ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ವರ್ಗಾವಣೆಗೊಂಡ ಗಿರೀಶ್ ನಂದನ್

Posted by Vidyamaana on 2023-07-07 14:08:27 |

Share: | | | | |


ವರ್ಗಾವಣೆಗೊಂಡ ಗಿರೀಶ್ ನಂದನ್

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.

ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಆ. 28: ಪುತ್ತೂರು ಶಾಸಕರ ನೂತನ ಕಚೇರಿ ಉದ್ಘಾಟನೆ

Posted by Vidyamaana on 2023-08-22 16:20:28 |

Share: | | | | |


ಆ. 28: ಪುತ್ತೂರು ಶಾಸಕರ ನೂತನ ಕಚೇರಿ ಉದ್ಘಾಟನೆ

ಪುತ್ತೂರು: ನೂತನ‌ ಶಾಸಕ ಅಶೋಕ್ ಕುಮಾರ್ ರೈ ಅವರ ನೂತನ ಕಚೇರಿ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಆ. 28ರಂದು ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆಗೊಳ್ಳಲಿದೆ.

ಹಿಂದಿನ ಸಹಾಯಕ ಆಯುಕ್ತರ ಕಚೇರಿ, ನಂತರ‌ ಪುಡಾ ಆಫೀಸ್ ಆಗಿದ್ದ ಕಟ್ಟಡದಲ್ಲೇ ಶಾಸಕರ ನೂತನ ಕಚೇರಿ ಇರಲಿದೆ. ಸಾರ್ವಜನಿಕರ ಅನುಕೂಲತೆ ದೃಷ್ಟಿಯನ್ನಿಟ್ಟುಕೊಂಡು ಹೊಸ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ.

ಸಾಕಷ್ಟು ಸ್ಥಳಾವಕಾಶ ಇಟ್ಟುಕೊಂಡು ನೂತನ ಕಚೇರಿಯ ಪ್ಲ್ಯಾನ್ ಸಿದ್ಧಪಡಿಸಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಆಗದಂತೆ ಸುವ್ಯವಸ್ಥಿತವಾಗಿ ಕಚೇರಿ ನಿರ್ಮಾಣ ಮಾಡಲಾಗಿದೆ.

ಉಡುಪಿ ನೇಜಾರು ಹತ್ಯಾಕಾಂಡ – ಎಸ್.ಪಿ ಕೊಟ್ರು ಇನ್ನಷ್ಟು ಡಿಟೇಲ್ಸ್

Posted by Vidyamaana on 2023-11-24 14:53:47 |

Share: | | | | |


ಉಡುಪಿ ನೇಜಾರು ಹತ್ಯಾಕಾಂಡ – ಎಸ್.ಪಿ ಕೊಟ್ರು ಇನ್ನಷ್ಟು ಡಿಟೇಲ್ಸ್

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು (Four of Family murdered) ಅತ್ಯಂತ ಬರ್ಬರವಾಗಿ ಚೂರಿಯಿಂದ ಇರಿದು ಕೊಲೆ (Udupi Murder) ಮಾಡಿದ ಘಟನೆಯ ಹಿಂದಿನ ನಿಗೂಢತೆ ಈಗ ಬಯಲಾಗಿದೆ. ಗಗನಸಖಿಯಾಗಿ ಜತೆಗೆ ಕೆಲಸ ಮಾಡುತ್ತಿದ್ದ ಅಯ್ನಾಜ್‌ ಬಗ್ಗೆ ವಿಪರೀತ ಪೊಸೆಸಿವ್‌ನೆಸ್‌ (Possessiveneness) ಹೊಂದಿದ್ದ ಪ್ರವೀಣ್‌ ಅರುಣ್‌ ಚೌಗುಲೆ (Praveen Arun Chougule) ಆಕೆ ಯಾವುದೋ ಕಾರಣಕ್ಕೆ ಮಾತು ಬಿಟ್ಟಿದ್ದನ್ನು ಸಹಿಸಲಾಗದೆ ಪ್ರಾಣವನ್ನೇ ತೆಗೆದಿದ್ದಾನೆ.ಈ ವಿಚಾರವನ್ನು ಉಡುಪಿ ಜಿಲ್ಲಾ ಎಸ್‌ಪಿ ಡಾ. ಅರುಣ್‌ ಕೆ. (Udupi SP Arun K) ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.


ನವೆಂಬರ್‌ 12ರಂದು ಭಾನುವಾರ ಮುಂಜಾನೆ ಪ್ರವೀಣ್‌ ಅರುಣ್‌ ಚೌಗುಲೆ ನೇಜಾರಿನ ತೃಪ್ತಿ ನಗರದಲ್ಲಿರುವ ನೂರ್‌ ಮಹಮ್ಮದ್‌ ಅವರ ಮನೆಗೆ ನುಗ್ಗಿ ನೂರ್‌ ಮಹಮದ್‌ ಅವರ ಪತ್ನಿ ಹಸೀನಾ (45), ಪುತ್ರಿಯರಾದ ಅಫ್ನಾನ್‌ (23), ಅಯ್ನಾಜ್‌ (21) ಮತ್ತು ಮಗ ಅಸೀಮ್‌ (14)ನನ್ನು ಕೊಂದು ಹಾಕಿದ್ದ. ಕೊಲೆಯಾದವರ ಪೈಕಿ ಅಫ್ನಾನ್‌ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರೆ, ಅಯ್ನಾಜ್‌ ಏರ್‌ ಹೋಸ್ಟೆಸ್‌ ಆಗಿ ಕೆಲಸ ಮಾಡುತ್ತಿದ್ದಳು. ಅಸೀಂ ಏಳನೇ ತರಗತಿಯಲ್ಲಿ ಓದುತ್ತಿದ್ದ. ಹಂತಕ ಪ್ರವೀಣ್‌ ಅರುಣ ಚೌಗುಲೆಯನ್ನು ಮೂರು ದಿನಗಳ ಬಳಿಕ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿ ಕರೆತರಲಾಗಿತ್ತು. ಕೋರ್ಟ್‌ ಚೌಗುಲೆಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತ್ತು. ಆತನ ಪೊಲೀಸ್‌ ಕಸ್ಟಡಿಗೆ ನವೆಂಬರ್‌ 25ಕ್ಕೆ ಮುಕ್ತಾಯವಾಗಲಿದೆ. ಈ ನಡುವೆ, ಪೊಲೀಸ್‌ ವಿಚಾರಣೆ ಬೇಗನೆ ಸಂಪೂರ್ಣವಾದ ಹಿನ್ನೆಲೆಯಲ್ಲಿ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಎಸ್‌ಪಿ ಡಾ. ಅರುಣ್‌ ಕೆ. ಹೇಳಿದ್ದಾರೆ. ಜತೆಗೆ ವಿಚಾರಣೆ ವೇಳೆ ಪ್ರವೀಣ್‌ ಅರುಣ್‌ ಚೌಗುಲೆ ಮಾಡಿದ್ದಕ್ಕೆ ಕಾರಣವನ್ನು ಬಾಯಿ ಬಿಟ್ಟಿದ್ದಾನೆ.ವಿಪರೀತ ಪೊಸೆಸಿವ್‌ನೆಸ್‌ ಕೊಲೆಗೆ ಕಾರಣ


ಪ್ರವೀಣ್‌ ಚೌಗುಲೆಗೆ ಕೊಲೆ ಮಾಡುವ ಉದ್ದೇಶ ಇದ್ದಿದ್ದು ಗಗನಸಖಿಯಾಗಿದ್ದ ಅಯ್ನಾಝ್‌ಳನ್ನು. ಆದರೆ, ಮನೆಗೇ ಹೋಗಿ ಕೊಲೆ ಮಾಡಿದ್ದರಿಂದ ಉಳಿದ ಮೂವರು ಕೂಡಾ ಪ್ರಾಣ ಕಳೆದುಕೊಳ್ಳುವಂತಾಯಿತು. ಅಯ್ನಾಜ್‌ ಮೇಲಿನ ವಿಪರೀತ ಪೊಸೆಸಿವ್‌ನೆಸ್‌ ಈ ಕೊಲೆಗೆ ಪ್ರಮುಖ ಕಾರಣ ಎಂದು ಎಸ್‌ಪಿ ತಿಳಿಸಿದ್ದಾರೆ.


ಕೊಲೆಗಾರ ಪ್ರವೀಣ್ ಚೌಗುಲೆ ಮತ್ತು ಅಯ್ನಾಜ್‌ ಪರಸ್ಪರ ಪರಿಚಯ ಆಗಿದ್ದು ಕೇವಲ ಎಂಟು ತಿಂಗಳ ಹಿಂದೆ ಅಷ್ಟೆ. ಪ್ರವೀಣ್ ಮತ್ತು ಅಯ್ನಾಸ್ ಒಂದೇ ಟೀಮ್‌ನಲ್ಲಿ ಇದ್ದರು. ಅಯ್ನಾಜ್‌ ಗಗನಸಖಿಯಾಗಿದ್ದರೆ ಈತ ವಿಮಾನದಲ್ಲಿ ಸಹಾಯಕನಾಗಿದ್ದ. ಸೀಟು ಬೆಲ್ಟ್‌ಗಳನ್ನು ಹಾಕಿಕೊಳ್ಳುವುದು ಮೊದಲಾದ ಸೂಚನೆ ನೀಡುವ ಕೆಲಸ ಇವನದಾಗಿತ್ತು.


ಅಯ್ನಾಜ್‌ ಕೆಲಸಕ್ಕೆ ಸೇರಿದ ದಿನದಿಂದಲೂ ಪ್ರವೀಣ್‌ ಆಕೆಗೆ ಸಹಾಯ ಮಾಡುತ್ತಿದ್ದ. ಒಂದು ಕಚೇರಿಯಲ್ಲಿ ಹೊಸದಾಗಿ ಕೆಲಸಕ್ಕೆ ಸೇರಿದಾಗ ಸೀನಿಯರ್ಸ್‌ ಹೇಗೆ ಸಹಾಯ ಮಾಡುತ್ತಾರೋ ಹಾಗೆ ನಡೆದುಕೊಂಡಿದ್ದ. ಆಕೆಗೆ ಮಂಗಳೂರಲ್ಲಿ ಬಾಡಿಗೆ ಮನೆ ಹುಡುಕಲು ಸಹಾಯ ಮಾಡಿದ್ದ. ಕೆಲವೊಂದು ಸಂದರ್ಭದಲ್ಲಿ ಆಕೆ ಅವನ ವಾಹನವನ್ನೂ ಬಳಸುತ್ತಿದ್ದಳು.


ಈ ನಡುವೆ ಆತ ಸ್ವಲ್ಪ ಅತಿಯಾಗಿ ಆಡುತ್ತಿದ್ದ ಎಂಬ ಕಾರಣಕ್ಕಾಗಿಯೋ ಏನೋ ಅಯ್ನಾಜ್‌ ಆತನ ಜತೆಗೆ ಮಾತು ಬಿಟ್ಟಿದ್ದಳು. ವಿಪರೀತವಾಗಿ ಹತ್ತಿರವಾದರೆ ನೋಡುವವರಿಗೆ ಚೆನ್ನಾಗಿರುವುದಿಲ್ಲ ಎನ್ನುವುದು ಅವಳ ಅಭಿಪ್ರಾಯವಾಗಿರುವ ಸಾಧ್ಯತೆ ಇದೆ. ಆತ ಅವಳು ನನ್ನವಳು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಿದ್ದುದು ಕೂಡಾ ಅವಳಿಗೆ ಅಷ್ಟಾಗಿ ಹಿಡಿಸಿರಲಿಲ್ಲ.


ಹೀಗಾಗಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ಕಳೆದ ಒಂದು ತಿಂಗಳಿನಿಂದ ಮಾತುಕತೆ ನಿಲ್ಲಿಸಿದ್ದಳು. ಆದರೆ, ಕೆಲವು ಸಮಯದಿಂದ ಅಷ್ಟು ಹತ್ತಿರವಾಗಿದ್ದಳು ಈಗ ಏಕಾಏಕಿ ದೂರವಾಗಿದ್ದು, ಮಾತು ಬಿಟ್ಟಿದ್ದು ಅವನಿಗೆ ಸಹಿಸಲು ಆಗಿರಲಿಲ್ಲ. ಹೀಗಾಗಿ ಅತಿಯಾದ ಪೊಸೆಸಿವ್‌ನೆಸ್‌ನಿಂದ ಕೊಲೆ ಮಾಡಲು ನಿರ್ಧರಿಸಿದ್ದ!ಹೆಜಮಾಡಿಯಲ್ಲಿ ವಾಹನ ಪಾರ್ಕ್‌ ಮಾಡಿ ಬಂದಿದ್ದ


ನವೆಂಬರ್‌ 12ರಂದು ಕೊಲೆ ಮಾಡಿದ ಆತ ಅದಕ್ಕಿಂತ ಮೊದಲು ಹಲವಾರು ತಂತ್ರಗಳನ್ನು ಬಳಸಿದ್ದ. ಕೊಲೆ ಮಾಡಿದ ಬಳಿಕ ಸಿಕ್ಕಿ ಹಾಕಿಕೊಳ್ಳಬಾರದು ಎನ್ನುವ ಜಾಣ್ಮೆ ಪ್ರಯೋಗ ಮಾಡಿದ್ದ. ಅಂದರೆ ಆತ ಮಂಗಳೂರಿನಿಂದ ಹೊರಟು ಹೆಜಮಾಡಿ ಟೋಲ್ ಗೇಟ್ ವರೆಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ.


ಟೋಲ್ ಗೇಟ್‌ನ ಸಿಸಿ ಕ್ಯಾಮೆರಾಕ್ಕೆ ಗೊತ್ತಾಗದಂತೆ ದೂರದಲ್ಲಿ ಎಲ್ಲೋ ವಾಹನ ಪಾರ್ಕ್‌ ಮಾಡಿ ಬೇರೆ ದಾರಿಯಲ್ಲಿ ಗೇಟ್‌ ದಾಟಿದ್ದ. ಅಲ್ಲಿಂದ ಉಡುಪಿಗೆ ಬಂದು ತೃಪ್ತಿ ನಗರಕ್ಕೆ ಬಂದಿದ್ದ.


ತೃಪ್ತಿ ನಗರದ ಮನೆಗೆ ಬಂದವನೇ ಮೊದಲು ಅಯ್ನಾಜ್‌ಗೆ ಚಾಕುವಿನಿಂದ ಇರಿದಿದ್ದಾನೆ. ಅಯ್ನಾಜ್‌ ಕೂಗು ಕೇಳಿ ಬಂದ ತಾಯಿಗೆ ಮತ್ತು ಅಕ್ಕ, ಅಫ್ನಾನ್‌ಗೆ ಚೂರಿಯಿಂದ ಇರಿದಿದ್ದ. ಬಳಿಕ ಮನೆಗೆ ಬಂದ ಅಸೀಮ್‌ಗೆ ಚೂರಿ ಹಾಕಿದ್ದಾನೆ. ಅಲ್ಲಿಂದ ಬೇರೆ ಬೇರೆ ಮಾರ್ಗವಾಗಿ ಮರಳಿ ಮನೆಗೆ ಹೋಗಿದ್ದ.


ಕೊಲೆಯ ಸಂದರ್ಭ ಧರಿಸಿದ್ದ ಬಟ್ಟೆಯನ್ನು ದಾರಿ ಮಧ್ಯೆ ಎಲ್ಲೋ ಸುಟ್ಟು ಹಾಕಿದ್ದ ಆತ ಕೃತ್ಯಕ್ಕೆ ಬಳಸಿದ್ದ ಮನೆಯ ಕಿಚನ್ ಚೂರಿಯನ್ನು ಮರಳಿ ಅಲ್ಲಿಯೇ ತಂದು ಇಟ್ಟಿದ್ದ! ಕೊಲೆಯ ಸಂದರ್ಭದಲ್ಲಿ ಅವನಿಗೂ ಗಾಯವಾಗಿತ್ತು. ಗಾಯದ ಕುರಿತು ಪತ್ನಿ ವಿಚಾರಿಸಿದಾಗ ಬೇರೆ ಸಬೂಬು ಹೇಳಿದ್ದ. ಮನೆಯಿಂದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಪೊಲೀಸರಿಗೆ ಆರಂಭದಲ್ಲೇ ಆತನ ಮೇಲೆ ಸಂಶಯ ಬಂದಿತ್ತು. ಹೀಗಾಗಿ ಆತನ ಮೊಬೈಲ್‌ ಲೊಕೇಶನ್‌ ಬೆನ್ನು ಹತ್ತಿ ಬೆಳಗಾವಿಯಲ್ಲಿ ಬಂಧಿಸಿದರು.


ನಿಜವೆಂದರೆ ಪ್ರವೀಣ್‌ ಚೌಗುಲೆಗೆ ಕೊಲೆಗೆ ಮೊದಲು ಕ್ರಿಮಿನಲ್‌ ಹಿನ್ನೆಲೆ ಇರಲಿಲ್ಲ. ಪೂನಾ ಸಿಟಿ ಪೊಲೀಸ್ ನಲ್ಲಿ 3 ತಿಂಗಳು ಟ್ರೈನಿಂಗ್ ಪಡೆದಿದ್ದ ಅವನಿಗೆ ಅದರ ಆಧಾರದಲ್ಲಿ ವಿಮಾನದ ಕ್ರೂ ಆಗಿ ಕೆಲಸ ಸಿಕ್ಕಿದೆ ಎಂದು ಎಸ್‌ಪಿ ತಿಳಿಸಿದರು.


ಕುಡಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆಯನ್ನೂ ಮಾಡಲಾಗಿದೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯಲು ಅವಕಾಶವಿದೆ. ಗಂಭೀರ ಪ್ರಕರಣ ಆಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಡಾ. ಅರುಣ್‌ ಹೇಳಿದರು. ಜೈಲಿನಲ್ಲಿ ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ ಎಂದರು.


ಫಾಸ್ಟ್‌ ಟ್ರ್ಯಾಕ್‌ ವಿಚಾರಣೆಗೆ ಅಯ್ನಾಜ್‌ ಕುಟುಂಬ ಮನವಿ


ಪ್ರಕರಣದ ತನಿಖೆಯಲ್ಲಿ ನೂರ್‌ ಮಹಮದ್‌ ಅವರ ಕುಟುಂಬ ಎಲ್ಲ ರೀತಿಯಲ್ಲೂ ಸಹಕರಿಸಿದೆ. ಕುಟುಂಬ ನೋವಲ್ಲಿದ್ದರೂ ಎಲ್ಲ ಮಾಹಿತಿಯನ್ನು ಕೊಟ್ಟಿದ್ದಾರೆ. ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಮೂಲಕ ತ್ವರಿತ ನ್ಯಾಯದಾನಕ್ಕೆ ಅಯ್ನಾಜ್‌ ಮನೆಯವರು ಮನವಿ ಮಾಡಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಜಿಲ್ಲಾ ಎಸ್ಪಿ ಅರುಣ್‌ ಕೆ ಹೇಳಿದರು.


11 ತಂಡ, 50ಕ್ಕೂ ಅಧಿಕ ಪೊಲೀಸರು


ಈ ಪ್ರಕರಣವನ್ನು ಬೇಧಿಸುವುದು ತುಂಬ ಸವಾಲಿನ ಕೆಲಸವಾಗಿತ್ತು. ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಎಲ್ಲರೂ ಕುತೂಹಲ ಹೊಂದಿದ್ದರು. ಹೀಗಾಗಿ ಪ್ರತಿ ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕಾಗಿತ್ತು ಎಂದು ಹೇಳಿದ ಎಸ್‌ಪಿ ಅರುಣ್‌, ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಸುಮಾರು 50 ಪೊಲೀಸರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನೂರ್‌ ಮಹಮದ್‌ ಅವರ ಹಸೀನಾಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದನ್ನೂ ಪರಿಶೀಲನೆ ಮಾಡಿದ್ದೇವೆ ಎಂದರು ಅರುಣ್‌.


ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳನ್ನು ಸಂಗ್ರಹ ಮಾಡುತ್ತಿದ್ದೇವೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಇಲಾಖೆಗೆ 1.50 ಲಕ್ಷ ಬಹುಮಾನ ಕೊಡುವ ಬಗ್ಗೆ ಶಿಫಾರಸು ಮಾಡಿರುವುದಾಗಿ ಉಡುಪಿ ಎಸ್ ಪಿ ಡಾ. ಅರುಣ್ ಕೆ ಮಾಹಿತಿ ನೀಡಿದರು.

50 ವರ್ಷದ ವಿವಾಹಿತನ ಜೊತೆ 19 ರ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಆತ್ಮಹತ್ಯೆ ಶಂಕೆ

Posted by Vidyamaana on 2024-06-22 21:43:54 |

Share: | | | | |


50 ವರ್ಷದ ವಿವಾಹಿತನ ಜೊತೆ 19 ರ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಆತ್ಮಹತ್ಯೆ ಶಂಕೆ

ತುಮಕೂರು, ಜೂ.22: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ(Mavathur Kere)ಯ ಬಳಿ ನಾಪತ್ತೆಯಾದವರ ಚಪ್ಪಲಿಗಳು ಪತ್ತೆಯಾಗಿದೆ. ಜೊತೆಗೆ ಇಲ್ಲಿಯೇ ಕಾರು ನಿಲ್ಲಿಸಿ ಮೊಬೈಲ್​ಗಳನ್ನು ಕಾರಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ 3ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು.

ಯುವತಿ ಪ್ರೇಮಕ್ಕೆ ಕುಟುಂಬದವರ ವಿರೋಧ; ಆತ್ಮಹತ್ಯೆ ಶಂಕೆ

ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

Posted by Vidyamaana on 2023-11-02 16:40:48 |

Share: | | | | |


ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

ಬೆಂಗಳೂರು: ಬೆಂಗಳೂರಿನ ಹೃದಯಭಾಗ ಹಾಗೂ ಅತ್ಯಂತ ಜನನಿಬಿಡ ಪ್ರದೇಶವಾದ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ನಡೆಯುವ ವೇಶ್ಯಾವಾಟಿಕೆ ದಂಧೆಯ ಕುರಿತು ಯೂಟ್ಯೂಬರ್‌ ವಿಕಾಸ್‌ಗೌಡ ವಿಡಿಯೋ ಮಾಡಿದ್ದಾನೆ.

ವಿಡಿಯೋ ಮಾಡುವಾಗ ಸಿಕ್ಕಿಬಿದ್ದ ಆತನ ಪಾಡು ನಿವೇ ನೋಡಿ...ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ (Bengaluru Majestic Underpass) ನಡೆಯತ್ತದೆ ಎಂದು ಹಲವು ಪ್ರಯಾಣಿಕರು ಹೇಳುತ್ತಾರೆ. ಇನ್ನು ಹಳ್ಳಿಗಳಿಂದ ಬಂದು ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ ಹಾದುಹೋದ ಎಲ್ಲರ ಬಾಯಲ್ಲಿಯೂ ಇದೇ ಸುದ್ದು ಹರಿದಾಡುತ್ತದೆ.

ಕ್ಲಿಕ್ ಮಾಡಿ 👇

ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ ದಂಧೆ ದೃಶ್ಯ


ಇನ್ನು ಬೆಂಗಳೂರಿಗರು ಇದನ್ನು ನೋಡಿಯೂ ನೋಡದಂತೆ ದಿನನಿತ್ಯ ಓಡಾಡುತ್ತಿದ್ದಾರೆ. ಇದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ವರದಿ ಮಾಡಿದಾಗ ಪೊಲೀಸರು ಒಂದು ವಾರ ಸಿಬ್ಬಂದಿ ನಿಯೋಜನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ. ನಂತರ ಅದೇ ಹಾಡು.. ಅದೇ ರಾಗ ಎನ್ನುವಂತೆ ಲೈಂಗಿಕ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಪುರುಷರನ್ನು ಅಡ್ಡಹಾಕಿ ವೇಶ್ಯಾವಾಟಿಕೆಗೆ ಪುಸಲಾಯಿಸುವ ಘಟನೆಗಳಿ ಕಂಡುಬರುತ್ತವೆ.


ಈಗ ವಿಕಾಸ್‌ಗೌಡ ಎನ್ನುವ ಯೂಟ್ಯೂಬರ್‌ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವಿಡಿಯೋ ಮಾಡಿದ್ದು, ಆತನಿಗೆ ದಂಧೆ ಮಾಡುವವರು ಕೊಟ್ಟ ಕಿರುಕುಳವನ್ನು ನಿವೇ ಕಣ್ಣಾರೆ ನೋಡಬಹುದು.ಪೊಲೀಸ್‌ ಇಲಾಖೆಯಿಂದ ರಾಜ್ಯಾದ್ಯಂತ ಎಲ್ಲೇ ವೇಶ್ಯಾವಾಟಿಕೆ ದಂಧೆ ನಡೆದರೂ ಅವರನ್ನು ಮುಲಾಜಿಲ್ಲದೇ ಬಂಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಇನ್ನು ಲೈಂಗಿಕ ಅಲ್ಪ ಸಂಖ್ಯಾತರು ಕೂಡ ದಂಧೆ ನಡೆಸದಂತೆ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ (ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಅಂಡರ್‌ಪಾಸ್‌) ವೇಶ್ಯಾವಾಟಿಕೆ ದಂಧೆ ಮಾಡಲಾಗುತ್ತಿದೆ ಎಂದರೆ ನಾಚಿಕೆಗೇಡಿನ ವಿಚಾರವಾಗಿದೆ.ವಿಡಿಯೋ ಮಾಡುತ್ತಿದ್ದವನನ್ನು ತಡೆದು ಡಿಲೀಟ್‌ ಮಾಡಿಸಿದ್ರು: ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಯೂಟ್ಯೂಬರ್‌ ವಿಕಾಸ್‌ಗೌಡ ಸೆಲ್ಫಿ ವಿಡಿಯೋ ಮಾಡುತ್ತಾ ನಡೆದುಕೊಂಡು ಹೋಗುತ್ತಾನೆ. ಆಗ ಪಕ್ಕದಲ್ಲಿಯೇ ಮಹಿಳೆಯೊಬ್ಬರು ವ್ಯಕ್ತಿಯನ್ನು ನಿಲ್ಲಿಸಿಕೊಂಡು ವ್ಯವಹಾರ ಕುದುರಿಸುತ್ತಿರುವ ವಿಡಿಯೋ ಕೂಡ ಸೆರೆಯಾಗಿದೆ. ಜೊತೆಗೆ, ಮುಂದಕ್ಕೆ ಹೋಗುತ್ತಿದ್ದಂತೆ ಐದಾರು ಜನರು ಸೇರಿಕೊಂಡು ಯ್ಯೂಟೂಬರ್‌ನನ್ನು ಪ್ರಶ್ನೆ ಮಾಡಿ ವಿಡಿಯೋ ಮಾಡದಂತೆ ಹೇಳಿದ್ದಾರೆ. ನಂತರ, ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ಎಲ್ಲ ವಿಡಿಯೋ ಡಿಲೀಟ್‌ ಮಾಡಿಸಿದ್ದಾರೆ. ನಂತರ, ಅವರ ಎಲ್ಲ ಮಾಹಿತಿಯನ್ನು ಪಡೆದುಕೊಂಡು ಅಲ್ಲಿಂದ ಕಳಿಸಿದ್ದಾರೆ. ಕೊನೆಗೆ ಒಬ್ಬ ಮಹಿಳೆ ಯ್ಯೂಟೂಬರ್‌ನನ್ನು ದಂಧೆಗೆ ಪುಸಲಾಯಿಸಿದ ಘಟನೆ ಕೂಡ ನಡೆದಿದೆ.


ಕಾಲೇಜು ಹುಡುಗರು, ಅಂಕಲ್‌ಗಳು ಯಾರೇ ವ್ಯಕ್ತಿಗಳು ಇದ್ದರೂ ಜನಸಾಮಾನ್ಯರನ್ನು ತಮ್ಮ ವೇಶ್ಯಾವಾಟಿಕೆಗೆ ಕರೆದು ಮುಜುಗರ ಉಂಟುಮಾಡುತ್ತಿದ್ದಾರೆ. ಇದಕ್ಕೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರಿನ ಹೃದಯ ಭಾಗದಲ್ಲಿಯೇ ಇಂತಹ ಘಟನೆಗಳು ನಡೆಯುತತಿರುವುದರಿಂದ ಬೆಂಗಳೂರು ಸುರಕ್ಷಿತ ತಾಣವಲ್ಲ ಎಂಬ ಭಾವನೆಯೂ ಬರುತ್ತದೆ. ಆದ್ದರಿಂದ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಪ್ರಯಾಣಿಕರಿಗೆ ಸುರಕ್ಷೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಯ್ಯೂಟೂಬರ್‌ ಬ್ಲಾಗರ್‌ ಮನವಿ ಮಾಡಿಕೊಂಡಿದ್ದಾನೆ

BREAKING:HD ಕುಮಾರಸ್ವಾಮಿ ಸಹಿತ ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ

Posted by Vidyamaana on 2024-06-10 19:59:05 |

Share: | | | | |


BREAKING:HD ಕುಮಾರಸ್ವಾಮಿ ಸಹಿತ ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ

ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.



Leave a Comment: