ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

Posted by Vidyamaana on 2023-04-27 16:30:04 |

Share: | | | | |


ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾಪರಿವಾರ’ ಎ.28 ರಂದು ನಡೆಯಲಿದೆ.ಮಹಿಳಾ ಸಮಾವೇಶ ‘ಸೀತಾಪರಿವಾರ’ ಕಾರ್ಯಕ್ರಮವು ಎ.28 ಸಂಜೆ 4 ಗಂಟೆಗೆ ಮುಕ್ರಂಪಾಡಿಯ ಸುಭದ್ರ ಸಭಾಂಗಣದಲ್ಲಿ ನಡೆಯಲಿದೆ.ಹಿಂದುತ್ವದ ಅಡಿಯಲ್ಲಿ ಸುಮಾರು 30 ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕಾರ್ಯಕರ್ತರ ಅಪೇಕ್ಷೆಯಂತೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಅವರ ಗೆಲುವು ರಾಜ್ಯದಲ್ಲಿ ಬಿಜೆಪಿಯ ಗೆಲವುವಾಗಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಗೆಲುವು ಆಗಲಿದೆ. ಹಾಗಾಗಿ ಮಹಿಳಾ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದು, ಮಹಿಳಾ ಕಾರ್ಯಕರ್ತರು ‘ಸೀತಾಪರಿವಾರ’ ಎಂಬ ಹೆಸರಿನಡಿಯಲ್ಲಿ ಸಮಾವೇಶ ನಡೆಸಲಿದ್ದಾರೆ.

ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೀತಾ ಪರಿವಾರ ಸಮಾವೇಶದ ಪ್ರಮುಖರಾಗಿರುವ ವಸಂತ ಲಕ್ಷ್ಮೀ ರವರು ಪತ್ರಿಕಾಗೋಷ್ಠಿ ತಿಳಿಸಿದರು.

ಜು.8ರಂದು ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Posted by Vidyamaana on 2024-07-08 06:29:36 |

Share: | | | | |


ಜು.8ರಂದು ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡದ ಸುಪ್ರೀಂ ಕೋರ್ಟ್‌: ನನ್ನೆಲ್ಲಾ ಪ್ಲ್ಯಾನ್‌ ಉಲ್ಟಾ ಆಯಿತು ಎಂದ ಖ್ಯಾತ ಅಥ್ಲೀಟ್‌!

Posted by Vidyamaana on 2023-10-19 09:23:38 |

Share: | | | | |


ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡದ ಸುಪ್ರೀಂ ಕೋರ್ಟ್‌: ನನ್ನೆಲ್ಲಾ ಪ್ಲ್ಯಾನ್‌ ಉಲ್ಟಾ ಆಯಿತು ಎಂದ ಖ್ಯಾತ ಅಥ್ಲೀಟ್‌!

  ಸುಪ್ರೀಂ ಕೋರ್ಟ್‌ ಮಂಗಳವಾರ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ್ದು, ಇದರ ಬೆನ್ನಲ್ಲೇ ದೇಶದ ಪ್ರಮುಖ ಸಲಿಂಗಿ ಜೋಡಿಗಳಲ್ಲಿ ಆತಂಕ ಶುರುವಾಗಿದೆ.ಈ ಕುರಿತು ಭಾರತದ ಖ್ಯಾತ ಸ್ಪ್ರಿಂಟರ್‌ ಹಾಗೂ ಒಲಿಂಪಿಯನ್‌ ದ್ಯುತಿ ಚಂದ್‌ ಬೇಸರ ವ್ಯಕ್ತಪಡಿಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪು ನನ್ನೆಲ್ಲಾ ಪ್ಲ್ಯಾನ್‌ಗಳನ್ನು ಉಲ್ಟಾ ಮಾಡಿದೆ ಎಂದು ಅವರು ಹೇಳಿದ್ದಾರೆ.ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನಿರಾಕರಿಸಿದೆ.ಇದರಿಂದ ತೀರ್ಪು ನಿರೀಕ್ಷೆಯಲ್ಲಿದ್ದ ದೇಶದ ಪ್ರಮುಖ ಸಲಿಂಗ ಜೋಡಿಗಳಿಗೆ ಇದರಿಂದ ದೊಡ್ಡ ಆಘಾತವಾಗಿದೆ.


ನಾನು ನನ್ನ ಜೊತೆಗಾರ್ತಿ ಮೊನಾಲಿಸಾರನ್ನು ಮದುವೆಯಾಗುವ ಎಲ್ಲಾ ಪ್ಲ್ಯಾನ್‌ ಮಾಡಿದ್ದೆ. ಆದರೆ, ಸುಪ್ರೀಂ ಕೋರ್ಟ್‌ ತೀರ್ಪು ಈ ಪ್ಲ್ಯಾನ್‌ಗಳನ್ನು ಹಾಳು ಮಾಡಿದೆ ಎಂದು ದ್ಯುತಿ ಚಂದ್‌ ಹೇಳಿದ್ದಾರೆ.

ನಾನು ಹಾಗೂ ಮೋನಾಲಿಸಾ ಕಳೆದ ಐದು ವರ್ಷಗಳಿಂದ ಜೊತೆಯಾಗಿ ಬದುಕುತ್ತಿದ್ದೇವೆ. ವಯಸ್ಕರಾರಿಗೂ ನಾವು ತುಂಬಾ ಸಂತೋಷದಿಂದ ಬದುಕುತ್ತಿದ್ದೇವೆ . ನಮ್ಮ ಬದುಕಿನಲ್ಲಿ ನಮ್ಮದೇ ಆದಂಥ ಸ್ವಂಥ ನಿರ್ಧಾರಗಳನ್ನು ಮಾಡಲು ನಾವೀಗ ಶಕ್ತರಾಗಿದ್ದೇವೆ. ಸಲಿಂಗ ವಿವಾಹವನ್ನು ಮಾನ್ಯ ಮಾಡಿ ಸಂಸತ್ತು ಹೊಸ ಕಾನೂನು ಜಾರಿ ಮಾಡಲಿದೆ ಎನ್ನುವ ವಿಶ್ವಾಸ ನಮಗಿದೆ ಎಂದು ದ್ಯುತಿ ತಿಳಿಸಿದ್ದಾರೆ.2019ರ ಮೇ ತಿಂಗಳಲ್ಲಿ ಭಾರತದಲ್ಲಿ ಮುಕ್ತವಾಗಿ ಹೇಳಿಕೊಂಡ ದೇಶದ ಮೊದಲ ಲೆಸ್ಬಿಯನ್‌ ಅಥ್ಲೀಟ್‌ ಆಗಿ ದ್ಯುತಿ ಚಂದ್‌ ಗುರುತಿಸಿಕೊಂಡರು. ಇದಕ್ಕಾಗಿ ಅವರು ತಮ್ಮ ಕುಟುಂಬದಿಂದ ದೊಡ್ಡ ಮಟ್ಟದ ಟೀಕೆ ಎದುರಿಸಿದ್ದರು.


2021 ರಲ್ಲಿ ಬರ್ಮಿಂಗ್ಹ್ಯಾಮ್‌ನಲ್ಲಿ ಕ್ವೀನ್ಸ್ ಬ್ಯಾಟನ್‌ನಲ್ಲಿ ಭಾಗವಹಿಸಿದ್ದಲ್ಲದೇ, ಕಾಮನ್‌ವೆಲ್ತ್ ದೇಶಗಳಲ್ಲಿ ಹೋಮೋಫೋಬಿಯಾ ಬಗ್ಗೆ ಬೆಳಕು ಚೆಲ್ಲುವ ಅವಕಾಶವನ್ನು ಪಡೆದರು.


2022 ರ ಕಾಮನ್‌ವೆಲ್ತ್ ಗೇಮ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ LGBTQIA+ ಧ್ವಜವನ್ನು ಹಿಡಿದಿದ್ದ ದ್ಯುತಿ ಅವರು ಹೋಮೋಫೋಬಿಯಾ ವಿರುದ್ಧ ಪ್ರಬಲ ಸಂದೇಶವನ್ನು ಕಳುಹಿಸಿದ್ದರು.2015 ರಲ್ಲಿ ಸ್ಪೋರ್ಟ್ಸ್ ಆರ್ಬಿಟ್ರೇಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಐಎಎಎಫ್‌ ವಿರುದ್ಧ ದ್ಯುತಿ ಚಂದ್‌ ಲಿಂಗ ಪ್ರಕರಣವನ್ನು ಗೆದ್ದಿದ್ದರು. ಒಂದು ವರ್ಷಅಮಾನತುಗೊಂಡ ನಂತರ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಲಾಯಿತು.

ಸಿಎಎಸ್‌ ಎರಡು ವರ್ಷಗಳವರೆಗೆ ಐಎಎಎಫ್‌ ನೀತಿಯನ್ನು ಅಮಾನತುಗೊಳಿಸಿತು. ನಂತರ ವಿಶ್ವ ಅಥ್ಲೆಟಿಕ್ಸ್‌ ಸಂಸ್ಥೆಯು ನೀತಿಯನ್ನು ಬದಲಾಯಿಸಿತು, ಇದು ಈಗ 400m ನಿಂದ 1500m ವ್ಯಾಪ್ತಿಯಲ್ಲಿ ಸ್ಪರ್ಧಿಸುವ ಮಹಿಳಾ ಅಥ್ಲೀಟ್‌ಗಳಿಗೆ ಮಾತ್ರ ಅನ್ವಯಿಸುತ್ತದೆ, 100m ಮತ್ತು 200m ನಲ್ಲಿ ಸ್ಪರ್ಧಿಸುವ ದ್ಯುತಿಯನ್ನು ತನ್ನ ವ್ಯಾಪ್ತಿಯಿಂದ ಹೊರಗಿಟ್ಟಿತು.


ಮೊನಾಲಿಸಾ ಕುರಿತು ಹೇಳುದಾದರೆ , ತನ್ನ ಗ್ರಾಮದಲ್ಲಿ ಖುದುರ್ಕುನಿ ಪೂಜೆಯ ಸಮಯದಲ್ಲಿ ದ್ಯುತಿ ಚಂದ್‌ರನ್ನು ಮೊದಲು ಭೇಟಿಯಾಗಿದ್ದರು ಮತ್ತು ಬಿಎ ಪದವಿಯನ್ನು ಪೂರ್ಣಗೊಳಿಸಿದ ನಂತರ ದಂಪತಿಗಳು ಒಟ್ಟಿಗೆ ವಾಸ ಮಾಡಲು ಆರಂಭಿಸಿದ್ದಾರೆ.

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ಅಮಾನತು

Posted by Vidyamaana on 2023-07-05 12:04:29 |

Share: | | | | |


ಬೆಳ್ತಂಗಡಿ: ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ಅಮಾನತು

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಕೆಲಸದಿಂದ ಅಮಾನತು ಗೊಳಿಸಿ ಪ್ರಧಾನ ಮುಖ್ಯವಾರಣ್ಯ ಸಾಮರಕ್ಷಣಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಕಲಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಅಕ್ರಮ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಕಲ್ಮಂಜ ಗ್ರಾಮದಲ್ಲಿ 2.5ಎಕ್ರೆ ಪ್ರದೇಶದಲ್ಲಿನ ಮರಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿಯಲಾಗಿತ್ತು ಆದರೆ ಇಲಾಖೆ ಕಾನುನಿನ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಸೊತ್ತುಗಳನ್ನು ಸಾಗಾಟ ಮಾಡಲು ಅವಕಾಶ ಮಾಡಿಕೊಟ್ಟು ಮರಗಳ್ಳರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ತ್ಯಾಗರಾಜ್ ಅವರ ಮೇಲಿತ್ತು.ಈ ಹಿನ್ನಲೆಯಲ್ಲಿ ಇಲಾಖಾ ತನಿಖೆ ನಡೆಸಲಾಗಿತ್ತು.ಇದೀಗ ತ್ಯಾಗರಾಜ್ ಅವರನ್ನು ಅಮಾನತು ಗೊಳಿಸಿ ಆದೆಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ವಿವಾದಗಳಿಗೆ ಕಾರಣವಾಗಿದ್ದ ಕಲಂಜದ ಅಕ್ರಮ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ತಲೆದಂಡವಾಗಿದೆ.

ಲಕ್ಷಾಂತರ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ಅರಣ್ಯ ದಳದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಹಾಗೂ ಇತರರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆಗಲೇ ಇಲಾಖಾ ತನಿಖೆ ಆರಂಭವಾಗಿತ್ತು. ಆದರೆ ಅಧ ಮುಂದುವರಿದ ಭಾಗವಾಗಿ ದಾಳಿ ನಡೆಸಿದ್ದ ಸಂದ್ಯಾ ಅವರನ್ನು ಬೀದರಿಗೆ ವರಗಗಾವಣೆ ಮಾಡಿ ಆದೇಶಬಂದ ಹಿನ್ನಲೆಯಲ್ಲಿ ಭಾರೀ ರಾಜಕೀಯ ವಿವಾದಗಳು ಸೃಷ್ಟಿಯಾಗಿದ್ದವು. ಅಲ್ಲದೆ ತನಿಖೆ ನಡೆಸಿದ ಹಿರಿಯ ಅಧಿಕಾರಿಗಳು ಕೆಳ ಹಂತದ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.

ತ್ಯಾಗರಾಜ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇದೀಗ ತ್ಯಾಗರಾಜ್ ಅವರ ವಿರುದ್ಧ ಇದೇ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ

ಮಾ.23 ಗುರುವಾರ ಪವಿತ್ರ ರಂಝಾನ್ ಉಪವಾಸ ಆರಂಭ

Posted by Vidyamaana on 2023-03-22 15:07:52 |

Share: | | | | |


ಮಾ.23 ಗುರುವಾರ ಪವಿತ್ರ ರಂಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಆಗಿರುವುದರಿಂದ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಒಂದೇ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ ಬೊಮ್ಮಾಯಿ ಸೋಮಣ್ಣ

Posted by Vidyamaana on 2023-11-17 12:35:00 |

Share: | | | | |


ಒಂದೇ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ ಬೊಮ್ಮಾಯಿ ಸೋಮಣ್ಣ

ಬೆಂಗಳೂರು: ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ‌ ಕಾರ್ಯಕ್ರಮದಲ್ಲಿ ಸಿಎಂ‌ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿ.ಸೋಮಣ್ಣ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.ಮೂವರು ನಾಯಕರು ಒಂದೇ ವೇದಿಕೆ ಹಂಚಿಕೊಂಡಿರುವುದು ವಿಧಾನಸಭಾ ಚುನಾವಣೆಯ ಬಳಿಕ ಇದೇ ಮೊದಲು.‌ 


ವಿ.ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅದಾದ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಸೋಮಣ್ಣ ಬಿಜೆಪಿಯಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ, ಬಿ.ವೈ.ವಿಜಯೇಂದ್ರ ಆಯ್ಕೆಯಿಂದ ಅಸಮಾಧಾನಗೊಂಡಿದ್ದರು. ಹೀಗಾಗಿ ಅವರು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 


ಸೋಮಣ್ಣನ ಮೇಲೆ ನನಗೆ ದ್ವೇಷ ಇಲ್ಲ: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ, "ಸೋಮಣ್ಣ ಮತ್ತು ಬೊಮ್ಮಾಯಿ ಅವರನ್ನು ಹೊಗಳಿದರು. ನಾನು ಸೋಮಣ್ಣ, ಬೊಮ್ಮಾಯಿ ಒಂದೇ ಪಕ್ಷದಲ್ಲಿ ಇದ್ದೆವು. ಆಗ ಬಹಳ ಪ್ರೀತಿ, ವಿಶ್ವಾಸ ಇತ್ತು. ಈಗಲೂ ಬೊಮ್ಮಾಯಿಯವರ ಜತೆ ಅದೇ ಪ್ರೀತಿ ಇದೆ. ವೈಯಕ್ತಿಕವಾಗಿ ಬೊಮ್ಮಾಯಿಯವರ ತಂದೆ ನನಗೆ ಬಹಳ ಸಹಾಯ ಮಾಡಿದ್ದಾರೆ. ಇವರಿಗೆ ನನ್ನ ಮೇಲೆ ಆಂತರಿಕ ಪ್ರೀತಿ ಇದೆ. ಸೋಮಣ್ಣ ವರುಣಾದಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದ. ಆದರೂ ಸೋಮಣ್ಣನಿಗೂ ನನ್ನ ಮೇಲೆ ಪ್ರೀತಿ ಇದೆ.‌ ಪಾಪ ಹೈಕಮಾಂಡ್ ಹೇಳಿದ್ರು ಅಂತ ನನ್ನ ವಿರುದ್ಧ ನಿಂತ್ಕೊಂಡಿದ್ದ" ಎಂದರು. 


ಸಿದ್ದರಾಮಯ್ಯ ಅತ್ಯಂತ ಆತ್ಮೀಯರು: ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದ ವಿ.ಸೋಮಣ್ಣ, "ಆಡಳಿತ, ವಿಪಕ್ಷ ಅನ್ನೋದು ಇಲ್ಲ. ಕರ್ನಾಟಕದಲ್ಲಿ ಬೇರೆ ರಾಜ್ಯಗಳಿಗಿಂತ ರಾಜಕೀಯದಲ್ಲಿ ಉತ್ತಮ ಬಾಂಧವ್ಯ ಇದೆ. ನನಗೆ ಸಿದ್ದರಾಮಯ್ಯ ಮತ್ತು ಬೊಮ್ಮಾಯಿಯವರು ಅತ್ಯಂತ ಆತ್ಮೀಯರು.ಜನತಾ ಪಕ್ಷದಲ್ಲಿ ಇದ್ದವರು ನಾವು. ಈಗ ಎಲ್ಲೇ ಇದ್ರೂ ನಮ್ಮದೇ ನೀತಿ ತತ್ವದಡಿ ಸಣ್ಣ ಅಪಚಾರವೂ ಇಲ್ಲದೇ ಬದುಕುತ್ತಿದ್ದೀವಿ" ಎಂದು ತಿಳಿಸಿದರು. 


ಕಾಂಗ್ರೆಸ್ ಸೇರುವ ಅವಶ್ಯಕತೆ ಈಗಿಲ್ಲ: "ಪಕ್ಷಕ್ಕೆ ನನ್ನದೂ ದುಡಿಮೆ,‌ ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ಅಭಿಪ್ರಾಯವನ್ನು ಮುಂದೆ ತಿಳಿಸುತ್ತೇನೆ. ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ. ಆದರೆ ಕಾಂಗ್ರೆಸ್ ಸೇರುವ ಅವಶ್ಯಕತೆ ನನಗೆ ಈಗಿಲ್ಲ" ಎಂದು ಸ್ಪಷ್ಟಪಡಿಸಿದರು.

Recent News


Leave a Comment: