Posted by vidyamaana on 2024-07-23 21:30:52 |
ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.
ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.
ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.
ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು.
ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.
Posted by Vidyamaana on 2024-08-10 16:03:25 |
ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ ಸ್ಪರ್ಧಾತ್ಮಕ ಯುಗದ ಇತಿಹಾಸದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ವಿವಿಧ ಆಯಾಮಗಳಲ್ಲಿ ಯುವ ಜನತೆಯಲ್ಲಿ ಅರಿವನ್ನು ಮೂಡಿಸಿ ಕಳೆದ ಹಲವು ವರ್ಷಗಳಿಂದ ಈಚೆಗೆ 150ಕ್ಕೂ ಅಧಿಕ ಯುವ ಸ್ಪರ್ಧಾರ್ಥಿಗಳು ಬ್ಯಾಂಕಿಂಗ್, ಪೊಲೀಸ್, ಅಗ್ನಿಪಥ್, ಕ್ಯಾಂಪ್ಕೋ, ಕೆಎಂಎಫ್ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು ಸರಕಾರಿ ಉದ್ಯೋಗ ಗಿಟ್ಟಿಸಿ ಕೊಳ್ಳುವಲ್ಲಿ ಮಹತ್ತರ ಪಾತ್ರ ನಿಭಾಯಿಸಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸದ್ಯ ಓದುತ್ತಿರುವ ಮತ್ತು ಓದು ಮುಗಿಸಿರುವ ಹಾಗೂ ಸರಕಾರಿ ಉದ್ಯೋಗವನ್ನು ಅರಸುತ್ತಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಸರಕಾರಿ ನೇಮಕಾತಿ ಪರೀಕ್ಷೆಗಳ ಪೂರ್ವ ತಯಾರಿಗೆ ಸಂಬಂದಿಸಿದಂತೆ ಆ 11 ಆದಿತ್ಯವಾರದಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 03ರ ವರೆಗೆ ತರಬೇತಿಯನ್ನು ಆಯೋಜಿಸಿದ್ದು ಈ ತರಬೇತಿಗೆ ಸದ್ಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ಹಾಗೂ ಓದು ಮುಗಿಸಿರುವ ವಿದ್ಯಾರ್ಥಿಗಳು ಹಾಗೂ ಸರಕಾರಿ ಉದ್ಯೋಗವನ್ನು ಅರಸುತ್ತಿರುವವರಿಗೆ ಪುತ್ತೂರು ನಗರ ಠಾಣಾ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹಾಗೂ ಚಿಕ್ಕಬಳ್ಳಾಪುರದ ಖ್ಯಾತ ತರಬೇತುದಾರರಾದ ರಘುನಾಥ್ ರವರ ನೇತೃತ್ವದಲ್ಲಿ ನಡೆಯಲಿರುವ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
Posted by Vidyamaana on 2024-04-16 14:44:07 |
ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ 28 ಕ್ಕೆ 28 ಸೀಟೂ ಗೆಲ್ಲಬೇಕೆಂಬ ಪಣ ತೊಟ್ಟಿದೆ.. ಇತ್ತ ಕಾಂಗ್ರೆಸ್ ನಾವು ಕನಿಷ್ಟ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ.. ಆದ್ರೆ ಚುನಾವಣಾ ಪೂರ್ವ ಸಮೀಕ್ಷೆಗಳು ಮಾತ್ರ ದಿನಕ್ಕೊಂದು ಭವಿಷ್ಯ ಹೇಳುತ್ತಿವೆ..
ಒಂದು ಸಮೀಕ್ಷೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತ ಹೇಳಿದ್ರೆ, ಇನ್ನೊಂದು ಸಮೀಕ್ಷೆ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತೆ ಎಂದು ಹೇಳುತ್ತಿವೆ.
ಹಿಂದೆಂದೂ ಇಲ್ಲದ ರೀತಿ ಸಮೀಕ್ಷೆ;
ಯಾವುದೇ ಸಮೀಕ್ಷೆ ಆದರೂ ಒಂದೆರಡು ಸೀಟು ವ್ಯತ್ಯಾಸ ಇರುತ್ತದೆ.. ಫಲಿತಾಂಶವೇ ಉಲ್ಟಾ ಆಗುವ ರೀತಿಯಲ್ಲಿ ಯಾರೂ ಸಮೀಕ್ಷೆ ಮಾಡೋದಿಲ್ಲ.. ಆದ್ರೆ ಕರ್ನಾಟಕದಲ್ಲಿ ಈ ಬಾರಿ ಅಂತಹ ಸಮೀಕ್ಷಾ ವರದಿಗಳು ಹೊರಬರುತ್ತಿವೆ.. ಕೆಲ ಸಮೀಕ್ಷೆಗಳು ಬಿಜೆಪಿ ಹಾಗೂ ಜೆಡಿಎಸ್ 20-24 ಸ್ಥಾನಗಳವರೆಗೆ ಗೆಲ್ಲುತ್ತೆ ಎಂದು ಹೇಳುತ್ತಿವೆ.. ಆದ್ರೆ ಕೆಲವು ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಗಳಿಸುತ್ತೆ ಎಂದು ಹೇಳುತ್ತಿವೆ.. ಹೀಗಾಗಿ, ಜನಕ್ಕೆ ಹಾಗೂ ರಾಜಕೀಯ ಪಕ್ಷಗಳಿಗೆ ಇದು ಸಾಕಷ್ಟು ಕನ್ಪ್ಯೂಸ್ ಮಾಡುತ್ತಿದೆ.
Posted by Vidyamaana on 2023-09-02 15:45:50 |
ಮಂಗಳೂರು: "ಡ್ರಗ್ಸ್ ಫ್ರೀ ಮಂಗಳೂರು" ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು.
ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು.
ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Posted by Vidyamaana on 2024-07-06 14:29:29 |
ವಿಟ್ಲ: ಮಂಗಳಪದವು ಎಂಬಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬದ ಮಾಂಕು ಕೊರಗ ಎಂಬವರು ತನಗೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಸರ್ಕಾರಕ್ಕೆ ನೀಡಲು ಮುಂದಾಗಿರುವ ಘಟನೆಯೊಂದು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
2010 ರಲ್ಲಿ ಅಂದಿನ ಜಿಲ್ಲಾಧಿಕಾರಿಯವರು ಇವರಿಗೆ ಸರ್ವೇ ನಂ. 283 ಮತ್ತು 282 ರಲ್ಲಿ ಒಂದು ಎಕ್ರೆ ಕೃಷಿ ಭೂಮಿಯನ್ನು ಮಂಜೂರು ಮಾಡಿತ್ತು. ಆದರೆ ತನಗೆ ಸೇರಬೇಕಿದ್ದ ಭೂಮಿಯ ಕೆಲವು ದಾಖಲೆಗಳನ್ನು ಮಾತ್ರ ನೀಡಿ, ಕೃಷಿ ಕಾರ್ಯ ನಡೆಸದಂತೆ ಸಮಸ್ಯೆ ಎದುರಾಗಿದೆ. ಸುಮಾರು ಹದಿಮೂರು ವರ್ಷ ಕಳೆದರೂ ತನ್ನ ಜಾಗಕ್ಕೆ ಹೋಗದಂತೆ ಕೃಷಿ ಚಟುವಟಿಕೆಗಳನ್ನು ನಡೆಸದಂತೆ ಸಮಸ್ಯೆಯಲ್ಲಿ ಸಿಲುಕಿರುವ ಈ ವೃದ್ಧ ಸಾಮಾಜಿಕ ಹೋರಾಟಗಾರಲ್ಲಿ ತನ್ನ ನೋವನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರರಾದ ದೇವಿ ಪ್ರಸಾದ್ ಶೆಟ್ಟಿ ಬೆಂಞಂತ್ತಿಮಾತ್ ಗುತ್ತು ಹಾಗೂ ಧನಂಜಯ ಪಾದೆ ಇವರು ಮಾಂಕು ಕೊರಗ ಎಂಬವರಿಗೆ ಸೇರಬೇಕಾದ ಎಲ್ಲಾ ದಾಖಲೆಗಳನ್ನು ಒಂದು ವಾರದಲ್ಲಿ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಯವರು ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
Posted by Vidyamaana on 2024-05-30 22:29:35 |
ಮಂಗಳೂರು: ಮನೆಯಿಂದ ಹೊರಗೆ ತೆರಳಿದ್ದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕಂಪಾಡಿ ಮೀನಕಳಿಯ ನಿವಾಸಿಗಳಾಗಿರುವ ಶ್ವೇತಾ(31) ಮತ್ತು ಇಶಿಕಾ(6) ನಾಪತ್ತೆಯಾದ ತಾಯಿ ಹಾಗೂ ಮಗಳು ಎಂದು ತಿಳಿದು ಬಂದಿದೆ.
Posted by Vidyamaana on 2024-06-10 19:13:11 |
ಮುಂಬೈ: ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
2023ರಲ್ಲಿ ಬಿಡುಗಡೆಗೊಂಡಿದ್ದ ದಿ ಟ್ರಯಲ್ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು.