Posted by vidyamaana on 2024-07-23 18:35:28 |
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ.
ಕೇರಳ ಮಾಧ್ಯಮಗಳ ಕವರೇಜ್
ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ
Posted by Vidyamaana on 2023-08-08 13:14:14 |
ಬೆಂಗಳೂರು: ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ನಗರದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ” ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಯಾರೂ ಫ್ಲೆಕ್ಸ್ ಕಟೌಟ್ ಹಾಕುವಂತಿಲ್ಲ ” ಎಂದು ಸೂಚನೆ ನೀಡಿದರು.
ಆಗಸ್ಟ್ 15 ರ ಒಳಗಡೆ ಫ್ಲೆಕ್ಸ್ ಹಾಕುವುದನ್ನು ಬ್ಯಾನ್ ಮಾಡುತ್ತೇವೆ. ಈ ಬಗ್ಗೆ ನ್ಯಾಯಾಲಯದ ಆದೇಶವೂ ಇದೆ. ಯಾವದೇ ಪಕ್ಷದ ಫ್ಲೆಕ್ಸ್ ಬೋರ್ಡಿಂಗ್ ಇರಲಿ ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಯಾರಾದರೂ ಫ್ಲೆಕ್ಸ್ ಹಾಕಿದರೆ 50,000 ದಂಡ ಹಾಕಲು ನ್ಯಾಯಾಲಯದ ಆದೇಶ ಈಗಾಗಲೇ ಇದೆ. ಸಿಎಂ ಆಗಲಿ ನನ್ನದೇ ಆಗಲಿ ಯಾವುದೇ ಫ್ಲೆಕ್ಸ್ ಹಾಕುವ ಹಾಗಿಲ್ಲ. ಸರ್ಕಾರ ಕಾರ್ಯಕ್ರಮದ ಬಗ್ಗೆ ಏನಾದರೂ ಫ್ಲೆಕ್ಸ್ ಹಾಕಬೇಕಾದಲ್ಲಿ ಅದಕ್ಕೆ ಅನುಮತಿ ಪಡೆದುಕೊಳ್ಳುತ್ತೇವೆ ಎಂದರು.
Posted by Vidyamaana on 2024-07-18 19:02:44 |
ಥಾಣೆ: ಸಿಸಿಟಿವಿಯಲ್ಲಿ ಸೆರೆಯಾದ ತಮಾಷೆಯ ಕ್ಷಣದಲ್ಲಿ ಮಹಿಳೆಯೊಬ್ಬರು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ಥಾಣೆಯಲ್ಲಿ ನಡೆದಿದೆ.
ಮೂರನೇ ಮಹಡಿಯ ಗೋಡೆಗೆ ಒರಗಿ ನಿಂತ ಮಹಿಳೆ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿರುವ ಈ ಗೊಂದಲದ ತುಣುಕು ತೋರಿಸುತ್ತದೆ.
Posted by Vidyamaana on 2023-10-13 08:32:15 |
ಬೆಂಗಳೂರು : ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಫ್ಲ್ಯಾಟ್ವೊಂದರಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಹೌದು, ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 25 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಐನೂರು ಮುಖಬೆಲೆಯ ಕಂತೆ ಕಂತೆ ಹಣ ಪತ್ತೆಯಾಗಿದೆ.ಭ್ರಷ್ಟರು ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ. ವಿಷಯ ಅರಿತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿನ್ನೆ(ಗುರುವಾರ) ಸಂಜೆ 6ಗಂಟೆಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಪತ್ತೆಯಾದ ಹಣದ ಒಟ್ಟಾರೆ ಮೊತ್ತವನ್ನ ಐಟಿ ಅಧಿಕಾರಿಗಳು ಎಣಿಕೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಎಷ್ಟು ಹಣ ಪತ್ತೆಯಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಇದೇ ವೇಳೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ನಿವಾಸದ ಮೇಲೂ ಐಟಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
Posted by Vidyamaana on 2024-04-13 07:27:10 |
ಪುತ್ತೂರು: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.
ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿಭಾಗವಹಿಸಲಿದ್ದು ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 15 ಸಾವಿರಕ್ಕೂಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಸಮಾವೇಶವನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
Posted by Vidyamaana on 2024-05-24 21:16:57 |
ಧಾರವಾಡ: ಮಳೆ ಸುರಿಯುವಾಗ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಲಾಯಿಸಿದ ಚಾಲಕ ಮತ್ತು ಬಸ್ಸಿನ ನಿರ್ವಾಹಕರನ್ನು ಅಮಾನತು ಮಾಡಲಾಗಿದೆ.
ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಲಾಯಿಸಿದ ಮೊಬೈಲ್ನಲ್ಲಿ ವಿಡಿಯೊ ಮಾಡಿದ್ದ ಪ್ರಕರಣಕ್ಕೆ
Posted by Vidyamaana on 2023-11-16 14:16:22 |
ಪುತ್ತೂರು: ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ತನ್ನ ಕಾರು ಚಾಲಕನಿಗೆ ದೀಪಾವಳಿ ಪ್ರಯುಕ್ತ ಸುಮಾರು ೧,೩೦೦೦೦ ರೂ ಮೌಲ್ಯದ ಟಿವಿಎಸ್ ರೈಡರ್ ಬೈಕನ್ನು ಉಡುಗೋರೆಯಾಗಿ ನೀಡಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಹೇಮನಾಥ ಶೆಟ್ಟಿಯವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿರುವ ಪಾಣಾಜೆ ನಿವಾಸಿ ದಿನೇಶ್ ಉಡುಗೋರೆ ಪಡೆದುಕೊಂಡ ಚಾಲಕ.
ದೀಪಾವಳಿ ಸಂದರ್ಭದಲ್ಲಿ ತಮ್ಮ ಸಿಬಂದಿಗಳಿಗೆ ಬೋನಸ್, ಸಿಹಿತಿಂಡಿ ಅಥವಾ ಊಟೋಪಚಾರಗಳನ್ನು ನೀಡುವುದು ಸಾಮಾನ್ಯವಾಗಿದೆ. ಆದರೆ ಪ್ರಾಮಾಣಿಕವಾಗಿ ಚಾಲನಾ ಕೆಲಸ ಮಾಡುತ್ತಿರುವ ದಿನೇಶ್ ತನ್ನ ಮಾಲಕರಿಂದ ಭಾರೀ ಮೊತ್ತದ ಬೈಕನ್ನು ಉಡುಗೋರೆಯಾಗಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೇಮನಾಥ ಶೆಟ್ಟಿಯವರನ್ನು ಕೇಳಿದರೆ ದೀಪಾವಳಿ ಪ್ರಯುಕ್ತ ಸಣ್ಣ ಗಿಫ್ಟ್ ನೀಡಿದ್ದೇನೆ ಎಂದಷ್ಟೇ ಹೇಳಿದರು.
ನಾನು ಕಳೆದ ಹತ್ತು ವರ್ಷಗಳಿಂದ ಹೇಮನಾಥ ಶೆಟ್ಟಿಯವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಅವರ ಕುಟುಂಬದ ಎಲ್ಲರೂ ನನ್ನನ್ನು ಅವರ ಕುಟುಂಬದ ಸದಸ್ಯನಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಕಷ್ಟದ ಸಮಯದಲ್ಲಿ ನೆರವಾಗುತ್ತರೆ. ನನಗೆ ಮನೆ ಕಟ್ಟಲು ನೆರವಾಗಿದ್ದಾರೆ. ಈ ಬಾರಿ ಬೈಕನ್ನು ಉಡುಗೋರೆಯಾಗಿ ನೀಡಿದ್ದಾರೆ. ಇದು ನನ್ನ ಜೀವನದಲ್ಲಿ ಮರೆಯಲಾರದ ದಿನವಾಗಿದೆ
ದಿನೇಶ್ ಪಾಣಾಜೆ, ಕಾರು ಚಾಲಕ