ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಸುದ್ದಿಗಳು News

Posted by vidyamaana on 2024-07-08 14:36:42 |

Share: | | | | |


ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ದಿಯಾ

ಬೆಂಗಳೂರು : ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು.

ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ದಿಯಾ ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

 Share: | | | | |


ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮಾಲೀಕನ ಬಂಧನ

Posted by Vidyamaana on 2024-01-07 10:56:52 |

Share: | | | | |


ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮಾಲೀಕನ ಬಂಧನ

ಬೆಂಗಳೂರು : ಬೆಂಗಳೂರು ನಗರದ ಓಲ್ಡ್ ಮದ್ರಾಸ್ ರಸ್ತೆಯ ಬಹುಮಹಡಿ ಕಟ್ಟಡದಲ್ಲಿರುವ ನಿರ್ವಾಣ ಸ್ಪಾ ಮೇಲೇ ಸಿಸಿಬಿ ದಾಳಿ ನಡೆಸಿದ್ದರಿಂದ ವೇಶ್ಯಾವಾಟಿಕೆ ದಂಧೆ ಬಯಲಾಗಿದೆ.ಸ್ಪಾ ಮಾಲೀಕ ಅನೀಲ್ ಎಂದು ಹೇಳಲಾಗುತ್ತಿದ್ದು, ಬೇರೆ ರಾಜ್ಯದಿಂದ ಆಗಮಿಸಿ ಇಲ್ಲಿ ಸ್ಪಾ ನಡೆಸುತ್ತಿದ್ದ, ಆದರೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದದ್ದು ಬಯಲಾಗಿದೆ.ಆರೋಪಿಯೂ ಹೊರ ರಾಜ್ಯ ವಿದೇಶದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗುತ್ತಿದೆ.


ಸಿಸಿಬಿ ಮಹಿಳಾ ಸಂರಕ್ಷಣಾ ದಳವು ದಾಳಿ ನಡೆಸಿದ ವೇಳೆ ಒಟ್ಟು 44 ಮಹಿಳೆಯರನ್ನು ಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಹುಮಡಿ ಕಟ್ಟಡದ 1 ಮತ್ತು 6ನೇ ಫ್ಲೋರ್ ನಲ್ಲಿ ಈ ದಂದೆ ನಡೆಯುತ್ತಿತ್ತು.


ಹೊರ ರಾಜ್ಯ ಹಾಗೂ ದೇಶದಿಂದ ಯುವತಿಯರನ್ನು ಕರೆದೊಯ್ದು ಆರೋಪಿ ವೇಶ್ಯಾವಾಟಿಕೆಯಲ್ಲಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಯನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಗೆ ಹೈಕೋರ್ಟ್ ಆದೇಶ

Posted by Vidyamaana on 2023-11-10 13:54:17 |

Share: | | | | |


ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಗೆ ಹೈಕೋರ್ಟ್ ಆದೇಶ

ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ, ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಇದೀಗ ಹೈಕೋರ್ಟ್ ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆಗೆ ಆದೇಶ ಮಾಡಿದೆ. ಈ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದಂತ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದೆ. 


ರಾಜ್ಯ ಸರ್ಕಾರವು ಪಿಎಸ್‌ಐ ನೇಮಕಾ ಅಕ್ರಮದ ನಂತ್ರ ಪರೀಕ್ಷೆ, ಆಯ್ಕೆ ಪಟ್ಟಿ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಎನ್ ವಿ ಚಂದನ್ ಸೇರಿದಂತೆ ಆಯ್ಕೆ ಪಟ್ಟಿಯಲ್ಲಿದ್ದ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಸ್ ಸಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.


ಮರು ಪರೀಕ್ಷೆ ವಿರೋಧಿಸಿ 296 ಅಭ್ಯರ್ಥಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು, ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಆ ಬಳಿಕ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ತನ್ನ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿದ್ದು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವಂತ ಆದೇಶ ಹೊರಡಿಸಿದೆ. ಅಲ್ಲದೇ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.


ಅಂದಹಾಗೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಂತ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮ ಎಸಗಿದವರನ್ನು ಪ್ರತ್ಯೇಕಿಸಿ, ಅಕ್ರಮದಲ್ಲಿ ಭಾಗಿಯಾಗಿರದೇ ಇರುವವರನ್ನು ನೇಮಕಾತಿ ಅಂತಿಮಗೊಳಿಸುವಂತೆ ಕೋರಿದ್ದರು. ಈ ಅರ್ಜಿಗೆ ಹೈಕೋರ್ಟ್ ಮರು ಪರೀಕ್ಷೆ ನಡೆಸುವಂತೆ ಮಹತ್ವದ ತೀರ್ಪನ್ನು ಹೊರಡಿಸಿದೆ.

ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

Posted by Vidyamaana on 2023-10-24 07:36:47 |

Share: | | | | |


ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ  ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇದೀಗ ನ್ಯಾಂಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸವಿವ ಈಶ್ವರ್ ಖಂಡ್ರೆ, ಸಂತೋಷ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವುದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಯಾರೇ ಆದರೂ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಾರೆ, ನಂತರ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿಗೆ ಎಲ್ಲರೂ ಸಮಾನರು. ರಾಜ್ಯದಲ್ಲಿ ಈ ರೀತಿಯ ಘಟನೆಗಳಿಗೆ ಸರ್ಕಾರ ನಮ್ಮ ಇಲಾಖೆ ಆಸ್ಪದ ನೀಡುವುದಿಲ್ಲ. ಹಲವು ಕಡೆ  ಕಳ್ಳ ಬೇಟೆ ನಡೆಯುತ್ತದೆ ಅನ್ನೋ ಮಾಹಿತಿ ಇದೆ. ಮೊನ್ನೆಯಸ್ಟೇ ದಾಂಡೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈಗ ಕಾಡು ಪ್ರಾಣಿಗಳ ಭೇಟೆ ಸಾಕಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಅರಣ್ಯ, ವನ್ಯಜೀವಿ, ಪರಿಸರ ಸಂರಕ್ಷಣೆ ಕಾಯ್ದೆ ಇದೆ. ಇವೆಲ್ಲಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಹಾಗೂ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದೇ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮ ಪಾಲಿಸುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಯಾರೇ ಆದರೂ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ

ಫಸ್ಟ್ ನೈಟ್ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

Posted by Vidyamaana on 2024-04-26 17:36:55 |

Share: | | | | |


ಫಸ್ಟ್ ನೈಟ್ ದಿನವೇ ಪತ್ನಿಯ ಮಾಜಿ ಪ್ರಿಯಕರ ಕಳುಹಿಸಿದ ಬೆತ್ತಲೆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪತಿ

ಮಧ್ಯಪ್ರದೇಶ: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್​​ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ. ಫಸ್ಟ್​​ ನೈಟ್​​ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ.

ಹತ್ತೂರ ಒಡೆಯನ ಊರಿನಲ್ಲಿ ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ

Posted by Vidyamaana on 2023-12-25 13:31:51 |

Share: | | | | |


ಹತ್ತೂರ ಒಡೆಯನ ಊರಿನಲ್ಲಿ ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ

ಪುತ್ತೂರು: ಕಲಿಯುಗದ ಪ್ರತ್ಯಕ್ಷ ದೇವರೆಂದೇ ಭಕ್ತರಿಂದ ಕರೆಯಲ್ಪಡುವ ಶ್ರೀನಿವಾಸ ದೇವರಿಗೆ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿವತಿಯಿಂದ ಇತಿಹಾಸ ಪ್ರಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ  ಡಿ.೨೫ರಂದು ಅತ್ಯಂತ ವೈಭವದಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಡಿ.೨೪ರಂದು ಸಂಜೆ ಸಾವಿರಾರು ಭಕ್ತರ ನಡುವೆ ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರನ್ನು ವೈಭವದಿಂದ ಮೆರವಣಿಗೆಯ ಮೂಲಕ ಕಲ್ಯಾಣೋತ್ಸವ ಮಂಟಪಕ್ಕೆ ಕರೆತರಲಾಯಿತು.


ಬೊಳುವಾರಿನಲ್ಲಿ ವೈಭವದ ಮೆರವಣಿಗೆಯನ್ನು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ಚೆಂಡೆಕುಣಿತ, ನೃತ್ಯ ಭಜನೆ ತಂಡದೊAದಿಗೆ, ಕೇಸರಿ ಶಲ್ಯ ಧರಿಸಿದ ಮಹಿಳೆಯರು ಮೆರವಣಿಯುದ್ದಕ್ಕೂ ಪುಷ್ಪಾರ್ಚಣೆ ಮಾಡುವ ಮೂಲಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಗೆ ಬಂದು ಅಲ್ಲಿಂದ ಶ್ರೀನಿವಾಸ ಕಲ್ಯಾಣೋತ್ಸವದ ಸಭಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಸಹಿತ ಪದಾಧಿಕಾರಿಗಳು ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರಿರುವ ಪಲ್ಲಕಿಯನ್ನು ತಾವೆ ಹೆಗಲಮೇರಿಸಿ ಪ್ರಧಾನ ವೇದಿಕೆಗೆ ತಂದು ಅರ್ಚಕರಿಗೆ ಅರ್ಪಿಸಿದರು. ವಿಶಾಲವಾದ ಸುಂದರ ವೇದಿಕೆ ನಿರ್ಮಿಸಿ ತಿರುಪತಿ ತಿಮ್ಮಪ್ಪನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಭಕ್ತರು ಶ್ರೀ ವೆಂಕಟರಮಣ ದೇವರ ದರ್ಶನ ಪಡೆದು ಪುನೀತರಾದರು. ಈ ಸಂದರ್ಭ ವೆಂಕಟರಮಣ ಗೋವಿಂದ.. ಗೋವಿಂದಾ.. ಶ್ರೀನಿವಾಸ ಗೋವಿಂದ.. ಸ್ಮರಣೆಯಲ್ಲಿ ಭಕ್ತರು ಮುಳುಗಿದರು.


 ಶ್ರೀನಿವಾಸನನ್ನು ಕೊಂಡಾಡುವ ಭಕ್ತಿಗೀತೆ, ಭಜನೆ, ಮಂತ್ರಗಳು ಎಲ್ಲೆಡೆ ಮೊಳಗಿದವು. ಶ್ರೀನಿವಾಸ ದೇವರ ಪ್ರತಿಷ್ಠೆಯ ಮುಂದೆ ಸನಾತನ ಸಮಾಗಮನ ನಡೆಯಿತು.


ಸನಾತನ ಧರ್ಮ ಉಳಿಸಿಕೊಂಡರೆ ನಮ್ಮ ಬದುಕು ಸುಂದರ:

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಮಾತನಾಡಿ ಭಗವಂತನಿಗೆ ವಿವಾಹ ಮಾಡಿಸಲು ನಾವು ಯಾರೂ ಅಲ್ಲ. ಭಗವಂತನಿಗೆ ನಿತ್ಯ ಕಲ್ಯಾಣ. ಬದುಕಿನಲ್ಲಿ ಭಗವಂತನ ಸ್ತೋತ್ರ ಮಾಡುವ ಕಾರ್ಯಕ್ರಮವೇ ಶ್ರೀನಿವಾಸ ಕಲ್ಯಾಣೋತ್ಸವ. ಭಗವಂತನ ಬಗ್ಗೆ ಒಳ್ಳೆಯ ಶಬ್ದವನ್ನು ಪ್ರಯೋಗ ಮಾಡಿದರೆ ಇದು ನಿತ್ಯ ಕಲ್ಯಾಣೋತ್ಸವ. ಭಗವಂತನ ನಾಮ ಉಚ್ಛಾರ ಮಾಡದಿದ್ದರೆ ನಮ್ಮ ಬದುಕು ವ್ಯರ್ಥವಾಗುತ್ತದೆ ಎಂಬುದು ಪ್ರಾಚೀನರ ಮಾತು. ಹಾಗಾಗಿ ಭಗವಂತನ ಸ್ತೊçÃತ್ರ ನಿತ್ಯ ಮಾಡಬೇಕು. ಅದೇ ರೀತಿ ಸಂಪತನ್ನು ಯಾವ ದುಷ್ಟ ಚಟಗಳಿಗೆ ಕೊಡದೆ ಧರ್ಮಕಾರ್ಯಗಳಿಗೆ ವಿನಿಯೋಗ ಮಾಡಿದರೆ ಲಕ್ಷಿö್ಮà ಧಾರಣೆ ಮಾಡಿದ ಫಲ ಬರುತ್ತದೆ. ಸಂಪತನ್ನು ಸದ್ವಿನಿಯೋಗ ಮಾಡುವುದು ಒಂದೆ ಲಕ್ಷಿö್ಮà ನಾರಾಯಣ ವಿವಾಹ ಮಾಡುವುದು ಒಂದೆ ಎಂದ ಅವರು ಇವತ್ತು ನಮ್ಮ ಸಂಸ್ಕೃತಿ ಸನಾತನ ಧರ್ಮವನ್ನು ಉಳಿಸಿಕೊಂಡರೆ ಮಾತ್ರ ನಮ್ಮ ಬದುಕು ಸುಂದರವಾಗಿರುತ್ತದೆ. ಹಾಗಾಗಿ ನಮ್ಮ ಸನಾತನ ಧರ್ಮ ಸಂಸ್ಕೃತಿಯನ್ನು ನಮ್ಮ ಜೀವಾಳವನ್ನಾಗಿ ಮಾಡಬೇಕು. ಸನಾತನ ಧರ್ಮ ಸಂಸ್ಕೃತಿ ಭಾರತೀಯ ಜೀವನದಲ್ಲಿ ಅವಿಭಾಜ್ಯ ಅಂಗವಾಗಬೇಕು ಎಂಬ ಕಾರಣಕ್ಕೆ ಸನಾತನ ಸಮಾಗಮ ಎಂಬ ಹೆಸರಿನೊಂದಿಗೆ ಅರುಣ ಕುಮಾರ್ ಪುತ್ತಿಲ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ.ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದರು.


ಈ ಮೈದಾನದಲ್ಲಿ 12 ವರ್ಷದ ಹಿಂದೆ ನಾವು ಶನಿ ಪೂಜೆಯಲ್ಲಿ ಪಾಲ್ಗೊಂಡಿದ್ದೆವು. ಆಗ ಕೆಲ ಅಧಿಕಾರಿಗಳು ಮತ್ತು ವ್ಯಕ್ತಿಗಳ ನಡೆ ನಮಗೆ ಬೇಸರ ತಂದಿತ್ತು. ಆದರೆ ಇವತ್ತು ಅದಕ್ಕಿಂತ ಎರಡು ಪಾಲು ಹೆಚ್ಚು ಜನ ಈ ಸನ್ನಿಧಿಯಲ್ಲಿ ಸೇರಿರುವುದು ಸಂತೋಷ ತಂದಿದೆ. ಇದು ದೇವರ ಕರುಣೆ. ನಮ್ಮಲ್ಲಿ ಡಿವೈನ್ ಎನರ್ಜಿ ಇರಬೇಕು. ಯಾಕೆಂದರೆ ಇವತ್ತು ಸೀರಿಯಲ್ ಮೂಲಕ ಸಂಸಾರ ಬೇರೆ ಮಾಡುವ ಮಾಫಿಯ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ನಮಗೆ ಧಾರ್ಮಿಕ ಶಿಕ್ಷಣ ಅಗತ್ಯವಿದೆ ಎಂದು ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು.


ಇಂದು ಪೇಜಾವರ ಶ್ರೀ ಪುತ್ತೂರಿಗೆ


ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಡಿ.25ರಂದು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಸಂಜೆ ಗಂಟೆ 5ಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು ತಿಳಿಸಿದ್ದಾರೆ


ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಹಿಂದು ಸಮಾಜಕ್ಕೆ ಶಕ್ತಿಯನ್ನು ತುಂಬುವ ಪ್ರಯತ್ನ ಮತ್ತು ಧಾರ್ಮಿಕ ವ್ಯವಸ್ಥೆಯ ಜೊತೆಗೆ ಇಡಿ ಸಮಾಜಕ್ಕೆ ಶಕ್ತಿಯನ್ನು ಕೊಡಬೇಕು. ಧರ್ಮ ಸಂಸ್ಕೃತಿಯ ಮುಂದೆ ಇರುವ ಹಲವಾರು ಸವಾಲುಗಳಿಗೆ ಅತ್ಯಂತ ಸಂಘಟಿತವಾಗಿದ್ದೇವೆ ಎನ್ನುವ ಸಂದೇಶ ಕೊಡುವ ನಿಟ್ಟಿನಲ್ಲಿ ಮತ್ತು ಲೋಕಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಅನ್ನುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇವೆ. ತಿಮ್ಮಪ್ಪನ ಸಾನಿಧ್ಯಕ್ಕೆ ಭಕ್ತಿಯ ಕಾಣಿಕೆ ಸಮರ್ಪಿಸಿದರೆ ನಮ್ಮ ಬದುಕು ಪಾವನ ಆಗುತ್ತದೆ. ತಿರುಪತಿಯಲ್ಲಿ ಶ್ರೀನಿವಾಸನ ದರುಶನವನ್ನು ಅತ್ಯಂತ ಹತ್ತಿರದಿಂದ ಕಾಣಲು ಅಸಾಧ್ಯವಾದ ಸಂದರ್ಭದಲ್ಲಿ ಇಡಿ ಸಮಾಜಕ್ಕೆ ಶ್ರೀನಿವಾಸನ ಅನುಗ್ರಹ ಕರುಣಿಸಲು ಮತ್ತು ಲೋಕಕಲ್ಯಾಣಕ್ಕಾಗಿ ಇವತ್ತಿನ ಕಲ್ಯಾಣೋತ್ಸವ ಮಾಡುತ್ತಿದ್ದೇವೆ.


ಹಿಜಾಬ್ ರಾಜಕಾರಣಕ್ಕೆ ಪ್ರತಿಯಾಗಿ ಶಾಲಾ, ಕಾಲೇಜುಗಳಿಗೆ ಕೇಸರಿ ಶಲ್ಯ

ನಮ್ಮ ಕೊನೆಯ ಉಸಿರು ಇರುವ ತನಕ ಧರ್ಮವನ್ನು ಉಳಿಸುವ ಸಂಕಲ್ಪದ ಕಾಲಗಟ್ಟದಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ಒಂದು ಕಡೆದ ಧರ್ಮರಕ್ಷಣೆ ಮಾಡುವ ಕಾರ್ಯಕರ್ತರನ್ನು ಗಡಿಪಾರು ಮಡಿ ಕೇಸು ದಾಖಲು ಮಾಡಿ ಮಾಡುವ ಕೆಲಸ ಸರಕಾರ ಮಾಡುತ್ತಿದೆ. ಇನ್ನೊಂದು ಕಡೆ ಧರ್ಮದ ಮುಂದಿರುವ ಯಾವುದೇ ಸವಾಲುಗಳಿದ್ದರೂ ಅದನ್ನು ಸ್ವೀಕಾರ ಮಾಡಿ ಮತ್ತೆ ನಮ್ಮ ಧರ್ಮತನವನ್ನು ಎತ್ತರಕ್ಕೆ ಏರಿಸುವ ಸಂಕಲ್ಪದ ಕಾಲಗಟ್ಟದಲ್ಲಿದ್ದೇವೆ. ಇವೆರಡರ ಮಧ್ಯೆ ಸರಕಾರ ಹಿಜಾಬಿನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಇದಕ್ಕೆ ಪ್ರತಿಯಾಗಿ ನಮ್ಮ ಹಿಂದು ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ಶಲ್ಯವನ್ನು ಹಾಕಿ ಶಾಲೆಗೆ ಮತ್ತು ಕಾಲೇಜಿಗೆ ಹೋಗಲು ಸಿದ್ದರಿದ್ದಾರೆ. ಹಿಂದು ಸಮಾಜದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿದರೆ ಸರಕಾರವನ್ನು ಉರುಳಿಸಲು ಹಿಂದು ಸಮಾಜ ಸಿದ್ದವಾಗಿದೆ ಎಂದು ಹೇಳಿದರು.


ಸನಾತನ ಸಮಾಗಮದ ಆರಂಭದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.


ಸನಾತನ ಸಮಾಗಮದ ಬಳಿಕ ಶ್ರೀನಿವಾಸ ದೇವರ ಪ್ರತಿಷ್ಠೆ ನಡೆಯಿತು.


ವೇದಿಕೆಯಲ್ಲಿ ವಿಟ್ಲ ಯೋಗೀಶ್ವರ ಮಠದ ಶ್ರೀ ರಾಜಗುರು ಯೋಗಿ ಶ್ರದ್ಧಾನಾಥ ಜೀ,ಸನಾತನ ಸಮಾಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೊಟೇಚಾ, ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ,ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು ವೇದಿಕೆಯಲ್ಲಿ ಉಪಸ್ಥಿರಿದ್ದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಬೆಂಗಳೂರು ಕಂಬಳದ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-22 21:47:50 |

Share: | | | | |


ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಬೆಂಗಳೂರು ಕಂಬಳದ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ನವೆಂಬರ್ 25ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಗೃಹಕಛೇರಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆದ ಅಶೋಕ್ ರೈ ಯವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ನೀಡಿದರು. 25 ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಮಾರ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಂಬಳ ಸಮಿತಿ ಉಪಾಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ,ಸಂಗೀತ ನಿರ್ದೇಶಕರೂ  ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. .



Leave a Comment: