Posted by vidyamaana on 2024-07-10 06:18:20 |
ಮಂಗಳೂರು: ಉರ್ವಾದಲ್ಲಿ ವೃದ್ಧ ದಂಪತಿಯ ಮೇಲೆ ಹಲ್ಲೆಗೈದು ಚಿನ್ನಾಭರಣ ದರೋಡೆ ಮಾಡಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಬನಿಯಾನ್ ಗ್ಯಾಂಗ್ ಸದಸ್ಯರನ್ನು ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಸಕಲೇಶಪುರದಲ್ಲಿ ಬಂಧಿಸಿದ್ದಾರೆ.
ಮಧ್ಯಪ್ರದೇಶ ಗುಣಾ ಜಿಲ್ಲೆಯ ರಗೋಗರ್ ತಾಲೂಕಿನ ವಿಶ್ವನಗರ ನಿವಾಸಿ ರಾಜು ಸಿಂಗ್ವಾನಿಯ (24), ಭೋಪಾಲ್ ಜಿಲ್ಲೆಯ ಗುಲಾಬ್ಗಂಜ್ ನಿವಾಸಿ ಮಯೂರ್ (30), ಮಾಧವ್ಗಡ್ ಅಶೋಕನಗರ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ಕೋತ್ವಾಲಿ ನಿವಾಸಿ ವಿಕ್ಕಿ (21) ಬಂಧಿತರು.
ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ಉರ್ವಾ ಬಳಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ಸ್ ತುಂಡರಿಸಿ ಒಳನುಗ್ಗಿದ್ದು ವೃದ್ಧ ದಂಪತಿಗೆ ಹಲ್ಲೆಗೈದು ಬೆದರಿಸಿ, ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಕಪಾಟಿನ ಲಾಕರ್ ಒಳಗೆ ಇರಿಸಿದ್ದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ. 3000 ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು. ಈ ಬಗ್ಗೆ ವಿಕ್ಟರ್ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೊನ್ಸಾ ನೀಡಿದ ದೂರಿನಂತೆ ಉರ್ವಾ ಠಾಣೆಯಲ್ಲಿ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ನಡೆದ ಬೆನ್ನಲ್ಲೇ ಪೊಲೀಸರು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಎಲ್ಲ ಠಾಣೆಯ ಪೊಲೀಸರಿಗೆ ಅಲರ್ಟ್ ಸೂಚನೆ ಹೋಗಿತ್ತು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆ ಮಾಡಿ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡುಬಂದಿತ್ತು.
ಕೂಡಲೇ ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮಾಹಿತಿ ಪಡೆದಿದ್ದು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದರು. ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ನಿರ್ವಾಹಕರನ್ನು ಸಂಪರ್ಕಿಸಿ ಅವರ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿತ್ತು. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ದರೋಡೆ ಕೃತ್ಯದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅವರ ಬಳಿಯಲ್ಲಿದ್ದ ಮಂಗಳೂರಿನಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಹಾಗೂ ಹಣವನ್ನು ವಶಪಡಿಸಿ ಉರ್ವಾ ಪೊಲೀಸರಿಗೆ ನೀಡಿರುತ್ತಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸುಳಿವೇ ಇಲ್ಲದ ಕೃತ್ಯದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಭಾರತೀ ಜಿ. ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ಕಾರ್ಯಾಚರಣೆ ನಡೆಸಿದ್ದಾರೆ. ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಎಸ್ಪಿ ಮಹಮ್ಮದ್ ಸುಜೀತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಮ್ಮಯ್ಯ ಎಂ.ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿರುತ್ತಾರೆ.
Posted by Vidyamaana on 2024-05-19 09:34:54 |
ಉಡುಪಿ, ಮೇ 18: ಬೆಂಕಿ ಆರಿಸಲು ಬಂದ ಅಗ್ನಿಶಾಮಕ ದಳದ ವಾಹನದಲ್ಲಿ ನೀರಿಲ್ಲದೇ ಕಟ್ಟಡ ಸುಟ್ಟು ಹೋದ ಘಟನೆ ಆದಿ ಉಡುಪಿ ಬಳಿ ನಡೆದಿದೆ. ಈ ವಿಚಾರ ವೈರಲ್ ಆಗಿದ್ದು, ಘಟನೆ ಬಗ್ಗೆ ತಿಳಿದ ಕೆಲವರು ಅಗ್ನಿಶಾಮಕ ದಳ ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಆಕ್ರೋಶಗೊಂಡಿದ್ದರೆ, ಇನ್ನೂ ಕೆಲವರು ಬಿದ್ದು ಬಿದ್ದು ನಕ್ಕಿದ್ದಾರೆ.
ಆದಿ ಉಡುಪಿ ಬಳಿ ಬಳಿಯ ಹೋಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಬ್ರಹ್ಮಗಿರಿಯಲ್ಲಿರುವ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದರು. ಅರ್ಧಗಂಟೆಯ ಬಳಿಕ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ವಾಹನ ಮತ್ತು ಸಿಬ್ಬಂದಿ ಕಾರ್ಯಾಚರಣೆಗೆ ತಯಾರಿ ನಡೆಸುವಾಗ ವಾಹನದಲ್ಲಿ ನೀರಿಲ್ಲ ಎನ್ನುವುದು ತಿಳಿದು ಬಂದಿದೆ
Posted by Vidyamaana on 2023-12-16 15:11:46 |
ತಿರುವನಂತಪುರಂ: ಕೋವಿಡ್ ಸಬ್ವೇರಿಯಂಟ್ ಜೆಎನ್.1, BA.2.86 ನ ತಳಿ ಕೇರಳದ ಕೆಲವು ಭಾಗಗಳಲ್ಲಿ ಪತ್ತೆಯಾಗಿದ್ದು, ಅದರ ಪರಿಣಾಮದ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ. ಹೀಗಾಗಿ ಕರ್ನಾಟಕದಲ್ಲೂ ಕೋವಿಡ್ ಹೆಚ್ಚಳದ ಆತಂಕ ಶುರುವಾಗಿದೆ.ಇಂಡಿಯಾ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG), ಇದು ಬಹು-ಪ್ರಯೋಗಾಲಯ, ಬಹು-ಏಜೆನ್ಸಿ, ಪ್ಯಾನ್-ಇಂಡಿಯಾ ನೆಟ್ವರ್ಕ್ ಆಗಿದ್ದು, ಹೊಸ ಬೆದರಿಕೆಯ ಕೋವಿಡ್ -19 ರೂಪಾಂತರಗಳನ್ನು ಅನುಕ್ರಮ ಮತ್ತು ಗಮನದಲ್ಲಿರಿಸುವ ಕಾರ್ಯವನ್ನು ಹೊಂದಿದೆ, ಅಲ್ಲಿ JN.1 ರಂದು ಕಣ್ಗಾವಲು ಮಾಡಿದೆ.ಇದು ಕೇರಳದಲ್ಲಿ ಕಂಡುಬಂದಿದೆ.
INSACOG ಮುಖ್ಯಸ್ಥ ಎನ್ಕೆ. ಅರೋರಾ, "ಈ ರೂಪಾಂತರವನ್ನು ಪ್ರತ್ಯೇಕಿಸಲಾಗಿದೆ ಮತ್ತು ನವೆಂಬರ್ನಲ್ಲಿ ವರದಿ ಮಾಡಲಾಗಿದೆ; ಇದು BA.2.86 ರ ಉಪರೂಪವಾಗಿದೆ.ನಾವು JN.1 ರ ಕೆಲವು ಪ್ರಕರಣಗಳನ್ನು ನೋಡಿದ್ದೇವೆ".
"ಭಾರತವು ಜಾಗರೂಕತೆಯಿಂದ ಇದೆ ಮತ್ತು ಇದುವರೆಗೆ ಯಾವುದೇ ಆಸ್ಪತ್ರೆಗೆ ದಾಖಲು ಅಥವಾ ತೀವ್ರವಾದ ಕಾಯಿಲೆಗಳು ವರದಿಯಾಗಿಲ್ಲ" ಎಂದು ಅವರು ಹೇಳಿದರು.
JN.1 ಅನ್ನು ಮೊದಲು ಯುನೈಟೆಡ್ ಸ್ಟೇಟ್ಸ್ನಲ್ಲಿ ಸೆಪ್ಟೆಂಬರ್ 2023 ರಲ್ಲಿ ಪತ್ತೆ ಮಾಡಲಾಯಿತು.
ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘದ ಕೋವಿಡ್ ಕಾರ್ಯಪಡೆಯ ಸಹ-ಅಧ್ಯಕ್ಷ ರಾಜೀವ್ ಜಯದೇವನ್ ಪ್ರಕಾರ, "ಏಳು ತಿಂಗಳ ಅಂತರದ ನಂತರ, ಭಾರತದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ. ಕೇರಳದಲ್ಲಿ ಕೋವಿಡ್ ವರದಿಗಳಿವೆ, ಆದರೆ ಇದುವರೆಗಿನ ತೀವ್ರತೆ ಮೊದಲಿನಂತೆಯೇ ಇದೆ."
"ಜೀನೋಮ್ ಸೀಕ್ವೆನ್ಸಿಂಗ್ ಪ್ರತಿ ಪ್ರದೇಶದಲ್ಲಿ ಯಾವ ರೀತಿಯ ವೈರಸ್ ಪರಿಚಲನೆಯಾಗುತ್ತದೆ ಎಂಬುದನ್ನು ಗುರುತಿಸುತ್ತದೆ. ಉದಾಹರಣೆಗೆ, ಭಾರತದಲ್ಲಿ, ಏಪ್ರಿಲ್ 2023 ರ ಅಲೆಯ ಸಮಯದಲ್ಲಿ, XBB ಉಪವರ್ಗಗಳು ಇದಕ್ಕೆ ಕಾರಣವೆಂದು ಕಂಡುಬಂದಿದೆ. ಆದಾಗ್ಯೂ, ಡಿಸೆಂಬರ್ ಜೀನೋಮ್ ಸೀಕ್ವೆನ್ಸಿಂಗ್ ಫಲಿತಾಂಶಗಳು ಇನ್ನೂ ಬರುತ್ತಿವೆ ಮತ್ತು ಆರಂಭಿಕ ಫಲಿತಾಂಶಗಳು ಕೇರಳದಲ್ಲಿ JN.1 ಪ್ರಕರಣವು ಕಂಡುಬಂದಿದೆ ಎಂದು ತೋರಿಸುತ್ತದೆ, "ಎಂದು ಅವರು ಹೇಳಿದರು.
ಜೆಎನ್.1 ರೂಪಾಂತರವು ವೇಗವಾಗಿ ಹರಡಲು ಮತ್ತು ರೋಗನಿರೋಧಕ ಶಕ್ತಿಯನ್ನು ತಪ್ಪಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯದೇವನ್ ಹೇಳಿದರು.
Posted by Vidyamaana on 2023-02-25 16:30:25 |
ಮಂಗಳೂರು, ಫೆ.25: ಉಳ್ಳಾಲ ಜುಮಾ ಮಸ್ಟಿದ್ ಮತ್ತು ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಆಡಳಿತ ಸಮಿತಿಗೆ ಶನಿವಾರ ಶಾಂತಿಯುತ ಚುನಾವಣೆ ನಡೆಯಿತು.
ನೋಂದಾಯಿತ 3,512 ಮತದಾರರ ಪೈಕಿ 2,935 ಮಂದಿಮತ ಚಲಾಯಿಸಿದರು. ಒಟ್ಟು ಶೇ.86.6 ಮತದಾನವಾಗಿದೆ ಎಂದು ದ.ಕ.ಜಿಲ್ಲಾ ವಕ್ಸ್ ಅಧಿಕಾರಿ ಹಾಗೂ ಚುನಾವಣಾಧಿಕಾರಿ ಸೈಯದ್ ಮೊಹಝಂ ಪಾಶಾತಿಳಿಸಿದ್ದಾರೆ.
ಕೋಟೆಪುರ, ಮೇಲಂಗಡಿ, ಮುಕ್ಕಚೇರಿ, ಅಳೇಕಲ, ಕಲ್ಲಾಪು ಹೀಗೆ 5 ಕರಿಯ (ವಲಯ)ಗಳಿಂದ ತಲಾ 11 ಮಂದಿಯಂತೆ 55 ಮಂದಿ ಸದಸ್ಯರ ಆಯ್ಕೆಗೆ 80 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತದಾನವು ಮುಕ್ಕಚೇರಿ- ಒಂಭತ್ತುಕೆರೆಯ ದ.ಕ.ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಬೆಳಗ್ಗೆ 8ರಿಂದ ಅಪರಾಹ್ನ 3ರವರೆಗೆ ನಡೆಯಿತು. ಸಂಜೆ 4ಕ್ಕೆ ಮತ ಎಣಿಕೆ ಆರಂಭಿಸಲಾಗಿದ್ದು, ರಾತ್ರಿ ಫಲಿತಾಂಶ ಪ್ರಕಟಿಸಲಾಯಿತು. ಮತದಾನ ಕೇಂದ್ರದ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಚುನಾಯಿತರಾದ ನೂತನ ಸದಸ್ಯರ ವಿವರ:-
ಮೇಲಂಗಡಿ ಕರಿಯ:
ಜಬ್ಬಾರ್ ಯು.ಎಂ., ನಝೀರ್ ಉಳ್ಳಾಲ ಬಾವಾ, ಮುಹಮ್ಮದ್ ಇಸಾಕ್, ಮೊಹಿದಿನಬ್ಬ ಅಶ್ರಫ್, ಅಬ್ದುಲ್ ಸಮದ್, ಇಬ್ರಾಹಿಂ ಶೌಕತ್, ಮೈನುದ್ದೀನ್, ಮುಹಮ್ಮದ್ ಬಾವಾ ಉಳ್ಳಾಲ, ಮುಹಮ್ಮದ್ ರಫೀಕ್, ಬಾವಾ ಗುಲಾಂ ಹನೀಫ್,
ಅಲೇಕಳ ಕರಿಯ:
ಮುಹಮ್ಮದ್ ಹನೀಫಾ, ಮುಹಮ್ಮದ್ ಫಾರೂಕ್ ಯು, ಅಶ್ರಫ್ ಅಹ್ಮದ್ ಯು.ಎಂ, ಅಬ್ದುಲ್ ಖಾದರ್ ಯು.ಎಂ, ಅಬ್ದುಲ್ ಹಮೀದ್ ಯು.ಡಿ., ಇಬ್ರಾಹಿಂ ಸಯ್ಯದ್, ಇರ್ಫಾನ್, ಮುಹಮ್ಮದ್ ಶಿಹಾಬುದ್ದೀನ್ ಪಿ., ಮುಹಮ್ಮದ್ ರಿಯಾಝ್, ಮುಸ್ತಫಾ, ಸಯ್ಯದ್ ಅಬ್ದುಲ್ ಝಿಯಾದ್. ಅಬೂಬಕ್ಕರ್, ಅಯ್ಯಬ್ ಯು .ಕೆ., ಖಲೀಲ್, ಅಹ್ಮದ್ ತಂಝೀಲ್ ಎಸ್, ಇಸ್ಮಾಯಿಲ್, ಖಲೀಲ್, ಫಾರೂಕ್ ಅಬೂಬಕ್ಕರ್ ಉಳ್ಳಾಲ, ಆಝಾದ್ ಇಸ್ಮಾಯಿಲ್, ನಾಝಿಂ ರಹ್ಮಾನ್ ಉಳ್ಳಾಲ, ಮಯ್ಯದ್ದಿ ಉಳ್ಳಾಲ ಬಸ್ತಿಪಡು, ಉಳ್ಳಾಲ ನಾಸಿರ್
ಕಲ್ಲಾಪು ಕರಿಯ:
ಮುಹಮ್ಮದ್ ಕೆ., ಫಾರೂಕ್ ಯು.ಎಚ್., ಮುಹಮ್ಮದ್ ಅರೀಫ್ ಯು., ಅಮೀರ್ ಅಹ್ಮದ್, ಮುಹಮ್ಮದ್ ಇಮ್ಮಿಯಾಝ್ ಹುಸೇನ್, ಮುಹಮ್ಮದ್ ಇಜಾಝ್, ಮುಹಮ್ಮದ್ ಮುಸ್ತಫ, ಮುಹಮ್ಮದ್ ಪಿ.ಎಚ್., ಮುಹಮ್ಮದ್ ಮುಸ್ತಫ, ಮೊಯ್ದಿನ್, ಪೊಸಹಿತ್ತು ಹಮೀದ್.
ಕೋಟೆಪುರ ಕರಿಯ: ಅಬ್ದುಲ್ ಅಝೀಝ್, ಅಬ್ದುಲ್ ಖಾದರ್, ಬಶೀರ್ ಯುಬಿಎಂ, ಮುಹಮ್ಮದ್ ರಫೀಕ್, ಹಸೈನಾರ್ ಯುಕೆ, ಹಸೈನಾರ್ ಯು, ಅಬೂಬಕ್ಕರ್, ಅಶ್ರಫ್ ಮುಹಮ್ಮದ್, ಮುಹಮ್ಮದ್ ಅಬ್ದುಲ್ ಖಾದರ್, ರಫೀಕ್ ಯುಎಂ, ತಹಸೀನ್ ಯುಟಿ.
Posted by Vidyamaana on 2024-03-12 21:29:40 |
ಬೆಂಗಳೂರು, ಮಾ.12: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಕೆ. ಜಯಪ್ರಕಾಶ ಹೆಗ್ಡೆಯವರು ಕಡೆಗೂ ಕಾಂಗ್ರೆಸ್ ಪಕ್ಷವನ್ನು ಅಧಿಕೃತ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ನಾಯಕರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್ , ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು.ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ನೇರ ನಡೆನುಡಿಯ ಸರಳ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯಲ್ಲಿ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಆನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು. ಹಿಂದೆ ಜನತಾ ಪರಿವಾರದಲ್ಲಿದ್ದಾಗ ಜಯಪ್ರಕಾಶ್ ಹೆಗ್ಡೆ, ಸಿದ್ದರಾಮಯ್ಯ ಆಪ್ತರಾಗಿದ್ದರು. ಇದೀಗ ಸಿದ್ದರಾಮಯ್ಯ ಮತ್ತು ಡಿಕೆಶಿ ಸಾರಥ್ಯದಲ್ಲಿ ಮತ್ತೆ ಕಾಂಗ್ರೆಸ್ ಪಾಳಯ ಸೇರಿದ್ದು ಉಡುಪಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಮತ್ತೊಮ್ಮೆ ಲೋಕಸಭೆ ಅಭ್ಯರ್ಥಿಯಾಗೋದು ಖಚಿತವಾಗಿದೆ.
Posted by Vidyamaana on 2023-09-01 06:55:17 |
ತಿರುವನಂತಪುರಂ: ಸೆ 1: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ 31 ವರ್ಷದ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ
ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್, ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Posted by Vidyamaana on 2023-09-30 07:25:57 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 30 ರಂದು
ಬೆಳಿಗ್ಗೆ 10. ಗಂಟೆಗೆ ಪ್ರೋ ಕಬಡ್ಡಿ ಅಹರ್ನಿಶಿ ಮಾದರಿಯ ಕಬಡ್ಡಿ ಪಂದ್ಯಾಟ ಕಾರ್ಯಕ್ರಮ
ಸ್ಥಳ; ಕಿಲ್ಲೆ ಮೈದಾನ ಪುತ್ತೂರು
11 ಗಂಟೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಮಧ್ಯಾಹ್ನ 3 ಗಂಟೆಗೆ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ಕಂಬಳ ಕೋಣದ ಯಜಮಾನರುಗಳ ( ಮಾಲಕರ) ಸಭೆಯಲ್ಲಿ ಭಾಗವಹಿಸಲಿದ್ದಾರೆ