ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮಂಗಳೂರು: ಟಿಕೆಟ್ ಕೈತಪ್ಪುವ ಸುಳಿವು ದೊರೆತ ಕೂಡಲೇ ಭಾವುಕರಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್

Posted by Vidyamaana on 2024-03-12 12:31:42 |

Share: | | | | |


ಮಂಗಳೂರು: ಟಿಕೆಟ್ ಕೈತಪ್ಪುವ ಸುಳಿವು ದೊರೆತ ಕೂಡಲೇ ಭಾವುಕರಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು, ಮಾರ್ಚ್​ 12: ಲೋಕಸಭೆ ಚುನಾವಣೆಯಲ್ಲಿ (Lok Sabha Election) ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ (Nalin Kumar Kateel) ಬಿಜೆಪಿ (BJP) ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು, ಭಾವುಕರಾರದರು. ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷವು ನಿಂತ ನೀರಾಗಬಾರದು: ನಳಿನ್

ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು.


ಪಕ್ಷ ಹೇಳಿದ ಕೆಲಸ ಮಾಡುತ್ತೇವೆ: ಕಟೀಲ್

ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಎಂದರೆ ಗುಡಿಸುತ್ತೇವೆ. ಒರೆಸು ಎಂದು ಹೇಳಿದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ. ನಾವು ಕಾರ್ಯವನ್ನು ನಂಬಿರುವಂಥವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿರುವುದನ್ನು ರಾತ್ರಿ ನೋಡಿದೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೊಂಡರೂ ಅದು ಪಾರ್ಟಿಯ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನನಗೂ ಮೂರು ಬಾರಿ‌ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ. ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ. ಅದರ ಬದಲಿಗೆ ಬೆಳೆಸುವ ಕೆಲಸ ಕಾರ್ಯ ಆಗುತ್ತದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು.ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು. ಪಕ್ಷದ ಕೆಲಸ ಮಾಡೋದಕ್ಕೂ ಜನ ಬೇಕಲ್ಲ. ಈ ಬಗ್ಗೆ ಯೋಚನೆ ಮಾಡಿಕೊಂಡೇ ರಾಷ್ಟ್ರೀಯ ನಾಯಕರು ಪಟ್ಟಿ ಘೋಷಣೆ ಮಾಡುತ್ತಾರೆ. ನಾವು ಸಂಘಟನೆ ಕಾರ್ಯ ಮಾಡುವವರು, ಹೀಗಾಗಿ ಯಾವುದೇ ಅಸಮಾಧಾನ ಇಲ್ಲ ಎಂದು ಕಟೀಲ್ ಹೇಳಿದರು

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ ಡಿಪಿಐ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

Posted by Vidyamaana on 2024-03-14 12:49:33 |

Share: | | | | |


ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ ಡಿಪಿಐ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ  ಎಸ್‌ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ  ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಾಲ್ಮರ ಮಾತಾಡಿ  CAA ಕಾಯ್ದೆಯು ಈ ದೇಶದ ಜಾತ್ಯಾತೀತ ಪರಂಪರೆಗೆ ಮಾರಕ ಮತ್ತು ಇದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.


ದಿಕ್ಸೂಚಿ ಭಾಷಣ ಮಾಡಿದ ಪಕ್ಷದ ಜಿಲ್ಲಾ ಸಮಿತಿ ಸದಸ್ಯರೂ ಕ್ಷೇತ್ರ ಸಮಿತಿಯ ಉಸ್ತುವಾರಿಯೂ ಆಗಿರುವ ಅಬೂಬಕ್ಕರ್ ಸಿದ್ದೀಕ್ ಪುತ್ತೂರು ರವರು ಮಾತಾಡಿ ಈ ದೇಶವು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದರೆ ಸಂವಿಧಾನದ ಆಶಯಗಳನ್ನು ಉಪಯೋಗಿಸಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷವು ಇಂದು ಅದೇ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ದೇಶವನ್ನು ಒಡೆಯುವ ಕಾರ್ಯ ಮಾಡುತ್ತಿದೆ.ಆದುದರಿಂದ ಈ ದೇಶದಿಂದಲೇ ಬಿಜೆಪಿ ಪಕ್ಷವನ್ನು ನಿರ್ನಾಮ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಮಾತಾಡಿ  ಈ ಜನವಿರೋಧಿ ಕಾನೂನನ್ನು ಹಿಂಪಡೆಯದಿದ್ದರೆ SDPI ಪಕ್ಷವು ಯಾವುದೇ ರಾಜಿ ಇಲ್ಲದೆ ದೇಶಾದ್ಯಂತ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.


ಪ್ರತಿಭಟನಾ ಸಭೆಯಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಏ.ಕೆ,ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೊಡಿಪ್ಪಾಡಿ, ಕೋಶಾಧಿಕಾರಿ ವಿಶ್ವನಾಥ ಪುಂಚತ್ತಾರು, ಕ್ಷೇತ್ರ ಸಮಿತಿ ಸದಸ್ಯರಾದ ಡಿ.ಬಿ. ಮುಸ್ತಫಾ ವಿಟ್ಲ, ಅಶ್ರಫ್ ಬಾವು ಪಡೀಲ್, ಹಾಗೂ ಬ್ಲಾಕ್ ಮಟ್ಟದ ಮತ್ತು ಪಟ್ಟಣ ಸಮಿತಿ ಮತ್ತು ನಗರ ಸಮಿತಿಯ ನಾಯಕರು ಮತ್ತು ವ್ಯಾಪ್ತಿಯ ಹಲವಾರು ಕಾರ್ಯಕರ್ತರು,ಬೆಂಬಲಿಗರು ಭಾಗವಹಿಸಿದ್ದರು.


 ಪುತ್ತೂರು ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ರಿಯಾಝ್ ಬಳಕ್ಕ ರವರು ಕಾರ್ಯಕ್ರಮ ನಿರೂಪಿಸಿದರು

ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ - ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

Posted by Vidyamaana on 2023-02-06 15:12:33 |

Share: | | | | |


ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ - ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ

ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.

ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು:

ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,

ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ - ಮೊ: 9480805320

ಬಿಜೆಪಿ ಎರಡನೇ ಪಟ್ಟಿ ಇಂದೇ ಬಿಡುಗಡೆ- ಯಡಿಯೂರಪ್ಪ

Posted by Vidyamaana on 2023-04-12 11:35:12 |

Share: | | | | |


ಬಿಜೆಪಿ ಎರಡನೇ ಪಟ್ಟಿ ಇಂದೇ ಬಿಡುಗಡೆ- ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಮಂಗಳವಾರ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು.ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಟ್ಲ: ಅನುಮಾನಾಸ್ಪದವಾಗಿ ಬೈಕ್ ನಲ್ಲಿ ಯುವಕರ ಸುತ್ತಾಟ

Posted by Vidyamaana on 2023-12-04 05:11:31 |

Share: | | | | |


ವಿಟ್ಲ: ಅನುಮಾನಾಸ್ಪದವಾಗಿ ಬೈಕ್ ನಲ್ಲಿ ಯುವಕರ ಸುತ್ತಾಟ

ವಿಟ್ಲ:ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್‌ ಸವಾರ ಎಸ್ಕೆಪ್ ಆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ಳಾಡು ಗ್ರಾಮದ ಕಾಡುಮಠ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನಡೆದಿದೆ.


ಮುಸ್ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್‌ ಸವಾರ ಎಸ್ಕೆಪ್ ಆಗಿದ್ದು, ಹಿಂಬದಿ ಸವಾರನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.


ಹಿಂಬದಿ ಸವಾರ ಅಡ್ಯನಡ್ಕ ನಿವಾಸಿ ರಾಕೇಶ್ ಎಂದು ಗುರುತಿಸಲಾಗಿದೆ.


ಪರಾರಿಯಾದ ಬೈಕ್ ಸವಾರನ ಸಾರ್ವಜನಿಕರು ಶೋಧ ನಡೆಸುತಿದ್ದಾರೆ.

ನಾಪತ್ತೆಯಾಗಿದ್ದ ಕುಂಬ್ರ ನಿವಾಸಿ ಉಮ್ಮರ್ ಪತ್ತೆ

Posted by Vidyamaana on 2023-07-03 01:48:04 |

Share: | | | | |


ನಾಪತ್ತೆಯಾಗಿದ್ದ ಕುಂಬ್ರ ನಿವಾಸಿ ಉಮ್ಮರ್ ಪತ್ತೆ


ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ ಎಂಬವರು ಜು. 1ರಂದು ದಿಡೀರನೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 

ಜು. 1 ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದ ಇವರು ಆ ಬಳಿಕ ನಾಪತ್ತೆಯಾಗಿದ್ದು ಮೊಬೈಲ್ ಸ್ವಿಚಾಫ್ ಆಗಿತ್ತು.

ಇವರ ಮಗನ ಮದುವೆ ಜು. 3ರಂದು ನಡೆಯಲಿದ್ದು, ಜು. 2ರಂದು ನಡೆಯಬೇಕಿದ್ದ ಮದರಂಗಿ ರದ್ದು ಮಾಡಲಾಗಿತ್ತು. ಜು 2 ರಂದು ರಾತ್ರಿ ಮಂಗಳೂರಿನಲ್ಲಿ ಪತ್ತೆ ಆಗಿದ್ದಾರೆ.

Recent News


Leave a Comment: