Posted by vidyamaana on 2024-07-25 13:38:46 |
ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಇದು ಹೇಗೆ ಕಾರ್ಯನಿರ್ವಹಿಸುತ್ತದೆ
ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.
ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ
ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ
ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.
Posted by Vidyamaana on 2023-07-06 13:46:07 |
ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಡವಟ್ಟು ಮಾಡಿಕೊಂಡದ್ದು ಗಮನ ಸೆಳೆಯಿತು.ಒಂದು ಸಾವಿಗೆ ಇವರು ಇಷ್ಟೆಲ್ಲಾ ಹೋರಾಟ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡರು, ಅವರಿಗೂ ನ್ಯಾಯ ಕೊಡಿಸಲು ಹೋರಾಟ ಮಾಡಬೇಕಲ್ಲ ಎಂದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ , ಎ ..ಪ್ರದೀಪ್..ಸಾವು ಆಗಲಿಲ್ಲ ಮಾರಾಯ .ಕುತ್ಕೋ ನೀನು ಎಂದರುಸ್ಪೀಕರ್ ಯು.ಟಿ.ಖಾದರ್ ಅವರ ಮನವಿಯ ಬಳಿಕ ಪ್ರತಿಪಕ್ಷಗಳ ಶಾಸಕರು ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಂಡರು. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸಚಿವ ಚೆಲುವರಾಯ ಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
Posted by Vidyamaana on 2024-01-06 15:01:18 |
ಸುಳ್ಯ : ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ತಕ್ಷಣ ಬಂಧಿಸಬೇಕು ಎಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ , ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಅದರಲ್ಲಿ ನಡುವಿನಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯವನ್ನು ಯಾರೋ ಕಿಡಿಗೇಡಿಗಳು ರಾತ್ರಿ ಹರಿದು ಹಾಕಿದ್ದಾರೆ.
ಹಿಂದೂಗಳ ಭಾವನೆ ಜೊತೆ ಆಟವಾಡುವ ಇಂತಹ ರಾಮವಿರೋಧಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಇಲ್ಲದಿದ್ದರೆ ಹಿಂದೂ ಸಮಾಜ ಹೋರಾಟಕ್ಕಿಳಿಯಬೇಕಾದಿತು ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.
Posted by Vidyamaana on 2024-04-08 13:00:16 |
ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ.
Posted by Vidyamaana on 2024-01-01 22:13:21 |
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ, ಕುಟುಂಬಸ್ಥರನ್ನು ಅಗಲಿದ್ದಾರೆ.
Posted by Vidyamaana on 2023-09-15 21:51:08 |
ಮಹಾರಾಷ್ಟ್ರ :ಪ್ರೀತಿಗೆ ಯಾವುದೇ ಧರ್ಮ, ವಯಸ್ಸು, ಬಣ್ಣ, ಸೌಂದರ್ಯ ಮುಖ್ಯವಲ್ಲ ಅಂತಾ ಹೇಳುವ ಒಂದು ಕಾಲವಿತ್ತು. ಆದರೆ ಇದೀಗ ಪ್ರೀತಿಗೆ ಲಿಂಗವೂ ಮುಖ್ಯವಲ್ಲ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೊರದೇಶದಲ್ಲಿ ಆಗುತ್ತಿದ್ದ ಸಲಿಂಗಕಾಮಿಗಳ ಮದುವೆ ಇದೀಗ ನಮ್ಮ ಭಾರತ ದೇಶದಲ್ಲೂ ನಡೆಯುತ್ತಿದೆ. ಅನೇಕ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಉಂಟು. ಇದಕ್ಕೆ ಉದಾಹರಣೆ ಮಹಾರಾಷ್ಟ್ರದ ಅವಿನಾಶ್ ಹಾಗೂ ವರುಣ್ ದಂಪತಿ.
6 ವರ್ಷಗಳ ಕಾಲ ಪ್ರೀತಿ ಮಾಡಿದ ಇವರು ಕುಟುಂಬದ ಒಪ್ಪಿಗೆ ಮೇರೆಗೆ ಲೋನಾವಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ತಮ್ಮ ಸಂಬಂಧ ಬಗೆಗೆ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಾಕಿ ವರುಣ ಪೋಸ್ಟ್ ಮಾಡಿದ್ದಾರೆ. 6 ವರ್ಷಗಳ ದೀರ್ಘ ಪ್ರೇಮ ಸಂಬಂಧ ಮುಗ್ಗರಿಸಿದ್ದರಿಂದ ನಾನು ತೀವ್ರ ಬೇಸರದಲ್ಲಿದ್ದೆ. 2021ರಲ್ಲಿ ಪೋಷಕರನ್ನು ನೋಡಲು ಆಗಷ್ಟೇ ಭಾರತಕ್ಕೆ ಬಂದಿದ್ದ ನಾನು ಅವಿನಾಶ್ ಅವರನ್ನು ಭೇಟಿಮಾಡಿದೆ. ನಾನು ಗಂಭೀರವಾಗಿ ಸಂಗಾತಿಯ ಹುಡುಕಾಟದಲ್ಲಿದ್ದೆ.
ನಾನು ಮತ್ತು 37 ವರ್ಷದ ಅವಿನಾಶ್ ಪರಸ್ಪರ ಪ್ರೀತಿಯಲ್ಲಿ ಬಿದ್ದೆವು.ಆದರೆ ನಮ್ಮ ಸಂಬಂಧವನ್ನು ಮೊದಮೊದಲು ಎರಡೂ ಕಡೆಯ ಪೋಷಕರು ಒಪ್ಪಲಿಲ್ಲ. ಕೊನೆಗೆ ಒಪ್ಪಿಕೊಂಡರು. ಸಾಕಷ್ಟು ಕಲ್ಯಾಣಮಂಟಪಗಳು ಬಾಡಿಗೆ ಕೊಡಲು ನಿರಾಕರಿಸಿದವು. ಕೊನೆಗೆ ಲೋನಾವಾಲದಲ್ಲಿ ಸಪ್ತಪದಿಯನ್ನು ತುಳಿದೆವು.
150 ಜನರು ಅತಿಥಿಗಳು ನಮ್ಮ ಮದುವೆಗೆ ಬಂದು ಹಾರೈಸಿದರು. ಪೋಷಕರು ಮನದುಂಬಿ ಹಾರೈಸಿದರು. ಸಿಯಾರಾ (ನಾಯಿ)ಳೊಂದಿಗೆ ನಮ್ಮ ಪುಟ್ಟ ಸಂಸಾರ ನೌಕೆ ಸಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ
Posted by Vidyamaana on 2023-07-18 12:31:41 |
ಪುತ್ತೂರು: ದ ಕ ಜಿಲ್ಲೆಯಲ್ಲಿ ಅಡಿಕೆಗೆ ಮತ್ತು ರಬ್ಬರ್ಗೆ ಎಲೆ ಚುಕ್ಕಿ ರೋಗ ಬಂದಿದ್ದು ಇದು ಕೃಷಿಕರ ಆತಂಕಕ್ಕೆ ಕಾರಣವಾಗಿದ್ದು ಈ ರೋಗಕ್ಕೆ ಕಾರಣ ಏನೆಂಬುದನ್ನು ಪತ್ತೆ ಮಾಡಬೇಕು ಮತ್ತು ಕೃಷಿಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಮಳೆಗಾಲ ಆರಂಭದಲ್ಲೇ ಹಳದಿ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಈ ರೋಗ ಎಲ್ಲಾ ಕಡೆಗಳಲ್ಲೂ ಹರಡುವ ಸಾಧ್ಯತೆ ಇದೆ. ಅಡಿಕೆಗೆ ಒಂದಲ್ಲ ಒಂದು ರೋಗ ಬರುತ್ತಲೇ ಇದ್ದು ಇದು ಕೃಷಿಕರ ಆತಂಕಕ್ಕೂ ಕಾರಣವಾಗಿದೆ. ಹಳದಿ ಎಲೆ ಚುಕ್ಕಿ ರೋಗದಿಂದ ಅಡಿಕೆ ಹಾಗೂ ರಬ್ಬರ್ ಗಿಡಗಳು ಸತ್ತು ಹೋದಲ್ಲಿ ಕೃಷಿಕರಿಗೆ ನಷ್ಟವಾಗಲಿದ್ದು ಇದಕ್ಕೆ ಸರಕಾರ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ವಿಟ್ಲದಲ್ಲಿರುವ ಸಿಪಿಸಿಆರ್ಐ ಎಂಬ ಸಂಸ್ಥೆ ಅಡಿಕೆ ವಿಚಾರದಲ್ಲಿ ಸಂಶೋಧನೆ ಮಾಡುವ ಕೇಂದ್ರ ಸರಕಾರದ ಒಂದು ಸಂಸ್ಥೆಯಾಗಿದ್ದು ಈ ಸಂಸ್ಥೆ ಅಡಿಕೆ ಕೃಷಿಕರ ಪರವಾಗಿ ಯಾವುದೇ ಕೆಲಸವನ್ನು ಮಾಡುತ್ತಿಲ್ಲ , ಅಡಿಕೆಗೆ ಬಂದಿರುವ ರೋಗದ ಕುರಿತು ಸಂಶೋಧನೆ ಮಾಡಿ ಅದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಶಾಸಕರು ಸರಕಾರದ ಗಮನಕ್ಕೆ ತಂದರು.
ಗಾಯಾಳು ಕೃಷಿಕರಿಗೆ ಮಾಶಾಸನ ಕೊಡಿ:
ದ ಕ ಜಿಲ್ಲೆಯಲ್ಲಿ ಸಾವಿರಾರು ಕೃಷಿಕರು ಅಡಿಕೆ ಮರ, ತೆಂಗಿನ ಮರ ಮತ್ತು ಮರಗಳಿಂದ ಬಿದ್ದು ಗಂಬೀರ ಸ್ವರೂಪದ ಗಾಯಗಳಾಗಿದೆ, ಚಿಕಿತ್ಸೆಗೂ ಸ್ಪಂದನೆ ನೀಡಲು ಸಾಧ್ಯವಾಗದೆ ಅಥವಾ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಮಲಗಿದ್ದಲ್ಲೇ ಇದ್ದು ಅಂಥಹ ಕೃಷಿಕರಿಗೆ ಸರಕಾರ ತಿಂಗಳಿಗೆ ಕನಿಷ್ಟ 5೦೦೦ ಮಾಶಾಸನವನ್ನು ನೀಡಬೇಕು. ಮಲಗಿದ್ದಲ್ಲೇ ಇರುವ ಇಂಥಹ ಕೃಷಿಕರಿಗೆ ನಿತ್ಯ ಊಟಕ್ಕೆ, ಔಷಧಿ ಖರ್ಚಿಗೆ ಹಣವಿಲ್ಲದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಇಂತವರು ರಾಜ್ಯದಲ್ಲಿ ಸುಮಾರು ೨೫ ಸಾವಿರಕ್ಕೂ ಮಿಕ್ಕಿ ಇರಬಹುದು ಅವರೆಲ್ಲರಿಗೂ ಮಾನವೀಯತೆ ನೆಲೆಯಲ್ಲಿ ಸರಕಾರ ಮಾಶಾಸನವನ್ನು ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಎಸ್ ಪಿ ಕಚೇರಿ ಸ್ಥಳಾಂತರ ಮಾಡಿ:
ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡಬೇಕು. ಸ್ಥಳಾಂತರಕ್ಕಾಗಿ ಕೆಲವೊಂದು ಪ್ರಕ್ರಿಯೆಗಳು ಈಗಾಗಲೇ ನಡೆದಿದ್ದು ಅದನ್ನು ಮುಂದಿನ ಬಜೆಟ್ನೊಳಗೆ ಕಾರ್ಯರೂಪಕ್ಕೆ ತರಬೇಕು ಎಂದು ಶಾಸಕರು ಆಗ್ರಹಿಸಿದರು. ಮಂಗಳೂರಿನಲ್ಲಿ ಕಮಿಷನರೇಟ್ ವ್ಯಾಪ್ತಿ ಇರುವ ಕಾರಣ ಗ್ರಾಮಾಂತರ ಭಾಗವಾದ ಪುತ್ತೂರಿಗೆ ಎಸ್ ಪಿ ಕಚೇರಿಯನ್ನು ಶಿಫ್ಟ್ ಮಾಡಬೇಕಾದ ಅವಶ್ಯಕತೆ ಇದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಇದು ಸಹಕಾರಿಯಾಗಲಿದೆ ಎಂದು ಶಾಸಕರು ಸರಕಾರಕ್ಕೆ ಮನವಿ ಮಾಡಿದರು.
ಪುತ್ತೂರಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆಯಿಲ್ಲದ ಕಾರಣ ಬಡವರಿಗೆ ತುಂಬಾ ತೊಂದರೆಯಾಗಿದೆ ಈ ಕಾರಣಕ್ಕೆ ಪುತ್ತೂರಿಗೆ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಈಗಾಗಲೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವ ಕುರಿತು ಸರಕಾರದ ಹಂತದಲ್ಲಿ ಮಾತುಕತೆಗಳನ್ನು ನಡೆಸಲಾಗಿದೆ. ಮುಂದಿನ ಬಜೆಟ್ನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಅನುದಾನವನ್ನು ಕಾಯ್ದಿರುಸುವಂತೆ ಸರಕಾರಕ್ಕೆ ಮನವಿ ಮಾಡಿದರು.
ದ ಕ ಜಿಲ್ಲೆಗೆ ಬಜೆಟ್ನಲ್ಲಿ ಏನೂ ಸಿಗುತ್ತಿಲ್ಲ
ಕಳೆದ ೧೫ ವರ್ಷಗಳಿಂದ ಬಜೆಟ್ನಲ್ಲಿ ದ ಕ ಜಿಲ್ಲೆಗೆ ಏನೂ ವಿಶೇಷ ಅನುದಾನಗಳು ಸಿಗುತ್ತಿಲ್ಲ. ಮಂಗಳಾ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಇದಕ್ಕೆ ೧೦೦೦ ಕೋಟಿ ಅನುದಾನ ಬೇಕಿದ್ದು ಪ್ರತೀ ವರ್ಷ ತಲಾ ೨೦೦ ಕೋಟಿಯಂತೆ ನೀಡಿದರೆ ಈ ಯೋಜನೆಯನ್ನು ಸಾಕಾರಗೊಳಿಸಬಹುದಾಗಿದೆ. ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ, ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಆಗಾಗಿ ದ ಕ ಜಿಲ್ಲೆಗೆ ವಿಶೇಷ ಒತ್ತು ನೀಡುವಂತೆ ಮನವಿ ಮಾಡಿದರು.
ಮಾತಾಡದೆ ಇಷ್ಟು ಕಾರುಬಾರು ಮಾಡುತ್ತೀರಿ
ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಶಾಸಕರು ಸಭಾಧ್ಯಕ್ಷರಲ್ಲಿ ಹೇಳಿದಾದ “ ನೀವು ಮಾತನಾಡದೆ ಇಷ್ಟೊಂದು ಕಾರುಬಾರು ಮಾಡುತ್ತೀರಿ ಇನ್ನು ಮಾತಾಡಿದ್ರೆ ಏನು ಮಾಡಬಹುದು. ನಾವಿಬ್ಬರೂ ಒಂದೇ ಕಡೆಯಿಂದ ಬಂದವರು ನೀವಲ್ಲಿ ಕುಳಿತುಕೊಂಡಿದ್ದೀರಿ , ಉಳಿದವರು ಆ ಬದಿಯಲ್ಲಿ ವಿರೋಧ ಪಕ್ಷದಲ್ಲಿ ಕೂತಿದ್ದಾರೆ ಎಂದು ಶಾಸಕರು ಹೇಳಿದರು.
ಅಡಿಕೆಗೆ ವಿರೋಧ ಮಾಡಿದವರು ದ್ವನಿ ಸೇರಿಸ್ತಾ ಇದ್ದಾರೆ
ಕಳೆದ ಬಾರಿ ಬಿಜೆಪಿ ಅದಿಕಾರದಲ್ಲಿದ್ದಾಗ ಬಿಜೆಪಿಯವರು ಅಡಿಕೆಗೆ ವಿರೋಧ ಮಾಡುತ್ತಿದ್ದವರು ಈಗ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮಾತಿನಲ್ಲೇ ಏಟು ನೀಡಿದ್ದಾರೆ. ನಾವು ವಿರೋಧ ಮಾಡಿಲ್ಲ ಯಾರು ವಿರೋಧ ಮಾಡಿದವರು ಎಂದು ಅರಗಜ್ಞಾನೇಂದ್ರ ಅವರು ಮರು ಪ್ರಶ್ನಿಸಿದಾಗ ನೀವು ಏನು ಮಾಡಿದ್ದೀರಿ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಶಾಸಕರು ಮರುತ್ತರ ನೀಡಿದರು.
ಮಂದಿನ ೨೫ ವರ್ಷ ಬಿಜೆಪಿಗೆ ವಿರೋಧ ಪಕ್ಷದ ಸ್ಥಾನ
ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಸಮಯದಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದಾಗ ನನಗೆ ಒಂದು ರಈತಿಯ ಭಯ ಇತ್ತು. ಗೆದ್ದ ಬಳಿಕವೂ ಈ ಭಯ ಇತ್ತು. ಈ ಯೋಜನೆಗಳನ್ನು ಹೇಗೆ ಸರಕಾರ ಕೊಡಬಹುದು ಎಂಬ ಆತಂಕವೂ ಇತ್ತು ಆದರೆ ಬಜೆಟ್ನಲ್ಲಿ ಇದಕ್ಕೆ ಅನುದಾನ ಇಟ್ಟ ಬಳಿಕ ನನಗೆ ಧೈರ್ಯ ಬಂತು. ಗ್ಯಾರಂಟಿ ಯೋಜನೆಯನ್ನು ರಾಜ್ಯದ ಜನತೆ ಸ್ವೀಕರಿಸಿದ್ದಾರೆ ಈ ಕಾರಣಕ್ಕೆ ಮುಂದಿನ ೨೫ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುತ್ತದೆ ಬಿಜೆಪಿ ವಿರೋಧ ಪಕ್ಷದಲ್ಲೇ ಕೂರಬೇಕಾದ ಸ್ಥಿತಿ ಬರಲಿದೆ ಎಂದು ಶಾಸಕರು ಹೇಳಿದರು.