ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ತೆಂಗಿನ ಮರದಿಂದ ಬಿದ್ದು ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

Posted by Vidyamaana on 2024-01-22 21:17:53 |

Share: | | | | |


ತೆಂಗಿನ ಮರದಿಂದ ಬಿದ್ದು  ಧರ್ಮಸ್ಥಳ ಮೂಲದ ವಿಶ್ವಾಂಬರನ್ ಮೃತ್ಯು

ಉಳ್ಳಾಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.


ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ದಲ್ಲಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.ಎಂದಿನಂತೆ ಇಂದು ಬೆಳಿಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲುಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ವತಿಯಿಂದ ಬಡ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳ ನೆರವು

Posted by Vidyamaana on 2023-07-23 17:17:55 |

Share: | | | | |


ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ವತಿಯಿಂದ ಬಡ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳ ನೆರವು

ಮಂಜೇಶ್ವರ : ಬಡವು ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ  ಯೋಜನೆಯ 57ನೇ ಸೇವಾ ಕಾರ್ಯವು ಉಪ್ಪಳ ಸಮೀಪದ ಪೈವಳಿಕೆ ಲಾಲ್‌‌ಬಾಗ್ ಬೋಳಂಗಳ ನಿವಾಸಿ  ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದೈನಂದಿನ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಜು 23ರಂದು ನಡೆಯಿತು . ಇವರ ಮನೆಯು ಶೋಚನಿಯಾವಸ್ಥೆಯಲ್ಲಿದ್ದು,  ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ ಅನಾರೋಗ್ಯ ಇನ್ನೊಂದು ಕಡೆ.  ಈ ಪರಿಸ್ಥಿತಿಯಲ್ಲಿ ಕಲ್ಯಾಣಿಯವರಿಗೆ ದಿಕ್ಕು ತೋಚದ ಪರಿಸ್ಥಿತಿ.. ಮೂರು ಮಂದಿಯ ಚಿಕಿತ್ಸೆಯ ವೆಚ್ಚ, ಮನೆಯ ಖರ್ಚು ವೆಚ್ಚ ಹೀಗೆ ಆರ್ಥಿಕವಾಗಿ ನೊಂದ ಕುಟುಂಬಕ್ಕೆ ಸೇವೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಾಯಂಜನಿ ಯುವ ಬಳಗ ಸಂಸ್ಥಾಪಕರಾದ ರಂಜಿತ್ ಕುಮಾರ್, ಅಧ್ಯಕ್ಷರಾದ ಅಜಯ್ ರಾಜ್ ಉಪ್ಪಳ, ಸದಸ್ಯರಾದ ನವೀನ್ ಗುರಿಕಾರ, ನವೀನ್, ಟೀಮ್ ಮಂಜುಶ್ರೀ ತುಳುನಾಡ್ (ರಿ.) ಸಂಸ್ಥೆಯ ಗೌರವಾಧ್ಯಕ್ಷರು ಸದಾಶಿವ ಹೊಸಬೆಟ್ಟು, ಸಂಸ್ಥಾಪಕರು ರಾಜ್ಯ ಘಟಕ ಸಲಹೆಗಾರರು ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸ್ಥಾಪಕ ಅಧ್ಯಕ್ಷರು ಮನೋಜ್ ಕುಲಾಲ್ ಕೊಡಕ್ಕಲ್, ಸಂಸ್ಥಾಪಕರು ರಾಜ್ಯ ಅದ್ಯಕ್ಷರು ವಂಶಿ ಪಂಡಿತ್ ಕಣ್ಣೂರು, ಸಂಸ್ಥಾಪಕರು ರಾಜ್ಯ ಸಮಿತಿ ಪ್ರಚಾರ ಅಧ್ಯಕ್ಷರು ಸಚಿನ್ ಜಿ ಮಣೇಲ್‌ಬೈಲ್, ರಾಜ್ಯ ಸಮಿತಿ ಸದಸ್ಯರಾದ ಶರಣ್ ಜಿ ಮಣೇಲ್‌ಬೈಲ್, ರಮೇಶ್ ಕುಲಾಲ್ ನಾರಾಯಣ ಮಂಗಲ, ಮಹಿಳಾ ಘಟಕದ ಸದಸ್ಯರಾದ ಅಮಿತಾ ಶೆಟ್ಟಿ, ಬಬಿತಾ ಶೆಟ್ಟಿ, ಪೂರ್ಣಿಮ ರಾವ್ ಮುಂತಾದವರು ಉಪಸ್ಥಿತರಿದ್ದರು.

ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

Posted by Vidyamaana on 2023-07-21 23:20:36 |

Share: | | | | |


ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪತ್ರಿಕಾ ಭವನದ ನೇತೃತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಜುಲೈ 22ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಪ್ರಿಯಾ ನಾಯ್ಕ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಎಸ್. ರವಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ ಉಪಸ್ಥಿತರಿರುವರು.

ಇದೇ ಸಂದರ್ಭ ಹಿರಿಯ ಪತ್ರಿಕಾ ವಿತರಕ ಯು. ನಾಗರಾಜ್, ಬಳ್ಳಿ ನೆಕ್ಕಿಲಾಡಿಯ ಸಮಗ್ರ ಸಾವಯವ ಕೃಷಿಕ ಐರಿನ್ ಲೋಬೋ, ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ರೆಹನಾಝ್ ಅವರನ್ನು ಸನ್ಮಾನಿಸಲಾಗುವುದು.

ಬೆಂಗಳೂರು ಅನನ್ಯ ಎಂಟರ್ ಪ್ರೈಸಸ್ ನ ನಟೇಶ್ ಪೂಜಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ್, ಬಿ.ಎಸ್.ಎಫ್. ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

Posted by Vidyamaana on 2024-05-11 22:28:01 |

Share: | | | | |


ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು ತಿಂಗಳ ಹಿಂದೆಯೇ ಮೃತ ಚೈತ್ರ ಗೌಡ ಡೆತ್ ನೋಟ್ ಬರೆದಿದ್ದರು ಎಂದು ತನಿಖೆಯ ವೇಳೆ ಗೊತ್ತಾಗಿದೆ.ಇಂದು ಬೆಳಿಗ್ಗೆ ಸಂಜಯ್ ನಗರದಲ್ಲಿ ಮನೆ ಒಂದರಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಹಾಗೂ ವೃತ್ತಿಯಲ್ಲಿ ವಕೀಲೆಯಾಗಿರುವಂತಹ ರೈತರ ಗೌಡ ಅವರು ಮನೆಯ ಬೆಡ್ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಅವರ ಶವವನ್ನು ರವಾನಿಸಲಾಗಿತ್ತು ಇದೀಗ ಪೊಲೀಸರು ಅವರ ಮನೆಯನ್ನು ಪರಿಶೀಲ ನಡೆಸಿದಾಗ ಈ ಒಂದು ಡೆತ್ ನೋಟ್ ಪ್ರತಿ ಪತ್ತೆಯಾಗಿದೆ.

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ

Posted by Vidyamaana on 2023-11-11 19:55:28 |

Share: | | | | |


ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ


ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ‍್ಸ್‌ನಲ್ಲಿ ಸಂಸ್ಥಾಪಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರವು ನ.10ರಂದು ನೆರವೇರಿತು.


ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಮಾತನಾಡಿ, ನನ್ನ ವಿದ್ಯಾರ್ಥಿ ಜೀವನದಲ್ಲಿಯೇ ಜಿ.ಎಲ್ ಆಚಾರ್ಯ ಜ್ಯವೆಲ್ಲರ‍್ಸ್ ಪುತ್ತೂರಿನ ಪ್ರತಿಷ್ಠಿತ ಜ್ಯುವೆಲ್ಸರ‍್ಸ್ ಎಂಬ ಖ್ಯಾತಿ ಪಡೆದಿತ್ತು. ಅಂದಿನಿಂದ ಇಂದಿನ ತನಕ ವ್ಯವಹಾರದಲ್ಲಿ ನೈತಿಕಯನ್ನು ಇಂದಿಗೂ ಬೆಳೆಸಿಕೊಂಡು ಬಂದಿದ್ದಾರೆ. ಜಿ.ಎಲ್ ಆಚಾರ್ಯ ಕುಟುಂಬದವರು ರೋಟರಿ ಸಂಸ್ಥೆಯ ಅಸ್ಥಿತ್ವಕ್ಕೂ ಬಹಳಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಸಂಸ್ಥಾಪಕರ ದಿನಾಚರಣೆಯು ಅರ್ಥಪೂರ್ಣವಾದ ದಿನವಾಗಿ ಆಚರಿಸಲಾಗುತ್ತಿದೆ. ಅವರ ಕುಟುಂಬವು ಸಮಾಜ ಸೇವೆಗೆ ತ್ಯಾಗ ಮಾಡುವ ಉದ್ದೇಶದಲ್ಲಿದ್ದು ರಕ್ತದಾನ ಶಿಬಿರವು ಸದುದ್ದೇಶದಿಂದ ಆಯೋಜಿಸಿಕೊಳ್ಳಲಾಗಿದೆ ಎಂದರು.

     ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಮಾತನಾಡಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ ಜಿ.ಎಲ್ ಆಚಾರ್ಯ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಬ್ಲಡ್ ಬ್ಯಾಂಕ್‌ನ ಬೆಳ್ಳಿ ಹಬ್ಬ ಸಂಭ್ರಮವನ್ನು ಬಂಗಾರದ ಅಂಗಡಿಯಲ್ಲಿ ಆಚರಿಸಲಾಗುತ್ತಿದೆ. ವರ್ಷದ 365 ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಬ್ಲಡ್ ಬ್ಯಾಂಕ್ ಐದು ತಾಲೂಕಿಗೆ ರಕ್ತ ಸರಬರಾಜ ಮಾಡಲಾಗುತ್ತದೆ ಎಂದರು.

ಸಂಸ್ಥೆಯ ಮ್ಹಾಲಕ ಬಲರಾಮ ಆಚಾರ್ಯ ಮಾತನಾಡಿ, ಸಂಸ್ಥೆಯ ಸಂಸ್ಥಾಪಕರ ದಿನದ ಅಂಗವಾಗಿ ನಮ್ಮ ಸಿಬ್ಬಂದಿ ವರ್ಗದವರೇ ಆಸಕ್ತಿಯಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದಾರೆ. ಮಳಿಗೆ ಎಲ್ಲಾ ಸಿಬ್ಬಂದಿಗಳು ಹಾಗೂ ನಮ್ಮ ಮಕ್ಕಳು ರಕ್ತದಾನ ಮಾಡಲಿದ್ದಾರೆ. ಅಲ್ಲದೆ ಸಂಸ್ಥಾಪಕರ ದಿನದ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಕರಗಳ ಖರೀದಿಗೆ ದೇಣಿಗೆ ನೀಡಲಾಗುವುದು ಎಂದರು.

ರೋಟರಿ ಕ್ಲಬ್ ಕಾರ್ಯದರ್ಶಿ ಸುಜಿತ್ ರೈ, ಜಿ.ಎಲ್ ಆಚಾರ್ಯ ಮಳಿಗೆಯ ಸುದನ್ವ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪಟ್ಟೆ ಶಾಲೆಗೆ ದೇಣಿಗೆ:

ಮಳಿಗೆಯ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ದೇಣಿಗೆ ನೀಡಲಾಗಿದ್ದು ಶಿಕ್ಷಕ ವಿಶ್ವನಾಥರವರು ಚೆಕ್ ಸ್ವೀಕರಿಸಿದರು. ಬಲರಾಮ ಆಚಾರ್ಯ ಸ್ವಾಗತಿಸಿದರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀಕಾಂತ ಆಚಾರ್ಯ ವಂದಿಸಿದರು.

ಸ್ನೇಹಿತನಿಂದಲೇ ಕೊಲೆಯಾದ ಶಿವಮ್ಮ – ಅಮ್ಮನ ದುಡುಕುತನಕ್ಕೆ ಬಲಿಯಾದ ಮಕ್ಕಳು

Posted by Vidyamaana on 2024-01-07 14:01:18 |

Share: | | | | |


ಸ್ನೇಹಿತನಿಂದಲೇ ಕೊಲೆಯಾದ ಶಿವಮ್ಮ – ಅಮ್ಮನ ದುಡುಕುತನಕ್ಕೆ ಬಲಿಯಾದ ಮಕ್ಕಳು

ಹಾಸನ, ಜ.07: ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ(Hassan Mother Children Death). ಪತಿ ಮನೆಯಲ್ಲಿ ಇಲ್ಲದಿದ್ದಾಗ ಮನೆಗೆ ಬಂದಿದ್ದ ಸ್ನೇಹಿತ (Friend) ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಎಂಬ ಭಯಾನಕ ಸತ್ಯ ಬಯಲಾಗಿದೆ. ಪತಿ ಇಲ್ಲದ ವೇಳೆ ಮನೆಗೆ ಬಂದಿದ್ದ ವಿಜಯಪುರ ಮೂಲದ ನಿಂಗಪ್ಪ ಕಾಗವಾಡ ಎಂಬ ವ್ಯಕ್ತಿ ಹಣಕ್ಕಾಗಿ ಶಿವಮ್ಮನನ್ನು ಪೀಡಿಸಿ ಆಕೆ ಹಣ ನೀಡಲು ನಿರಾಕರಿಸಿದಾಗ ಶಿವಮ್ಮ, ಮಕ್ಕಳಾದ ಪವನ್(10), ಸಿಂಚನಾ(8) ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಪೆನ್ಷನ್‌ ಮೊಹಲ್ಲಾ ಪೊಲೀಸರು ಬಂಧಿಸಿದ್ದಾರೆ.ಜ.01ರಂದು ಹಾಸನ ಹೊರವಲಯದ ದಾಸರಕೊಪ್ಪಲಿನ ಮನೆಯೊಂದರಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಿಗೂಡ ರೀತಿಯಲ್ಲಿ ಮೃತಪಟ್ಟಿದ್ದರು. ಬೇಕರಿ ಕೆಲಸಕ್ಕೆ ತುಮಕೂರಿಗೆ ಹೋಗಿದ್ದ ಪತಿ ಮನೆಗೆ ಬಂದು ನೋಡಿದಾಗ ಘಟನೆ ಬಯಲಾಗಿತ್ತು. ಪ್ರಕರಣದಲ್ಲಿ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರು. ಸದ್ಯ ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ. ಗಂಡನಿಲ್ಲದ ವೇಳೆ‌ ಮನೆಗೆ ಬಂದಿದ್ದ ಸ್ನೇಹಿತನೇ ಕೊಲೆ ಮಾಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ರೀಲ್ಸ್ ಸುಂದರಿ ಗೆಳತಿಯನ್ನೇ ಕೊಲೆಗೈದು ತಲೆ‌ ಮರಿಸಿಕೊಂಡಿದ್ದ ಗೆಳೆಯ ಈಗ ಜೈಲು ಸೇರಿದ್ದಾನೆ.ಹೊಸ ವರ್ಷ ಆಚರಿಸಲು ಗೆಳೆಯನನ್ನು ಮನೆಗೆ ಕರಿಸಿ ಕೊಲೆಯಾದ ಮಹಿಳೆ

ಮೃತ ಶಿವಮ್ಮ ಪತಿ ತೀರ್ಥಪ್ರಸಾದ್ ಅವರು ಬಿಜಾಪುರದಲ್ಲಿ ಬೇಕರಿ ಇಟ್ಟಿದ್ದರು. ಈ ವೇಳೆ ಬಿಜಾಪುರ ಮೂಲದ ನಿಂಗಪ್ಪ ಕಾಗವಾಡ ಹಾಗೂ ಶಿವಮ್ಮನ ಸ್ನೇಹ ಬೇಳೆದಿತ್ತು. ಬಿಜಾಪುರದಲ್ಲಿ ಬೇಕರಿ ಲಾಸ್ ಆಗಿದ್ದರಿಂದ ಮುಚ್ಚಿ ವಾಪಸ್ ಬಂದು ತುಮಕೂರಿನ ಬೇಕರಿಯಲ್ಲಿ ಶಿವಮ್ಮ ಪತಿ ತೀರ್ಥ ಕೆಲಸ ಮಾಡುತ್ತಿದ್ದರು. ದೂರವಿದ್ದ ಗಂಡನಿಗೆ ಮರೆಮಾಚಿ ಗೆಳೆಯ ನಿಂಗಪ್ಪನ ಜೊತೆ ಶಿವಮ್ಮ ಸಲುಗೆಯಿಂದಿದ್ದರು. ಕಾರು ಚಾಲಕ ಎಂದು ತನ್ನ ಪತಿಗೆ ಗೆಳೆಯನ ಪರಿಚಯ ಮಾಡಿಕೊಟಿದ್ದರು.


ಹೊಸ ವರ್ಷದಂದು ಗಂಡ ಬೇಕರಿ ಕೆಲಸಕ್ಕೆ ಆಚೆ ಹೋಗಿದ್ದಾನೆಂದು ಹೊಸ ವರ್ಷಾಚರಣೆಗೆ ಶಿವಮ್ಮ ತನ್ನ ಸ್ನೇಹಿತನನ್ನು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ ಮೃತ ಶಿವಮ್ಮ ಹಾಗೂ ಆರೋಪಿ ನಡುವೆ ಹಣಕ್ಕೆ ಜಗಳವಾಗಿದೆ. ಆರೋಪಿ ಹಣ ನೀಡುವಂತೆ ಪೀಡಿಸಿದ್ದಾನೆ. ನಿರಾಕರಿಸಿದಕ್ಕೆ ಕತ್ತು ಹಿಸುಕಿ ಶಿವಮ್ಮ ಕೊಲೆ ಮಾಡಿದ್ದಾನೆ. ಬಳಿಕ ಮಕ್ಕಳಾದ ಸಿಂಚನಾ, ಪವನ್ ಹತ್ಯೆ ಮಾಡಿ ಅಡುಗೆ ಸಿಲಿಂಡರ್ ಪೈಪ್ ತೆಗೆದು ಶಿವಮ್ಮನ ಮೊಬೈಲ್, ತಾಳಿ ಸರದೊಂದಿಗೆ ಎಸ್ಕೇಪ್ ಆಗಿದ್ದಾನೆ. ಮರು ದಿನ ಶಿವಮ್ಮ ಪತಿ ಮನೆಗೆ ಬಂದಾಗ ತಾಯಿ-ಮಕ್ಕಳ ಶವ ಕಂಡು ಶಾಕ್ ಆಗಿದ್ದಾರೆ. ಸದ್ಯ ಕೊಲೆ ಆರೋಪಿ ಅರೆಸ್ಟ್ ಆಗಿದ್ದು ಜೈಲು ಸೇರಿದ್ದಾನೆ



Leave a Comment: