಸಂಪತ್ತನ್ನು ಹೆಚ್ಚು ಮಕ್ಕಳಿದ್ದವರಿಗೆ ಹಂಚುತ್ತದೆ ಎಂದು ಹೇಳಿರುವುದು ಮೋದಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ರೀತಿ ಬಿಂಬಿತವಾಗಿತ್ತು. ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಇತ್ತೀಚೆಗೆ ನ್ಯೂಸ್ 18 ವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕನ್ನು ಮೋದಿ ತನ್ನ ಟ್ವಿಟರ್ ನಲ್ಲಿ ಹಂಚಿದ್ದು, ಅದರಲ್ಲಿ ನಾನೆಂದೂ ಹಿಂದು –ಮುಸ್ಲಿಂ ಎಂದು ಭೇದ ಮಾಡಿಲ್ಲ. ನಾನೆಂದಿಗೂ ತುಷ್ಟೀಕರಣ ರಾಜಕೀಯ ಮಾಡಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುವುದೇ ನನ್ನ ನಂಬಿಕೆ ಎಂದು ಹೇಳಿದ್ದಾರೆ.
Posted by Vidyamaana on 2023-10-09 16:37:03 |
ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ನಯನತಾರಾ ಕೂಡಾ ಒಬ್ಬರು. ಇವರನ್ನು ಅಭಿಮಾನಿಗಳು ಲೇಡಿ ಸೂಪರ್ ಸ್ಟಾರ್ ಅಂತಲೂ ಕರೆಯುತ್ತಾರೆ. ಇತ್ತೀಚೆಗೆ ಇವರು ಪ್ರೈವೇಟ್ ಜೆಟ್ ಖರೀದಿಸಿದ್ದಾರೆ ಎನ್ನಲಾಗಿದೆ. ಬಾಲುವುಡ್ನಲ್ಲಿಯೇ ಕಲವೇ ಮಂದಿ ಮಾತ್ರ ಪ್ರೈವೇಟ್ ಜೆಟ್ ಹೊಂದಿದ್ದಾರೆ. ಇದೀಗ ದಕ್ಷಿಣ ಭಾರತದಲ್ಲಿ ಪ್ರೈವೇಟ್ ಜೆಟ್ ಖರೀದಿಸಿ ನಯನ್ ಸುದ್ದಿಯಾಗಿದ್ದಾರೆ.
ಇತ್ತೀಚೆಗೆ ಅವರು ಬಾಲಿವುಡ್ ನಟ ಶಾರುಖ್ ಖಾನ್ ಅವರ ಜವಾನ್ ಚಿತ್ರದಲ್ಲಿ ನಟಿಸಿ ಮಿಂಚಿದ್ದರು. ಈ ಸಿನಿಮಾ ಅದ್ದೂರಿ ಯಶಸ್ಸನ್ನು ಕಂಡಿದೆ. ಈಗ ಬಾಲಿವುಡ್ನಲ್ಲೂ ಸಖತ್ ಸದ್ದು ಮಾಡುತ್ತಿರುವ ಅವರು, ದಕ್ಷಿಣದಲ್ಲಿ ದುಬಾರಿ ನಟಿಯೂ ಹೌದು. ಹಾಗಾಗಿ ತಮ್ಮ ಸ್ಟಾರ್ಡಂಗೆ ತಕ್ಕಂತೆ ಪ್ರೈವೇಟ್ ಜೆಟ್ ಖರೀದಿಸಿದ್ದಾರೆ ಎಂದು ಚರ್ಚಿಸಲಾಗುತ್ತಿದೆ. ಸದ್ಯ ಖರೀದಿಸಿರುವ ಖಾಸಗಿ ಜೆಟ್ನ ಮೌಲ್ಯ 50 ಕೋಟಿ ರೂ. ಎಂದು ತಿಳಿದುಬಂದಿದೆ.ಮಾಹಿತಿಯ ಪ್ರಕಾರ ಬಾಲಿವುಡ್ ನಟಿಯರಾದ ಶಿಲ್ಪಾ ಶೆಟ್ಟಿ, ಪ್ರಿಯಾಂಕಾ ಚೋಪ್ರಾ ಮತ್ತು ಮಾಧುರಿ ದೀಕ್ಷಿತ್ ಸೇರಿದಂತೆ ಇತರ ಕೆಲವೇ ನಟಿಯರು ಖಾಸಗಿ ಜೆಟ್ಗಳನ್ನು ಹೊಂದಿದ್ದಾರೆ. ಈಗ ಆ ಬಾಲಿವುಡ್ ನಟಿಯರ ಸಾಲಿಗೆ ನಯನತಾರಾ ಅವರು ಸೇರಿಕೊಂಡಿದ್ದಾರೆ. ಜೊತೆಗೆ ನಯನತಾರಾ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಖಾಸಗಿ ಜೆಟ್ ಅನ್ನು ಹೊಂದಿರುವ ಏಕೈಕ ನಟಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.ಪ್ರೈವೇಟ್ ಜೆಟ್ ಅನ್ನು ನಯನತಾರಾ-ವಿಘ್ನೇಶ್ ಶಿವನ್ ದಂಪತಿ ಖರೀದಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ, ವಿಘ್ನೇಶ್ ಶಿವನ್ ಮತ್ತು ನಯನತಾರಾ ಬಿಳಿ-ನೀಲಿ ಜೆಟ್ನಿಂದ ಹೊರಬರುವ ಚಿತ್ರಗಳು ಮತ್ತು ವೀಡಿಯೊ ವೈರಲ್ ಆಗಿವೆ. ಜೆಟ್ ಒಳಭಾಗವು ಸಂಪೂರ್ಣವಾಗಿ ಐಷಾರಾಮಿಯಾಗಿ ಕಾಣುತ್ತಿದ್ದು, ಕ್ಯಾಬಿನ್ ಒಳಗೆ ಒರಗಿಕೊಳ್ಳುವ ಮತ್ತು ಮಸಾಜ್ ಸೌಲಭ್ಯಗಳೊಂದಿಗೆ ಐಷಾರಾಮಿ ಆಸನಗಳಿವೆ.ಇವುಗಳ ಹೊರತಾಗಿ ಹೆಚ್ಚುವರಿ ಪ್ರಯಾಣಿಕರು ಬಂದರೆ ಅವರಿಗೂ ಆಸನದ ವ್ಯವಸ್ಥೆ ಮಾಡಬಹುದು. ಶೌಚಾಲಯ ಮತ್ತು ಕೈ ತೊಳೆಯುವ ಬೇಸಿನ್ಗಳನ್ನು ಪ್ರತ್ಯೇಕವಾಗಿ ಒದಗಿಸಲಾಗಿದೆ. ವಿಶ್ರಾಂತಿಗಾಗಿ ಮಲಗುವ ಕೋಣೆ ಕೂಡ ಇದೆ. ಇವಿಷ್ಟೆ ಅಲ್ಲದೇ ಪ್ರಯಾಣದ ವೇಳೆ ವಿಮಾನದಲ್ಲಿ ಅವರಿಗೆ ಸೇವೆ ಒದಗಿಸಲು ಗಗನ ಸಖಿಯರನ್ನು ಕೂಡ ನೇಮಿಸಿಕೊಳ್ಳಬಹುದಂತೆ.
ಜವಾನ್ ಯಶಸ್ಸಿನ ಖುಷಿಯಲ್ಲಿ ನಯನತಾರಾ: ಸದ್ಯ ನಟಿ ನಯನತಾರಾ ಜವಾನ್ ಹಿಟ್ ಖುಷಿಯಲ್ಲಿದ್ದಾರೆ. ಬಾಲಿವುಡ್ನ ಪ್ರಮುಖ ನಟ ಶಾರುಖ್ ಖಾನ್ ಅವರೊಂದಿಗೆ ಜವಾನ್ ಚಿತ್ರದಲ್ಲಿ ನಟಿಸುವ ಮೂಲಕ ಹಿಂದಿ ಚಿತ್ರರಂಗದಲ್ಲೂ ಕಮಾಲ್ ಮಾಡಿದ್ದಾರೆ. ಜವಾನ್ ಸಿನಿಮಾ ಇದುವರೆಗೆ ರೂ. 1000 ಕೋಟಿ ಗಳಿಸಿದೆ ಎನ್ನಲಾಗಿದೆ.ನಟಿ ನಯನತಾರಾ ಹುಟ್ಟಿದ್ದು ಕೇರಳದಲ್ಲಾದರೂ ಅವರನ್ನು ಚಿತ್ರರಂಗದಲ್ಲಿ ಉತ್ತುಂಗಕ್ಕೇರಿಸಿದವರು ತಮಿಳು ಅಭಿಮಾನಿಗಳು. ಅದರ ನಂತರ, ಅವರು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಟಿಸಿ ಮಿಂಚಿದ್ದಾರೆ. ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ ಸೂಪರ್ ಸಿನಿಮಾ ಮಾಡಿ ಸ್ಯಾಂಡಲ್ವುಡ್ನಲ್ಲೂ ಗುರ್ತಿಸಿಕೊಂಡಿರುವ ಅವರು, ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾಗಳನ್ನು ಕಡಿಮೆ ಮಾಡಿದ್ದಾರೆ.ಐಷಾರಾಮಿ ಕಾರುಗಳ ಒಡತಿ: ನಟಿ ನಯನತಾರಾ 1.76 ಕೋಟಿ ರೂ. ಮೌಲ್ಯದ ಬಿಎಂಡಬ್ಲ್ಯು 7 ಸಿರೀಸ್ ಕಾರು ಹೊಂದಿದ್ದಾರೆ. ಹಾಗೆಯೇ 1 ಕೋಟಿ ರೂ. ಮೌಲ್ಯದ ಮರ್ಸಿಡಿಸ್ ಜಿಎಲ್ಎಸ್ 350 ಟಿ ಮತ್ತು ಬಿಎಂಡಬ್ಲ್ಯು 5 ಸಿರೀಸ್ ಸೇರಿದಂತೆ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಸದ್ಯ, ನಟಿ ನಯನತಾರಾ ತಮ್ಮ ಪತಿ ವಿಘ್ನೇಶ್ ಶಿವನ್ ಅವರೊಂದಿಗೆ 50 ಕೋಟಿ ರೂ. ಮೌಲ್ಯದ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ