ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಸುದ್ದಿಗಳು News

Posted by vidyamaana on 2024-07-26 08:10:52 |

Share: | | | | |


ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮವು ಜ 27 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್‌ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ

ವೇದಿಕೆಯಲ್ಲಿ ಪ್ರೊ.ವಿ.ಬಿ.ಅರ್ತಿಕಜೆ ಗೌರವ ಸಲಹೆಗಾರರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಮತ್ತು ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರು ಇವರನ್ನು ಡಾ ಯು.ಪಿ. ಶಿವಾನಂದ ಆಡಳಿತ ನಿರ್ದೇಶಕರು ಸುದ್ದಿ ಸಮೂಹ ಸಂಸ್ಥೆ ಪುತ್ತೂರು ಇವರು ಸನ್ಮಾನಿಸಲಿದ್ದಾರೆ.

Additional Image

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜುಬಿನ್ ಮೊಹಪಾತ್ರ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ತಾರನಾಥ ಗಟ್ಟಿ ಕಾಪಿಕಾಡು ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ ಕ,ಮುರಳೀಕೃಷ್ಣ ಕೆ.ಎನ್ ಸಂಚಾಲಕರು, ವಿವೇಕಾನಂದ ಮಹಾವಿದ್ಯಾಲಯ ನೆಹರೂನಗರ ಪುತ್ತೂರು. ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಮುಖ್ಯಸ್ಥರು, ಕಹಳೆ ನ್ಯೂಸ್ ಚಾನೆಲ್ ಪುತ್ತೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 Share: | | | | |


ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ ಆರೋಪ

Posted by Vidyamaana on 2023-08-10 01:32:25 |

Share: | | | | |


ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ ಆರೋಪ

ಪುತ್ತೂರು:ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್‌ ರೈಯವರು ಆ. 8ರಂದು ಸಂಜೆ ದಿಢೀರ್‌ ಸಿಡಿಪಿಒ ಕಚೇರಿಗೆ ಭೇಟಿ ನೀಡಿದ್ದಾರೆ.ಈ ಸಂದರ್ಭ ಅಧಿಕಾರಿ ಶ್ರೀಲತಾ ಅವರು ಕಚೇರಿಯಲ್ಲಿರಲಿಲ್ಲ.ದೂರವಾಣಿ ಕರೆ ಮಾಡಿದಾಗ, ತಾನು ಬೆಳ್ತಂಗಡಿಗೆ ಹೋಗಿರುವುದಾಗಿ ತಿಳಿಸಿದರು.ಶಾಸಕರು ಫೋನ್ ಕರೆ ಮೂಲಕವೇಅಧಿಕಾರಿಣಿಯನ್ನು ತರಾಟೆಗೆತ್ತಿಕೊಂಡ 


ಘಟನೆ ವರದಿಯಾಗಿದೆ. ಇಲಾಖೆಯಿಂದ ಅಂಗನವಾಡಿಗೆ ಆಹಾರ ವಿತರಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ.ಖಾಸಗಿ ವ್ಯಕ್ತಿಗಳ ಜೊತೆ ಒಪ್ಪಂದ ಮಾಡಿಕೊಂಡು ಆಹಾರ ತಯಾರಿಕಾ ವ್ಯವಸ್ಥೆಯನ್ನು ಗುತ್ತಿಗೆ ನೀಡಿದ್ದೀರಿ, ಫುಡ್ ಸರಿಯಾಗಿ ವಿತರಣೆಯಾಗುತ್ತಿಲ್ಲ ಮತ್ತು ಗುಣಮಟ್ಟವೂಇಲ್ಲ. ಅರ್ಧಕ್ಕರ್ಧ ಪುಡ್ ಮಾತ್ರ ವಿತರಣೆ ಮಾಡಲಾಗುತ್ತಿದೆ,ಎಲ್ಲವೂ ನಿಮ್ಮ ಇಷ್ಟದಂತೆ ಮಾಡುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಸರಕಾರದ ಸುತ್ತೋಲೆಯಂತೆ


ಇಲ್ಲಿ ವ್ಯವಹಾರ ನಡೆಯಬೇಕು ಎಂದು ಸೂಚಿಸಿದರು ಎಂದು ತಿಳಿದುಬಂದಿದೆ.


ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ-ಅಶೋಕ್ ಕುಮಾರ್ ರೈ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ. ಎಂದು ಸಾರ್ವಜನಿಕರಿಂದ ಪದೇ ಪದೇ ದೂರುಗಳು ಬರುತ್ತಿವೆ.ನಾನು ಶಾಸಕನಾಗಿ ಎರಡು ತಿಂಗಳಷ್ಟೆ ಕಳೆದಿದೆ.ಬಹುತೇಕ ಎಲ್ಲಾ ಅಧಿಕಾರಿಗಳು ನನ್ನನ್ನು ಶಾಸಕನೆಂಬ ನೆಲೆಯಲ್ಲಿ ಭೇಟಿಯಾಗಿ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.ಆದರೆ ಸಿಡಿಪಿಒ ಅವರು ಬರಲೇ ಇಲ್ಲ. ಇಲಾಖೆಗೆ ಸಂಬಂಧಪಟ್ಟ ಯಾವುದೇ ಮಾಹಿತಿಯನ್ನು ನನ್ನ ಜೊತೆ ಹಂಚಿಕೊಂಡಿಲ್ಲ. ಅವ್ಯವಹಾರದ ದೂರಿನ ಬಗ್ಗೆ ಕೇಳೋಣ ಎಂದು ಕಚೇರಿಗೆ ಕರೆದರೆ ಪದೇ ಪದೇ ತಪ್ಪಿಸಿಕೊಳ್ಳುತ್ತಿದ್ದಾರೆ.ಜನರಿಗೆ ನಾನು ಏನೆಂದು ಉತ್ತರಕೊಡಬೇಕು.ನಾನು ಕರೆದ ಯಾವುದೇ ಸಭೆಗೂ ಬಾರದೆ ತಪ್ಪಿಸಿಕೊಳ್ಳುತ್ತಿದ್ದಾರೆ.ಆಹಾರ ತಯಾರಿಕೆಯನ್ನು ಟೆಂಡರ್ ಕರೆಯದೆ ಅವರಿಗಿಷ್ಟ ಬಂದವರಿಗೆ ಗುತ್ತಿಗೆ ನೀಡಿ ಅದರಲ್ಲಿ ಅಧಿಕಾರಿ ಮತ್ತು ಮಂಗಳೂರಿನ ಒಬ್ಬ ಗುತ್ತಿಗೆದಾರ ಸೇರಿ ಕೋಟಿ ಕೋಟಿ ಲೂಟಿ ಹೊಡೆದಿದ್ದಾರೆ.ಮಕ್ಕಳ | ಮಟ್ಟದ ವಾಲಿ ಆಹಾರ ವಿತರಣೆಯಲ್ಲಿ ಇವರು ಗೋಲ್‌ಮಾಲ್ ಮಾಡಿದ್ದಾರೆ.ಕೇಳಿದರೆ ಉಡಾಫೆಯಿಂದ ಕುದ್ರೆಡ ಅಜ್ಜಿಕ ಉತ್ತರಿಸುತ್ತಾರೆ.ಪ್ರಕರಣವನ್ನು ನಾನು ಗಂಭೀರವಾಗಿ ಪರಿಗಣಿಸಿದ್ದು ನಡೆದಿರುವ ಸದಸ್ಯರಾದ ವ ಅವ್ಯವಹಾರವನ್ನು ತನಿಖೆ ಮಾಡಿಸುತ್ತೇನೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಬೇಕಿದೆ.ಬಡ ಮಕ್ಕಳಿಗೆ, ಗರ್ಭಿಣಿ-ಬಾಣಂತಿ ಮಹಿಳೆಯರಿಗೆ ಕೊಡಬೇಕಾದ ಫುಡ್ ವಿತರಣೆಯಲ್ಲಿ ತಯಾರಿಕೆಯಲ್ಲಿ ಇವರು ಲೂಟಿ ಹೊಡೆಯುತ್ತಾರಂದ್ರೆ ಅದನ್ನು ಸಹಿಸಲು ಸಾಧ್ಯವೇ ಇಲ್ಲ, ಭ್ರಷ್ಟಾಚಾರವನ್ನು ನಾನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದ್ದಾರೆ.

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

Posted by Vidyamaana on 2024-07-22 11:26:34 |

Share: | | | | |


ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಮುಕ್ಕೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



ಬಜ್ಪೆ : ಯುವಕನಿಗೆ ಚೂರಿ ಇರಿತ

Posted by Vidyamaana on 2023-09-03 16:44:35 |

Share: | | | | |


ಬಜ್ಪೆ : ಯುವಕನಿಗೆ ಚೂರಿ ಇರಿತ

ಬಜ್ಜೆ: ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.


ಬಜೈ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ಘಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ ಎಂದು ತಿಳಿದು ಬಂದಿದೆ.


ಸಫ್ಘಾನ್ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುವನ್ನು ಬಜ್ಜೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಸಫ್ಘಾನ್ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುವನ್ನು ಬಜ್ಜೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸಫ್ಘಾನ್ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಸ್ಥಳೀಯನೇ ಆಗಿರುವ ಯುವಕ ಚೂರಿ ಇರಿದಿರುವುದಾಗಿ ಹೇಳಲಾಗುತ್ತಿದೆ.

ಕೆಲದಿನಗಳಿಂದ ಕಳವಾರು ಭಾಗದಲ್ಲಿ ಮದ್ಯವ್ಯಸನಿಯೋರ್ವ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು.

ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದಾರೆ. ಹಲ್ಲೆ ಘಟನೆಯ ಸಂಬಂಧ ಸುರತ್ಕಲ್ ಪೊಲೀಸರು ಇಂದಿನವರೆಗೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು ಎನ್ನಲಾಗಿದ್ದು, ಇಂದು ಪೊಲೀಸರನ್ನು ಸ್ಥಳಕ್ಕೆನಿಯೋಜಿಸಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ಬಿ.ಆರ್. ಶೆಟ್ಟಿ ಎಂಬ ಬ್ಯಸಿನೆಸ್ ಟೈಕೂನ್ ರಾತ್ರೋರಾತ್ರಿ ಬೀದಿಗೆ ಬಂದಿದ್ದು ಹೇಗೆ?

Posted by Vidyamaana on 2023-10-05 08:28:34 |

Share: | | | | |


ಬಿ.ಆರ್. ಶೆಟ್ಟಿ ಎಂಬ ಬ್ಯಸಿನೆಸ್ ಟೈಕೂನ್ ರಾತ್ರೋರಾತ್ರಿ ಬೀದಿಗೆ ಬಂದಿದ್ದು ಹೇಗೆ?

ಸಾವಿರಾರು ಕೋಟಿ ಆಸ್ತಿ ಹೊಂದಿದ್ದ ವ್ಯಕ್ತಿ ರಾತ್ರೋರಾತ್ರಿ ಬೀದಿಗೆ ಬಂದಿದ್ದಾರೆ ಎಂದು ಯಾರಾದರೂ ಹೇಳಿದರೆ ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಆದಾಗ್ಯೂ, ಒಂದು ಕಾಲದಲ್ಲಿ ಕೋಟ್ಯಾಧಿಪತಿಯಾಗಿದ್ದ ಬಿ.ಆರ್.ಶೆಟ್ಟಿ (ಬಾವಗುತ್ತು ರಘುರಾಮ ಶೆಟ್ಟಿ) ಅವರ ಬದುಕಲ್ಲೂ ಅಂತಹುದೇ ದುರಂತ ಸಂಭವಿಸಿದೆ.


ಶೆಟ್ಟಿಯವರ ಸಂಪತ್ತಿನ ನಿವ್ವಳ ಮೌಲ್ಯ 18,000 ಕೋಟಿ ರೂ. ಅವರು ಬುರ್ಜ್ ಖಲೀಫಾದಲ್ಲಿ 2 ಸಂಪೂರ್ಣ ಮಹಡಿಗಳನ್ನು ಹೊಂದಿದ್ದರು. ಅವರ ಬೆಲೆ 25 ಮಿಲಿಯನ್ ಡಾಲರ್ ಆಗಿತ್ತು. ಅಲ್ಲದೇ ಅವರು ಖಾಸಗಿ ಜೆಟ್, ಐಷಾರಾಮಿ ಕಾರು ಮತ್ತು ಪಾಮ್ ಜುಮೇರಾದಲ್ಲಿ ಆಸ್ತಿಯಂತಹ ಎಲ್ಲಾ ಐಷಾರಾಮಿ ಸೌಲಭ್ಯ ಹೊಂದಿದ್ದರು. ಆದರೀಗ ಅವರ ಒಂದು ಟ್ವೀಟ್ ಅವರ ಇಡೀ ಸಾಮ್ರಾಜ್ಯವನ್ನು ಮುಳುಗಿಸಿದೆ.

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ಹಿಂಡನ್ಬರ್ಗ್ ಪ್ರಕರಣದಲ್ಲಿ ಅದಾನಿ ಗ್ರೂಪ್ನಲ್ಲಿ ಸಂಭವಿಸಿದಂತೆ, ಬಿಆರ್ ಶೆಟ್ಟಿ ಪ್ರಕರಣದಲ್ಲಿ ಹಗರಣವು ಹಲವು ಪಟ್ಟು ದೊಡ್ಡದಾಗಿದೆ. ಇದರ ಪರಿಣಾಮವಾಗಿ 2 ಬಿಲಿಯನ್ ಡಾಲರ್ (16,650 ಕೋಟಿ) ಮೌಲ್ಯದ ಕಂಪನಿಯನ್ನ 74 ರೂಪಾಯಿಗೆ ಸಮನಾದ 1 ಡಾಲರ್ಗೆ ಮಾರಬೇಕಾಯ್ತು.

ನೀರಿನಂತೆ ಹಣ ವ್ಯಯಿಸಿದ್ದ ಉದ್ಯಮಿ

ಬಿ ಆರ್ ಶೆಟ್ಟಿ ಬುರ್ಜ್ ಖಲೀಫಾದಲ್ಲಿ 2 ಸಂಪೂರ್ಣ ಮಹಡಿಗಳನ್ನು ಹೊಂದಿದ್ದರು, ಇದು ವಿಶ್ವದ ಅತ್ಯಂತ ಪ್ರಸಿದ್ಧ ಕಟ್ಟಡಗಳಲ್ಲಿ ಒಂದಾಗಿದೆ. ಅವರು ಇಲ್ಲಿ ಐಷಾರಾಮಿ ಪಾರ್ಟಿಗಳನ್ನು ಆಯೋಜಿಸುತ್ತಿದ್ದರು. ಖಾಸಗಿ ಜೆಟ್ ನಲ್ಲಿ ದುಬೈಗೆ ಹೋಗುತ್ತಿದ್ದರು. ರೋಲ್ಸ್ ರಾಯ್ಸ್ ಮತ್ತು ಮೇಬ್ಯಾಕ್ ನಂತಹ ಐಷಾರಾಮಿ ಕಾರುಗಳನ್ನು ಹೊಂದಿದ್ದರು. ಅವರು ವಿಂಟೇಜ್ ಕಾರುಗಳ ಬಗ್ಗೆಯೂ ಒಲವು ಹೊಂದಿದ್ದರು.

ಮೋರಿಸ್ ಮೈನರ್ 1000 ವನ್ನೂ ಅವರ ಕಾರು ಬೆಂಗಾವಲು ಪಡೆಯಲ್ಲಿ ಸೇರಿಸಲಾಯಿತು. ಶೆಟ್ಟಿ ಪಾಮ್ ಜುಮೇರಾ ಮತ್ತು ದುಬೈನ ವರ್ಲ್ಡ್ ಸೆಂಟರ್ನಲ್ಲಿಯೂ ಆಸ್ತಿ ಹೊಂದಿದ್ದರು. ಖಾಸಗಿ ಜೆಟ್ನಲ್ಲಿ ಶೇ 50ರಷ್ಟು ಪಾಲನ್ನು ಹೊಂದಿದ್ದರು. ಅದನ್ನು ಅವರು ಇನ್ನೊಬ್ಬ ಬಿಲಿಯನೇರ್ನಿಂದ 42 ಲಕ್ಷ ಡಾಲರ್ಗೆ ಖರೀದಿಸಿದ್ದರು.

ಆ ಒಂದು ಟ್ವೀಟ್ ಮತ್ತು ಎಲ್ಲವೂ ಖತಂ

2019 ರಲ್ಲಿ, ಯುಕೆಯ ಮಡ್ಡಿ ವಾಟರ್ಸ್ ಅವರ ಕಂಪನಿ ಬಗ್ಗೆ ಒಂದು ಟ್ವೀಟ್ ಮಾಡಿತ್ತು. ನಾಲ್ಕು ತಿಂಗಳ ನಂತರ, ಇದೇ ಕಂಪನಿಯು ಸಂಪೂರ್ಣ ವರದಿ ಪ್ರಕಟಿಸಿತು, ಇದರಲ್ಲಿ ಎನ್ಎಂಸಿ ಹೆಲ್ತ್ನಲ್ಲಿನ ಹಣಕಾಸಿನ ಅಕ್ರಮಗಳ ಬಗ್ಗೆ ಕ್ಲೈಮ್ ಮಾಡಲಾಗಿದೆ. ಎನ್ಎಂಸಿ ಹೆಲ್ತ್ ಸಾಲವನ್ನು ಕಡಿಮೆ ಮಾಡುತ್ತಿದೆ ಮತ್ತು ನಗದು ಹರಿವನ್ನು ಅತಿಯಾಗಿ ತೋರಿಸುತ್ತಿದೆ ಎಂದು ವರದಿ ಹೇಳಿತ್ತು.

ಎನ್ ಎಂಸಿ ಹೆಲ್ತ್ ಬಿಆರ್ ಶೆಟ್ಟಿ ಅವರ ಕಂಪನಿಯಾಗಿತ್ತು. ಇದು ಯುಎಇಯಲ್ಲಿ ಅತಿ ದೊಡ್ಡ ಖಾಸಗಿ ಆರೋಗ್ಯ ಆಪರೇಟರ್ ಆಗಿತ್ತು. ಈ ಕಂಪನಿಯನ್ನು ಲಂಡನ್ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಪಟ್ಟಿ ಮಾಡಲಾಗಿದೆ. ಈ ಕಂಪನಿಯು ಮಡ್ಡಿ ವಾಟರ್ಸ್ನ ರಾಡಾರ್ಗೆ ಒಳಪಟ್ಟಿರುವುದು ಶೆಟ್ಟಿಯವರ ದುರಾದೃಷ್ಟ.

ಕಂಪನಿಯ ಹಣಕಾಸಿನ ಅಕ್ರಮಗಳ ಹಕ್ಕುಗಳು ಷೇರುಗಳಲ್ಲಿ ಮಾರಾಟವನ್ನು ಪ್ರಚೋದಿಸಿತು ಮತ್ತು ಸ್ವಲ್ಪ ಸಮಯದೊಳಗೆ ಶೆಟ್ಟಿ ಕುಟುಂಬದ ಸಂಪತ್ತು $ 1.5 ಶತಕೋಟಿಗಳಷ್ಟುಕುಸಿಯಿತು. ಹಿಂಡೆನ್ಬರ್ಗ್ನಂತೆಯೇ ಮಡ್ಡಿ ವಾಟರ್ಸ್ ಕೂಡ ಒಂದು ಸಣ್ಣ ಮಾರಾಟಗಾರ ಎಂಬುವುದು ಉಲ್ಲೇಖನೀಯ.

ಕಂಪನಿ 1 ಡಾಲರ್ಗೆ ಮಾರಾಟ

ಷೇರುಗಳ ಮಾರಾಟವು ಕಂಪನಿಯ ಮೌಲ್ಯವನ್ನು ಸಂಪೂರ್ಣವಾಗಿ ನಾಶಪಡಿಸಿತು. ಇದಲ್ಲದೆ, ಕಂಪನಿಯು $ 1 ಬಿಲಿಯನ್ ಸಾಲವನ್ನು ಹೊಂದಿದ್ದು ಅದು ವರದಿಯಾಗಿಲ್ಲ. ಒಂದು ಕಾಲದಲ್ಲಿ ಕಂಪನಿಯ ಶೇರುಗಳ ಗರಿಷ್ಠ ಮೌಲ್ಯ 10 ಬಿಲಿಯನ್ ಡಾಲರ್ ತಲುಪಿತ್ತು, ಆದರೆ ಒಂದರ ಹಿಂದೆ ಒಂದರಂತೆ ಬಹಿರಂಗಪಡಿಸಿದ ಶೆಟ್ಟಿ ಕಂಪನಿಯನ್ನು 1 ಡಾಲರ್ಗೆ ಮಾರಾಟ ಮಾಡಬೇಕಾದ ಪರಿಸ್ಥಿತಿಯನ್ನು ಸೃಷ್ಟಿಸಿತು.

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಮಂತ್ ನಿಧನ

Posted by Vidyamaana on 2024-08-11 22:38:27 |

Share: | | | | |


ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಮಂತ್ ನಿಧನ

ಸುರತ್ಕಲ್ : ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ, ಪವಾಡ ಸದೃಶವಾಗಿ ಚಾಲಕ ಪಾರು

Posted by Vidyamaana on 2023-02-23 03:42:33 |

Share: | | | | |


ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ, ಪವಾಡ ಸದೃಶವಾಗಿ ಚಾಲಕ ಪಾರು

ಮಂಗಳೂರು:ಫೆ 23  ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ.ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್‌ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent News


Leave a Comment: