ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ ಯುವಕನ ಧಾಂದಲೆ ! ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿದ ಕೊಣಾಜೆ ಪೊಲೀಸರು

Posted by Vidyamaana on 2023-08-20 09:45:26 |

Share: | | | | |


ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ  ಯುವಕನ ಧಾಂದಲೆ ! ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿದ ಕೊಣಾಜೆ ಪೊಲೀಸರು

ಉಳ್ಳಾಲ: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ. 


ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

Posted by Vidyamaana on 2024-05-05 17:20:58 |

Share: | | | | |


ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು.2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಹುಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ.

ಆಪಲ್‌ ಹಿಂದಿಕ್ಕಿ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಎನಿಸಿಕೊಂಡ ಮೈಕ್ರೋಸಾಫ್ಟ್‌!

Posted by Vidyamaana on 2024-01-12 06:20:00 |

Share: | | | | |


ಆಪಲ್‌ ಹಿಂದಿಕ್ಕಿ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಎನಿಸಿಕೊಂಡ ಮೈಕ್ರೋಸಾಫ್ಟ್‌!

ನವದೆಹಲಿ (ಜ.12): ಭಾರತದ ಸತ್ಯ ನಾದೆಳ್ಳೆ ಮುಖ್ಯ ವ್ಯವಸ್ಥಾಪಕ ಅಧಿಕಾರಿಯಾಗಿ ಮೈಕ್ರೋಸಾಫ್ಟ್‌ನ ಅಧಿಕಾರ ವಹಿಸಿಕೊಂಡ ಬಳಿಕ ಮೈಕ್ರೋಸಾಫ್ಟ್‌ ಕಂಪನಿಯ ಚಹರೆಯೇ ಬದಲಾಗಿದೆ ಎನ್ನುವ ಸೂಚನೆಗಳು ಸಿಗುತ್ತಿವೆ. ಗುರುವಾರ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿಗಳ ಪೈಕಿ ಮೈಕ್ರೋಸಾಫ್ಟ್‌, ಐಫೋನ್‌ ಮೇಕರ್‌ ಕಂಪನಿಯಾಗಿರುವ ಆಪಲ್‌ಅನ್ನು ಹಿಂದಿಕ್ಕಿದೆ.2024ರಲ್ಲಿ ಆಪಲ್‌ ಉತ್ಪನ್ನಗಳಿಗೆ ಬೇಡಿಕೆ ಕುಸಿಯಲಿರುವ ಅಂದಾಜಿನಲ್ಲಿ ಈ ವಾರ ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಆಪಲ್‌ ಕಂಪನಿಯ ಷೇರುಗಳು ಕುಸಿಯಲಾರಂಭಿಸಿದೆ. ಇನ್ನೊಂದೆಡೆ ಮೈಕ್ರೋಸಾಫ್ಟ್‌ ಷೇರು ಬೆಲೆಯಲ್ಲಿ ಏರಿಕೆಯಾಗಿದ್ದು, ಗುರುವಾರ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಎನ್ನುವ ಶ್ರೇಯ ಸಂಪಾದಿಸಿದೆ. ವಾಷಿಂಗ್ಟನ್‌ ಮೂಲಕ ಮೈಕ್ರೋಸಾಫ್ಟ್‌ ಕಂಪನಿಯ ಷೇರು ಬೆಲೆಗಳಲ್ಲಿ ಶೇ. 1.6ರಷ್ಟು ಏರಿಕೆ ಆಗಿದ್ದರಿಂದ ಈ ಕಂಪನಿಯ ಮಾರುಕಟ್ಟೆ ಮೌಲ್ಯ 2.875 ಟ್ರಿಲಿಯನ್‌ ಯುಎಸ್‌ ಡಾಲರ್‌ ದಾಟಿತು. ಅರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಮೂಲಕ ಹಣ ಸಂಪಾದಿಸುವ ಕಂಪನಿಗಳ ರೇಸ್‌ನಲ್ಲಿ ಮೈಕ್ರೋಸಾಫ್ಟ್‌ ಮುಂದಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಕಂಪನಿಯ ಷೇರುಗಳಲ್ಲಿ ಏರಿಕೆಯಾಗಿದೆ.ಇನ್ನು ಆಪಲ್‌ ಕಂಪನಿಯ ಷೇರುಗಳು ಶೇ. 0.9ರಷ್ಟು ಕುಸಿದು ಅದರ ಮಾರುಕಟ್ಟೆ ಮೌಲ್ಯ 2.871 ಟ್ರಿಲಿಯನ್‌ ಯುಎಸ್‌ ಡಾಲರ್‌ ಎನಿಸಿಕೊಂಡಿತು. 2021ರ ಬಳಿಕ ಇದೇ ಮೊದಲ ಬಾರಿಗೆ ಮಾರುಕಟ್ಟೆ ಮೌಲ್ಯದಲ್ಲಿ ಆಪಲ್‌ ಕಂಪನಿ ಮೈಕ್ರೋಸಾಫ್ಟ್‌ಗಿಂತ ಕೆಳಗೆ ಇಳಿದಿದೆ. ಜನವರಿಯಲ್ಲಿ ಈವರೆಗೆ ಕ್ಯಾಲಿಫೋರ್ನಿಯಾ ಮೂಲದ ಆಪಲ್‌ ಕಂಪನಿಯ ಷೇರುಗಳು ಶೇ. 3.3ರಷ್ಟು ಕುಸಿದಿದ್ದರೆ, ಮೈಕ್ರೋಸಾಫ್ಟ್‌ ಕಂಪನಿಯ ಷೇರುಗಳು ಶೇ. 1.8ರಷ್ಟು ಏರಿಕೆ ಕಂಡಿದೆ.


"ಮೈಕ್ರೋಸಾಫ್ಟ್ ವೇಗವಾಗಿ ಬೆಳೆಯುತ್ತಿರುವ ಕಾರಣ ಮೈಕ್ರೋಸಾಫ್ಟ್ ಆಪಲ್ ಅನ್ನು ಹಿಂದಿಕ್ಕುವುದು ಅನಿವಾರ್ಯವಾಗಿತ್ತು ಮತ್ತು ಈಗಾಗಲೇ AI ಕ್ರಾಂತಿಯಿಂದ ಹೆಚ್ಚಿನ ಪ್ರಯೋಜನವನ್ನು ಹೊಂದಿದೆ" ಎಂದು ಗಿಲ್ ಲೂರಿಯಾದ ವಿಶ್ಲೇಷಕ ಡಿ.ಎ. ಡೇವಿಡ್ಸನ್ ಹೇಳಿದ್ದಾರೆ.ಆಪಲ್‌ ಕಂಪನಿಯ ಪಾಲಿಗೆ ಅತಿದೊಡ್ಡ ಲಾಭ ಬರುವುದು ಐಫೋನ್‌ ಮಾರಾಟದಿಂದ. ಆದರೆ, ಇತ್ತೀಚಿನ ದಿನಗಳಲ್ಲಿ ಐಫೋನ್‌ ಮಾರಾಟ ಕಡಿಮೆಯಾಗಬಹುದು ಎನ್ನುವ ಅಂದಾಜು ಬಂದಿರುವ ಕಾರಣ ಆಪಲ್‌ ಷೇರುಗಳು ಕುಸಿತ ಕಂಡಿವೆ. ಅದರಲ್ಲೂ ಚೀನಾದಂಥ ಪ್ರಮುಖ ಮಾರುಕಟ್ಟೆಯಲ್ಲಿ ಆಪಲ್‌ ಮಾರಾಟ ಇನ್ನಷ್ಟು ಕುಸಿತವಾಗಿದೆ.ಮುಂದಿನ ದಿನಗಳಲ್ಲಿ ಆಪಲ್‌ ಮಾರುಕಟ್ಟೆ ಮೌಲ್ಯದ ಕುಸಿತಕ್ಕೆ ಚೀನಾ ಕಾರಣವಾಗಲಿದೆ. ಚೀನಾ ಹಾಗೂ ಅಮೆರಿಕ ನಡುವಿನ ಕೆಟ್ಟ ಸಂಬಂಧ ಆಪಲ್‌ನ ಮೇಲೆ ಇನ್ನಷ್ಟು ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷದ ಡಿಸೆಂಬರ್‌ 14 ರಂದು ಆಪಲ್‌ ಕಂಪನಿಯ ಮಾರುಕಟ್ಟೆ ಮೌಲ್ಯ 3.081 ಟ್ರಿಲಿಯನ್‌ ಯುಎಸ್‌ ಡಾಲರ್‌ ಆಗಿತ್ತು. ಒಂದೇ ವರ್ಷದಲ್ಲಿ ಆಪಲ್‌ ಶೇ. 48ರಷ್ಟು ಮೌಲ್ಯ ಏರಿಸಿಕೊಂಡಿತ್ತು.2018 ಹಾಗೂ ತೀರಾ ಇತ್ತೀಚೆಗೆ 2021ರಲ್ಲಿ ಆಪಲ್‌ ಕಂಪನಿಯಲ್ಲಿ ಹಿಂದಿಕ್ಕಿ ಮೈಕ್ರೋಸಾಫ್ಟ್‌ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಎನಿಸಿಕೊಂಡಿತ್ತು. ಆದರೆ, ಪ್ರಸ್ತುತ ವಾಲ್‌ ಸ್ಟ್ರೀಟ್‌ ಮೈಕ್ರೋಸಾಫ್ಟ್‌ ಬಗ್ಗೆ ಧನಾತ್ಕವಾಗಿದ್ದಾರೆ. ಶೇ. 90ರಷ್ಟು ಬ್ರೋಕರೇಜ್‌ಗಳು ಮೈಕ್ರೋಸಾಫ್ಟ್‌ ಕಂಪನಿಯ ಷೇರುಗಳನ್ನು ಖರೀದಿ ಮಾಡಿ ಎನ್ನುವ ಸಲಹೆ ನೀಡಿದ್ದಾರೆ.

ಅಡ್ಯಾರಿನಲ್ಲಿ ಕಾಂಗ್ರೆಸ್ ಸಮಾವೇಶ ; ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿಷೇಧ, ಬದಲಿ ವ್ಯವಸ್ಥೆ

Posted by Vidyamaana on 2024-02-17 02:34:00 |

Share: | | | | |


ಅಡ್ಯಾರಿನಲ್ಲಿ ಕಾಂಗ್ರೆಸ್ ಸಮಾವೇಶ ; ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿಷೇಧ, ಬದಲಿ ವ್ಯವಸ್ಥೆ

ಮಂಗಳೂರು, ಫೆ.16: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ ಫೆ.17ರಂದು ಬೆಳಗ್ಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಬಸ್, ಲಾರಿ ಇನ್ನಿತರ ಘನ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.


ಉಡುಪಿ, ಮಂಗಳೂರು ಕಡೆಯಿಂದ ಬಿಸಿ ರೋಡ್ ಕಡೆಗೆ ತೆರಳುವ ಘನ ವಾಹನಗಳು ನಂತೂರು- ಪಂಪ್ವೆಲ್- ತೊಕ್ಕೊಟ್ಟು- ಮುಡಿಪು- ಮೆಲ್ಕಾರ್ ಮೂಲಕ ಸಂಚರಿಸುವುದು. ಅದೇ ರೀತಿ ಬೆಂಗಳೂರು- ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಗಮಿಸುವ ಘನ ವಾಹನಗಳು ಮೆಲ್ಕಾರ್- ಮುಡಿಪು- ತೊಕ್ಕೊಟ್ಟು- ಪಂಪ್ವೆಲ್ ಮೂಲಕ ತೆರಳುವುದು, ಈ ತಾತ್ಕಾಲಿಕ ಸಂಚಾರ ಬದಲಾವಣೆ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಊರ್ಜಿತದಲ್ಲಿರುತ್ತದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ.ವಾಹನ ಪಾರ್ಕಿಂಗ್ ವಿವರ


ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕ್ ಮಾಡುವುದು, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ವಾಹನಗಳನ್ನು ಅಡ್ಯಾರ್ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಬಂಟ್ವಾಳದಿಂದ ಬರುವ ಬಸ್ಸುಗಳು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿ ಶ್ಯಾಮ್ ಮೈದಾನದಲ್ಲಿ ಪಾರ್ಕ್ ಮಾಡುವುದು.


ಮಂಗಳೂರು ಕಡೆಯಿಂದ ಬರುವ ವಾಹನಗಳು ಅಡ್ಯಾರ್ ಗಾರ್ಡನಲ್ಲಿ ಪಾರ್ಕಿಂಗ್ ಮಾಡುವುದು. ಕಾರ್ಯಕರ್ಕರನ್ನು ಕರೆತರುವ ವಾಹನಗಳು ಜನರನ್ನು ಇಳಿಸಿ ಕಣ್ಣೂರು ಮಸೀದಿ ಬಳಿಯ ಮೈದಾನದಲ್ಲಿ ಪಾರ್ಕ್ ಮಾಡುವುದು. ಅಡ್ಯಾರ್ ಕಟ್ಟೆಯ ಜಯಶೀಲ ಅಡ್ಯಂತಾಯರ ಮೈದಾನದಲ್ಲಿಯೂ ಪಾರ್ಕಿಂಗ್ ಅವಕಾಶ ಇದೆ.

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಯತ್ನಾಳ್ ವಿಪಕ್ಷ ನಾಯಕ: ಎಚ್.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

Posted by Vidyamaana on 2023-07-25 10:44:56 |

Share: | | | | |


ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಯತ್ನಾಳ್ ವಿಪಕ್ಷ ನಾಯಕ: ಎಚ್.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

ಬೆಂಗಳೂರು, ಜುಲೈ 25: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ವಿಳಂಬ ಮಧ್ಯೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.


ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚಿಕ್ಕಮಗಳೂರಿನ ಸಿ.ಟಿ.ರವಿ ಬಿಜೆಪಿ ರಾಜ್ಯ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಆಗಲಿದ್ದಾರೆ. ಈ ಬಗ್ಗೆ ಒಂದು ಹಂತದ ಚರ್ಚೆ ಆಗಿದೆ. ಅದೆಲ್ಲ ಅವರ ಪಕ್ಷದ ಆಂತರಿಕ ವಿಚಾರ, ಆ ಬಗ್ಗೆ ನಾನು ಗಮನ ಹೆರಿಸಲ್ಲ" ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ"


ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಇದರಲ್ಲಿ ಯಾವ ಅನುಮಾನ ಬೇಡ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.


"ನಾವು ಯಾವ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಷ್ಟು ಸ್ಥಾನಗಳಲ್ಲಾದರೂ ನಾವು ಗೆಲ್ಲಲಿ, ಅದರ ಬಗ್ಗೆ ಚಿಂತಿಸುವುದಿಲ್ಲ. ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ" ಎಂದು ತಿಳಿಸಿದರು

ಎಲೆಕ್ಷನ್‌ಗೆ ನಿಂತುಕೊಳ್ಳೋಕೆ ನನ್ನತ್ರ ದುಡ್ಡಿಲ್ಲ ಎಂದ ಹಣಕಾಸು ಸಚಿವೆ! ಇದು ನಿಜನಾ? ಇವರ ಒಟ್ಟು ಆಸ್ತಿ ಎಷ್ಟು

Posted by Vidyamaana on 2024-03-28 17:11:08 |

Share: | | | | |


ಎಲೆಕ್ಷನ್‌ಗೆ ನಿಂತುಕೊಳ್ಳೋಕೆ ನನ್ನತ್ರ ದುಡ್ಡಿಲ್ಲ ಎಂದ ಹಣಕಾಸು ಸಚಿವೆ! ಇದು ನಿಜನಾ? ಇವರ ಒಟ್ಟು ಆಸ್ತಿ ಎಷ್ಟು

ನವದೆಹಲಿ: ಕೇಂದ್ರ ಹಣಕಾಸು ಸಚಿವೆಯೇ (Finance Minister Nirmala Sitharaman) ತನ್ನ ಬಳಿ ಹಣ ಇಲ್ಲದ ಕಾರಣ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಹೇಳಿಕೆ ನೀಡಿರುವುದು ಎಲ್ಲರ ಹುಬ್ಬೇರಿಸಿದೆ. ಚುನಾವಣೆಗೆ ಬೇಕಾದಷ್ಟು ಹಣ ಇಲ್ಲದ ಕಾರಣ ನಾನು ಈ ಬಾರಿ ಚುನಾವಣೆಗೆ ನಿಲ್ಲುತ್ತಿಲ್ಲ ಎಂದು ಸಚಿವೆ ನಿರ್ಮಲಾ ಸೀತಾರಾಮನ್​​ ಟೈಮ್ಸ್ ನೌ ಶೃಂಗಸಭೆ 2024ರಲ್ಲಿ ಹೇಳಿಕೆ ನೀಡಿದ್ದಾರೆ.ಬಿಜೆಪಿ ಅಧ್ಯಕ್ಷ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದರು. ನಾನು ಸುಮಾರ 10 ದಿನಗಳ ಕಾಲ ಯೋಚಿಸಿ ಕೊನೆಗೆ ಸ್ಪರ್ಧಿಸೋಲ್ಲ ಎಂದು ತಿಳಿಸಿದೆ. ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ. ಇನ್ನು ಚುನಾವಣೆಗೆ ನಿಲ್ಲಲು ಆಂಧ್ರಪ್ರದೇಶ ಅಥವಾ ತಮಿಳುನಾಡು ಎರಡೂ ಕಡೆ ನನಗೆ ಸಮಸ್ಯೆ ಇದೆ. ನೀವು ಯಾವ ಸಮುದಾಯದವರು ಅಥವಾ ನಿಮ್ಮ ಧರ್ಮ ಯಾವುದು ಎಂಬೆಲ್ಲಾ ವಿಷಯಗಳು ಚುನಾವಣೆಯಲ್ಲಿ ಮಾನದಂಡವಾಗುತ್ತೆ. ಅವುಗಳನ್ನು ನಾನು ಎದುರಿಸಿ ನಿಭಾಯಿಸಬಲ್ಲೆ ಎಂಬ ಭರವಸೆ ಇಲ್ಲ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸಿದೆ. ನನ್ನ ವಾದವನ್ನು ಪಕ್ಷ ಕೂಡ ಒಪ್ಪಿಕೊಂಡಿದೆ ಎಂದು ಸಚಿವೆ ತಿಳಿಸಿದ್ದಾರೆ.ಭಾರತದ ಹಣ ನನ್ನದಲ್ಲ




Leave a Comment: