ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


T20 World Cup 2024 :ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

Posted by Vidyamaana on 2024-06-30 09:17:37 |

Share: | | | | |


T20 World Cup 2024 :ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

 ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಲ್ಲಿ ಜೂನ್ 29 ರಂದು ನಡೆದ ಐಸಿಸಿ ಪುರುಷರ ವಿಶ್ವಕಪ್ 2024 ರ (T20 World Cup 2024) ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿ ಚಾಂಪಿಯನ್ ಆಯಿತು.

ಇದರೊಂದಿಗೆ ಭಾರತವು 13 ವರ್ಷಗಳ ವಿಶ್ವ ಕಪ್ ಹಾಗೂ 17 ವರ್ಷಗಳ ಟಿ20 ವಿಶ್ವ ಕಪ್​ ಕೊರತೆಯನ್ನು ನೀಗಿಸಿತು. ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ.ಗುಂಪು ಹಂತದಲ್ಲಿ ಭಾರತ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿತ್ತು. ಒಂದು ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಗಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​​ನಲ್ಲಿ ಗೆಲ್ಲುವ ಮೊದಲು ಭಾರತವು ಸೂಪರ್ ಎಂಟರ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ಸೆಮಿಯಲ್ಲಿ ಇಂಗ್ಲೆಂಡ್ ಅನ್ನು 68 ರನ್​ಗಳಿಂದ ಸೋಲಿಸಿತ್ತು.

ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

Posted by Vidyamaana on 2023-07-01 10:00:17 |

Share: | | | | |


ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಶನಿವಾರ ಮಧ್ಯಾಹ್ನ ವರದಿಯಾಗಿದೆ.

ಮಂಜೇಶ್ವರ ಮಜಿ ಬೈಲ್ ನಿವಾಸಿ ಖಾದರ್ ಮತ್ತು ಮೊಗ್ರಾಲ್ ಕೊಪ್ಪಳ ಮೂಲದ ನಸೀಮಾ ದಂಪತಿ ಮಕ್ಕಳಾದ ನವಾಝ್ ರಹ್ಮಾನ್(22) ಮತ್ತು ನಾದಿಲ್ (17) ಮೃತಪಟ್ಟ ಸಹೋದರರು.

ಸ್ಥಳೀಯರು ಇಬ್ಬರನ್ನು ಮೇಲಕ್ಕೆತ್ತಿ ಅಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.ಈದ್ ಆಚರಣೆಗೆಂದು ಅಜ್ಜಿ ಮನೆಗೆ ಬಂದಿದ್ದ ಸಹೋದರರಿಬ್ಬರು ಸ್ನಾನ ಮಾಡಲು ಕೆರೆಗೆ ಹೋಗಿದ್ದು, ದುರಂತ ಸಂಭವಿಸಿದೆ.

ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತ ದೇಹವನ್ನು ಮಂಗಲ್ಪಾಡಿ ಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ

ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

Posted by Vidyamaana on 2023-06-13 03:37:13 |

Share: | | | | |


ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರದ್ದು ಎನ್ನಲಾದ ಹೇಳಿಕೆಯ ಪೇಪರ್ ಕಟ್ಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

. ನಕಲಿ ಸೃಷ್ಟಿಸಿ ಅಪಪ್ರಚಾರ ಮಾಡುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು‌ ರವಾನಿಸಿದ್ದಾರೆ‌

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕೋಮು ಸಂಘರ್ಷಕ್ಕೆ ಪ್ರಚೋದನೆ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ನೀವಿರುವ ವಾಟ್ಸಾಪ್ ನಲ್ಲಿ ಈ ಪೇಪರ್ ಕಟ್ಟಿಂಗ್ ಬಂದರೆ ಅವರ ಫೋನ್ ನಂಬರ್ ಕಾಣುವಂತೆ screen shot ತೆಗೆದು 9343346439 ನ ವಾಟ್ಸಾಪ್ ಗೆ ಕಳುಹಿಸುವಂತೆ ಕಾಂಗ್ರೇಸ್ ನ ಕಾನೂನು ಘಟಕ ಮನವಿ ಮಾಡಿದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

ಏನಿದೆ ಪೇಪರ್ ಕಟ್ಟಿಂಗ್ ನಲ್ಲಿ..?

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಅನುದಾನ ತಸ್ತೀಕ್ ರೂಪದಲ್ಲಿ ಮಸೀದಿಗಳಿಗೆ ಹೋಗುವುದನ್ನು ತಡೆದ ಬಿಜೆಪಿ ಸರ್ಕಾರದ ಕ್ರಮಕ್ಕೆ ಶಾಸಕ ಮತ್ತು ಮಾಜಿ ಮಂತ್ರಿ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಲ್ಲಿ ಶುಕ್ರ ವಾರ ಮಾತನಾಡಿದ ಅವರು, ಜನರನ್ನು ಧರ್ಮದ ಹೆಸರಿನ ಮೇಲೆ ವಿಭಜಿಸುವ ಸರ್ಕಾರದ ಹುನ್ನಾರ ಇದಾಗಿದೆ. ಮುಜರಾಯಿ ಇಲಾಖೆ ಅನುದಾನ ಮಸೀದಿಗಳಿಗೆ ಹೋಗುವುದನ್ನು ತಡೆದಿರುವ ಕುರಿತಾದ ಗೊಂದಲ ನಿವಾರಿಸುವಂತೆ ಒತ್ತಾಯಿಸಿದರು. ಮುಜರಾಯಿ ಇಲಾಖೆ ಸ್ವಾಮ್ಯಕ್ಕೆ ಒಳಪಟ್ಟ ಮಂದಿರದ ಹುಂಡಿಯಲ್ಲಿನ ಹಣವನ್ನು ಆಯಾ ಮಂದಿರಕ್ಕಾಗಿ ಬಳಸಿಕೊಳ್ಳತಕ್ಕದ್ದು ಎಂದು ನಿಯಮವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮ ಅಸಮಂಜಸದಿಂದ ಕೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಶಾಸಕ ರಹೀಮ್ ಖಾನ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ಎಂಬ ಪೇಪರ್ ಕಟ್ಟಿಂಗ್ ಹರಿದಾಡುತ್ತಿದೆ. ಇಂತಹ ಹೇಳಿಕೆಯೂ ನೀಡಿಲ್ಲ ಎಂದು ಯುಟಿ ಖಾದರ್ ಸ್ಪಷ್ಟ ಪಡಿಸಿದ್ದಾರೆ.

ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ ; ನಕಲಿ ನೋಟು ಚಲಾಯಿಸುತ್ತಿದ್ದ ವ್ಯಕ್ತಿ ಸಿಸಿಬಿ ಪೊಲೀಸರ ಬಲೆಗೆ

Posted by Vidyamaana on 2023-12-18 13:45:05 |

Share: | | | | |


ಮಂಗಳೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ ; ನಕಲಿ ನೋಟು ಚಲಾಯಿಸುತ್ತಿದ್ದ ವ್ಯಕ್ತಿ ಸಿಸಿಬಿ ಪೊಲೀಸರ ಬಲೆಗೆ

ಮಂಗಳೂರು: ಮಂಗಳೂರು ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. 


ಕಂಕನಾಡಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ, ಆರೋಪಿಯನ್ನು ಮಂಜೇಶ್ವರದ ಕೀರ್ತೇಶ್ವರ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.


500 ರೂ., 200 ರೂ. ಮತ್ತು 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ.ಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಆರೋಪಿತನಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ವಶಪಡಿಸಿದ್ದಾರೆ. 


ಆರೋಪಿಯಿಂದ ಎಂಟು ಖೋಟಾ ನೋಟುಗಳು, OPPO ಕಂಪನಿಯ ಮೊಬೈಲ್ ಫೋನ್ -1 (10,000/-), 35 ಅಸಲಿ ನೋಟುಗಳನ್ನು ( ಮೌಲ್ಯ-4250/-) ವಶಕ್ಕೆ ಪಡೆಯಲಾಗಿದೆ. ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

Posted by Vidyamaana on 2023-09-01 09:57:46 |

Share: | | | | |


ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆಅಂದ್ಹಾಗೆ, ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ ಎನ್ನುವವವರು, ಪ್ರಜ್ವಲ್ ಆಯ್ಕೆಯನ್ನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸಧ್ಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರೇವಣ್ಣ ಅವ್ರ ಆಯ್ಕೆಯನ್ನ ಅಸಿಂಧುಗೊಳಿಸಿದೆ. ಅದ್ರಂತೆ, ಸಧ್ಯ ರೇವಣ್ಣ ಪರ ವಕೀಲರು ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

ಉಳ್ಳಾಲದಲ್ಲಿ ಸೈಟ್ ಅಭಿವೃದ್ಧಿ ಹೆಸರಲ್ಲಿ ಬಿಲ್ಡರ್‌ನಿಂದ 86 ಲಕ್ಷ ಹಣ ಪಡೆದು ವಂಚನೆ ; ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ಮೇಲೆ ಕೇಸು ದಾಖಲು

Posted by Vidyamaana on 2024-05-29 05:56:24 |

Share: | | | | |


ಉಳ್ಳಾಲದಲ್ಲಿ ಸೈಟ್ ಅಭಿವೃದ್ಧಿ ಹೆಸರಲ್ಲಿ ಬಿಲ್ಡರ್‌ನಿಂದ 86 ಲಕ್ಷ ಹಣ ಪಡೆದು ವಂಚನೆ ; ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ಮೇಲೆ ಕೇಸು ದಾಖಲು

ಮಂಗಳೂರು, ಮೇ.27: ಸೈಟ್ ಅಭಿವೃದ್ಧಿ ಪಡಿಸುವ ನೆಪದಲ್ಲಿ ಬಿಲ್ಡರ್‌ ಒಬ್ಬರಿಂದ 86 ಲಕ್ಷ ರೂ. ಹಣ ಪಡೆದು ವಂಚಿಸಿ, ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ,  ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್‌ ಸಹಿತ ಬ್ರೋಕರ್‌, ಸಿವಿಲ್‌ ಗುತ್ತಿಗೆದಾರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್‌ ಆಗಿರುವ ಜೆಪ್ಪಿನಮೊಗರು ನಿವಾಸಿ ಪವನ್‌ ಕುಮಾರ್‌, ಬ್ರೋಕರ್‌ ಆಗಿರುವ ಗುರುರಾಜ್‌, ಸಿವಿಲ್‌ ಗುತ್ತಿಗೆದಾರ ಜಗದೀಶ್‌ ಹಾಗೂ ಅವರ ಸಹಚರ ಜಯಪ್ರಕಾಶ್‌ ಜೆ.ಪಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲದ ಪುಷ್ಪರಾಜ್ ಎಂಬವರು ಬೆಂಗಳೂರು ಮೂಲದ ವೆಂಕಟೇಶ್ ಮತ್ತು ಮಹೇಶ್ ಕುಮಾರ್ ಎಂಬಿಬ್ಬರು ಬಿಲ್ಡರ್‌ ಗಳ ಜೊತೆಗೂಡಿ ಮಂಗಳೂರಿನಲ್ಲಿ ಲೇಔಟ್‌ ನಿರ್ಮಿಸಿ ಸಾರ್ವಜನಿಕವಾಗಿ ಸೈಟ್‌ ಮಾರಾಟ ಮಾಡಲು ಯೋಜನೆ ಹಾಕಿದ್ದರು. ಇದೇ ಸಂದರ್ಭ ಬ್ಯಾಂಕ್‌ ಮ್ಯಾನೇಜರ್‌ ಪವನ್‌ ಕುಮಾರ್‌ ಎಂಬಾತ ಪರಿಚಯವಾಗಿದ್ದು ತನ್ನ ಮೂಲಕ ಉಳ್ಳಾಲದಲ್ಲಿ ನಾಲ್ಕು ಎಕ್ರೆ ಜಮೀನನ್ನು ಕ್ರಯಕ್ಕೆ ಕೊಡಿಸಿದ್ದರು. 2022ರ ಫೆಬ್ರವರಿ ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮಾರಾಟ ಮಾಡಲು ಆರಂಭಿಸಿದ್ದರು. ಈ ಬಗ್ಗೆ ಪವನ್‌ ಕುಮಾರ್‌, ಬಿಲ್ಡರ್‌ ಅವರಲ್ಲಿ  ಲೇಔಟ್‌ನ ಡ್ರೈನೇಜ್‌ ಇನ್ನಿತರ ಕೆಲಸಗಳನ್ನು ತಾನೇ ಮಾಡಿಸುತ್ತೇನೆಂದು ಹೇಳಿ ಮಾತುಕತೆ ನಡೆಸಿದ್ದರು.

Recent News


Leave a Comment: