Posted by vidyamaana on 2024-07-08 20:09:58 |
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.
Posted by Vidyamaana on 2024-03-31 20:24:30 |
ಬೆಂಗಳೂರು : ನಜ್ಮಾ ನಜೀರ್ ಚಿಕ್ಕನೇರಳೆ ಅವರು ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.ಈ ನಡುವೆ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಖುದ್ದು ಕಾಂಗ್ರೆಸ್ನ ಹಲವು ಮಂದಿ ವ್ಯಂಗ್ಯವಾಡುತ್ತಿದ್ದಾರೆ.ಈ ಹಿಂದೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಜೆಡಿಎಸ್ ವಕ್ತರಾಗಿದ್ದ ವೇಳೇಯಲ್ಲಿ ನಜ್ಮಾ ಅವರು ಕೈ ಅನ್ನು ಹಿಗ್ಗಾಮುಗ್ಗ ಜಾಡಿಸಿದ್ದು ಅತಿ ಹೆಚ್ಚು, ಈಗ ಅವರೇ ಕಾಂಗ್ರೆಸ್ಗೆ ಸೇರುತ್ತಿರುವುದು ಅವಕಾಶವಾದಿ ರಾಜಕಾರಣ ಎನ್ನುತ್ತಿದ್ದಾರೆ.
Posted by Vidyamaana on 2023-12-25 04:40:12 |
ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಬಸಂತಕೋಡಿ ನಿವಾಸಿ ಪದ್ಮಾವತಿ ತ್ಯಾಂಪಣ್ಣ ಪೂಜಾರಿ
(102 ವ) ಅವರು ವಯೋಸಹಜ ಡಿ. 23 ರಂದು ಸ್ವ ಗೃಹದಲ್ಲಿ ನಿಧನ ಹೊಂದಿದರು
ಚುನಾವಣೆಯ ಪ್ರತಿ ಸಂದರ್ಭ ಇವರು ಸತತವಾಗಿ ಮತದಾನ ಮಾಡುತ್ತಿದ್ದರು. ಬಲ್ನಾಡು ಗ್ರಾಮ ಗ್ರಾಮ ಪಂಚಾಯತ್ ವತಿಯಿಂದ ಇತ್ತೀಚೆಗೆ ಇವರನ್ನು ಗೌರವಿಸಿ ಸನ್ಮಾನ ಮಾಡಲಾಗಿದೆ.
ಮೃತರು ಮಕ್ಕಳಾದ ಪುತ್ತೂರು ಸರಕಾರಿ ಆಸ್ಪತ್ರೆಯ ನಿವೃತ್ತ ವಾಹನ ಚಾಲಕ ನಾರಾಯಣ ಪೂಜಾರಿ ಬಸಂತಕೋಡಿ, ಮಂಗಳೂರಿನಲ್ಲಿ ಉದ್ಯಮಿ ಮೋಹನ್ ಬಲ್ನಾಡ್ ಮತ್ತು ಪುತ್ರಿ ಹರಿಣಿ ಎಲ್ಯಣ್ಣ ಪೂಜಾರಿ ಪೆರಿಯಾತ್ತೋಡಿ ಅವರನ್ನು ಅಗಲಿದ್ದಾರೆ.
Posted by Vidyamaana on 2024-04-07 11:17:04 |
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲ 2023 - 24ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 146.01 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಈ ಮೂಲಕ ಸತತ 13ನೇ ವರ್ಷವೂ ಆದಾಯ ಗಳಿಕೆಯಲ್ಲಿ ರಾಜ್ಯದ ಮೊದಲ ದೇಗುಲವಾಗಿ ಹೊರಹೊಮ್ಮಿದೆ.ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕಳೆದ ಹಣಕಾಸು ವರ್ಷದಲ್ಲಿ 123 ಕೋಟಿ ರೂಪಾಯಿ ಆದಾಯ ಬಂದಿದ್ದು, ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ಸ್ತ್ರೀ ಶಕ್ತಿ ಯೋಜನೆ ಜಾರಿಗೆ ತಂದ ಬಳಿಕ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಕುಕ್ಯೆ ಸುಬ್ರಹ್ಮಣ್ಯವೂ ಸೇರಿದಂತೆ ರಾಜ್ಯದ ಹಲವು ದೇಗುಲಗುಳ ಆದಾಯ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.
Posted by Vidyamaana on 2024-04-14 16:09:20 |
ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನ 2023-24ನೇ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ದಾಖಲಾಗಿರುವ ಒಟ್ಟು 10 ವಿದ್ಯಾರ್ಥಿಗಳಲ್ಲಿ 7 ಮಂದಿ ಪ್ರಥಮ, 2 ಮಂದಿ ದ್ವಿತೀಯ ಹಾಗೂ ಓರ್ವ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ-1, ಪ್ರಥಮ ಶ್ರೇಣಿಯಲ್ಲಿ 21, ದ್ವಿತೀಯ ಶ್ರೇಣಿಯಲ್ಲಿ22 ಹಾಗೂ 11 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ ಒಟ್ಟು 5 ವಿದ್ಯಾರ್ಥಿಗಳಲ್ಲಿ ಇಬ್ಬರು ಪ್ರಥಮ, ಒಬ್ಬರು ದ್ವಿತೀಯ ಹಾಗೂ ಒಬ್ಬರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರುತ್ತಾರೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಕೆ.ಹೇಮಲತಾ ಗೋಕಲ್ ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಣಿಜ್ಯಶಾಸ್ತ್ರ/ಕಲಾ ವಿಭಾಗ
ದಿಶಾ-517, ಆಯಿಷಾತುಲ್ ಮಿಶ್ರಿಯಾ-479, ಹೇಮಂತ್ ಗೌಡ-459, ಚೈತಾಲಿ-447, ಗೌಡಪ್ಪ ಗೌಡ-425, ದರ್ಶನ್ ಸುಬ್ಬಯ್ಯ-413, ಧನುಷ್-410, ಧನುಷ್ ಪುಣಚ-410, ಮಹಮ್ಮದ್ ಯಝೀದ್-390, ಇಹ್ಶಾನ್-387, ಲಿಂಕಿತ್ ತಿಮ್ಮಯ್ಯ-386, ನಂದನಾ ಜೆ-352, ಮಹಮ್ಮದ್ ತಹಝ್ ಪಿ.-350, ಸಂಕೇತ್ ಪೂಜಾರಿ-349, ಮಹಮ್ಮದ್ ತಲ್ಹತ್-339, ಕುಮಾರಸ್ವಾಮಿ-335, ಶಂಬ್ರೀನಾ-327, ಯಶ್ವಂತ್-324, ನಿತಿನ್-320, ಲಿತಿಶ್-320.
ವಿಜ್ಞಾನ ಟ್ಯೂಷನ್ ವಿಭಾಗ :
ಅಶ್ವಿಜ-497, ಆಯಿಷಾ ಮುಶ್ರಿಫಾ-488, ಫಾತಿಮತ್ ಅಫೀದಾ-484, ಜೀವಿತಾ-450, ಇಬ್ರಾಹಿಂ ಅನಾಝ್-435, ಮಹಮ್ಮದ್ ರಿಝ್ವಾನ್-426, ಮಹಮ್ಮದ್ ಅನ್ಸಫ್-402, ಮಹಮ್ಮದ್ ಅಕ್ಮಲ್-337
Posted by Vidyamaana on 2023-10-11 16:41:53 |
ಬೆಂಗಳೂರು: ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು ಎಂದರು.
ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.
ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.
ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋದ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ” ಎಂದು ತಿಳಿಸಿದರು.
Posted by Vidyamaana on 2023-12-18 12:23:08 |
ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರುಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ.
ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡುವ ಕನಸು ಕಾಣಬೇಕು. ಕನಸೇ ಕಾಣದಿದ್ದರೆ ನನಸು ಮಾಡುವುದಾದರೂ ಏನನ್ನಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ವಿದ್ಯೆ ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು,ದುಶ್ಚಟಗಳಿಗೆ ಯಾರೂ ಬಲಿಯಾಗಬಾರದು. ತಂದೆ ತಾಯಿಯ ಹೆಸರನ್ನು ಕೆಡಿಸುವ ಕರಲಸವನ್ನು ಎಂದೂ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್
ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡುವ ಉದ್ದೇಶ ಸರಕಾರಕ್ಕಿದ್ದು ,ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡಲಾಗುವುದು ಎಂದು ಹೇಳಿದರು.
15 ತಿಂಗಳಲ್ಲಿ 24 ಗಂಟೆಯೂ ನೀರು
ಮುಂದಿನ 15 ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ದಿನದ 24 ಗಂಟೆ ನೀರು ವಿತರಣೆಯಾಗಲಿದೆ ಎಂದು ಶಾಸಕರು ತಿಳಿಸಿದರು.