ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಬೈಕ್ ಗೆ ಡಿಕ್ಕಿಹೊಡೆದ ಬೋಲೆರೊ ವಾಹನ: ಬಾಲಕಿ ಅನರ್ಘ್ಯ ಮೃತ್ಯು

Posted by Vidyamaana on 2024-07-28 06:45:09 |

Share: | | | | |


ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಬೈಕ್ ಗೆ ಡಿಕ್ಕಿಹೊಡೆದ ಬೋಲೆರೊ ವಾಹನ: ಬಾಲಕಿ ಅನರ್ಘ್ಯ ಮೃತ್ಯು

ಬೆಳ್ತಂಗಡಿ :ಮದ್ಯದ ಅಮಲಿನಲ್ಲಿ ಬೊಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಜಾಡೇ ಸೀಟು ಬಳಿ ಈ ಅಪಘಾತ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮುಂಜಾಡೇ ಸೀಟು ಬಳಿ ಈ ಒಂದು ಘಟನೆ ನಡೆದಿದೆ ತಲೆ ಮೇಲೆ ಬುಲೆರೋ ವಾಹನ ಹರಿದಿದ್ದರಿಂದ ಅನರ್ಘ್ಯ (13) ಬಾಲಕಿ ಸಾವನ್ನಪ್ಪಿದ್ದಾಳೆ.

ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

Posted by Vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ

Posted by Vidyamaana on 2023-12-14 20:18:19 |

Share: | | | | |


ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ

ಬೆಳಗಾವಿ: ಬೆಳಗಾವಿ ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣಸೌಧದ (Suvarna soudha) ಬಳಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ನಡುವೆ ಮದ್ಯ ಪ್ರಿಯರು ಕೂಡ ಪ್ರತಿಭಟನೆ ನಡೆಸಿದ್ದು, ಇವರ ವಿವಿಧ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ (Santosh l

non

) ಸುಸ್ತಾಗಿದ್ದಾರೆ.


ಸುವರ್ಣಗಾರ್ಡನ್ ಟೆಂಟ್ ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, "ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ" ಎಂಬ ಘೋಷವಾಕ್ಯದಡಿ ಹೋರಾಟ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಪ್ರತಿಭಟನಾನಿರತರ ಸಮಸ್ಯೆ ಆಲಿಸಿದರು. ಈ ವೇಳೆ ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ವರಿಗೊಳಗಾಗಿದ್ದಾರೆ.


ಮದ್ಯಪ್ರಿಯರ ಬೇಡಿಕೆಗಳೇನು?


• ಕುಡುಕ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು


• ಮದ್ಯ ಮಾರಾಟದಿಂದ ಬರುವ ಆದಾಯದ ಶೇ. 10 ರಷ್ಟು ಮೀಸಲಿಡಬೇಕು


• ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು


• ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು


• ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು


• ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು


• ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು


• ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು


• ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು


• ಬಾರ್‌ಗಳ ಬಳಿ ಆಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು


• ಮದ್ಯಪ್ರಿಯರ ಭವನ ಸ್ಥಾಪಿಸಬೇಕು


ಹೀಗೆ ವಿವಿಧ ಬೇಡಿಕೆಗಳನ್ನು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

ಮುಸ್ಲಿಂ ಮಹಿಳೆಯೊಂದಿಗೆ ಹಿಂದು ವ್ಯಕ್ತಿ; ಹೋಟೆಲ್‌ಗೆ ನುಗ್ಗಿ ಥಳಿಸಿದ ಯುವಕರು

Posted by Vidyamaana on 2024-01-10 20:27:54 |

Share: | | | | |


ಮುಸ್ಲಿಂ ಮಹಿಳೆಯೊಂದಿಗೆ ಹಿಂದು ವ್ಯಕ್ತಿ; ಹೋಟೆಲ್‌ಗೆ ನುಗ್ಗಿ ಥಳಿಸಿದ ಯುವಕರು

ಹಾವೇರಿ: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಹಿಂದು ವ್ಯಕ್ತಿ ಮೇಲೆ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ (Assault Case) ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ತಮ್ಮ ಕೋಮಿನ ಮಹಿಳೆಯೊಂದಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕರ ಗುಂಪು, ಹೋಟೆಲ್‌ಗೆ ನುಗ್ಗಿ ಪುರುಷನ ಜತೆಗೆ ಮಹಿಳೆಯನ್ನೂ ಹಿಗ್ಗಾಮುಗ್ಗಾ ಥಳಿಸಿದೆ.


ಹಾನಗಲ್‌ 4ನೇ ಕ್ರಾಸ್ ಬಳಿಯ ಖಾಸಗಿ ಹೊಟೇಲ್‌ನಲ್ಲಿ ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ವ್ಯಕ್ತಿ ಇರುವ ಬಗ್ಗೆ ಮಾಹಿತಿ ಪಡೆದು ಯುವಕರ ಗುಂಪು ತೆರಳಿದೆ. ಬಾಗಿಲು ಬಡಿದು ರೂಮಲ್ಲಿ ನೀರು ಬರುತ್ತಿದ್ದೆಯೇ ಚೆಕ್ ಮಾಡಬೇಕು ಎಂದು ಹೇಳಿದ್ದಾರೆ. ಈ ವೇಳೆ ನೀರು ಬರುತ್ತಿದೆ, ಏನೂ ಸಮಸ್ಯೆ ಇಲ್ಲ ಎಂದು ಮಹಿಳೆ ಜತೆಗಿದ್ದ ವ್ಯಕ್ತಿ ಹೇಳಿದ್ದಾನೆ. ಬಾಗಿಲು ಓಪನ್ ಮಾಡಿದ್ದೇ ತಡ, ರೊಚ್ಚಿಗೆದ್ದ ಯುವಕರ ಗುಂಪು, ವ್ಯಕ್ತಿ ಹಾಗೂ ಮಹಿಳೆ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.ಬುರ್ಖಾ ಹಾಕಿಕೊಂಡು ಬಂದು ಮಲಗಿದ್ದೀಯಾ? ಎಂದು ಮಹಿಳೆಯನ್ನು ಥಳಿಸಿದ ಯುವಕರು, ನಿನಗೆ ನಮ್ ಹುಡುಗೀನೇ ಬೇಕಾ ಎಂದು ಆ ವ್ಯಕ್ತಿಗೂ ಹೊಡೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಘಟನೆ ಸಂಬಂಧ ಒಬ್ಬ ಯುವಕನನ್ನು ಹಾನಗಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಹಿಳೆ ಮೇಲೆ ಮತ್ತೇನಾದರೂ ದೌರ್ಜನ್ಯ ನಡೆದಿದೆಯಾ ಎಂಬ ಬಗ್ಗೆ ತನಿಖೆ ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಹಾನಗಲ್ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

Posted by Vidyamaana on 2024-05-29 16:19:09 |

Share: | | | | |


ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

ಬೆಂಗಳೂರು : ಅಧಿಕಾರಕ್ಕೆ ಬಂದರೆ ರಕ್ಷಣಾ ಸೇವೆಗಳ ನೇಮಕಾತಿಯ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸಿ, ಪ್ರತಿ ತಿಂಗಳು ಪ್ರತಿ ಮಹಿಳೆಯ ಖಾತೆಗೆ 8,500 ರೂ.ಗಳನ್ನು ಜಮಾ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಅಭ್ಯರ್ಥಿಗಳ ಪರವಾಗಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಇಂಡಿಯಾ ಮೈತ್ರಿ ಕೂಟದ ಪರವಾಗಿ ಸ್ಪಷ್ಟ ಅಲೆ ಇರುವುದರಿಂದ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಪಾದಿಸಿದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

Posted by Vidyamaana on 2024-08-28 13:19:17 |

Share: | | | | |


ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಸಿಸಿಐ ಕಾರ್ಯದರ್ಶಿ ಜಯ್‌ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಯ್‌ ಶಾ ಅವರಿಗೆ ಐಸಿಸಿ ಮಂಡಳಿಯಿಂದ ಭಾರಿ ಬೆಂಬಲ ಸಿಕ್ಕಿದ್ದು,16ರಲ್ಲಿ 15 ಸದಸ್ಯರು ಜಯ್‌ ಶಾ ಪರವಾಗಿದ್ದರು. ಇದರಿಂದಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ ಮೊದಲೇ ಖಚಿತವಾಗಿತ್ತು, ಅದು ಅಧಿಕೃತವಾಗಿದೆ. ನಾಮನಿರ್ದೇಶನ ಪ್ರಕ್ರಿಯೆಯು ಆಗಸ್ಟ್ 27 ರಂದು ಮುಕ್ತಾಯಗೊಂಡಿದ್ದು, ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಗೆ ಜಯ್‌ ಶಾ ಪಾತ್ರವಾಗಿದ್ದಾರೆ.

Recent News


Leave a Comment: