Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2023-07-20 05:35:30 |
ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯ ಹಳೆಯ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಒಂದು ದಿನದ ನಂತರ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದ್ದು, ಆತ ಹಸಿರು ಅಂಗಿ ಧರಿಸಿರುವ ವಿಡಿಯೋ ವೈರಲ್ ಆಗಿದ್ದು, ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿತ್ತು. ಇದೀಗ ವಿಡಿಯೋ ಹೊರಬಿದ್ದಿದೆ.
ಇದೀಗ ಈ ವಿಡಿಯೋವನ್ನು ತೆಗೆದುಹಾಕುವಂತೆ ಕೇಂದ್ರ ಸರಕಾರ ಗುರುವಾರ ಟ್ವಿಟರ್ ಸೇರದಂತೆ ಇತರ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.
Posted by Vidyamaana on 2024-06-14 15:34:19 |
ಬೆಂಗಳೂರು :ಬಿಎಸ್ ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ವಿಚಾರ ಸಂಬಂಧ ಮಾಧ್ಯಮ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವಾಗ? ನನಗೆ ಗೊತ್ತಿಲ್ಲ? ನಾನು ಮೀಟಿಂಗ್ನಲ್ಲಿದ್ದೇನೆ ನೀವು ಹೇಳಿದ್ಮೇಲೆ ಗೊತ್ತಾಗಿದ್ದು. ನನಗೆ ಈ ವಿಚಾರದಲ್ಲಿ ತಿಳಿವಳಿಕೆ ಇಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದರು
Posted by Vidyamaana on 2024-03-26 09:13:48 |
ಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಹಳೇ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ.
ಲಕ್ಷ್ಮೀ ಪ್ರತಾಪ್ ನಾಯಕ್ (41) ಮೃತ ದುರ್ದೈವಿ. ನಿನ್ನೆ ಸಂಜೆ ಲಕ್ಷ್ಮೀಳೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನಕಾಯಿ ತರಲು ಹೋಗಿದ್ದಾಗ ಆಕಸ್ಮಿಕವಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ಎರಡನೇ ಮಹಡಿಯ ಫ್ಲೋರಿಗೆ ಬಿದ್ದರೆನ್ನಲಾಗಿದೆ. ಇದರಿಂದ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-04-23 12:13:34 |
ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ.ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು.
Posted by Vidyamaana on 2023-11-01 16:44:34 |
ಪುತ್ತೂರು: ಪತ್ರಕರ್ತ ಗಣೇಶ್ ಎನ್. ಕಲ್ಲರ್ಪೆಅವರು ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.
ಸಕಲೇಶಪುರದ ಲೇಖಖಿ (ಸುಶ್ಮಿತಾ) ಅವರೊಂದಿಗೆ ಸಕಲೇಶಪುರದ ಶ್ರೀ ಉಮಾಶಂಕರ ಸಮುದಾಯ ಭವನದಲ್ಲಿ ನ 01 ಬುಧವಾರ ದಂದು ನೆರವೇರಿತು.ಗಣೇಶ್ ರವರ
ವೈವಾಹಿಕ ಜೀವನಕ್ಕೆ ವಿದ್ಯಮಾನ ಬಳಗ ಶುಭವನ್ನು ಹಾರೈಸುತ್ತಿದೆ.
ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.
Posted by Vidyamaana on 2024-03-24 22:08:55 |
ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.
ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.