Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2023-10-26 11:44:20 |
ಬೆಂಗಳೂರು : ಸರಕಾರದ ಹೊಸ ಯೋಜನೆ ಅನ್ವಯ ರಾಜ್ಯದಲ್ಲಿ ಈಗಾಗಲೇ ಫಲಾನುಭವಿಗಳಿಗೆ ಉಚಿತವಾಗಿ ದೊರೆಯುತ್ತಿರುವ 200 ಯುನಿಟ್ ವಿದ್ಯುತ್, ಮುಂದಿನ ದಿನಗಳಲ್ಲಿ ಸಿ ಗ್ರೇಡ್ ನ ಬಡ ದೇವಸ್ಥಾನಗಳಿಗೂ ವಿಸ್ತರಣೆಯಾಗಲಿದೆ ಎಂದು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಯಾವ ದೇವಾಲಯವು 5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಪಡೆಯುತ್ತಿದೆಯೋ, ಆ ದೇವಾಲಯವು ಈ ಯೋಜನೆಗೆ ಒಳಗಾಗುತ್ತದೆ. ಅಂದಾಜಿನಂತೆ 34,700 ದೇಗುಲಗಳು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎನ್ನಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಎ ಗ್ರೇಡ್ನ 175, ಬಿ ಗ್ರೇಡ್ನ 330 ಮತ್ತು ಸಿ ಗ್ರೇಡ್ನ 34,700 ದೇವಸ್ಥಾನಗಳಿವೆ. ವಾರ್ಷಿಕವಾಗಿ ದೇವಾಲಯದ ಆದಾಯ 25 ಲಕ್ಷ ರೂಪಾಯಿಗೂ ಅಧಿಕವಾಗಿದ್ದರೆ, ಮೂಲಸೌಕರ್ಯ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸ್ಥಳೀಯ ಹಂತದಲ್ಲೇ ಅವಕಾಶಗಳಿವೆ. ಆದರೆ, 1 ರಿಂದ 5 ಲಕ್ಷ ರೂ. ಒಳಗೆ ಆದಾಯ ಪಡೆಯುವ ಸಿ ಗ್ರೇಡ್ ದೇಗುಲಗಳಿಗೆ ಮಾತ್ರ ಯಾವುದೇ ಸೌಕರ್ಯಗಳಿಲ್ಲದೆ ಅಭಿವೃದ್ಧಿ ಕುಂಠಿತಗೊಂಡಿದೆ ಎನ್ನಲಾಗಿದೆ.ಇನ್ನು ರಾಜ್ಯದಲ್ಲಿ ಸಿ ಗ್ರೇಡ್ ದೇವಾಲಯಗಳು ಮಾಸಿಕ ವಿದ್ಯುತ್, ನೀರಿನ ವೆಚ್ಚ ಭರಿಸಲೂ ಪರದಾಡುವ ಸನ್ನಿವೇಶವಿದೆ. ಆದ್ದರಿಂದ ಪ್ರಸ್ತುತ ಚಾಲ್ತಿಯಲ್ಲಿರುವ ಗೃಹಜ್ಯೋತಿ ಯೋಜನೆ ದೇವಸ್ಥಾನಗಳಿಗು ವಿಸ್ತರಣೆಯಾಗಲಿದೆ.
ರಾಜ್ಯದಲ್ಲಿ ಈ ಹಿಂದಿನ ಸರಕಾರಗಳು ಎ ಗ್ರೇಡ್ ದೇವಸ್ಥಾನಗಳ ಆದಾಯದ ಶೇ.20ರಷ್ಟು ಪಾಲನ್ನು ಸಿ ಗ್ರೇಡ್ ದೇಗುಲಗಳ ಅಭಿವೃದ್ಧಿಗೆ ನೀಡಬೇಕೆಂಬ ಯೋಜನೆಯನ್ನು ರೂಪಿಸಿದ್ದವು. ಅವರ ಯಾವ ಯೋಜನೆಯು ಬರಲಿಲ್ಲ. ದೇವಸ್ಥಾನಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಸಿ ಗ್ರೇಡ್ ದೇವಸ್ಥಾನಗಳಿಗೂ ಉಚಿತ ವಿದ್ಯುತ್ ಪೂರೈಸಲು ರಾಜ್ಯ ಸರಕಾರ ಮುಂದಾಗಿದೆ.
ಈ ಯೋಜನೆಯ ಕುರಿತು ಶೀಘ್ರವೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ
Posted by Vidyamaana on 2023-05-30 11:49:38 |
ಬೆಂಗಳೂರು : ಕಾಂಗ್ರೇಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಬೆಳಗಾವಿ: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ.ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು. ಇನ್ನು ನಾಳೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ.
Posted by Vidyamaana on 2023-06-24 23:19:44 |
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ದೇವರಮಾರು ಗದ್ದೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 25ರಂದು ಬೆಳಗ್ಗೆ 10 ಗಂಟೆಗೆ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ದೇವಸ್ಥಾನದ ಗೋಶಾಲೆ ಸಮೀಪದ ಗದ್ದೆಯಲ್ಲಿ ಪೂರ್ಣವಾಗಿ ಭತ್ತ ಬೆಳೆಸುವ ಸತ್ ಸಂಪ್ರದಾಯ ಕೆಲ ವರ್ಷಗಳಿಂದ ದೇವಸ್ಥಾನದ ವತಿಯಿಂದ ಹಮ್ಮಿಕೊಂಡು ಬರಲಾಗುತ್ತಿದೆ. ಈ ವರ್ಷದ ಬೇಸಾಯ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಶನಿವಾರ ಬಿತ್ತನೆ ಕಾರ್ಯ ನಡೆಯಲಿದೆ. ಬಳಿಕ ಅಭಿವೃದ್ದಿ ಸಮಿತಿ ಸಭೆ.
ಮಧ್ಯಾಹ್ನದ ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರು ಬೆಂಗಳೂರಿಗೆ ತೆರಳಲಿದ್ದಾರೆ.
Posted by Vidyamaana on 2023-04-04 10:03:55 |
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಈ ಮಧ್ಯೆ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಎದೆಬಡಿತವೂ ನಾರ್ಮಲ್ ಗಿಂತ ಜಾಸ್ತಿನೇ ಇದೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಫರ್ಸ್ಟ್ ಲಿಸ್ಟ್ ಬಿಡುಗಡೆಗೊಳಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಗಳನ್ನು ಬಹುತೇಕ ಫೈನಲ್ ಮಾಡಿದೆ. ಆದ್ರೆ ಕ್ಯಾಡಿಂಡೇಟ್ ಸೆಲೆಕ್ಷನ್ ವಿಚಾರದಲ್ಲಿ ಬಿಜೆಪಿ ಮಾತ್ರ ಅಳೆದು ತೂಗಿ ನೋಡುವುದ್ರಲ್ಲೇ ಇದೆ.
ಈ ನಡುವೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಸಂಚಲನ ಉಂಟಾಯ್ತು. ಭಾರತೀಯ ಜನತಾ ಪಾರ್ಟಿ ವಿಧಾನ ಸಭಾ ಚುನಾವಣೆಗಾಗಿ 100 ಜನರ ಪಟ್ಟಿಯನ್ನು ರಿಲೀಸ್ ಮಾಡಿದ್ದು ವಿವಿಧ ದ.ಕ., ಉಡುಪಿ ಸೇರಿದಂತೆ ರಾಜ್ಯದ ಒಟ್ಟು 100 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯ ಹೆಸರಿರುವ ಪಟ್ಟಿಯ ಪಿಡಿಎಫ್ ಫೈಲೊಂದು ಹರಿದಾಡ್ತಿದೆ.
ಈ ಪಟ್ಟಿಯಲ್ಲಿರುವಂತೆ ಪುತ್ತೂರಿಗೆ ಸಂಜೀವ ಮಠಂದೂರು, ಸುಳ್ಯ ಕ್ಷೇತ್ರಕ್ಕೆ ಅಂಗಾರ, ಬೆಳ್ತಂಗಡಿಗೆ ಹರೀಶ್ ಪೂಂಜಾ ಮತ್ತು ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್ ಹೆಸರುಗಳನ್ನೇ ಫೈನಲ್ ಮಾಡಲಾಗಿದೆ. ಆದ್ರೆ ಸದ್ಯ ಡಾ. ಭರತ್ ಶೆಟ್ಟಿ ಪ್ರತಿನಿಧಿಸ್ತಿರೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ!
ಈ ಪಟ್ಟಿಯಲ್ಲಿರೋ ಇನ್ನೊಂದು ಮೇಜರ್ ಶಾಕ್ ಏನಪ್ಪಾ ಅಂದ್ರೆ ತೀವ್ರ ಕುತೂಹಲ ಕೆರಳಿಸಿದ್ದ ಕಾರ್ಕಳ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಬದಲಿಗೆ ಪ್ರಮೋದ್ ಮುತಾಲಿಕ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಸುನಿಲ್ ಅವರನ್ನು ಉಡುಪಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇನ್ನುಳಿದಂತೆ ಯಾರ್ಯಾರಿಗೆ ಪಕ್ಷ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ ಎಂಬುದನ್ನು ನೀವೇ ಚೆಕ್ ಮಾಡ್ಕೊಳ್ಳಿ..!
ವಿಶೇಷವಂದ್ರೆ ಬಿಜೆಪಿಯ ಕೇಂದ್ರ ಕಚೇರಿಯ ಹೆಸ್ರಿನಲ್ಲಿ ರಿಲೀಸ್ ಆಗಿರೋ ಈ ಪಟ್ಟಿಯಲ್ಲಿ ಪ್ರತೀ ಪೇಜಿನಲ್ಲಿ ಪಕ್ಷದ ಸೀಲ್ ಮತ್ತು ನ್ಯಾಷನಲ್ ಜನರಲ್ ಸೆಕ್ರೆಟರಿ ಅರುಣ್ ಸಿಂಗ್ ಅವರ ಸಹಿಯೂ ಇದೆ. ಆದರೆ ಈ ಪಟ್ಟಿ ಫೇಕ್ ಎನ್ನಲಾಗುತ್ತಿದ್ದು . ಏನೇ ಆದ್ರೂ ಬಿಜೆಪಿಯ ಒರಿಜಿನಲ್ ಪಟ್ಟಿ ರಿಲೀಸ್ ಆದ್ಮೇಲೆ ಈ ‘ಫೇಕ್’ ಪಟ್ಟಿಯೊಂದಿಗೆ ಕಂಪೇರ್ ಮಾಡ್ಕೊಳ್ಳಿ...!
Posted by Vidyamaana on 2023-07-30 12:11:11 |
ವಿಟ್ಲ: ಬಾಲಕಿ ಮೇಲೆ, ಬೇರೆ ಬೇರೆ ಯುವಕರು ಬೇರೆ ಬೇರೆ ಸಂದರ್ಭದಲ್ಲಿ ಲೈಂಗಿಕ ಅಪರಾಧ ನಡೆಸಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಅಪರಾಧ ನಡೆಸಿದ್ದರು.ಬಾಲಕಿ ಮನೆಗೆ ಈಚೆಗೆ ಒಂದು ದಿನ ಬರುವಾಗ
ತಡವಾದ ಬಗ್ಗೆ ವಿಚಾರಿಸಿದಾಗ ಆಕೆ ಈ ಬಗ್ಗೆ ಮಾಹಿತಿ ನೀಡಿದ್ದಳು. ಐವರು ಆರೋಪಿಗಳು ಲೈಂಗಿಕ ಅಪರಾಧ ನಡೆಸಿದ್ದಾರೆ. 2019ರಿಂದಲೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳಲ್ಲಿ ಒಬ್ಬಾತ ಬಾಲಕಿಯ ಬಂಧು. ಉಳಿದವರು ಕೇರಳದವರು ಎಂದು ಪೋಷಕರು ತಿಳಿಸಿದ್ದಾರೆದೂರಿನಲ್ಲಿ ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ
Posted by Vidyamaana on 2024-06-09 21:35:34 |
ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ.