Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-09-27 17:15:13 |
Love Marriage: ವ್ರೀನಿ ಖನ್ನಾ ಮತ್ತು ಹಿತೇನ್ ಎಂಟು ವರ್ಷ ಪ್ರೀತಿಸಿದ ನಂತರ ಮದುವೆ ತಯಾರಿ ನಡೆಸಿದರು. ಮದುವೆ ಇನ್ನೇನು ಒಂದು ತಿಂಗಳಿದೆ ಎನ್ನುವಾಗ ಹಿತೇನ್ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ. ಮೆದುಳು ತೀವ್ರವಾಗಿ ಗಾಯಗೊಂಡಿದ್ದರಿಂದ ಕೋಮಾಗೆ (Coma) ಜಾರಿಬಿಟ್ಟ. ವೈದ್ಯರು ಬದುಕುಳಿಯುವುದು ಕಷ್ಟ ಎಂದರು. ಆದರೂ ಅದೃಷ್ಟವಶಾತ್ ವೈದ್ಯೋಪಚಾರ ಮತ್ತು ವ್ರೀನಿಯ ಸತತ ಪ್ರೀತಿ, ಆರೈಕೆಯಲ್ಲಿ 3 ತಿಂಗಳುಗಳ ನಂತರ ಕೋಮಾದಿಂದ ಹೊರಬಂದ. ಈ ವೇಳೆಗೆ ಬರೋಬ್ಬರಿ 30 ಕಿ. ಗ್ರಾಂ ತೂಕ ಕಳೆದುಕೊಂಡಿದ್ದ. ಆದರೆ ಇವನನ್ನೇ ಮದುವೆಯಾಗುವುದು ಎಂದು ವ್ರೀನಿ ಹಠ ತೊಟ್ಟಿದ್ದಳು. ಇವನೊಂದಿಗೆ ಮದುವೆ ಬೇಡ ಎಂದು ಆಕೆಯ ಮನೆಯವರೆಲ್ಲ ಬುದ್ಧಿ ಹೇಳಿದರು. ನಂತರ 2022ರ ಜು. 6ರಂದು ಇವರಿಬ್ಬರ ಮದುವೆ ನಡೆಯಿತು.ನಾಲ್ಕು ಗಂಟೆಗಳ ಹಿಂದೆಯಷ್ಟೇ officialpeopleofindia ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ ಈ ವಿಡಿಯೋವನ್ನು ಈತನಕ ಸುಮಾರು 1.7 ಲಕ್ಷ ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ವ್ರೀನಿ ಮತ್ತು ಹಿತೇನ್ ದಂಪತಿಯನ್ನು ಅಭಿನಂದಿಸಿದ್ದಾರೆ. ವ್ರಿನಿಯ ತಾಳ್ಮೆ ಮತ್ತು ಪ್ರೀತಿಯನ್ನು ಶ್ಲಾಘಿಸಿದ್ದಾರೆ.
ವ್ರೀನಿ ಹಿತೇನ್ ಪಯಣ
ವಿಡಿಯೋ ನೋಡಲು ಕ್ಲಿಕ್ ಮಾಡಿ
ವೈರಲ್ ವಿಡಿಯೋ : ಮದುವೆಗೆ ತಿಂಗಳಿರುವಾಗ ಕೋಮಾಗೆ ಜಾರಿದ ವರ
ತನ್ನ ಹುಡುಗ/ಗಂಡನಿಗಾಗಿ ಹೆಣ್ಣುಮಕ್ಕಳು ಯಾವಾಗಲೂ ಟೊಂಕ ಕಟ್ಟಿ ನಿಲ್ಲುತ್ತಾರೆ ಎಂದಿದ್ದಾರೆ ಒಬ್ಬರು. ಜಗತ್ತಿನಲ್ಲಿ ಪ್ರೀತಿಯೇ ಎಲ್ಲದಕ್ಕಿಂತ ದೊಡ್ಡ ಶಕ್ತಿ. ವೈದ್ಯರೂ ಕೈಚೆಲ್ಲಿದಾಗ ನೀವು ಅವರನ್ನು ಬದುಕಿಸಿಕೊಂಡಿರಿ ಎಂದಿದ್ದಾರೆ ಇನ್ನೊಬ್ಬರು. ಈ ವಿಡಿಯೋ ನೋಡಿ ನಾನು ಅಳುತ್ತಿದ್ದೇನೆ, ಸ್ವಾರ್ಥ ಬಯಸುವ ಅನೇಕರನ್ನು ನೋಡಿದ್ದೇನೆ. ಆದರೆ ನಿಮ್ಮಂಥ ಹೆಣ್ಣುಮಗಳು ನಿಜಕ್ಕೂ ಅಪರೂಪ, ನಿಮಗಿಬ್ಬರಿಗೂ ಒಳಿತಾಗಲಿ ಎಂದಿದ್ದಾರೆ ಮತ್ತೊಬ್ಬರು.ನಿಮ್ಮ ಜಾಗದಲ್ಲಿ ನನ್ನನ್ನು ನಾನು ನಿಲ್ಲಿಸಿಕೊಂಡು ನೋಡಿದೆ, ನನಗರಿವಿಲ್ಲದೇ ನನ್ನ ಕಣ್ಣಿಂದ ನೀರು ಇಳಿಯುತ್ತಿವೆ ಎಂದಿದ್ಧಾರೆ ಒಬ್ಬರು. ನಿಮ್ಮ ಈ ವಿಡಿಯೋ ನೋಡಿ ಮೈನವಿರೆದ್ದಿತು, ತುಂಬಾ ಅಪರೂಪದ ಜೋಡಿ ನಿಮ್ಮದು, ನಿಮ್ಮ ಆರೋಗ್ಯ ಸುಧಾರಿಸಲಿ ಎಂದಿದ್ದಾರೆ ಅನೇಕರು.
Posted by Vidyamaana on 2023-11-10 13:30:58 |
ಪುತ್ತೂರು: ರೈತರೇ ಬೆಳೆದ ಸಾಮಾಗ್ರಿಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಪುತ್ತೂರು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ನ. 11ರ ವರೆಗೆ ದೀಪ ಸಂಜೀವಿನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನ. 9ರಿಂದ ಆರಂಭಗೊಂಡಿರುವ ದೀಪ ಸಂಜೀವಿನಿ ಕಾರ್ಯಕ್ರಮವು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುತ್ತಿದೆ. ಆದ್ದರಿಂದ ಇಲ್ಲಿ ಹಣತೆ, ದೀಪದ ಬತ್ತಿ, ಕ್ಯಾಂಡಲ್, ಕರ್ಪೂರ, ಅಗರಬತ್ತಿ ಮುಂತಾದ ಪೂಜಾ ಸಾಮಾಗ್ರಿಗಳು ರೈತರಿಂದ ನೇರವಾಗಿ ಗ್ರಾಹಕರಿಗೆ ದೊರೆಯಲಿವೆ. ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರ ದಿನ್ ದಯಾಳ್ ಅಂತ್ಯೊದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು, ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ವ-ಸಹಾಯ ಗುಂಪು ಇದರ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2023-04-25 16:26:51 |
ಪುತ್ತೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಪ್ರತಿಷ್ಠಿತ ನರಿಮೊಗರಿನಲ್ಲಿರುವ ಬಿಂದು ಫ್ಯಾಕ್ಟರಿಗೆ ಮಂಗಳವಾರ ಭೇಟಿ ನೀಡಿದರು.
ಬಿಂದು ಫ್ಯಾಕ್ಟರಿಯ ಪ್ರಮುಖರು ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ ಫ್ಯಾಕ್ಟರಿಯ ಕಾರ್ಯಚಟುವಟಿಕೆ ಕುರಿತು ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು
Posted by Vidyamaana on 2023-10-04 22:05:55 |
ಬೆಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ
ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು(Praveen Nettar)ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.
💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*
ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಟ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.ಮೇಲ್ಮನವಿದಾರ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ બેઈ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಪ್ರತ್ಯಕ್ಷವಾಗಿ ಹಾಜರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕಾಣಿಸಬೇಕೇಂದೇನು ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*
ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.ಮೇಲ್ಮನವಿದಾರರು ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಮತ್ತು ಸುಗಮಗೊಳಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳ ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ.
💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*
Posted by Vidyamaana on 2023-12-12 04:48:39 |
ಪುತ್ತೂರು: ಮಾಣಿ ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಹಾಗೂ 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.12 ರಂದು ಮಂಗಳವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 5:00 ವರೆಗೆ ಮಾಡಾವು-ಕಾವು-ಸುಳ್ಯ, 33ಕೆವಿ ಮಾಡಾವು-ಬೆಳ್ಳಾರೆ ಮತ್ತು 33 ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು ವಿದ್ಯುತ್ ಮಾರ್ಗ ಹಾಗೂ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದ 11ಕೆವಿ ದೇರ್ಲ, 11ಕೆವಿ ಮಾದ್ದ ಮತ್ತು 11ಕೆವಿ ಸುಳ್ಯಪದವು ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದ್ದರಿಂದ 110/33/11ಕೆವಿ ಮಾಡಾವು. 33/11ಕೆವಿ ಸುಳ್ಯ, ಬೆಳ್ಳಾರೆ, ಗುತ್ತಿಗಾರು ಮತ್ತು ಕಾವು ವಿದ್ಯುತ್ “ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡಗರ್ಳು ಮತ್ತು 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದ 11ಕೆವಿ ದೇರ್ಲ, 11ಕೆವಿ ಮಾದ್ದ ಮತ್ತು 11ಕೆವಿ ಸುಳ್ಯಪದವು ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ
Posted by Vidyamaana on 2023-05-11 09:09:32 |
ಪುತ್ತೂರು: ವಿಧಾನಸಭಾ ಚುನಾವಣೆಗೆ ಮತದಾನ ನಿನ್ನೆಯಷ್ಟೇ ಮುಕ್ತಾಯಗೊಂಡಿದೆ. ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಉತ್ತಮ ಮತದಾನವಾಗಿದೆ. ಕ್ಷೇತ್ರದ ಜನರು ಮತ್ತು ವಿವಿಧ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಪಕ್ಷೇತರ ಅಭ್ಯರ್ಥಿ ಹಾಗೂ ಅವರ ಹಿಂಬಾಲಕರೂ ಸಹ ಗೆಲುವಿನ ಲೆಕ್ಕಾಚಾರ ಮತ್ತು ಕಾತರದಲ್ಲಿದ್ದಾರೆ.
ಈ ನಡುವೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದು ಅದರಲ್ಲಿ ಅವರು ಮತದಾರರಿಗೆ ಕೃತಜ್ಞತೆ ಅರ್ಪಿಸುವ ಜೊತೆಗೆ ಗೆಲುವು ತಮ್ಮದೇ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಅವರ ಮಾತಿನ ಸಾರಾಂಶ ಇಲ್ಲಿದೆ.., ‘ಒಳ್ಳೆಯ ರೀತಿಯಲ್ಲಿ ಚುನಾವಣೆ ನಡೆದಿದೆ, ಅಲೆ ನಮ್ಮ ಪರವಾಗಿದ್ದು ನಾವು ಸುಮಾರು 25 ಸಾವಿರದಿಂದ 30 ಸಾವಿರ ಅಂತರದಿಂದ ಜಯಭೇರಿ ಬಾರಿಸ್ತೇವೆ. ನಮ್ಮ ಕಾರ್ಯಕರ್ತರಿಗೆ ನನ್ನದೊಂದು ಮನವಿ ಇದೆ, ಯಾರೂ ಕೂಡಾ ವಿಜಯೋತ್ಸವ ಸಂದರ್ಭದಲ್ಲಿ ಬೇರೆ ಪಕ್ಷದವರ ಮನೆಯ ಹತ್ತಿರ ಅವರ ಮನೆಗಳ ಕಾಂಪೌಡ್ ಸಮೀಪ ಪಟಾಕಿ ಹೊಡೆಯುವ ಕೆಲಸ ಮಾಡಬಾರದು, ಅದೇ ರೀತಿ ಅನ್ಯಪಕ್ಷದವನರನ್ನು ನಿಂದಿಸುವ ಅಥವಾ ಅವರಿಗೆ ನೋವು ಉಂಟುಮಾಡುವ ರೀತಿಯಲ್ಲಿ ಯಾರೂ ವರ್ತಿಸಬಾರದು. ಹಿಂದೆ ಏನೇ ಆಗಿರ್ಬಹುದು ಆದರೆ ಈ ಬಾರಿ ಇಂತಹ ಯಾವುದೇ ವರ್ತನೆಗೆ ನೀವು ಅವಕಾಶ ಮಾಡಿಕೊಡಬಾರದು’ ಎಂದು ಅಶೋಕ್ ಕುಮಾರ್ ರೈ ಹೇಳುವ ಮೂಲಕ ಪುತ್ತೂರು ಕ್ಷೇತ್ರದಲ್ಲಿ ಸೌಹಾರ್ದ ರಾಜಕೀಯ ವಾತಾವರಣವನ್ನು ನಿರ್ಮಿಸಿ ಅದನ್ನು ಮುಂದುವರಿಸಿಕೊಂಡು ಹೋಗುವ ಭರವಸೆಯನ್ನು ಮೂಡಿಸಿದ್ದಾರೆ.