ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಬಾಡಿಗೆ ಕಾರು ಚಾಲಕನ ಖಾತೆಗೆ ಬ್ಯಾಂಕ್​ನಿಂದ ಕ್ರೆಡಿಟ್​ ಆಯ್ತು 9 ಸಾವಿರ ಕೋಟಿ ರೂ! ಮುಂದೇನಾಯ್ತು ಗೊತ್ತಾ?

Posted by Vidyamaana on 2023-09-21 14:48:10 |

Share: | | | | |


ಬಾಡಿಗೆ ಕಾರು ಚಾಲಕನ ಖಾತೆಗೆ ಬ್ಯಾಂಕ್​ನಿಂದ ಕ್ರೆಡಿಟ್​ ಆಯ್ತು 9 ಸಾವಿರ ಕೋಟಿ ರೂ! ಮುಂದೇನಾಯ್ತು ಗೊತ್ತಾ?

ಚೆನ್ನೈ: ಬಾಡಿಗೆ ಚಾಲಕನೋರ್ವನ ಬ್ಯಾಂಕ್​ ಖಾತೆಗೆ ತಮಿಳುನಾಡು ಮರ್ಕೆಂಟೈಲ್​ ಬ್ಯಾಂಕ್​ನಿಂದ 9 ಸಾವಿರ ಕೋಟಿ ರೂಪಾಯಿ ಜಮಾ ಆಗಿರುವ ಘಟನೆ ಇದೀಗ ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದೆ. ಈ ಬಗ್ಗೆ ಕಾರು ಚಾಲಕ ಹಾಗೂ ಬ್ಯಾಂಕ್​ ಕಡೆಯಿಂದ ಲಾಯರ್​ಗಳು ಮಧ್ಯಸ್ಥಿಕೆವಹಿಸಿ ರಾಜಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಪಳನಿ ನೇಯ್ಕಪಟ್ಟಿ ನಿವಾಸಿ ರಾಜಕುಮಾರ್​, ಕೋಡಂಬಾಕ್ಕಂನಲ್ಲಿ ಸ್ನೇಹಿತರೊಬ್ಬರ ರೂಂನಲ್ಲಿದ್ದು, ಬಾಡಿಗೆ ಬಾಡಿಗೆ ಕಾರು ಓಡಿಸುತ್ತಿದ್ದಾರೆ. ಸೆ. 9 ರಂದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ರಾಜಕುಮಾರ್​ ಅವರು ತಮ್ಮ ಕಾರಿನಲ್ಲಿ ಮಲಗಿದ್ದಾಗ ಮೊಬೈಲ್​ಗೆ ಮೆಸೇಜ್​ ಬಂದಿದೆ. ರಾಜಕುಮಾರ್​ ಅವರ ಬ್ಯಾಂಕ್​ ಖಾತೆಗೆ ಮರ್ಕೆಂಟೈಲ್​ ಬ್ಯಾಂಕ್​ನಿಂದ 9 ಸಾವಿರ ಕೋಟಿ ರೂಪಾಯಿ ಜಮಾ ಆಗಿದೆ ಎಂದು ಮೆಸೇಜ್​ ಮೂಲಕ ತಿಳಿಸಲಾಗಿತ್ತು. ಅದರಲ್ಲಿದ್ದ ಸೊನ್ನೆಗಳನ್ನು ಲೆಕ್ಕ ಹಾಕಲಾಗದೆ ಎಷ್ಟು ಹಣ ಬಂದಿದೆ ಎಂದು ಗೊಂದಲದಲ್ಲಿದ್ದ ರಾಜಕುಮಾರ್,​ ಯಾರೋ ಮೋಸ ಮಾಡಲೆಂದೇ ಈ ರೀತಿಯ ಮೆಸೇಜ್​ ಕಳುಹಿಸಿದ್ದಾರೆ, ತಮ್ಮ ಖಾತೆಯಲ್ಲಿ 15 ರೂಪಾಯಿ ಮಾತ್ರ ಇದೆ ಎಂದುಕೊಂಡಿದ್ದರು. ಆದರೂ ಒಂದು ಬಾರಿ ನೋಡೋಣ ಎಂದು ತಮ್ಮ ಸ್ನೇಹಿತರೊಬ್ಬರಿಗೆ 21 ಸಾವಿರ ರೂಪಾಯಿ ಕಳುಹಿಸಿದ್ದಾರೆ. ಆಗ ನಿಜವಾಗಿಯೂ ಅವರ ಖಾತೆಗೆ 9 ಸಾವಿರ ಕೋಟಿ ರೂಪಾಯಿ ಹಣ ಬಂದಿರುವುದು ನಿಜ ಎಂದು ನಂಬಿ ಖುಷಿಯಾಗಿದ್ದಾರೆ.


ಆದರೆ ಅಷ್ಟರಲ್ಲಿ ತಮಿಳುನಾಡು ಮರ್ಕೆಂಟೈಲ್​ ಬ್ಯಾಂಕ್​ನ ಕೇಂದ್ರ ಕಚೇರಿ ತೂತುಕುಡಿಯಿಂದ ರಾಜಕುಮಾರ್​ ಅವರಿಗೆ ದೂರವಾಣಿ ಕರೆ ಬಂದಿದೆ. ಫೋನ್​ ಮಾಡಿದವರು ತಪ್ಪಾಗಿ ನಿಮ್ಮ ಖಾತೆಗೆ 9 ಸಾವಿ ಕೋಟಿ ಹಣ ಜಮೆಯಾಗಿದೆ. ಬ್ಯಾಂಕ್​ನಿಂದ ಜಮೆ ಆಗಿರುವ ಹಣವನ್ನು ಖರ್ಚು ಮಾಡದಂತೆ ಬ್ಯಾಂಕ್​ ಆಡಳಿತ ಮಂಡಳಿ ರಾಜಕುಮಾರ್​ ಅವರಿಗೆ ತಿಳಿಸಿದೆರಾಜಕುಮಾರ್​ ಅವರು ಸ್ನೇಹಿತನಿಗೆ ಕಳುಹಿಸಿದ 21 ಸಾವಿರ ಹೊರತುಪಡಿಸಿ, ಉಳಿದ ಎಲ್ಲಾ ಹಣವನ್ನು ತಕ್ಷಣವೇ ಹಿಂಪಡೆದಿದೆ. ಇದಾದ ನಂತರ ಬ್ಯಾಂಕ್​ನವರು ಉಳಿದ 21 ಸಾವಿರ ರೂಪಾಯಿಯನ್ನು ಹಿಂತಿರುಗಿಸುವಂತೆ ರಾಜಕುಮಾರ್​ ಅವರಿಗೆ ಬೆದರಿಕೆ ಹಾಕಲು ಆರಂಭಿಸಿತ್ತು ಎನ್ನಲಾಗಿದೆ. ರಾಜಕುಮಾರ್​ ಅವರು ಹತ್ತಿರದ ಪೊಲೀಸ್​ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ. ಆದರೆ ನಂತರ ತಮಿಳುನಾಡು ಮರ್ಕೆಂಟೈಲ್​ ಬ್ಯಾಂಕ್​ನ ಕಡೆಯಿಂದ ಹಾಗೂ ಕಾರು ಚಾಲಕ ರಾಜಕುಮಾರ್​ ಕಡೆಯಿಂದ ವಕೀಲರು ಚೆನ್ನೈನ ತ್ಯಾಗರಾಯನಗರದಲ್ಲಿರುವ ಶಾಖೆಗೆ ತೆರಳಿ ಸಂಧಾನ ಮಾತುಕತೆ ನಡೆಸಿದ್ದಾರೆ.ಸಂಧಾನ ಮಾತುಕತೆಯಲ್ಲಿ ಬ್ಯಾಂಕ್​ನವರು ರಾಜಕುಮಾರ್​ ಅವರು ಈಗಾಗಲೇ 9 ಸಾವಿರ ಕೋಟಿ ರೂಪಾಯಿಯಲ್ಲಿ ಸ್ನೇಹಿತನಿಗೆ ನೀಡಿದ 21 ಸಾವಿರ ರೂಪಾಯಿಯನ್ನು ಹಿಂತಿರುಗಿಸುವುದು ಬೇಡ ಎನ್ನುವುದರ ಜೊತೆಗೆ ಅವರಿಗೆ ವಾಹನ ಸಾಲವನ್ನು ನೀಡುವುದಾಗಿಯೂ ಹೇಳಿದ್ದಾರೆ. ಆದರೆ ರಾಜಕುಮಾರ್​ ಆ ಆಫರ್​ ಅನ್ನು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ. ಒಬ್ಬ ಕಾರು ಚಾಲಕನ ಖಾತೆಗೆ ಏಕಾಏಕಿ 9 ಸಾವಿರ ಕೋಟಿ ಹಣ ಜಮೆ ಆಗಿರುವುದು ಭಾರಿ ಸಂಚಲನ ಮೂಡಿಸಿದೆ.

ಬೆಳ್ತಂಗಡಿ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ ಹರೀಶ್ ಪೂಜಾರಿ ಬಂಧನ

Posted by Vidyamaana on 2023-07-12 16:53:38 |

Share: | | | | |


ಬೆಳ್ತಂಗಡಿ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ ಹರೀಶ್ ಪೂಜಾರಿ ಬಂಧನ

ಬೆಳ್ತಂಗಡಿ: ಬಜಿರೆ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ನೀಡಿದ ದೂರಿನಲ್ಲಿ ಹರೀಶ್ ಪೂಜಾರಿ, ಡಾ.ರಾಜೇಶ್, ರಮೇಶ್ ಕುಡೇರು ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

ದೂರು ಸ್ವೀಕರಿಸಿದ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಎಸ್.ಐ ಸೌಮ್ಯ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹರೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರೆ. ಘಟನೆಯಲ್ಲಿ ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ

ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

Posted by Vidyamaana on 2023-07-21 23:20:36 |

Share: | | | | |


ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪತ್ರಿಕಾ ಭವನದ ನೇತೃತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಜುಲೈ 22ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಪ್ರಿಯಾ ನಾಯ್ಕ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಎಸ್. ರವಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ ಉಪಸ್ಥಿತರಿರುವರು.

ಇದೇ ಸಂದರ್ಭ ಹಿರಿಯ ಪತ್ರಿಕಾ ವಿತರಕ ಯು. ನಾಗರಾಜ್, ಬಳ್ಳಿ ನೆಕ್ಕಿಲಾಡಿಯ ಸಮಗ್ರ ಸಾವಯವ ಕೃಷಿಕ ಐರಿನ್ ಲೋಬೋ, ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ರೆಹನಾಝ್ ಅವರನ್ನು ಸನ್ಮಾನಿಸಲಾಗುವುದು.

ಬೆಂಗಳೂರು ಅನನ್ಯ ಎಂಟರ್ ಪ್ರೈಸಸ್ ನ ನಟೇಶ್ ಪೂಜಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ್, ಬಿ.ಎಸ್.ಎಫ್. ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಪುತ್ತೂರು ನಗರ ಸಭೆ ಉಪಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್

Posted by Vidyamaana on 2023-12-14 20:44:12 |

Share: | | | | |


ಪುತ್ತೂರು ನಗರ ಸಭೆ ಉಪಚುನಾವಣೆ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್

ಪುತ್ತೂರು : ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಕಾಂಗ್ರೆಸ್ ನಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ದಿನೇಶ್ ಶೇವಿರೆ ಹಾಗೂ ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ರೈ ಅವರು ತಿಳಿಸಿದ್ದಾರೆ.


ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು!

Posted by Vidyamaana on 2023-11-26 11:23:14 |

Share: | | | | |


ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು!

ಪುತ್ತೂರು : ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.


ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ (17) ಮೃತ ಯುವತಿ.


ಈ ಬಗ್ಗೆ ನಿಶಾ ರವರ ಸಹೋದರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ನಿಶಾನನ್ನು ಪರೀಕ್ಷಿಸಿ ಒಳ ರೋಗಿಯನ್ನಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದು, ಸದ್ರಿ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ UDR .No: 43/2023 ಕಲo: 174 CRPC ರಂತೆ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ ; ಒಂಬತ್ತು ಅಂಶಗಳ ನವಯುಗ ನವಪಥ ಕಾರ್ಯಸೂಚಿ ಬಿಡುಗಡೆ

Posted by Vidyamaana on 2024-04-24 03:47:23 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ ; ಒಂಬತ್ತು ಅಂಶಗಳ ನವಯುಗ ನವಪಥ ಕಾರ್ಯಸೂಚಿ ಬಿಡುಗಡೆ

ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.


ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸುವುದು ಮತ್ತು ಇದರ ಜೊತೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಶಿರಾಡಿ ಘಾಟ್ ನಲ್ಲಿ ಆಧುನಿಕ ಮಾದರಿಯಲ್ಲಿ ಸರ್ವಋತು ರಸ್ತೆಯಾಗಿಸುವುದು ಮತ್ತು ಮಂಗಳೂರು- ಬೆಂಗಳೂರು ಮಧ್ಯೆ ಪ್ರತ್ಯೇಕ ರೈಲ್ವೇ ಹಳಿ ನಿರ್ಮಿಸುವ ಗುರಿಯಿದೆ. ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯಾದಲ್ಲಿ ಮಂಗಳೂರು ಅಭಿವೃದ್ಧಿಗೆ ವೇಗ ಸಿಗಲಿದೆ. ಮಂಗಳೂರಿನ ಬಂದರಿನ ಮೂಲಕ ಬೆಂಗಳೂರಿಗೆ ಕನೆಕ್ಟ್ ಆಗಲು ಅವಕಾಶ ಸಿಗಲಿದೆ ಎಂದರು.

ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ


ಪ್ರಮುಖವಾಗಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆಗಳ ಸ್ಥಾಪನೆ ಆಗಬೇಕಾಗಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ಉತ್ತೇಜನ ನೀಡಿ, ಆಹಾರ ಸಂಸ್ಕರಣೆ, ಜವಳಿ, ಮೀನುಗಾರಿಕೆ, ಸಮುದ್ರ ಅವಲಂಬಿತ ಉತ್ಪನ್ನಗಳ ವಿಶೇಷ ಕ್ಲಸ್ಟರ್ ಸ್ಥಾಪನೆ, ಮಹಿಳೆಯರು ಮತ್ತು ಮೀನುಗಾರ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಇಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಪಡೆದವರಿಗೆ ಅವಕಾಶ ಒದಗಿಸುವುದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳನ್ನು ಸ್ಥಾಪಿಸಲು ಜಾಗತಿಕ ಕಂಪನಿಗಳಿಗೆ ಆಹ್ವಾನ ನೀಡಲಾಗುವುದು.

Recent News


Leave a Comment: