Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-09-08 15:54:34 |
ನವದೆಹಲಿ: ಬಹುನಿರೀಕ್ಷೆಯ ಜಿ20 ಶೃಂಗಸಭೆಯು ಇದೇ ವಾರಾಂತ್ಯದಲ್ಲಿ ಸೆ.9 ಮತ್ತು 10ಎಂದು ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ನಡೆಯಲಿದೆ. ಈ ಸಂಬಂಧ ಅಗತ್ಯ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಶೃಂಗಸಭೆ ಸಲುವಾಗಿ ವಿಶ್ವದ ಕೆಲವು ಶಕ್ತಿಶಾಲಿ ಹಾಗೂ ಪ್ರಭಾವಿ ನಾಯಕರುಗಳು ಭಾರತಕ್ಕೆ ಆಗಮಿಸಲಿದ್ದಾರೆ.ಅಮೆರಿಕಾ (US) ಅಧ್ಯಕ್ಷ ಜೋ ಬೈಡೆನ್, ಇಂಗ್ಲೆಂಡ್ (UK) ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇನ್ನಿತರ ರಾಷ್ಟ್ರಗಳ ಮುಖ್ಯಸ್ಥರು ವರ್ಷದ ಪ್ರಮುಖ ಜಾಗತಿಕ ಕೂಟಗಳಲ್ಲಿ ಒಂದಾಗಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಆರ್ಥಿಕ ಕುಸಿತ, ಇಂದನ ಬೆಲೆ ಸೇರಿದಂತೆ ಜಾಗತಿಕ ವಿಚಾರಗಳ ಕುರಿತು ಎರಡು ದಿನ ಚರ್ಚೆ ನಡೆಸಲಿದ್ದಾರೆ.
ಹಾಗಾದರೆ ಭಾರತದಲ್ಲಿಯ ನಡೆಯುತ್ತಿರುವ ಇಂಥಹ ಮಹತ್ವ ಸಮ್ಮೇಳನಕ್ಕೆ ಯಾವ ಗಣ್ಯರು ಹಾಜರಾಗುತ್ತಾ, ಯಾರು ಗೈರಾಗುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿ ತಿಳಿಯಬಹುದಾಗಿದೆ.
G20 ಶೃಂಗಸಭೆಯಲ್ಲಿ ಭಾಗವಹಿಸುವವರ ವಿವರ
ಅಮೆರಿಕಾ (US) ಜೋ ಬೈಡೆನ್ ಅವರು ಇಂದು ಸೆ. 8ರಂದು ನವದೆಹಲಿಗೆ ಆಗಮಿಸಲಿದ್ದಾರೆ. ಅವರು ಸಮ್ಮೇಳನದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಅವರು ಸಭೆಯಲ್ಲಿ ಉಕ್ರೇನ್ನಲ್ಲಿನ ಯುದ್ಧದ ಸಾಮಾಜಿಕ ಪರಿಣಾಮ, ಶುದ್ಧ ಶಕ್ತಿಯ ಪರಿವರ್ತನೆ, ಹವಾಮಾನ ಬದಲಾವಣೆಗಳ ವಿರುದ್ಧದ ಹೋರಾಟ ಹಾಗೂ ಬಡತನದ ನೀಗಿಸಲು ಬಹುಪಕ್ಷೀಯ ಬ್ಯಾಂಕುಗಳ ಸಾಮರ್ಥ್ಯ ಹೆಚ್ಚಳ ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.* ಇಂಗ್ಲೆಂಡ್ (UK) ಅಧ್ಯಕ್ಷ ರಿಷಿ ಸುನಕ್ ಅವರು ಪ್ರಧಾನ ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವದೇಶ ಭಾರತಕ್ಕೆ ಆಗಮಿಸುತ್ತಿದ್ದಾರೆ. ಅವರು ನವದೆಹಲಿಯಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
* ಜಪಾನ್ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಅವರ ಆಗಮನ ಸಹ ಖಚಿತವಾಗಿದೆ. G7 ನ ಪ್ರಸ್ತುತ ಅಧ್ಯಕ್ಷರಾಗಿ ಉಕ್ರೇನ್ ಯುದ್ಧಕ್ಕಾಗಿ ರಷ್ಯಾ ವಿರುದ್ಧ ಅವರು ಟೀಕಿಸುವ ಸಾಧ್ಯತೆಗಳು ಇವೆ.
* ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಆದರೆ G20 ಶೃಂಗಸಭೆಗಾಗಿ ನಾಳೆ ಸೆಪ್ಟೆಂಬರ್ 9ಕ್ಕೆ ಅವರು ಆಗಮಿಸಲಿದ್ದಾರೆ ಎಂದು ಅವರು ಕಚೇರಿ ಮಾಹಿತಿ ನೀಡಿದೆ.
* ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದು ಪಕ್ಕಾ ಆಗಿದೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳು ಇವೆ.
* ಭಾರತ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ಒಳಗೊಂಡ ಮೂರು ದೇಶಗಳ ಪ್ರವಾಸದ ಭಾಗವಾಗಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದರಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.* ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಸಹ ನಾಳೆ ರಾಷ್ಟ್ರ ರಾಜಧಾನಿಗೆ ಬಂದಿಳಿಯಲಿದ್ದಾರೆ. ರಷ್ಯಾ ಹಾಗೂ ಚೀನಾದ ಅನುಪಸ್ಥಿತಿಯ ಹೊರತಾಗಿಯೂ ಶೃಂಗಸಭೆ ಮಹತ್ವ ಪಡೆದುಕೊಂಡಿದೆ.
* ಅಧ್ಯಕ್ಷ ಯೂನ್ ಸುಕ್ ಯೋಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಜೊತೆಗೆ ಉತ್ತರ ಕೊರಿಯಾದ ಪರಮಾಣು ಬೆದರಿಕೆ, ಕ್ಷಿಪಣಿ ಪ್ರಚೋದನೆ ಇನ್ನಿತರ ಕುರಿತು ಸದಸ್ಯರ ರಾಷ್ಟ್ರಗಳ ನಾಯಕರನ್ನು ಒತ್ತಾಯಿಸುವ ಸಾಧ್ಯತೆಯಿದೆ.
* ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಹಾಗೂ ಟರ್ಕಿ ದೇಶದ ಅಧ್ಯಕ್ಷರಾದ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಸಹ ಶೃಂಗಸಭೆಗೆ ಹಾಜರಿರಲಿದ್ದಾರೆ.
ಶೃಂಗಸಭೆಗೆ ಗೈರಾಗುವವರ ಮಾಹಿತಿ
* ಶೃಂಗಸಭೆಯಲ್ಲಿ ಗೈರು ಆಗುವವರ ಪೈಕಿ ಗಮನಾರ್ಹ ವ್ಯಕ್ತಿ ಎಂದರೆ ಅದು ಚೀನಾ ಅಧ್ಯಕ್ಷ ಲ್ಲಿ ಕ್ಸಿ ಜಿನ್ಪಿಂಗ್. ಚೀನಾ ಅಧ್ಯಕ್ಷರ ಅನುಪಸ್ಥಿತಿಯಲ್ಲಿ, ಸ್ಟೇಟ್ ಕೌನ್ಸಿಲ್ನ ಚೀನಾದ ಪ್ರಧಾನ ಮಂತ್ರಿ ಲಿ ಕಿಯಾಂಗ್ ಅವರು ದೇಶದ ನಿಯೋಗವನ್ನು ಮುನ್ನಡೆಸಲಿದ್ದಾರೆ. ಚೀನಾ ಗೈರಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.* ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಈ ವರ್ಷ G20 ಶೃಂಗಸಭೆ ಬರಬೇಕಿತ್ತು. ಆದರೆ ರಷ್ಯಾ ಉಕ್ರೇನ್ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ರಷ್ಯಾದ ಅಧ್ಯಕ್ಷರಿಗೆ ಉಕ್ರೇನ್ನಲ್ಲಿ ಯುದ್ಧ ಅಪರಾಧಗಳ ಆರೋಪ ಹೊರಿಸಿ ಬಂಧನ ವಾರಂಟ್ ಹೊರಡಿಸಿದೆ. ಹೀಗಾಗಿ ಅವರು ಗೈರಾಗಲಿದ್ದು, ಅವರ ಪರವಾಗಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹಾಜರಿರಲಿದ್ದಾರೆ.
* ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಝ್ ಅವರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಗುರುವಾರ ನಡೆಸಿದ ಆರೋಗ್ಯ ತಪಾಸಣೆಯಲ್ಲಿ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ಈ ಬಾರಿಗೆ ಜಿ20 ಶೃಂಗಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
* ಮೆಕ್ಸಿಕೋ ದೇಶದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಈ ಸಮ್ಮೇಳನಕ್ಕೆ ಹಾಜರಾಗುವುದಿಲ್ಲ ಎಂದು ಅವರ ಕಚೇರಿ ಮಾಹಿತಿ ನೀಡಿದೆ.
ಶೃಂಗಸಭೆಯಲ್ಲಿ ಪಾಲ್ಗೊಳ್ಳುವ G20 ಅಲ್ಲದ ಸದಸ್ಯರ ಪಟ್ಟಿಜಿ20 ರಾಷ್ಟ್ರಗಳ ಸದಸ್ಯರ ಜೊತೆಗೆ ಬಾಂಗ್ಲಾದೇಶ, ಈಜಿಪ್ಟ್, ಒಮನ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಸಿಂಗಾಪುರ, UAE ಹಾಗೂ ಸ್ಪೇನ್ ದೇಶಗಳ ನಾಯಕರು ಸಹ ಭಾರತದ ಆಹ್ವಾನದ ಮೇರೆಗೆ ನವದೆಹಲಿಗೆ ಆಗಮಿಸಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.
Posted by Vidyamaana on 2024-01-08 20:48:57 |
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು (Yash Birthday) ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ (G
non
aga) ಬಂದಿದ್ದಾರೆ.ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.ವಿದ್ಯುತ್ ಸ್ಪರ್ಶಿಸಿ ಮೂವರ ಸಾವು
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ
ಇತ್ತ ರಾಜ್ಯ ಸರ್ಕಾರ ಕೂಡ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಲಾಗಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
Posted by Vidyamaana on 2024-03-11 07:24:23 |
ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಗೆ ನೂತನ ಪದಾಧಿಕಾರಿಗಳ ನೇಮಕವಾಗಿದ್ದು ಪುತ್ತೂರು,ಉಪ್ಪಿನಂಗಡಿ ಮತ್ತು ಕಡಬದ ಐವರಿಗೆ ಅವಕಾಶ ನೀಡಲಾಗಿದೆ.ವಿಧಾನಪರಿಷತ್ ಶಾಸಕರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.
ಹೊಸದಾಗಿ ಎಂಟು ಮಂದಿ ಸಕ್ರಿಯ ಕಾರ್ಯಕರ್ತರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ನಾಲ್ವರನ್ನು ಉಪಾಧ್ಯಕ್ಷರಾಗಿ ಮತ್ತು 8 ಮಂದಿಯನ್ನು ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ. ಉಪ್ಪಳಿಗೆಯ ಕೃಷ್ಣಪ್ರಸಾದ್ ಆಳ್ವ, ಕಡಬದ ಸಿ.ಜೆ.ಸೈಮನ್, ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ, ಅಶ್ರಫ್ ಬಸ್ತಿಕಾರ್ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.ಅರ್ಷದ್ ದರ್ಬೆ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೃಷ್ಣಪ್ರಸಾದ್ ಆಳ್ವ ಅವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಅವರು ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ, ರಾಜ್ಯ ಇಂಟಕ್ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಹುದ್ದೆ ನಿರ್ವಹಿಸಿದ್ದು, ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತ ಘಟ ಕದ ರಾಜ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಪ್ಪಿನಂಗಡಿಯ ಆಶ್ರಫ್ ಬಸ್ತಿಕಾರ್ ಅವರು ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಕೆಡಿಪಿ ಸದಸ್ಯರಾಗಿ, ಗಾಂಪಾ ಗೆಳೆಯರು ಸಂಘಟನೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ವಕ್ತಾರ ಹಾಗೂ ಉಪಾಧ್ಯಕ್ಷರಾಗಿರುತ್ತಾರೆ.ಕಡಬ ನಿವಾಸಿಯಾಗಿರುವ ಸೈಮನ್ ಸಿ.ಜೆ.ಅವರು ವಿದ್ಯಾರ್ಥಿಯಾಗಿದ್ದಾಗ ಎನ್.ಎಸ್.ಯು.ಐ. # ಕಾರ್ಯದರ್ಶಿಯಾಗಿ ಬಳಿಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಈ ಅರ್ಷದ್ ದರ್ಬೆ ಅವರು ಈ ಹಿಂದೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಹಿತ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
Posted by Vidyamaana on 2024-04-10 13:12:47 |
ಮಂಗಳೂರು, ಎ.10: ಎಪ್ರಿಲ್ 14ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ. ಅದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ಸಿದ್ಧತೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ತಾಂತ್ರಿಕ ಕಾರಣದಿಂದಾಗಿ ಬೃಹತ್ ಸಮಾವೇಶ ನಡೆಸುವುದನ್ನು ರದ್ದು ಪಡಿಸಲಾಗಿದೆ.
Posted by Vidyamaana on 2024-07-02 06:15:40 |
ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗೆ ಜುಲೈ 1ರಿಂದ ಉಂಗುರ ಹಾಗೂ ಕಿವಿಯೋಲೆಗಳ ಮೇಳವನ್ನು ಪುತ್ತೂರು, ಮೂಡಬಿದ್ರೆ, ಸುಳ್ಯ ಹಾಸನ, ಮತ್ತು ಕುಶಾಲನಗರ ಮಳಿಗೆಗಳಲ್ಲಿ ಆಯೋಜಿಸಿದೆ.
ಚಿನ್ನವನ್ನು ಧರಿಸುವುದು ಸೌಂದರ್ಯದ ಸಂಕೇತವಾಗಿದೆ. ಹೂಡಿಕೆಯ ದೃಷ್ಟಿಯಿಂದ ಕೂಡಾ ಲಾಭದಾಯಕ. ಗ್ರಾಹಕರಿಗೆ ವಿವಿಧ ವಿನ್ಯಾಸಗಳ ಉಂಗುರ ಹಾಗೂ ಕಿವಿಯೋಲೆಗಳ ಅಪೂರ್ವ ಸಂಗ್ರಹ ಲಭ್ಯವಿದೆ. ಅದೇ ರೀತಿ Yellow Tag ಆಭರಣಗಳನ್ನು ಆಯ್ಕೆಮಾಡಿ ಅತ್ಯಂತ ಕಡಿಮೆ ತಯಾರಿಕಾ ವೆಚ್ಚದಲ್ಲಿ ಗ್ರಾಹಕರಿಗೆ ಲಭ್ಯವಿದೆ.
Posted by Vidyamaana on 2023-11-05 08:44:53 |
ಉಡುಪಿ: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತ ವಂಚನೆ ಎಸಗಿದ ವ್ಯಕ್ತಿ. ಬೆಂಗಳೂರಿನ ದಿಲ್ನಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ ಆಗಿದ್ದ. ತಾನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ನಂಬಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ಹಣ ಹಾಕುವಂತೆ ಕೇಳಿಕೊಂಡಿದ್ದ.
ಅಲ್ಲದೆ, ದಿಲ್ನಾ ಅವರ ತಾಯಿಗೆ ಸಂಬಂಧಿಸಿದ ಜಾಗದ ಖಾತೆ ಬದಲಾವಣೆ ಮಾಡಿಸುವುದಾಗಿ ಹೇಳಿ ದಿಲ್ನಾ ಮತ್ತು ಅವರ ಅಣ್ಣ ದಿಲೀಶ್ ಅವರಿಂದ ಒಟ್ಟು 30,73,600 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆ ಬದಲಾವಣೆಗಾಗಿ ತಾಯಿಯ ಸಹಿ ಹಾಕಿಕೊಡುವಂತೆ ಕೇಳಿದ್ದರಿಂದ ಸಂಶಯಗೊಂಡು ದೇವಸ್ಥಾನಕ್ಕೆ ಬಂದು ವಿಚಾರಿಸಿದಾಗ ಸುಧೀರ್ ಎನ್ನುವ ವ್ಯಕ್ತಿ ಆಡಳಿತ ಮಂಡಳಿಯ ಸದಸ್ಯನಲ್ಲವೆಂಬುದು ತಿಳಿದುಬಂದಿತ್ತು. ಇದರಿಂದ ದಿಲ್ನಾ ಅವರು ಸುಧೀರ್ ಕುಮಾರ್ ವಿರುದ್ಧ ಹಣ ವಂಚನೆ ಮಾಡಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.