ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ರಿಕ್ಷಾ ಚಾಲಕ ಇಕ್ಬಾಲ್ ಹೃದಯಾಘಾತದಿಂದ ನಿಧನ

Posted by Vidyamaana on 2024-09-03 17:21:30 |

Share: | | | | |


ರಿಕ್ಷಾ ಚಾಲಕ ಇಕ್ಬಾಲ್ ಹೃದಯಾಘಾತದಿಂದ ನಿಧನ

ಮಂಗಳೂರು :: ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಸೆ 03 ಮಂಗಳವಾರ ವರದಿಯಾಗಿದೆ.ಮೂಲತಃ ಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಮೃತ ಚಾಲಕ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು

ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ

Posted by Vidyamaana on 2023-11-10 14:47:29 |

Share: | | | | |


ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ತಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಕೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ

ಪುತ್ತೂರು : ನಂದಿನಿ ಹಾಲು ವಿತರಕ ಉದಯ ನಿಧನ

Posted by Vidyamaana on 2023-10-14 13:21:12 |

Share: | | | | |


ಪುತ್ತೂರು : ನಂದಿನಿ ಹಾಲು ವಿತರಕ ಉದಯ ನಿಧನ

ಪುತ್ತೂರು : ನಂದಿನಿ ಹಾಲು ವಿತರಕರಾಗಿರುವ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ವ್ಯಾಪಾರ ಮಳಿಗೆಯ ಸಿಬ್ಬಂದಿಯಾಗಿದ್ದ ಉದಯ (51) ನಿಧನರಾದರು.


ಅಡೂರು ಮೂಲದ ಉದಯ ಅವರು ಪುತ್ತೂರು ಕೊಡಿಪ್ಪಾಡಿಯಲ್ಲಿ ವಾಸ್ತವ್ಯ ಹೊಂದಿದ್ದು, ಪುತ್ತೂರು ಜೇನು ವ್ಯವಸಾಯ ಸಹಕಾರ ಸಂಘದ ಕಟ್ಟಡದ ಪಕ್ಕದಲ್ಲಿ ನಂದಿನಿ ಹಾಲು ವಿತರಣಾ ಅಂಗಡಿ ಹೊಂದಿದ್ದರು.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಗೆ ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ನಿಧನರಾದರು.

ಮೃತರು ಪತ್ನಿ ಮಮತಾ,  ಪುತ್ರ ರಾದ  ಯಶ್ವಿತ್, ಅಶ್ವಿತ್ ರನ್ನು ಅಗಲಿದ್ದಾರೆ.

ಉದಯ ಅವರ ಅಂತ್ಯಸಂಸ್ಕಾರ ತರವಾಡು ಮನೆ ಅಡೂರು ಪಾಂಡಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗೃಹಲಕ್ಷ್ಮೀ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ

Posted by Vidyamaana on 2023-07-30 01:53:26 |

Share: | | | | |


ಗೃಹಲಕ್ಷ್ಮೀ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ

ಕಡಬ: ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನ ಉಚಿತವಾಗಿ ನೋಂದಣಿಗೆ ಸರಕಾರ ಆದೇಶ ನೀಡಿರುವುದರಿಂದ ಗ್ರಾಮ ಒನ್ ಕೇಂದ್ರಗಳು ಸಂಕಷ್ಟಕ್ಕೆ ಒಳಗಾಗಿದೆ ಈ ಸಮಸ್ಯೆಯನ್ನು ಪರಿಹರಿಸಿಕೊಡುವಂತೆ ಕಡಬ ತಾಲೂಕಿನ ಗ್ರಾಮ ಒನ್ ಫ್ರಾಂಚೈಸಿನ ನಿರ್ವಾಹಕರು ಕಡಬ ತಹಸೀಲ್ದಾರ್ ಮೂಲಕ ಜು.24ರಂದು ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.


ಕಡಬ ತಾಲೂಕಿನ ಸುಮಾರು 20 ಗ್ರಾಮ್ ಒನ್ ಫ್ರಾಂಚೈಸಿ ನಿರ್ವಾಹಕರು ಮನವಿ ನೀಡಿದ್ದು, ನಾವು ಒಂದು ವರುಷದ ಹಿಂದೆ ಗ್ರಾಮ ಒನ್ ಕೇಂದ್ರಗಳನ್ನು ಬಂಡವಾಳ ಹೂಡಿಕೆ ಮಾಡಿ ಆರಂಭಿಸಿರುತ್ತೇವೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನವರು ಗ್ರಾಮ ಪಂಚಾಯತ್‌ಗಳಿಗೆ ಕಳುಹಿಸಿದ ಸುತ್ತೋಲೆಯಲ್ಲೂ ಗ್ರಾಮ ಒನ್ ಕೇಂದ್ರಗಳಿಗೆ ಬೇಕಾದ ವ್ಯವಸ್ಥೆಗಳನ್ನು ಮಾಡಿ ಕೊಡಬೇಕಾಗಿ ತಿಳಿಸಲಾಗಿದೆ. ಆದರೆ ಸರಕಾರದಿಂದ ನಮ್ಮ ದ ಕೇಂದ್ರಗಳಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಒದಗಿಸಿರುವುದಿಲ್ಲ. ಕೇವಲ ಐಡಿ ಮಾತ್ರ ಕೊಟ್ಟು ನಮ್ಮ ಮೂಲಕ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ನಮಗೆ ಸರಿಯಾದ ಕಮಿಷನ್ ಕೂಡ ಸಿಗುತ್ತಿಲ್ಲ. ಈ ಮೊದಲು ಉಚಿತವಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮಾಡಿಸಿಕೊಡುವಂತೆ ಜಿಲ್ಲಾ ಸಂಯೋಜಕರು ನಮಗೆ ತಿಳಿಸಿ, ಇದಕ್ಕೆ ಸಂಭಾವನೆ ಇದೆ ಎಂದು ಎಲ್ಲರಿಗೂ ದೂರವಾಣಿ ಮುಖಾಂತರ ತಿಳಿಸಿದ್ದರು. ಆದರೆ ಅದಕ್ಕೆ ಸರಿಯಾದ ಕಮಿಷನ್ ಅಥವಾ ಯಾವುದೇ ರೀತಿಯ ಸಂಭಾವನೆಯನ್ನು ಇಲ್ಲಿಯವರೆಗೆ ನೀಡಿರುವುದಿಲ್ಲ. ಹಲವು ಕ್ಯಾಂಪ್‌ಗಳನ್ನು ಮಾಡಿ ಸಾವಿರಾರು ರೂ ಖರ್ಚು ಮಾಡಿ ನಷ್ಟ ಅನುಭವಿಸಿರುತ್ತೇವೆ. ಅದಕ್ಕೆ ಮಾಡಿದ ಖರ್ಚು ಕೂಡ ನಮಗೆ ಕೊಟ್ಟಿಲ್ಲ. ಇದೀಗ ಸರಕಾರದ ವತಿಯಿಂದ ಗೃಹಲಕ್ಷ್ಮಿ ಯೋಜನೆಯನ್ನು ಉಚಿತವಾಗಿ ಮಾಡಿಕೊಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.ನಾವು ನೀಡುವ ಸೇವೆಗಳಿಗೆ ಹಣವನ್ನು ಅದೇ ದಿನ ಜಮಾ ಮಾಡಬೇಕು. ಎಲ್ಲವನ್ನೂ ಉಚಿತವಾಗಿ ಮಾಡಿಕೊಟ್ಟರೆ ನಮ್ಮ ಗ್ರಾಮ ಒನ್ ಕೇಂದ್ರದ ಖರ್ಚು ವೆಚ್ಚಗಳನ್ನು ಯಾರು ಕೊಡುವುದು ನಮ್ಮ ಜೀವನೋಪಾಯಕ್ಕೆ ನಾವು ಏನು ಮಾಡಬೇಕು. ತಿಂಗಳ ಖರ್ಚು ಕೊಠಡಿ ಬಾಡಿಗೆ ವಿದ್ಯುತ್ ಬಿಲ್, ಇಂಟರ್ನೆಟ್ ಬಿಲ್ ಪ್ರಿಂಟ್ ಪೇಪರ್ ಮತ್ತು ಇತರ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಗ್ರಾಮಒನ್ ಐಡಿ ಪಡೆದುಕೊಂಡು ಸೈಬರ್ ಸೆಂಟರ್‌ಗಳಿಂದ ದುರುಪಯೋಗ:

ಈ ನಡುವೆ ಕೆಲವು ಸೇವಾ ಕೇಂದ್ರದ ಹೆಸರಿನಲ್ಲಿ ಅನಧಿಕೃತವಾಗಿ ಸೇವಾ ಸಿಂಧು ಐಡಿಯಲ್ಲಿ ಕೆಲಸ ಮಾಡಿಕೊಂಡು ಹಣ ಮಾಡುತ್ತಿದ್ದಾರೆ. ನಾವು ಎಲ್ಲವನ್ನು ಸಹಿಸಿಕೊಂಡು ವಿಧೇಯತೆಯಿಂದ ಕೆಲಸ ಮಾಡುತ್ತಿದ್ದರೂ, ಅದನ್ನು ಸಹಿಸಲಾಗದೆ ಕೆಲವರು ಗ್ರಾಮ್ ಒನ್‌ ನಾಗರಿಕ ಸೇವಾ ಕೇಂದ್ರದ ವಿರೋಧಿಗಳು ನಮ್ಮ ವಿರುದ್ದ ವಿವಿಧ ರೀತಿಯ ಷಡ್ಯಂತರಗಳನ್ನು ಮಾಡಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ನಿಭಾಯಿಸಿಕೊಂಡು ಕೆಲಸ ಮಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರ ಮನವಿಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಕಡಬ ತಾಲೂಕಿನ ಗ್ರಾಮಒನ್‌ ಪ್ರಾಂಚೈಸಿ ನಿರ್ವಾಹಕರು ಉಪಸ್ಥಿತರಿದ್ದರು, ಉಪ ತಹಸೀಲ್ದಾರ್ ಮನೋಹರ್ ಕೆ.ಟಿ. ಮನವಿ ಸ್ವೀಕರಿಸಿದರು

ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-04-01 16:31:44 |

Share: | | | | |


ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಪುತ್ತೂರು: ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.

ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದರು.

ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. 

ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧನಿಂದ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..!

Posted by Vidyamaana on 2023-11-09 07:41:16 |

Share: | | | | |


ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧನಿಂದ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..!

ಮಡಿಕೇರಿ : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಹನಿಟ್ರ್ಯಾಪ್‌ ನಲ್ಲಿ ಸಿಲುಕಿ ಯುವತಿಯ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ.ಈತನನ್ನು ಪ್ರೀತಿಯ ನಾಟಕವಾಡಿ ಬಲೆಗೆ ಕೆಡವಿ ಹನಿಟ್ರ್ಯಾಪ್‌ ಮಾಡಿದ ಯುವತಿಯನ್ನು ಜೀವಿತಾ ಎಂದು ಗುರುತಿಸಲಾಗಿದೆ.ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ.ಜೀವಿತಾ ಎಂಬ ಮಹಿಳೆ ವಿರುದ್ಧ ಸಂದೇಶ್​ ಆರೋಪ ಮಾಡಿದ್ದಾರೆ. ಮದುವೆಯಾಗಿದ್ದ ಯೋಧನನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡ ಜೀವಿತಾ ಆತನೊಂದಿಗೆ ಸುತ್ತಾಟ ಮಾಡಿ ಫೋಟೋ ಹಾಗೂ ವೀಡಿಯೊ ಇಟ್ಟುಕೊಂಡು ತನ್ನ ಸ್ನೇಹಿತರೊಂದಿಗೆ ಸೇರಿ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷಾಂತರ ರೂ. ಕಿತ್ತುಕೊಂಡಿದ್ದಾಳೆ. ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಯೋಧನಿಗೆ ಏಕಾಏಕಿ 50 ಲಕ್ಷ ರೂ.


ಗೆ ಬೇಡಿಕೆ ಇಟ್ಟಿದ್ದಳು. ಇದರಿಂದ ಕಂಗಾಲಾದ ಯೋಧ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸತೀಶ್ ಎಂಬ ಪೊಲೀಸ್​ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ‌ ಕಿರುಕುಳ ಆರೋಪ ಮಾಡಿದ್ದಾರೆ.ಮಡಿಕೇರಿ ನಗರದ ಪಂಪಿನ ಕೆರೆ ಬಳಿ ಸಂದೇಶ್​ಗೆ ಸೇರಿದ ವಸ್ತು ಪತ್ತೆಯಾಗಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರಿಂದ ಶೋಧ ಕಾರ್ಯ ಆರಂಭಿಸಲಾಗಿದೆ.ಯೋಧನ ಪತ್ನಿ ನೀಡಿದ ದೂರಿನ ಪ್ರಕಾರ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

Recent News


Leave a Comment: