ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಿದ್ರೆ ಕೇಸ್ ಹಾಕಲಾಗುವುದು: ಪೊಲೀಸ್ ಆಯುಕ್ತ ದಯಾನಂದ್

Posted by Vidyamaana on 2023-10-17 20:16:44 |

Share: | | | | |


ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಿದ್ರೆ ಕೇಸ್ ಹಾಕಲಾಗುವುದು: ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರು: ನಿಯಮ ಮೀರಿದ ಪಬ್, ಬಾರ್ ರೆಸ್ಟೋರೆಂಟ್ ಗಳ ಮೇಲೆ ಕೇಸ್ ದಾಖಲು ಬಗ್ಗೆ  ನಗರ‌ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ.ನಿಯಮ ಮೀರಿದ ಪಬ್, ಬಾರ್ ರೆಸ್ಟೋರೆಂಟ್ ಗಳ ಮೇಲೆ ಕೋಟ್ಪಾ ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಸ್ಮೋಕಿಂಗ್ ಗೆ ಅವಕಾಶ ಕೊಟ್ಟವರ ಮೇಲೆ ಕೇಸ್ನೋ ಸ್ಮೋಕಿಂಗ್ ಏರಿಯಾಗಳಲ್ಲಿ ಅಧಿಕಾರಿಗಳು ತೆರಳಿ ಸ್ಟಿಕ್ಕರ್ ಅಂಟಿಸಲಾಗಿದೆ 4698 ಕಡೆ ಅರಿವು ಮೂಡಿಸಲು ಸ್ಟಿಕ್ಕರ್ ಅಂಟಿಸಲಾಗಿದೆ ಅಪ್ರಾಪ್ತರಿಗೆ ಧೂಮಪಾನಕ್ಕೆ ಅವಕಾಶ ಕೊಟ್ಟವರ ಮೇಲೆ ಕೇಸ್ ದಾಖಲಿಸಲಾಗಿದೆ. 1051 ಕ್ಕೂ ಅಧಿಕ ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ


ಹೊಟೇಲ್ ನಲ್ಲಿ  ಧೂಮಪಾನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.ಹಾಗೆ ಅಪ್ರಾಪ್ತರಿಗೆ ತಂಬಾಕು  ಉತ್ಪನ್ನ ಮಾರಿದ್ರೆ ಕೇಸ್ ಹಾಕಲಾಗುವುದು ಶಾಲಾ ಕಾಲೇಜಿನ 100 ಮೀಟರ್ ವ್ಯಾಪ್ತಿಯಲ್ಲಿ 200 ರೂ ದಂಡ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ್ರೆ 200 ರೂ ದಂಡ ತಂಬಾಕು ಪದಾರ್ಥದ ಬಗ್ಗೆ ಜಾಹೀರಾತು ನೀಡಿದರೆ 1000 ರೂ ದಂಡ ಹಾಕಲಾಗುವುದು ಎಂದು ತಿಳಿಸಿದರು.

ದುಬೈನಲ್ಲಿ ಮತ್ತೊಂದು ಅದ್ಭುತ ಕಟ್ಟಡ ನಿರ್ಮಾಣ.. ನೀರಿನಲ್ಲಿ ತೇಲುವ ಮಸೀದಿ ಏನೆಲ್ಲಾ ಇರುತ್ತದೆ ಗೊತ್ತಾ?

Posted by Vidyamaana on 2023-09-23 16:20:57 |

Share: | | | | |


ದುಬೈನಲ್ಲಿ ಮತ್ತೊಂದು ಅದ್ಭುತ ಕಟ್ಟಡ ನಿರ್ಮಾಣ.. ನೀರಿನಲ್ಲಿ ತೇಲುವ ಮಸೀದಿ ಏನೆಲ್ಲಾ ಇರುತ್ತದೆ ಗೊತ್ತಾ?

   

ದುಬೈ :ವಿಶ್ವದಲ್ಲಿಯೇ ಮೊದಲ ಬಾರಿಗೆ ತೇಲುವ ಮಸೀದಿಯನ್ನು ನಿರ್ಮಿಸುವುದಾಗಿ ಯುಎಇ ಘೋಷಿಸಿದೆ. ಈ ಮಸೀದಿಯಲ್ಲಿ ಮೂರು ಮಹಡಿಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಎಮಿರೇಟ್ಸ್​ ಇಸ್ಲಾಮಿಕ್ ಅಫೇರ್ಸ್ ಮತ್ತು ಚಾರಿಟಬಲ್ ಆಕ್ಟಿವಿಟೀಸ್ ಡಿಪಾರ್ಟ್‌ಮೆಂಟ್‌ನ ಕೃಪೆಯಿಂದಾಗಿ ಈ ವಿಶಿಷ್ಟ ಪ್ರಾರ್ಥನಾ ಸ್ಥಳವು ಪ್ರಸ್ತುತ ದುಬೈ ವಾಟರ್ ಕೆನಾಲ್‌ನಲ್ಲಿ ನಿರ್ಮಾಣ ಹಂತದಲ್ಲಿದೆ.ದುಬೈನಲ್ಲಿ ಸ್ಪಟಿಕದಂತಹ ನೀರು ಇರುವ ಕಾಲುವೆಗಳಲ್ಲಿ 5.5 ಕೋಟಿ ದಿರಹಂ ವೆಚ್ಚ ಮಾಡಿ ಅಂದರೆ ಸುಮಾರು 125 ಕೋಟಿ ರೂ. ವೆಚ್ಚ ಮಾಡಿ, ನೀರಿನ ಮೇಲೆ ತೇಲುವ ಮಸೀದಿ (floating mosque) ನಿರ್ಮಿಸಲಾಗುವುದು. ಇಸ್ಲಾಮಿಕ್ ವ್ಯವಹಾರಗಳು ಮತ್ತು ಚಾರಿಟಬಲ್ ಚಟುವಟಿಕೆಗಳ ಇಲಾಖೆ (ಐಸಿಎಡಿ -Islamic Affairs and Charitable Activities Department in Dubai) ಅಧಿಕಾರಿಗಳು ಮುಂದಿನ ವರ್ಷ ಮಸೀದಿಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ (Religious Tourism Project) ಮಾಡಲಾಗುವುದು ಎಂದು ಹೇಳಿದ್ದಾರೆ.


ವಿಶ್ವದಲ್ಲಿಯೇ ಮೊದಲ ಬಾರಿಗೆ ತೇಲುವ ಮಸೀದಿಯನ್ನು ನಿರ್ಮಿಸುವುದಾಗಿ ಯುಎಇ ಘೋಷಿಸಿದೆ. ಈ ಮಸೀದಿಯಲ್ಲಿ ಮೂರು ಮಹಡಿಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಎಮಿರೇಟ್ಸ್​ ಇಸ್ಲಾಮಿಕ್ ಅಫೇರ್ಸ್ ಮತ್ತು ಚಾರಿಟಬಲ್ ಆಕ್ಟಿವಿಟೀಸ್ ಡಿಪಾರ್ಟ್‌ಮೆಂಟ್‌ನಕೃಪೆಯಿಂದಾಗಿ ಈ ವಿಶಿಷ್ಟ ಪ್ರಾರ್ಥನಾ ಸ್ಥಳವು ಪ್ರಸ್ತುತ ದುಬೈ ವಾಟರ್ ಕೆನಾಲ್‌ನಲ್ಲಿ ನಿರ್ಮಾಣ ಹಂತದಲ್ಲಿದೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ದುಬೈಗೆ ಭೇಟಿ ನೀಡುವವರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.


ಮಸೀದಿಯು ವಿಶಿಷ್ಟ ಲಕ್ಷಣಗಳನ್ನು ಹೊಂದಿರುವ ಮೂರು ಅಂತಸ್ತಿನ ರಚನೆಯಾಗಿದೆ. ಒಂದೇ ಸಮಯದಲ್ಲಿ 50 ರಿಂದ 75 ಭಕ್ತರು ಪ್ರಾರ್ಥನೆ ಸಲ್ಲಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಮುಸಲ್ಮಾನರು ಪ್ರಾರ್ಥನೆಗಾಗಿ ವಿಶೇಷವಾಗಿ ನಿರ್ಮಿಸಲಾದ ಈ ತೇಲುವ ಮಸೀದಿಗೆ ಭೇಟಿ ನೀಡಬಹುದು(Islamic tourism). ಇದು ಎಮಿರೇಟ್ಸ್​​ನಲ್ಲಿ ಪ್ರಮುಖ ಆಕರ್ಷಣೆಯಾಗಿದೆ. ಹೆಚ್ಚುವರಿಯಾಗಿ, ಮಸೀದಿಯು ಶೇಖ್ ಮಕ್ತೌಮ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಕುರಾನ್‌ ಪ್ರದರ್ಶನವನ್ನು ಆಯೋಜಿಸುತ್ತದೆ.ಮಸೀದಿಯು ನೀರಿನ ಮೇಲೆ ಎರಡು ಮಹಡಿಗಳನ್ನು ಹೊಂದಿರುತ್ತದೆ, ಮುಂದಿನ ವರ್ಷದ ವೇಳೆಗೆ ಸಂದರ್ಶಕರಿಗೆ ಇಸ್ಲಾಮಿಕ್ ಉಪನ್ಯಾಸಗಳು, ಕಾರ್ಯಾಗಾರಗಳು ಇತ್ಯಾದಿಗಳಿಗಾಗಿ ಇಲ್ಲಿ ಸಭಾಂಗಣ ನಿರ್ಮಿಸಲಾಗುವುದು. ಗಮನಾರ್ಹ ಸಂಗತಿಯೆಂದರೆ, ಈ ತೇಲುವ ಮಸೀದಿ ಎಲ್ಲಾ ಧರ್ಮದ ಜನರನ್ನು ಆಹ್ವಾನಿಸುತ್ತದೆ. ಸಂದರ್ಶಕರು ಸಾಧಾರಣವಾದ ಸಾಮಾನ್ಯವಾದ ಉಡುಗೆ ತೊಟ್ಟುಬರಬಹುದು. ಆದರೂ ಇಸ್ಲಾಮಿಕ್ ಪದ್ಧತಿಗಳನ್ನು ಗೌರವಿಸಲು ವಿನಂತಿಸಲಾಗಿದೆ.

ಪುತ್ತೂರು : ಬಿಜೆಪಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖ ವಾಗ್ವಾದ ವಿಚಾರ ವೈರಲ್ : ಸತ್ಯಕ್ಕೆ ದೂರವಾದ ವಿಷಯ – ಸಾಜ ರಾಧಾಕೃಷ್ಣ ಆಳ್ವ

Posted by Vidyamaana on 2024-03-21 18:14:24 |

Share: | | | | |


ಪುತ್ತೂರು : ಬಿಜೆಪಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖ ವಾಗ್ವಾದ ವಿಚಾರ ವೈರಲ್  : ಸತ್ಯಕ್ಕೆ ದೂರವಾದ ವಿಷಯ – ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು :ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಯ್ಕೆಯಾದ ನಂತರ ಮತ್ತು ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಯ ವಿಚಾರವಾಗಿ ಪುತ್ತೂರಿನ ಹಿರಿಯ-ಕಿರಿಯ ಕಾರ್ಯಕರ್ತರಲ್ಲಿ ಚರ್ಚಿಸಲು ದ.ಕನ್ನಡ ಜಿಲ್ಲಾಧ್ಯಕ್ಷರು ಪಾರ್ಟಿ ಕಛೇರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಕಛೇರಿಗೆ ಬೀಗ ಹಾಕಿದ್ದರು ಮತ್ತು ಸಭೆಯಲ್ಲಿ ವಾಗ್ವಾದಗಳು ಜಿಲ್ಲಾಧ್ಯಕ್ಷರ ಎದುರಿಗೆ ಆಗಿವೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ.


ಪಕ್ಷದ ಆಂತರಿಕ ಸಭೆ ಆದ ಕಾರಣ ಪತ್ರಿಕೆ ಮಾದ್ಯಮದವರಿಗೆ ಅಹ್ವಾನ ಇರಲಿಲ್ಲ ಮತ್ತು ಒಟ್ಟು ಪುತ್ತೂರಿನ ರಾಜಕೀಯ ಸಾಧಕ ಮತ್ತು ಭಾದಕಗಳ ಬಗ್ಗೆ ಆರೋಗ್ಯಪೂರ್ಣ ಚರ್ಚೆಯಾಗಿ ಕೊನೆಗೆ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ರವರು ಸೂಕ್ತವಾದ ಸಲಹೆ ಸೂಚನೆಯನ್ನು ನೀಡಿ ಸಭೆ ಸುಖಾಂತ್ಯವಾಗಿದೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಪಾರ್ಟಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದು ನಿರ್ಧರಿಸಲಾಯಿತು ಎಂದು ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ

ಪಕ್ಷದ ಹೈಕಮಾಂಡ್ ಮೇಲೆ ವಿ ಸೋಮಣ್ಣ ಬೇಸರ – ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಎಂದು ಪರೋಕ್ಷ ಸಂದೇಶ

Posted by Vidyamaana on 2023-06-25 12:49:12 |

Share: | | | | |


ಪಕ್ಷದ ಹೈಕಮಾಂಡ್ ಮೇಲೆ ವಿ ಸೋಮಣ್ಣ ಬೇಸರ – ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಎಂದು ಪರೋಕ್ಷ ಸಂದೇಶ

ಬೆಂಗಳೂರು :ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು, ತಾನು ಸೋತಿದ್ದುಏಕೆ ಎಂದು ಪದೇ ಪದೇ ಹೇಳುವ ಮೂಲಕ ತಾನೇ ಆ ಹುದ್ದೆಗೆ ಅರ್ಹ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ನಡೆದುಕೊಂಡೆ. ಈಗ ಸೋತಿರುವೆ. ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದ್ದೇನೆ” ಎಂದರು.


ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಈಗಾಲೇ ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ” ಎಂದರು.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ನಂತರ ಉಲ್ಟಾ ಹೊಡೆದಿದ್ದರು. ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ದರಿಲ್ಲ. ಹಾಗಾಗಿ ದಿನೇ ದಿನೇ ಗೊಂದಲ ಹೆಚ್ಚಾಗಿದೆ.

ಇತ್ತೀಚೆಗೆ ವಿ.ಸೋಮಣ್ಣ ಬಹಿರಂಗವಾಗಿ ನಾನು ಆಕಾಂಕ್ಷಿ ಎಂದು ಘೋಷಿಸಿದ್ದರು. ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

Posted by Vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಪುತ್ತೂರು ಬೆಥನಿ ಶಾಲಾ ವಿದ್ಯಾರ್ಥಿನಿ ಫಾತಿಮಾ ಅಫ್ನಾ ನಾಪತ್ತೆ

Posted by Vidyamaana on 2024-02-01 18:21:30 |

Share: | | | | |


ಪುತ್ತೂರು ಬೆಥನಿ ಶಾಲಾ ವಿದ್ಯಾರ್ಥಿನಿ ಫಾತಿಮಾ ಅಫ್ನಾ ನಾಪತ್ತೆ

ಪುತ್ತೂರು: ಇಲ್ಲಿನ ಬೆಥನಿ ಪ್ರಾಥಮಿಕ ಶಾಲೆಯ ವಿದ್ಯಾರ್ಥೀನಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಬಾಲಕಿಯನ್ನು ಫಾತಿಮಾ ಅಫ್ನಾ ಎಂದು ಗುರುತಿಸಲಾಗಿದೆ.

ಭಾವಚಿತ್ರದಲ್ಲಿರುವ ಬಾಲಕಿ ಸಿಕ್ಕಿದಲ್ಲಿ ಮಾಹಿತಿ ನೀಡಲು ಸಂಪರ್ಕಿಸಿ 7899860151.

Recent News


Leave a Comment: