Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2023-06-22 07:55:19 |
ಪುತ್ತೂರು: ನಗರದ ಮುಖ್ಯರಸ್ತೆಯಲ್ಲಿ ಪ್ರತಿದಿನ ಟ್ರಾಫಿಕ್ ಜಾಮ್. ಇದಕ್ಕೊಂದು ಶಾಶ್ವತ ಪರಿಹಾರ ನೀಡಲು ಸಾಧ್ಯವೇ ಇಲ್ಲವೇ ಎಂಬ ಪ್ರಶ್ನೆ ಆಗಾಗ ಸಾರ್ವಜನಿಕರಿಂದ ವ್ಯಕ್ತವಾಗುತ್ತಲೇ ಇದೆ. ಕನಿಷ್ಠ ಪಕ್ಷ, ಟ್ರಾಫಿಕ್ ದಟ್ಟಣೆಗೆ ಕಾರಣವಾಗುವ ತಡೆಗಳನ್ನಾದರೂ ನಿವಾರಿಸಿ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.
ಟ್ರಾಫಿಕ್ ದಟ್ಟಣೆಗೆ ಕಾರಣವಾಗುವ ಹಲವು ಅಡೆ - ತಡೆಗಳಲ್ಲಿ ಅನಧಿಕೃತ ಬಸ್ ನಿಲ್ದಾಣದ ಪಾತ್ರವೂ ದೊಡ್ಡದಿದೆ. ಬಸ್ ನಿಲ್ದಾಣ ಇಲ್ಲದೇ ಇರುವ ಕೆಲ ಆಯಕಟ್ಟಿನ ಪ್ರದೇಶಗಳಲ್ಲಿ ಪ್ರಯಾಣಿಕರನ್ನು ಹತ್ತಿಸಲು ಬಸ್ ನಿಲ್ಲಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗಿ ಸಾರ್ವಜನಿಕರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ.
ಪುತ್ತೂರು ಮುಖ್ಯರಸ್ತೆಯ ಹಲವು ಕಡೆಗಳಲ್ಲಿ ಬಸ್ ಗಳನ್ನು ಹೀಗೆ ಅನಧಿಕೃತವಾಗಿ ನಿಲ್ಲಿಸುವ ಪರಿಪಾಠ ಬೆಳೆಸಿಕೊಂಡು ಬರಲಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ಪೊಲೀಸ್ ಸ್ಟೇಷನ್ ಪಕ್ಕದಲ್ಲೇ ಇರುವ ಶ್ರೀಧರ್ ಭಟ್ ಬ್ರದರ್ಸ್ ಮಳಿಗೆ ಮುಂಭಾಗ.
ಇದು ಮೂರು ರಸ್ತೆ ಸೇರುವ ಪಟ್ಟಣದ ಆಯಕಟ್ಟಿನ ಪ್ರದೇಶ. ದಿನವಿಡೀ ಜನನಿಬಿಡ, ವಾಹನ ದಟ್ಟಣೆಯ ರಸ್ತೆ. ಪುತ್ತೂರು - ಮಂಗಳೂರು, ಪುತ್ತೂರು - ವಿಟ್ಲ, ಪುತ್ತೂರು - ಉಪ್ಪಿನಂಗಡಿ, ಧರ್ಮಸ್ಥಳ ಹೀಗೆ ನಾನಾ ಕಡೆಗಳಿಗೆ ಹೋಗುವ ವಾಹನಗಳು ಈ ರಸ್ತೆಯಾಗಿ ಚಲಿಸುತ್ತಿರುತ್ತವೆ. ಇನ್ನೊಂದೆಡೆ ಬೈಪಾಸ್ ರಸ್ತೆಯಾಗಿ ಬರುವ ವಾಹನಗಳು ಪೇಟೆಯನ್ನು ಸಂಪರ್ಕಿಸುವುದು ಇದೇ ರಸ್ತೆಯಿಂದಾಗಿ. ಪರ್ಲಡ್ಕ ರಸ್ತೆಯಾಗಿ ಬರುವ ಬಸ್, ವಾಹನಗಳಿಗೂ ಇದೇ ರಸ್ತೆ ಅನಿವಾರ್ಯ. ಇಷ್ಟು ವಾಹನ ದಟ್ಟಣೆಯಿರುವ ರಸ್ತೆಯಲ್ಲಿ ಬಸ್ಸೊಂದು ಕೆಲ ನಿಮಿಷ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದರೆ ಟ್ರಾಫಿಕ್ ಸಮಸ್ಯೆ ಹೇಗೆ ಬಿಗಡಾಯಿಸಬಹುದು ನೀವೇ ಊಹಿಸಿ.
ಪ್ರತಿದಿನ ಈ ಪ್ರದೇಶದಲ್ಲಿ ಬಸ್ ನಿಲ್ಲಿಸುತ್ತಿರುವುದರಿಂದ, ಈಗ ಜನರು ಇದೇ ಜಾಗದಲ್ಲಿ ಬಸ್ ಕಾಯುತ್ತಿರುವ ದೃಶ್ಯ ದಿನನಿತ್ಯ ಕಾಣಲು ಸಾಧ್ಯ. ಸ್ವಲ್ಪವೇ ಸ್ವಲ್ಪ ಮುಂದೆ ಹೋದರೂ, ಅಧಿಕೃತವಾದ ಬಸ್ ನಿಲ್ದಾಣ ಇದೆ. ಇದನ್ನು ಬಿಟ್ಟು ಸಂಚಾರ ದಟ್ಟಣೆಗೆ ಸಮಸ್ಯೆ ಉಂಟು ಮಾಡುವುದು ಎಷ್ಟು ಸರಿ? ಸಂಬಂಧಪಟ್ಟವರು ಗಮನ ಹರಿಸಬೇಕು.
Posted by Vidyamaana on 2023-09-23 19:29:32 |
ಇರ್ದೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ.
ಪದರಂಜ ನಿವಾಸಿ ರಾಮಣ್ಣ ಪೂಜಾರಿ ಮೃತಪಟ್ಟ ದುರ್ದೈವಿ.
ಸೆ. 23ರಂದು ಮನೆ ಬಳಿಯ ತೆಂಗಿನ ಮರ ಹತ್ತುವ ಸಂದರ್ಭ ಘಟನೆ ನಡೆದಿದೆ. ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ, ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ.
Posted by Vidyamaana on 2024-03-30 04:52:56 |
ಪುತ್ತೂರು: ಪ್ರಖ್ಯಾತ ಡಾಕ್ಟರ್ ಒಬ್ಬರಿಗೆ ಕರೆ ಮಾಡಿ ಆನ್ಲೈನ್ ಮೂಲಕ 16 ಲಕ್ಷಕ್ಕೂ ಅಧಿಕ ಹಣ ದೋಚಿದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.ಪುತ್ತೂರಿನ ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳದವರು.ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-05-03 10:05:42 |
ಪುತ್ತೂರು: ನಾನು ರಾಜಕೀಯಕ್ಕೆ ಬಂದ ಮೇಲೆ ಯಾರನ್ನೂ ವೈಯುಕ್ತಿಕವಾಗಿ ದೂಷಿಸುವ ಕೆಲಸವನ್ನು ಮಾಡಿಲ್ಲ, ಈಗಲೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು ಕ್ಷೆತ್ರವನ್ನು ಅಭಿವೃದ್ದಿ ಮಡುವುದಕ್ಕೋಸ್ಕರವಾಗಿದ್ದು ನಾನು ಮಾಡಿದ ಭಾಷಣವನ್ನು ತಿರುಚುವ ಕೆಲಸವನ್ನು ಬಿಜೆಪಿಗರು ತೆರೆಮರೆಯಲ್ಲಿ ಮಾಡುತ್ತಿದ್ದು ನೀವು ಆ ಕೆಲಸವನ್ನು ಬಿಟ್ಟು ನೀವು ಅಭಿವೃದ್ದಿ ಕೆಲಸ ಮಡಿದ್ದರೆ ಅದನ್ನು ಚರ್ಚಿಸುವ ಬನ್ನಿ ಎಂದು ಬಿಜೆಪಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.
ವಿಟ್ಲದ ಚಂದಳಿಕೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ ಕಳೆದ ಐದು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಕಳೆದ ಚುನಾವಣೆಯ ಸಮಯದಲ್ಲಿ ಬಿಜೆಪಿ ನೀಡಿದ ಆಶ್ವಾಸನೆ ಈಡೇರಿಸಿಲ್ಲ. ಪುತ್ತೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು ಮಾಡಿಲ್ಲ, ಪುತ್ತೂರಿನಲ್ಲಿ ರಿಂಗ್ ರೋಡ್ ಮಾಡುವುದಾಗಿ ಹೇಳಿದ್ದರು, ಬ್ರಹ್ಮನಗರದಲ್ಲಿ ಫ್ಲ್ಯಾಟ್ ನಿರ್ಮಿಸಿವುದಾಗಿ ಹೇಳಿದ್ದರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುವುದಾಗಿ ಹೇಳಿದ್ದರು, ವಿಟ್ಲದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು, ಉಪ್ಪಿನಂಗಡಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಾಗಿ ಮಾತುಕೊಟ್ಟಿದ್ದರು, ಮನೆ ಇಲ್ಲದ ಬಡವರಿಗೆ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು ಇದರಲ್ಲಿ ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದ ಅಶೋಕ್ ರೈ ರಸ್ತೆಗೆ ಅಷ್ಟು ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಫ್ಲೆಕ್ಸ್ ಹಾಕಿಸಿ ಕಳಪೆ ಕಾಮಗಾರಿ ನಡೆಸಿ ಅದರ ಮೂಲಕ ೬೦ % ಕಮಿಷನ್ ಹೊಡೆದದ್ದನ್ನು ಬಿಟ್ಟರೆ ಏನೂ ಮಾಡಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ವರ್ಷಕ್ಕೆ ನೂರಾರು ಮನೆಗಳನ್ನು ಬಡವರಿಗೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮನೆ ನೀಡಿಲ್ಲ. ಶಾಲಾ ಮಕ್ಕಳ ಶೂ ಭಾಗ್ಯ, ಕ್ಷೀರ ಭಾಗ್ಯ, ಮೊಟ್ಟೆ ಭಾಗ್ಯ , ಇಂದಿರಾ ಕ್ಯಾಂಟೀನ್ ಎಲ್ಲವನ್ನೂ ಬಂದ್ ಮಡಿದ್ದೇ ಬಿಜೆಪಿ ಸರಕಾರದ ಸಾಧನೆಯಾಗಿದೆ. ಕಾಂಗ್ರೆಸ್ ಸರಕಾರ ಬಡವರಿಗೆ ನೆರವು ನೀಡುವ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು ಅದೆಲ್ಲವನ್ನೂ ಬಿಜೆಪಿ ಕೈ ಬಿಟ್ಟು ಕೇವಲ ಭಾಷಣದಲ್ಲಿ ಮಾತ್ರ ಬಡವರ ಬಾಯಿಗೆ ಸಿಹಿ ಹಂಚುವ ಕೆಲಸವನ್ನು ಮಾಡಿದೆ ಎಂದು ಅಶೋಕ್ ರೈ ಹೇಳಿದರು. ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ ಎಸ್ ಮಹಮ್ಮದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Posted by Vidyamaana on 2023-12-07 09:32:53 |
ಪುತ್ತೂರು: ಪುತ್ತೂರು ನಗರದ ಬೈಪಾಸ್ ನಲ್ಲಿರುವ ಖಾಸಗಿ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಡಿ. 06 ಬುಧವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದ್ದು ಇದರಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರ ಪುತ್ರ ಬಿಪಿನ್ ರವರ ಕಾರು,ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ್ ಗೌಡ ಬೆಳ್ಳಿಪ್ಪಾಡಿಯವರ ಅಲ್ಲೋ ಕಾರು ಸೇರಿದೆ.
ಬಸ್ ನ್ನು ಬೆಳ್ತಂಗಡಿ ಮೊಗ್ರು ಮೂಲದ ಜನಾರ್ದನ ಎಂಬವರು ಚಲಾಯಿಸುತ್ತಿದ್ದರು. ಬಸ್ಸಿನಲ್ಲಿ ಹಲವು ಮಕ್ಕಳು ಪ್ರಯಾಣಿಸುತ್ತಿದ್ದು ಅದೇ ಬಸ್ಸಿನ ಮಾಲಕ ಪಾನಮತ್ತನಾಗಿದದ್ದು ಆತಂಕಕಾರಿ ವಿಚಾರವಾಗಿದೆ.
ಸರಿ ಸುಮಾರು 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಕಾರುಗಳು ಜಖಂ ಆಗಿದೆ.ಅದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಲು ಅವರು ರಸ್ತೆಗಿಂತ ತುಸು ದೂರದಲ್ಲಿ ಶಾಲೆಯ ಸಮೀಪ ಕಾರು ನಿಲ್ಲಿಸಿದ್ದರು. ಮಕ್ಕಳು ಕಾರಿಗೆ ಹತ್ತಿದ ಕೆಲವೇ ಕ್ಷಣದಲ್ಲಿ ಶಾಲಾ ಬಸ್ಸು ಬಂದು ಕಾರಿನ ಹಿಬ್ಬಂದಿಗೆ ಢಿಕ್ಕಿ ಹೊಡೆದಿದೆ. ಮಕ್ಕಳು ಕಾರಿಗೆ ಹತ್ತಲು ಬಂದ ದಾರಿಯಲ್ಲೆ ಬಂದ ಬಸ್ಸು ಢಿಕ್ಕಿ ಹೊಡೆದಿದ್ದು, ಬಸ್ಸು ಕೆಲವೇ ಸೆಕೆಂಡ್ ಲೇಟಾಗಿ ಬಂದಿದರಿಂದ ಮಕ್ಕಳು ಆಪಾಯದಿಂದ ಪಾರಾದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತ ನಡೆದ ಬಳಿಕವು ಬಸ್ಸನ್ನು ನಿಲ್ಲಿಸದ ಚಾಲಕ ಯದ್ವಾತದ್ವಾ ಬಸ್ಸು ಚಲಾಯಿಸಿದ್ದು, ಆಶ್ಮಿ ಕಂಫರ್ಟ್ಸ್ ನಿಂದ ಬರುತ್ತಿದ್ದ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರ ಪುತ್ರ ಬಿಪಿನ್ ಚಲಾಯಿಸುತ್ತಿದ್ದ ಹೋಂಡಾ ಸಿಟಿ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ. ಬಸ್ಸು ಮುರದ ಸಮೀಪವು ವಾಹನವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಸ್ಥಳೀಯರು ಬಸ್ಸನ್ನು ತಡೆದು ಚಾಲಕನನ್ನು ಹಿಡಿದು ಸಂಚಾರಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.ಬಸ್ ನಲ್ಲಿ ಮಕ್ಕಳಿದ್ದ ಕಾರಣ ಅವರನ್ನು ಮನೆಗೆ ಬಿಡುವ ನಿಟ್ಟಿನಲ್ಲಿ ಪೊಲೀಸರು ಬಸ್ಸನ್ನು ಅದೇ ವಿದ್ಯಾಸಂಸ್ಥೆಯ ಬೇರೆ ಚಾಲಕನ ಕೈಯಲ್ಲಿ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕಿಡಾದ ಅಲ್ಲೋ ಕಾರು ಹಾಗೂ ಹೋಂಡಾ ಸಿಟಿ ಕಾರನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. .ಶಕುಂತಳಾ ಶೆಟ್ಟಿಯವರ ಪುತ್ರ ಬಿಪಿನ್ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Posted by Vidyamaana on 2023-06-19 11:25:58 |
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಜೂ.21 ಬುಧವಾರ ರೋಟರಿ ಬ್ಲಡ್ಕ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆಯ ಚೆಯರ್ ಮ್ಯಾನ್ ಡಾ.ಭಾಸ್ಕರ ಎಸ್. ತಿಳಿಸಿದ್ದಾರೆ.
ಜೂ 19 ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 2500 ಚದರ ಅಡಿ ವಿಸ್ತೀರ್ಣ ದಲ್ಲಿ ಆಸ್ಪತ್ರೆ ಕಾರ್ಯಾಚರಿಸಲಿದ್ದು, ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈಗಾಗಲೇ ಉಡುಪಿ ಪ್ರಸಿದ್ಧ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಅವರೊಂದಿಗೆ ಒಪ್ಪಂದ ಮಾಡಲಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ತೆಯೊಂದಿಗೆ ದಿ ರೋಟರಿ ಫೌಂಡೇಶನ್ ಜರ್ಮನಿಯ ಪಾಸ್ ಪೋರ್ಟ್ಕ್ಲಬ್, ಅಮೇರಿಕಾದ ಫ್ಲೋರಿಡಾದ ಟೆಂಪನೋನ್ ಕ್ಲಬ್, ರೋಟರಿ ಜಿಲ್ಲೆ 3180, 3150, ರೋಟರಿ ಕ್ಲಬ್ ಪುತ್ತೂರು ಸಿಟಿ, ಇನ್ನರ್ ವೀಲ್ ಕ್ಲಬ್ ಪಾಲುದಾರರಾಗಿ ಸೇರಿಕೊಂಡಿದ್ದಾರೆ. ಈ ಕಣ್ಣಿನ ಆಸ್ಪತ್ರೆ ಅತ್ಯಾಧುನಿಕ ಮೋಡ್ಯುಲರ್ ಒ.ಟಿ ಯನ್ನು ಹೊಂದಿದ್ದು, ಎಲ್ಲಾ ರೀತಿಯ ಆಧುನಿಕ ಮತ್ತು ಸುಸಜ್ಜಿತ ಸೌಲಭ್ಯಗಳನ್ನು ಹೊಂದಿದ್ದು, ರೋಟರಿ ಕ್ಲಬ್ಗಳು ನಡೆಸುವ ಕಣ್ಣಿನ ಶಿಬಿರದಲ್ಲಿ ಪಾಲ್ಗೊಂಡವರಿಗೆ ಉಚಿತವಾಗಿ ತಪಾಸಣೆ, ಚಿಕಿತ್ಸೆಗಳನ್ನು ನಡೆಸಲಾಗುವುದು. ಅಪೇಕ್ಷೆ ಪಟ್ಟ ರೋಗಿಗಳಿಗೆ ಪಾವತಿ ಆಧಾರಿತ ಸೇವೆಗಳನ್ನೂ ಒದಗಿಸಲಾಗುವುದು. ಮುಂದಿನ ಒಂದೂವರೆ ತಿಂಗಳಲ್ಲಿ ಆಸ್ಪತ್ರೆ ಸೇವೆಗೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.ಆಸ್ಪತ್ರೆಯ ಉದ್ಘಾಟನೆಯನ್ನು ರೋಟರಿ ಅಂತರಾಷ್ಟ್ರೀಯ ನಿರ್ದೇಶಕ ಮಹೇಶ್ ಕೋಟ್ ಬಾಗಿ ನೆರವೇರಿಸಲಿದ್ದು, ಬಳಿಕ ಮಹಾವೀರ ವೆಂಚುರ್ನಲ್ಲಿ ನಡೆಯುವ ಸಮಾರಂಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಲಿದ್ದಾರೆ. ರೋಟರಿ ಜಿಲ್ಲಾ 3181 ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮೋಡ್ಯುಲರ್ ಒಟಿಯನ್ನು ಉದ್ಘಾಟಿಸುವರು. ವಿಶ್ವ ರೋಟರಿ ನ್ಯಾಷನಲ್ ರೋಟರ್ಯಾಕ್ಟ್ ಚೆಯರ್ ಮ್ಯಾನ್ ರವಿ ವದೈಮಾಣಿ ಡೇ ಕೇರ್ ಸೆಂಟರನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರೋಟರಿ ಫೌಂಡೇಶನ್ ಚೆಯರ್ ಮ್ಯಾನ್ ಡಾ.ಕೆ.ಸೂರ್ಯನಾರಾಯಣ, ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಕೆ., ರೋಟರಿ ಜಿಲ್ಲಾ 3181 ವಲಯದ ಎ.ಜಗಜೀವನ್ ದಾಸ್ ರೈ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಚೆಯರ್ ಮ್ಯಾನ್ ಉಮಾನಾಥ್ ಪಿ.ಬಿ., ಕಾರ್ಯದರ್ಶಿ ಡಾ.ಶ್ರೀಪ್ರಕಾಶ್, ಪ್ರಸಾದ್ ನೇತ್ರಾಲಯದ ಡಾ. ವಿಕ್ರಂ ಜೈನ್, ಝೇವಿಯರ್ ಡಿ’ಸೋಜಾ ಉಪಸ್ಥಿತರಿದ್ದರು