ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


BIG BREAKING: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

Posted by Vidyamaana on 2024-06-06 15:59:17 |

Share: | | | | |


BIG BREAKING: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು.

ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

Posted by Vidyamaana on 2024-08-04 06:18:29 |

Share: | | | | |


ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

ರಾಮನಗರ : ಮುಡಾ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪಾದಯಾತ್ರೆಯಲ್ಲಿ ಹಾಜರಾಗಿ ಹೆಜ್ಜೆ ಹಾಕಿದ್ದಾರೆ.ಪ್ರಜ್ವಲ್​​ ರೇವಣ್ಣ ಪೆನ್​​​​​​​​ಡ್ರೈವ್​​​​ ವಿಚಾರ ಮುಂದಿಟ್ಟು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರೀತಂಗೌಡ ವಿರುದ್ಧ ಆಕ್ರೋಶ ಹೊರಹಾಕಿ ಪಾದಯಾತ್ರೆಗೆ ಬರುವುದನ್ನು ವಿರೋಧಿಸಿದ್ದರು.

ಮೈಸೂರು: ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವು

Posted by Vidyamaana on 2024-01-20 09:37:11 |

Share: | | | | |


ಮೈಸೂರು: ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವು

ಮೈಸೂರು :ಸ್ನಾನ ಮಾಡಲು ಕಪಿಲಾ ನದಿಗಿಳಿದ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಸಂಭವಿಸಿದೆ.ತುಮಕೂರು ಮೂಲದ ಗವಿ ರಂಗ(19), ರಾಕೇಶ್(19) ಹಾಗೂ ಅಪ್ಪು(16) ಮೃತಪಟ್ಟ ದುರ್ದೈವಿಗಳು. ನಂಜನಗೂಡು ತಾಲೂಕಿನ ಹೆಜ್ಜೆಗೆ ಸೇತುವೆ ಬಳಿ ಸ್ನಾನ ಮಾಡಲು ಇಳಿದು ಮೃತಪಟ್ಟಿದ್ದಾರೆ.ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದರು. ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ. ಇಬ್ಬರು ಈಜಿ ಮೇಲೆ ಬಂದಿದ್ದಾರೆ ಎನ್ನಲಾಗಿದೆ.


ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶಾಸಕ ದರ್ಶನ್‌ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Posted by Vidyamaana on 2023-08-15 03:26:47 |

Share: | | | | |


77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಲ್ಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.


77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.


ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.


ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಕೇರಳದಲ್ಲಿ ನಿಫಾ ಕಾಟ – ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

Posted by Vidyamaana on 2023-09-12 21:35:12 |

Share: | | | | |


ಕೇರಳದಲ್ಲಿ ನಿಫಾ ಕಾಟ – ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

 ಕೋಝಿಕ್ಕೋಡ್: ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರಕ್ಕೆ ಸಂಬಂಧಿಸಿದ ಎರಡು ಅಸ್ವಾಭಾವಿಕ ಸಾವುಗಳು ದಾಖಲಾದ ನಂತರ, ಕೇರಳ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ.ಎರಡು ಸಾವುಗಳು ನಿಪಾ ವೈರಸ್‌ನಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಮೃತರೊಬ್ಬರ ಸಂಬಂಧಿಕರು ತೀವ್ರ ನಿಗಾ ಘಟಕದಲ್ಲಿ(ಐಸಿಯು) ಇದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.ಕೇರಳದಲ್ಲಿ ನಿಪಾ ಹಾವಳಿ


ಈ ನಿಟ್ಟಿನಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಹಿಂದೆ 2018 ರಲ್ಲಿ ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಿಪಾ ಏಕಾಏಕಿ ಸಂಭವಿಸಿತ್ತು. ನಂತರ 2021 ರಲ್ಲಿ ಸಹ ಕೋಝಿಕೋಡ್ನಲ್ಲಿ ನಿಪಾ ಪ್ರಕರಣ ವರದಿಯಾಗಿತ್ತು. ದಕ್ಷಿಣ ಭಾರತದಲ್ಲಿ ಮೊದಲ ನಿಪಾ ವೈರಸ್ ಹರಡುವಿಕೆಯು ಮೇ 19, 2018 ರಂದು ಕೋಝಿಕ್ಕೋಡ್‌ನಲ್ಲಿ ವರದಿಯಾಗಿದೆ.

ವಿವಿಧ ಕಾಯಿಲೆಗಳಿಗೆ ಕಾರಣವಾಗುತ್ತೆ ನಿಪಾ

ವಿಶ್ವ ಆರೋಗ್ಯ ಸಂಸ್ಥೆ(WHO) ಪ್ರಕಾರ, ನಿಪಾ ವೈರಸ್ ಸೋಂಕು ಪ್ರಾಣಿಗಳಿಂದ ಜನರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ ಮತ್ತು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ಜನರಲ್ಲಿ, ಇದು ಲಕ್ಷಣರಹಿತ(ಸಬ್‌ಕ್ಲಿನಿಕಲ್) ಸೋಂಕಿನಿಂದ ತೀವ್ರವಾದ ಉಸಿರಾಟದ ಕಾಯಿಲೆ ಮತ್ತು ಮಾರಣಾಂತಿಕ ಎನ್ಸೆಫಾಲಿಟಿಸ್ವರೆಗೆ ಹಲವಾರು ಕಾಯಿಲೆಗಳನ್ನು ಉಂಟುಮಾಡುತ್ತದೆ.

ನಿಪಾ ವೈರಸ್ ಬಗ್ಗೆ ಮಾಹಿತಿ

ತಜ್ಞರ ಪ್ರಕಾರ ನಿಪಾ ಒಂದು ಪ್ಯಾರಾಮಿಕ್ಸೊವೈರಸ್. ಇದು ಸಾಮಾನ್ಯ ಶೀತವನ್ನು ಉಂಟುಮಾಡುವ ಬೆರಳೆಣಿಕೆಯ ವೈರಸ್‌ಗಳಲ್ಲಿ ಒಂದಾದ ಹ್ಯೂಮನ್ ಪ್ಯಾರೆನ್‌ಫ್ಲುಯೆಂಜಾ ವೈರಸ್‌ಗೆ ಸಂಬಂಧಿಸಿದೆ. ಇದರ ನೈಸರ್ಗಿಕ ಆತಿಥೇಯವೆಂದರೆ ಹಣ್ಣಿನ ಬಾವಲಿ, ದೊಡ್ಡ ಮತ್ತು ಸಣ್ಣ ಹಾರುವ ನರಿಗಳು ದಕ್ಷಿಣ ಮತ್ತು ಆಗ್ನೇಯ ಏಷ್ಯಾದಾದ್ಯಂತ ವಿತರಿಸಲ್ಪಡುತ್ತವೆ. ಇಲ್ಲಿಯವರೆಗೆ ನಿಪಾ ವೈರಸ್‌ನ ಮಾನವ ಸೋಂಕಿನ ಎಲ್ಲಾ ಪ್ರಕರಣಗಳು ಸೋಂಕಿತ ಬಾವಲಿಗಳೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದ ಕಾರಣದಿಂದಾಗಿವೆ.ಬಾವಲಿ ಮೂತ್ರದಿಂದ ಕಲುಷಿತಗೊಂಡ ಹಣ್ಣು ಅಥವಾ ಹಣ್ಣಿನ ರಸವು ಜನರಿಗೆ ವೈರಸ್ ಹರಡುವ ಪ್ರಮುಖ ಮಾರ್ಗವಾಗಿದೆ. ಮಾನವ ಸೋಂಕಿನ ಪ್ರಕರಣಗಳಲ್ಲಿ, ಇಲ್ಲಿಯವರೆಗೆ, ಪ್ರಾಥಮಿಕ ಸೋಂಕಿತ ವ್ಯಕ್ತಿಯ ನಿಕಟ ಸಂಪರ್ಕಗಳಾದ ಕುಟುಂಬ ಸದಸ್ಯರು ಅಥವಾ ವ್ಯಕ್ತಿಯು ಆಸ್ಪತ್ರೆಗೆ ದಾಖಲಾಗಿದ್ದರೆ, ಆಸ್ಪತ್ರೆಯ ಸಿಬ್ಬಂದಿಗೆ ಮಾತ್ರ ಸೀಮಿತವಾಗಿ ಹರಡಿದೆ.


ಮುಖ್ಯವಾಗಿ ನಿಪಾ ವೈರಸ್ ಜೀವಕೋಶಗಳನ್ನು ಪ್ರವೇಶಿಸಲು ಬಳಸುವ ಪ್ರೋಟೀನ್ಗಳು, ಮೆದುಳು ಮತ್ತು ಕೇಂದ್ರ ನರ ಅಂಗಾಂಶಗಳಲ್ಲಿ ಕೇಂದ್ರೀಕೃತವಾಗಿರುತ್ತವೆ. ನಿಪಾ ಸೋಂಕು ಹೆಚ್ಚಿನ ಸಂದರ್ಭಗಳಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ನಿಂದ ಸಾವಿಗೆ ಕಾರಣವಾಗುತ್ತದೆ, ಏಕೆಂದರೆ ವೈರಸ್ ಜೀವಕೋಶಗಳಿಗೆ ಪ್ರವೇಶಿಸಲು ಸುಲಭವಾದ ಅಂಗಾಂಶಗಳಲ್ಲಿ ವೈರಸ್ ಉತ್ತಮವಾಗಿ ಪುನರಾವರ್ತಿಸುತ್ತದೆ.

ಪುತ್ತೂರು : ಅಪ್ರಾಪ್ತ ಬಾಲಕಿಯ ಮೇಲೆ ಕಿರುಕುಳ ಆರೋಪ -ಕಡಬ ಮೂಲದ ಶಾಕಿರ್ ಪೊಲೀಸ್ ವಶಕ್ಕೆ

Posted by Vidyamaana on 2024-01-28 05:12:54 |

Share: | | | | |


ಪುತ್ತೂರು : ಅಪ್ರಾಪ್ತ  ಬಾಲಕಿಯ ಮೇಲೆ ಕಿರುಕುಳ ಆರೋಪ -ಕಡಬ ಮೂಲದ ಶಾಕಿರ್ ಪೊಲೀಸ್ ವಶಕ್ಕೆ

ಪುತ್ತೂರು:  ಯುವಕನೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ, ಪುತ್ತೂರು  ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.ಆರೋಪಿಯನ್ನು ತಮ್ಮವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್‌ ಕುಮಾರ ಪುತ್ತಿಲ ಸಮಾಧಾನಗೊಳಿಸಿದರು. ಆರೊಪಿಯ ವಿರುದ್ದ ಪೊಕ್ಕೋ ಪ್ರಕರಣ ದಾಖಲಿಸಲಾಗಿದೆ.

Recent News


Leave a Comment: