ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

Posted by Vidyamaana on 2024-04-06 09:46:16 |

Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

ಪುತ್ತೂರು:ಯುವತಿಯೋರ್ವರನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವಬೆದರಿಕೆಯೊಡ್ಡಿರುವ ಆರೋಪದ ಘಟನೆ ಕುರಿಯ ಮಲಾ‌ರ್ ಎಂಬಲ್ಲಿಂದ ವರದಿಯಾಗಿದೆ.

ಘಟನೆ ಕುರಿತು ಅಶ್ವಿತ್ ಕುಮಾರ್(24 ವ.)ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ತಾನು ಕುರಿಯ ಗ್ರಾಮದ ಮಲಾರ್ ಎಂಬಲ್ಲಿ ಕಟ್ಟಿಸಿದ ಹೊಸ ಮನೆಗೆ ಏ.3ರಂದು ಸಂಜೆ ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್ ಮುಕ್ವೆ ಎಂಬಾತ ಕರೆ ಮಾಡಿ.ನಿನ್ನಲ್ಲಿ ಮಾತನಾಡುವುದು ಇದೆ ಎಂದು ತಿಳಿಸಿದಾಗ, ತಾನು ಮಲಾರ್‌ನಲ್ಲಿದ್ದು, ದರ್ಬೆಗೆ ಬರುವುದಾಗಿ ತಿಳಿಸಿ, ಮಲಾರ್‌ನಿಂದ ತನ್ನ ಬೈಕ್‌ನಲ್ಲಿ ಹೊರಟು ಆರ್ಯಾಪು ಗ್ರಾಮದ ಕಲ್ಲರ್ಪೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ

ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆ

Posted by Vidyamaana on 2023-09-03 11:03:06 |

Share: | | | | |


ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆ

ಪುತ್ತೂರು:ಇತ್ತೀಚೆಗೆ ನಿಧನರಾದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಶ್ರದ್ಧಾಂಜಲಿ ಸಭೆಯು ಸೆ.೨ರಂದು ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

ನುಡಿ ನಮನದ ಸಲ್ಲಿಸಿದ ಪುತ್ತೂರಿನ ಖ್ಯಾತ ವೈದ್ಯರು, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ. ಸುರೇಶ್ ಪುತ್ತೂರಾಯ ಮಾತನಾಡಿ, ಹುಟ್ಟಿದ ಮನುಷ್ಯನಿಗೆ ಮರಣ ನಿಶ್ವಿತ. ಆದರೂ ಸೀತಾರಾಮ ಶೆಟ್ಟಿಯವರಿಗೆ ಸಣ್ಣ ವಯಸ್ಸಿನಲ್ಲಿಯೇ ವೇಗವಾಗಿ ಬಂದೊದಗಿದೆ. ಸದಾ ಸಮಾಜ ಮುಖಿ ವ್ಯಕ್ತಿತ್ವದ ಸೀತಾರಾಮ ಶೆಟ್ಟಿಯವರು ಸೀತಣ್ಣ ಎಂದೇ ಎಲ್ಲರೊಂದಿಗೆ ಗುರುತಿಸಿಕೊಂಡವರು. ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಎಲ್ಲಾ ಸಂದರ್ಭಗಳಲ್ಲಿಯೂ ಮುಂಚೂಣಿಯಲ್ಲಿ ನಿಂತು ಬಹಳಷ್ಟು ಉತ್ತಮ ಕೆಲಸ ಮಾಡಿದವರು. ಒಡನಾಡಿಯಾಗಿ ಸಂಪ್ಯದ ಜನತೆಯೊಂದಿಗೆ ಅನ್ಯೋನ್ಯತೆಯಿಂದಿದ್ದವರು ಎಂದರು.

ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಸದಾ ನಗುಮೊಗದಿಂದ ಎಲ್ಲರೊಂದಿಗೆ ಬೆರೆಯುತ್ತಿದ್ದ ಸೀತಾರಾಮ ಶೆಟ್ಟಿಯವರ ಮರಣ ವಾರ್ತೆ ಯಾರಿಗೂ ನಂಬಲು ಸಾಧ್ಯವಾಗಿಲ್ಲ. ಹಲವಾರು ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಎಲ್ಲರೊಂದಿಗೆ ಪ್ರೀತಿಯಿಂದ ಇದ್ದವರು. ಯುವ ಬಂಟರ ಸಂಘದ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ನಿರ್ವಹಿಸಿದವರು. ತಾನು ಬಾಳಿ ಬೆಳಗಿನ ಅಲ್ಪ ಅವಧಿಯಲ್ಲಿಯೇ ಉತ್ತಮ ಸೇವೆ ನೀಡಿದವರು. ಸಹೋದರರು ಪರಸ್ಪರ ಅನ್ಯೋನ್ಯತೆಯಿಂದ ಇದ್ದ ಅವರ ಬದುಕು ನಾವು ಯಾವ ರೀತಿ ಬದುಕಬೇಕೆಂಬುದಕ್ಕೆ ಆದರ್ಶವಾಗಿದ್ದ ಅವರು ಸಮಾಜದ ಪ್ರೀತಿ ಗಳಿಸಿದವರು ಎಂದರು.

ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಮಾತನಾಡಿ, ಹಲವು ಸಮಾಜಮುಖಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಸೀತಾರಾಮ ಶೆಟ್ಟಿಯವರು ಎಲ್ಲರೊಂದಿಗೆ ಸಹೋದರೆತೆಯಿಂದ ಬೆರೆಯುತ್ತಿದ್ದವರು. ಎಲ್ಲರೊಂದಿಗೂ ಆದರದಿಂದ ಮಾತನಾಡಿಸುವವರು. ಸಂಪ್ಯ ನವಚೇತನ ಯುವಕ ಮಂಡಲ, ಕಂಬಳತ್ತಡ್ಡ ಶ್ರೀಕೃಷ್ಣ ಯುವಕ ಮಂಡಲ, ಜೇಸಿಐ, ಯುವ ಬಂಟರ ಸಂಘಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ ಅವರು ಯುವಕರಿಗೆ ಅದರ್ಶಪ್ರಾಯರಾಗಿದ್ದರು ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಸವಣೂರು ವಿದ್ಯಾರಶ್ಮೀ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಎಪಿಎಂಸಿ ಮಾಜಿ ಸದಸ್ಯ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ನಾಥ ಶೆಟ್ಟಿ, ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಕ್ಷಯ ಗ್ರೂಪ್‌ನ ಮ್ಹಾಲಕ ಜಯಂತ ನಡುಬೈಲು, ಉದ್ಯಮಿ ಪುರಂದರ ರೈ ಮಿತ್ರಂಪಾಡಿ, ಬಂಟರ ಸಂಘದ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಳ್ವ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ರಾಕೇಶ್ ರೈ ಕೆಡೆಂಜಿ, ಬಿರುಮಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ ರೈ, ಗಣೇಶ್ ರೈ ಮೂಲೆ, ವಸಂತ ರೈ ದುಗ್ಗಳ, ಜಯರಾಮ ರೈ ನುಳಿಯಾಲು, ಮಹಾಬಲ ರೈ ವಳತ್ತಡ್ಕ, ಸೀತಾರಾಮ ಶೆಟ್ಟಿಯವರ ಸಹೋದರರಾದ ಜಯಂತ ಶೆಟ್ಟಿ, ರವೀಂದ್ರ ಶೆಟ್ಟಿ, ಕುಟುಂಬಸ್ಥರು ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಉಡುಪಿ ನಾಲ್ವರ ಭೀಕರ ಕೊಲೆ ಪ್ರಕರಣ – ಆರೋಪಿ ಪ್ರವೀಣ್ ಚೌಗಲೆ ಬಲೆಗೆ ಬಿದ್ದಿದ್ದು ಹೇಗೆ?

Posted by Vidyamaana on 2023-11-15 18:00:55 |

Share: | | | | |


ಉಡುಪಿ ನಾಲ್ವರ ಭೀಕರ ಕೊಲೆ ಪ್ರಕರಣ – ಆರೋಪಿ ಪ್ರವೀಣ್ ಚೌಗಲೆ ಬಲೆಗೆ ಬಿದ್ದಿದ್ದು ಹೇಗೆ?

ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಏಕಮುಖ ಪ್ರೇಮವೇ ಕಾರಣ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.


ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ(35) ಅದೇ ವಿಭಾಗದಲ್ಲಿ ಕೆಲಸ ನಿರ್ವಹಿಸುವ ಕೊಲೆಯಾದ ಐನಾಝಳೊಂದಿಗೆ ಪ್ರೇಮವಾಗಿತ್ತು. ಆದರೆ ಐನಾರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಳು ಎನ್ನಲಾಗಿದೆ.


ನ.12ರಂದು 36 ಬಾರಿ ಫೋನ್ ಮಾಡಿದ್ದ ಹಂತಕ ಕಳೆದ ಕೆಲವು ದಿನಗಳ ಹಿಂದೆ ಐನಾಝ್ ಹುಟ್ಟು ಹಬ್ಬಕ್ಕೆ ನೇಜಾರು ಮನೆಗೆ ಬಂದಿದ್ದ ಹಂತಕ ಆಕೆಗೆ ಉಂಗುರವನ್ನು ಎಲ್ಲರ ಮುಂದೆ ಹಾಕಿದ್ದ


ಇದರಿಂದ ಐನಾಝ್ ಮನೆಯವರ ಮುಂದೆ ಗಲಿಬಿಲಿಗೊಂಡಿದ್ದಳು. ಆ ಬಳಿಕ ಪ್ರವೀಣ್‌ನನ್ನು ದೂರ ಮಾಡಲು ಯತ್ನಿಸಿದ್ದಳು. ಇದರಿಂದ ಖಿನ್ನತೆಗೆ ಒಳಗಾದ ಪ್ರವೀಣ್ ಐನಾಝ್ಗೆ ನಿರಂತರ ಫೋನ್ ಮಾಡುತ್ತಿದ್ದ. ಐನಾಝ್ ಕೊಲೆಯಾದ ದಿನವೇ ಬೆಳಿಗ್ಗೆ 11 ಗಂಟೆಗೆ ದುಬೈಗೆ ಏರ್‌ಇಂಡಿಯಾ ವಿಮಾನದಲ್ಲಿ ಗಗನ ಸಖಿಯಾಗಿ ಕಾರ್ಯನಿರ್ವಹಿಸಲು ಹೋಗಬೇಕಿತ್ತು. ಆದರೆ ಅಂದೇ ಬೆಳಿಗ್ಗೆ ಯಮರೂಪಿಯಾಗಿ ಬಂದ ಪ್ರವೀಣ್ ಮನೆಯಲ್ಲಿದ್ದ ನಾಲ್ವರನ್ನು ಹತ್ಯೆಗೈದು ಪರಾರಿಯಾಗಿದ್ದ.


ನಾಲ್ವರನ್ನು ಹತ್ಯೆಗೈದು ಬಸ್ ಮೂಲಕ ಮಂಗಳೂರಿಗೆ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಗೆ ಹೋಗಿ ಪರಿಚಯದ ನೀರಾವರಿ ಇಲಾಖೆಯ ಅಧಿಕಾರಿ ಮನೆಯಲ್ಲಿ ಒಂದು ದಿನ ಅಡಗಿದ್ದ. ಅಲ್ಲಿಂದ ನೇರ ತನ್ನೂರು ಸಾಂಗ್ಲಿಗೆ ಹೋಗಿ ಅವಿತುಕೊಳ್ಳುವ ಪ್ಲಾನ್ ರೂಪಿಸಿದ್ದ ಹಂತಕ,


ಕೊಲೆಯಾದ ತಕ್ಷಣ ಎಲರ್ಟ್ ಆದ ಪೊಲೀಸರು ಐನಾಝ್ ದುಡಿಯುತ್ತಿದ್ದ ಏರ್‌ಪೋರ್ಟ್‌ಗೆ ಭೇಟಿ


ನೀಡಿ ಉದ್ಯೋಗಿಗಳ ಮಾಹಿತಿ ಕಲೆ ಹಾಕಿದ್ದಾರೆ ಅಲ್ಲಿ ರಜೆ ಹಾಕಿದ್ದ ಪ್ರವೀಣ್‌ ಮಾಹಿತಿ ಕಲೆ ಹಾಕಿ ಫೋನ್ ಟ್ಯಾಕ್ ಮಾಡಿದ್ದರು.


ಅದರಂತೆ ಬ್ರಹ್ಮಾವರ ಇಸ್ಪೆಕ್ಟರ್ ದಿವಾಕರ್ ಪಿ.ಎಂ ನೇತೃತ್ವದ ತಂಡ ಕುಡುಚಿ ಪೊಲೀಸರ ಸಹಾಯದಿಂದ ಹಂತಕನನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.


ಆಂಧ್ರಪ್ರದೇಶಕ್ಕೆ ಸಾರಲು ಸಂಚು ರೂಪಿಸಿದ ಹಂತಕ

ಆರೋಪಿ ಪ್ರವೀಣ್ ಅರುಣ್‌ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎನ್ನುವುದು ಪೊಲೀಸರು ತಿಳಿಸಿದ್ದಾರೆ.


ಆರೋಪಿ ಈ ಹಿಂದೆ CISF ಸಿಬ್ಬಂದಿಯಾಗಿಯೂ ಕೆಲಸ ಮಾಡಿದ್ದ ಎಂದು ಹೇಳಲಾಗಿದೆ. ಬಳಿಕ ಏ‌ಪೋರ್ಟ್‌ ನ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.


ತನಿಖೆಗೆ ನೆರವಾದ ಆರೋಪಿಯ ನಡಿಗೆಯ ಶೈಲಿ : ಮಾಹಿತಿಗಳ ಪ್ರಕಾರ, ಘಟನೆಯ ಬಳಿಕ


ಲಭ್ಯವಿದ್ದ ಸಿಸಿಟಿವಿ ಸಾಕ್ಷ್ಯಗಳನ್ನು ಪರಿಶೀಲಿಸಿದ್ದ ಪೊಲೀಸರು ಆರೋಪಿಯ ನಡಿಗೆ ಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದರು ಎನ್ನಲಾಗಿದೆ. ಇದು ಆರೋಪಿಯು ರಕ್ಷಣಾ ಇಲಾಖೆಗಳಿಗೆ ಸಂಬಂಧಿಸಿದ ವ್ಯಕ್ತಿ ಎಂಬ ಸುಳಿವು ನೀಡಿತ್ತು. ಬಳಿಕ ಆರೋಪಿ, ಅರುಣ್ ಚೌಗಲೆ ಬೆನ್ನುಬಿದ್ದ ಪೊಲೀಸರು, ಆತನನ್ನು ಬೆಳಗಾವಿಯ ಕುಡಚಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾದರು.

ಪೈವಳಿಕೆಯಲ್ಲಿ ಕೊಲೆ ಪುತ್ತೂರಿನಲ್ಲಿ ಸೆರೆ

Posted by Vidyamaana on 2023-06-03 10:52:32 |

Share: | | | | |


ಪೈವಳಿಕೆಯಲ್ಲಿ ಕೊಲೆ ಪುತ್ತೂರಿನಲ್ಲಿ ಸೆರೆ

ಪುತ್ತೂರು: ಕಾಸರಗೋಡಿನ ಪೈವಳಿಕೆಯಲ್ಲಿ ತಮ್ಮನನ್ನು ಇರಿದು ಕೊಂದ ಅಣ್ಣ ಪುತ್ತೂರಿನಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಸಹೋದರರ ನಡುವಿನ ವೈಷಮ್ಯದ ಕಾರಣದಿಂದ ಅಣ್ಣ ಜಯರಾಮ, ತಮ್ಮ ಪ್ರಭಾಕರ ನೋಂಡಾ (40) ಎಂಬವರನ್ನು ಇರಿದು ಹತ್ಯೆ ಮಾಡಿದ್ದ ಘಟನೆ ಶನಿವಾರ ಬೆಳಿಗ್ಗೆ ಪೈವಳಿಕೆಯಲ್ಲಿ ನಡೆದಿತ್ತು.

ಕೇರಳದ ಪೈವಳಿಕೆಯಲ್ಲಿ ಕೊಲೆ ಮಾಡಿ ಪುತ್ತೂರಿನಲ್ಲಿ ಬಂದು ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಪುತ್ತೂರಿನ ಕೊಂಬೆಟ್ಟಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದಾರೆ. ಪ್ರಭಾಕರ ವಿರುದ್ಧ ಹಲವು ಪ್ರಕರಣಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಟ್ಲ: ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

Posted by Vidyamaana on 2024-08-21 19:54:00 |

Share: | | | | |


ವಿಟ್ಲ: ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆಗಸ್ಟ್ 12 ಮಂಗಳವಾರ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂದು (ಆ16) ವಕೀಲರ ಸಂಘದಲ್ಲಿ ಆಟಿದ ಗೌಜಿ

Posted by Vidyamaana on 2023-08-16 02:24:59 |

Share: | | | | |


ಇಂದು (ಆ16) ವಕೀಲರ ಸಂಘದಲ್ಲಿ ಆಟಿದ ಗೌಜಿ

ಪುತ್ತೂರು: ಇಲ್ಲಿನ ವಕೀಲರ ಸಂಘದ ಆಶ್ರಯದಲ್ಲಿ ಆ. 16ರಂದು ಮಧ್ಯಾಹ್ನ 1 ಗಂಟೆಗೆ ಪರಾಶರ ಸಭಾಂಗಣದಲ್ಲಿ ಆಟಿದ ಗೌಜಿ ಕಾರ್ಯಕ್ರಮ ನಡೆಯಲಿದೆ.

ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ, ಎಸಿಜೆಎಂ, ತಾ.ಕಾ.ಸೇ. ಸಮಿತಿ ಅಧ್ಯಕ್ಷ ಗೌಡ ಆರ್.ಪಿ. ಕಾರ್ಯಕ್ರಮ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಂ.ಎಫ್.ಸಿ. ಪ್ರೀಯಾ ರವಿ ಜೊಗ್ಲೇಕರ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ಜೆ.ಎಂ.ಎಫ್.ಸಿ. ಹಾಗೂ ತಾ.ಕಾ.ಸೇ. ಸಮಿತಿ ಸದಸ್ಯ ಕಾರ್ಯದರ್ಶಿ ಅರ್ಚನಾ ಕೆ. ಉಣ್ಣಿತ್ತಾನ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆ.ಎಂ.ಎಫ್.ಸಿ. ಶಿವಣ್ಣ ಎಚ್.ಆರ್., 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಹಾಗೂ ಜೆ.ಎಂ.ಎಫ್.ಸಿ. ಯೋಗೇಂದ್ರ ಶೆಟ್ಟಿ ಉಪಸ್ಥಿತರಿರುವರು.

ಸುಳ್ಯದ ಹಿರಿಯ ವಕೀಲ ಜಗದೀಶ ಹುದೇರಿ ಅವರು ಆಟಿಯ ಆಶಯ ಭಾಷಣ ಮಾಡಲಿದ್ದಾರೆ. ಬಳಿಕ ಆಟಿ ವಿಶೇಷ ಊಟದ ವ್ಯವಸ್ಥೆ ಇದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent News


Leave a Comment: