ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಬೆಂಗಳೂರು ಕಂಬಳ ಕರೆ ಉದ್ಘಾಟನೆ

Posted by Vidyamaana on 2023-11-25 12:24:25 |

Share: | | | | |


ಬೆಂಗಳೂರು ಕಂಬಳ ಕರೆ ಉದ್ಘಾಟನೆ

ಬೆಂಗಳೂರು ನ.25: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ (Bengaluru Kambala) ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ (Ashwini Puneeth Rajkumar)​​ ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.


ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.


ಬೆಂಗಳೂರು ಕಂಬಳದ ವಿಶೇಷತೆ

6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು. ಕಂಬಳದಲ್ಲಿ 200 ಜೋಡಿ ಕೋಣಗಳು ಭಾಗವಹಿಸುವ ಸಾಧ್ಯತೆ ಇದೆ. ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್​ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರಾಕ್‌ (ಕರೆ)ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ ಇರಲಿದೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಆಯೋಜಿಸಲಾಗಿದೆ.ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ, ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ. 228 ಜೋಡಿ ಕೋಣಗಳ ರಿಜಿಸ್ಟ್ರೇಷನ್ ಆಗಿದ್ದು, 200 ಜೋಡಿ‌ ಫೈನಲ್‌ ಆಗಿವೆ. ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ.


ಕೋಣಗಳ ಆರೈಕೆ

ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ ವಹಿಸಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ನೀರನ್ನು ಕೂಡ ಊರಿನಿಂದಲೇ ತರಲಾಗಿದೆ. ನೀರು ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದೆ. ಹೀಗಾಗಿ ಊರಿನಿಂದಲೇ ಟ್ಯಾಂಕರ್ ಮೂಲಕ ನೀರು ತರಲಾಗಿದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದುದ್ದಾರೆ.


ಗೆದ್ದ ಕೋಣಗಳಿಗೆ ಬಹುಮಾನ

ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು


ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು


ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

Posted by Vidyamaana on 2024-01-31 20:32:27 |

Share: | | | | |


ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

ಬೆಂಗಳೂರು :ಇತ್ತೀಚೆಗೆ ನಮ್ಮೂರ ಹೋಟೆಲ್‌ನಲ್ಲಿ ನಿಂತಿದ್ದ ಯುವತಿಗೆ ಅಲ್ಲೇ ಇದ್ದ ಯುವಕನೋರ್ವ ಯುವತಿಯ ಹಿಂದಿನ ಭಾಗಕ್ಕೆ ಬೇಕಂತಲೇ ಟಚ್‌ ಮಾಡಿ ಕೀಟಲೆ ಮಾಡಿ ಅಲ್ಲಿಂದ ಎಸ್ಕೇಪ್‌ ಆಗಿದ್ದ. ಈ ಕುರಿತು ಯುವತಿಯ ಪೋಷಕರು ನೀಡಿದ ದೂರಿಯನನ್ವಯ ವಿಜಯನಗರ ಪೊಲೀಸರು ಕೇಸು ದಾಖಲಿಸಿದ್ದು, ಇದೀಗ ಆರೋಪಿ ಚಂದನ್‌ ಎಂಬಾತನನ್ನು ಬಂಧಿಸಿದ್ದಾರೆ.


ಡಿ.30 ರಂದು ಸಂಜೆ 7.30ರ ಸುಮಾರಿಗೆ ಸ್ನೇಹಿತೆಯೊಂದಿಗೆ ನಮ್ಮೂರ ಹೋಟೆಲ್‌ಗೆ ತಿಂಡಿ ತಿನ್ನಲೆಂದು ಯುವತಿ ಬಂದಿದ್ದು, ಆಕೆಯನ್ನು ಕಂಡ ಯುವಕ ಬೇಕೆಂತಲೇ ಆಕೆಯ ಸೊಂಟದ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಕೂಡಲೇ ಯುವತಿ ತರಾಟೆ ತೆಗೆದುಕೊಂಡಾಗ ಅಲ್ಲಿಂದ ಓಡಿ ಹೋಗಿದ್ದ. ಈ ಘಟನೆ ಸಂಬಂಧ ವೀಡಿಯೋ ಜ.18 ರಂದು ವೈರಲ್‌ ಆಗಿತ್ತು. ಯುವತಿ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಕಾಮುಕ ಚಂದನ್‌ನನ್ನು ಬಂಧಿಸಿದ್ದಾರೆ.


ಗ್ಯಾಸ್‌ ಸಿಲಿಂಡರ್‌ ಡೆಲಿವರಿ ಕೆಲಸ ಮಾಡುವ ವೃತ್ತಿ ಮಾಡಿಕೊಂಡಿದ್ದ ಆರೋಪಿ ಚಂದನ್‌, ಹಂಪಿನಗರ ನಿವಾಸಿ. ಘಟನೆ ನಡೆದ ದಿನ ಸ್ನೇಹಿತರೊಂದಿಗೆ ಸಿನಿಮಾ ನೋಡಿಕೊಂಡು ಬಂದ ಚಂದನ್‌ ಭರ್ಜರಿ ಪಾರ್ಟಿ, ಕಂಠ ಪೂರ್ತಿ ಕುಡಿದು ಊಟಕ್ಕೆ ಎಂದು ವಿಜಯನಗರ ಹೋಟೆಲ್‌ಗೆ ಬಂದಿದ್ದ. ಊಟ ಮುಗಿಸಿ ಹೋಟೆಲ್‌ ಹೊರಗೆ ಚಂದನ್‌ ಗ್ಯಾಂಗ್‌ ಮಾತಾಡಿಕೊಂಡು ನಿಂತಿದ್ದರು.


ಈ ಸಂದರ್ಭದಲ್ಲಿ ಯುವತಿ ಅಲ್ಲಿಗೆ ಬಂದಿದ್ದಾಳೆ. ಇದನ್ನು ಕಂಡ ಸ್ನೇಹಿತನೋರ್ವ ಆಕೆಯನ್ನು ಮುಟ್ಟಿದರೆ ಐದು ಸಾವಿರ ಕೊಡುತ್ತೀನಿ ಎಂದು ಚಂದನ್‌ಗೆ ಹೇಳಿದ್ದಾನೆ. ಅಷ್ಟಕ್ಕೇ ಚಂದನ್‌ ಕುಡಿದ ಅಮಲಿನಲ್ಲಿ ಹಿಂಬದಿಯಿಂದ ಹೋಗಿ ಯುವತಿಗೆ ಮುಟ್ಟಿ ಅನುಚಿತವಾಗಿ ವರ್ತನೆ ಮಾಡಿ ಕಾಲ್ಕಿತ್ತಿದ್ದ. ನಂತರ ಯುವತಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಳು. ಇದೀಗ ಪೊಲೀಸರು ಆರೋಪಿ ಚಂದನ್‌ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಒಂದು ವರದಿಗೆ ಅಲುಗಾಡಿದ ಅದಾನಿ ಸಾಮ್ರಾಜ್ಯ- ನಂ.1 ಶ್ರೀಮಂತ ಪಟ್ಟದಿಂದ 16 ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ : 8 ಲಕ್ಷ 19 ಸಾವಿರದ 134 ಕೋಟಿ ನಷ್ಟ

Posted by Vidyamaana on 2023-02-02 15:09:34 |

Share: | | | | |


ಒಂದು ವರದಿಗೆ ಅಲುಗಾಡಿದ ಅದಾನಿ ಸಾಮ್ರಾಜ್ಯ- ನಂ.1 ಶ್ರೀಮಂತ ಪಟ್ಟದಿಂದ 16 ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ : 8 ಲಕ್ಷ 19 ಸಾವಿರದ 134 ಕೋಟಿ ನಷ್ಟ

ನವದೆಹಲಿ (ಫೆ.2): ಕಳೆದ ವಾರ ಅದಾನಿ (Adani) ಗ್ರೂಪ್‌ ಕಂಪನಿಗಳ ಮೇಲೆ ಅಮೆರಿಕದ ಶಾರ್ಟ್‌ ಸೆಲ್ಲರ್ ಹಾಗೂ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್‌ ವಂಚನೆ ಹಾಗೂ ಮೋಸದ ಆರೋಪ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೂ ಷೇರುಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ನಷ್ಟಗಳನ್ನು ಕಂಡಿತ್ತು.ಷೇರು ಮಾರುಕಟ್ಟೆಯಲ್ಲಿ ಕಂಪನಿಯ ಷೇರುಗಳು ಕುಸಿತ ಕಾಣುತ್ತಿರುವ ಹಿನ್ನಲೆಯಲ್ಲಿ 20 ಸಾವಿರ ಕೋಟಿಗೂ ಹೆಚ್ಚಿನ ಫಾಲೋಆನ್‌ ಪಬ್ಲಿಕ್‌ ಆಫರ್‌ (ಎಫ್‌ಪಿಓ) ಜೊತೆ ಮುಂದುವರಿಯುವುದು ಸರಿಯಲ್ಲ ಎಂದಿದ್ದ ಅದಾನಿ ಗ್ರೂಪ್‌, ಇದನ್ನು ರದ್ದು ಮಾಡಿತ್ತು. ಸಂಪೂರ್ಣವಾಗಿ ಎಫ್‌ಪಿಓ ಮಾರಾಟವಾಗಿದ್ದರಿಂದ 20 ಸಾವಿರ ಕೋಟಿ ರೂಪಾಯಿಯನ್ನು ಹೂಡಿಕೆದಾರರಿಗೆ ವಾಪಸ್‌ ಮಾಡುವುದಾಗಿ ತಿಳಿಸಿತ್ತು.ಷೇರು ಕುಸಿತ ಕಾಣುತ್ತಿರುವ ಹಂತದಲ್ಲಿ ಎಫ್‌ಪಿಒ ಜೊತೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಗೌತಮ್‌ ಅದಾನಿ ಕೂಡ ಹೇಳಿದ್ದಾರೆ.

ಈ ನಡುವೆ ಕಂಪನಿಯ ಒಟ್ಟು ಷೇರುಗಳಿಂದಾದ ನಷ್ಟ 100 ಬಿಲಿಯನ್‌ ಡಾಲರ್‌ ಎಂದು ಹೇಳಲಾಗಿದೆ. ಭಾರತೀಯ ರೂಪಾಯಿಯಲ್ಲಿ 8 ಲಕ್ಷದ 19 ಸಾವಿರದ 134 ಕೋಟಿ ರೂ ನಷ್ಟ ಎಂದು ಹೇಳಲಾಗಿದೆ. ಇದರೊಂದಿಗೆ ಏಷ್ಯಾದ ಮೊದಲ ಶ್ರೀಮಂತ ಎಂಬ ಫೋರ್ಬ್ಸ್ ಪಟ್ಟಿಯಲ್ಲಿದ್ದ ಅದಾನಿ ಏಕಾಏಕಿ 16 ನೇ ಸ್ಥಾನಕ್ಕೆ ಕುಸಿದಿದ್ದಾರೆ.ಅದಾನಿ ಸಮೂಹದ ಷೇರುಗಳು ಭಾರಿ ಕುಸಿತ ಕಾಣುತ್ತಿರುವುದು ಹೂಡಿಕೆದಾರರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹೂಡಿಕೆದಾರರಿಗೆ ಎದುರಾಗಿರುವ ಅಪಾಯದ ಬಗ್ಗೆ ಚರ್ಚಿಸಲು ದೈನಂದಿನ ಸಂಸದೀಯ ಕಲಾಪವನ್ನು ಮೊಟಕುಗೊಳಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದವು.

ಈ ನಡುವೆ ಅದಾನಿ ಸಮೂಹ ಸಂಸ್ಥೆಗಳಿಗೆ ನೀಡಿದ ಸಾಲಗಳ ಕುರಿತಂತೆ ಭಾರತೀಯ ಬ್ಯಾಂಕ್‌ಗಳಿಂದ ರಿಸರ್ವ್‌ ಬ್ಯಾಂಕ್‌ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.

ಈ ನಡುವೆ ಸಂಸತ್‌ ಅಧಿವೇಶನದಲ್ಲಿ ಹಿಂಡೆನ್‌ಬರ್ಗ್‌ ಮಾಡಿರುವ ಆರೋಪಗಳ ಬಗ್ಗೆ ಚರ್ಚೆ ನಡೆಸಲು ಸಮಯ ಮೀಸಲಿಡುವಂತೆ ಭಾರತದ ಸಂಸದರು ಆಗ್ರಹಿಸಿದ್ದಾರೆ. ಅದಾನಿ ಗ್ರೂಪ್‌ನಲ್ಲಿ ಸರ್ಕಾರಿ ಮಾಲೀಕತ್ವದ ಭಾರತೀಯ ಜೀವ ವಿಮಾ ನಿಗಮ ಹಾಗೂ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೂಡ ದೊಡ್ಡ ಹೂಡಿಕೆದಾರರಾಗಿದ್ದಾರೆ. LIC ಶೇರ್ ಮೌಲ್ಯ ಕುಸಿತವಾಗಿದೆ.ಗುರುವಾರ ಮುಂಬೈನ ಬಿಎಸ್‌ಇ ಆರಂಭಿಕ ವಹಿವಾಟಿನಲ್ಲಿ ಅದಾನಿ ಸಮೂಹದ ಎಲ್ಲಾ 10 ಷೇರುಗಳು ಕೂಡ ಕುಸಿದವು. ಅದಾನಿ ಎಂಟರ್‌ಪ್ರೈಸಸ್‌, ಅದಾನಿ ಟ್ರಾನ್ಸ್‌ಮಿಷನ್‌ ಮತ್ತು ಅದಾನಿ ಪೋರ್ಟ್ಸ್‌ ನಷ್ಟವನ್ನು ಶೇ.10ರಷ್ಟು ಕಂಡಿದೆ. ಹಿಂಡೆನ್‌ಬರ್ಗ್‌ ವರದಿಯಿಂದ ಅದಾನಿ ಕಂಪನಿ ಷೇರುಗಳ ಮಾರಾಟ ವಿಪರೀತವಾಗಿ ಹೆಚ್ಚಾಗಿದೆ.

ಗುರುವಾರ ಮಾರುಕಟ್ಟೆಗಳು ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ಬಿಡುಗಡೆಯಾದ ವೀಡಿಯೊದಲ್ಲಿ ಸಂಸ್ಥಾಪಕ ಗೌತಮ್ ಅದಾನಿ, ತಮ್ಮ ಕಂಪನಿಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಇರುವ ಕಳವಳಗಳನ್ನು ತಳ್ಳಿಹಾಕಿದರು. ಎಫ್‌ಪಿಓ ರದ್ದು ಮಾಡಿದ್ದರಿಂದ ಈಗಾಗಲೇ ನಡೆಯುತ್ತಿರುವ ಯೋಜನೆಗಳು ಹಾಗೂ ಭವಿಷ್ಯದ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಹೂಡಿಕೆದಾರರನ್ನು ರಕ್ಷಣೆ ಮಾಡುವ ಕಾರಣದಿಂದ ಎಫ್‌ಪಿಓ ಮಾರಾಟವನ್ನು ರದ್ದು ಮಾಡಿದ್ದೇವೆ. ಯಾಕೆಂದರೆ, ಪ್ರಸ್ತುತ ಮಾರುಕಟ್ಟೆಯಲ್ಲಿ ನಮ್ಮ ಷೇರುಗಳು ದೊಡ್ಡ ಮಟ್ಟದಲ್ಲಿ ಇಳಿಕೆ ಕಾಣುತ್ತಿವೆ. ಎಫ್‌ಪಿಓಗೆ ಈಗ ತಾನೆ ಸಹಿ ಹಾಕಿರುವ ಈ ಹೂಡಿಕೆದಾರರು ಇದರಿಂದ ದೊಡ್ಡ ಮಟ್ಟದ ನಷ್ಟ ಕಾಣುತ್ತಾರೆ. ಆ ಕಾರಣದಿಂದ ಎಫ್‌ಪಿಓ ರದ್ದು ಮಾಡಿದ್ದಾಗಿ ಹೇಳಿದ್ದಾರೆ.ನನಗೆ ನನ್ನ ಹೂಡಿಕೆದಾರರ ಹಿತವೇ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಮತ್ತೆಲ್ಲವೂ ನಂತರದ ಸ್ಥಾನದಲ್ಲಿರುತ್ತದೆ ಎಂದು ವಿಡಿಯೋದಲ್ಲಿ ಅದಾನಿ ಹೇಳಿದ್ದಾರೆ. ಹೂಡಿಕೆದಾರರಿಗೆ ಆಗಬಹುದಾದ ನಷ್ಟವನ್ನು ಗಮನದಲ್ಲಿಟ್ಟುಕೊಂಡು ಮಾರಾಟವನ್ನು ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಅದಾನಿ ಗ್ರೂಪ್‌ ಈವರೆಗೂ 8.4 ಟ್ರಿಲಿಯನ್‌ ರೂಪಾಯಿ ಅಂದರೆ, 102 ಬಿಲಿಯನ್‌ ಯುಎಸ್‌ ಡಾಲರ್‌ ಹಣವನ್ನು ಷೇರುಮಾರುಕಟ್ಟೆಯಿಂದ ಕಳೆದುಕೊಂಡಿದೆ. ಅದಾನಿ ಗ್ರೂಪ್‌ನ ಒಟ್ಟು 10 ಲಿಸ್ಟೆಡ್ ಕಂಪನಿಗಳಿದ್ದು, ಮುಂಬೈ ಮಾರುಕಟ್ಟೆಯಲ್ಲಿ ಎಲ್ಲಾ 10 ಷೇರುಗಳು ಆರಂಭದಲ್ಲಿ ಕುಸಿದರೂ ಬಳಿಕ ಚೇತರಿಕೆ ಕಂಡಿದ್ದವು. ಅದಾನಿ ಎಂಟರ್‌ಪ್ರೈಸಸ್‌ ಕಂಪನಿಯ ಷೇರುಗಳು ಗುರುವಾರ ಒಂದೇ ದಿನ ಶೇ. 18ರಷ್ಟು ಕುಸಿದಿದೆ

ಮಂಗಳೂರು: ಶಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

Posted by Vidyamaana on 2023-07-20 03:57:30 |

Share: | | | | |


ಮಂಗಳೂರು: ಶಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು. ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಟೊಮೆಟೊ ಮಾರಾಟ ಮಾಡಿ 45 ದಿನಗಳಲ್ಲಿ 4 ಕೋಟಿ ರೂ.ಗಳಿಸಿದ ಆಂಧ್ರದ ರೈತ

Posted by Vidyamaana on 2023-07-30 11:38:24 |

Share: | | | | |


ಟೊಮೆಟೊ ಮಾರಾಟ ಮಾಡಿ 45 ದಿನಗಳಲ್ಲಿ 4 ಕೋಟಿ ರೂ.ಗಳಿಸಿದ ಆಂಧ್ರದ ರೈತ

ಅಮರಾವತಿ: ಟೊಮೆಟೊಗಳ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಪೆಟ್ಟಿಗೆಗಳ ಟೊಮೆಟೊಗಳನ್ನು ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 4 ಕೋಟಿ ರೂ. ಗಳಿಸಿದ್ದಾರೆ.


ಟೊಮೆಟೊ ರೈತ ಚಂದ್ರಮೌಳಿ, 22 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದು, ಎಪ್ರಿಲ್ ಮೊದಲ ವಾರದಲ್ಲಿ ಅಪರೂಪದ ವೈವಿಧ್ಯಮಯ ಟೊಮೆಟೊ ಬಿತ್ತನೆ ಮಾಡಿದರು. ಇಳುವರಿಯನ್ನು ವೇಗವಾಗಿ ಪಡೆಯಲು ಅವರು ಹಸಿಗೊಬ್ಬರ ಹಾಗೂ ಸೂಕ್ಷ್ಮ ನೀರಾವರಿಯಂತಹ ಸುಧಾರಿತ ತಂತ್ರಗಳನ್ನು ಜಾರಿಗೆ ತಂದರು. ಜೂನ್ ಅಂತ್ಯದ ವೇಳೆಗೆ ಟೊಮೆಟೊ ಇಳುವರಿಯನ್ನು ಪಡೆದಾಗ ಅವರು ತಮ್ಮ ಪ್ರಯತ್ನಗಳಲ್ಲಿ ಯಶಸ್ವಿಯಾದರು.ಅವರು ತಮ್ಮ ಉತ್ಪನ್ನಗಳನ್ನು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ಮಾರಿದ್ದರು, ಅದು ಅವರ ಊರಿಗೆ ಹತ್ತಿರದಲ್ಲಿದೆ. ಮಾರುಕಟ್ಟೆಯಲ್ಲಿ ಕಳೆದ 45 ದಿನಗಳಲ್ಲಿ 40,000 ಪೆಟ್ಟಿಗೆಗಳ ಟೊಮೆಟೊ ಮಾರಾಟ ಮಾಡಿದರು.


ಟೊಮೆಟೊ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಚಂದ್ರಮೌಳಿ, ಟೊಮೆಟೊ ಮಾರಾಟದಿಂದ ನಾನು ಈ ತನಕ 4 ಕೋಟಿ ರೂ.ಗಳಿಸಿದ್ದೇನೆ. 22 ಎಕರೆ ಭೂಮಿಯಲ್ಲಿ ಬೆಳೆ ತೆಗೆಯಲು ಒಟ್ಟು 1 ಕೋ.ರೂ. ಖರ್ಚು ಮಾಡಿದ್ದೇನೆ. ಇದರಲ್ಲಿ ಕಮಿಶನ್ ಹಾಗೂ ಸಾರಿಗೆ ವೆಚ್ಚವೂ ಸೇರಿದೆ. ಹೀಗಾಗಿ ನನಗೆ 3 ಕೋ.ರೂ. ಲಾಭವಾಗಿದೆ"ಎಂದು ಹೇಳಿದ್ದಾರೆ.

ಮೈಸೂರು: ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವು

Posted by Vidyamaana on 2024-01-20 09:37:11 |

Share: | | | | |


ಮೈಸೂರು: ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವು

ಮೈಸೂರು :ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಸಂಭವಿಸಿದೆ.ತುಮಕೂರು ಮೂಲದ ಗವಿ ರಂಗ(19), ರಾಕೇಶ್(19) ಹಾಗೂ ಅಪ್ಪು(16) ಮೃತಪಟ್ಟ ದುರ್ದೈವಿಗಳು. ನಂಜನಗೂಡು ತಾಲೂಕಿನ ಹೆಜ್ಜೆಗೆ ಸೇತುವೆ ಬಳಿ ಸ್ನಾನ ಮಾಡಲು ಇಳಿದು ಮೃತಪಟ್ಟಿದ್ದಾರೆ.ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದರು. ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ. ಇಬ್ಬರು ಈಜಿ ಮೇಲೆ ಬಂದಿದ್ದಾರೆ ಎನ್ನಲಾಗಿದೆ.


ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶಾಸಕ ದರ್ಶನ್‌ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: