Posted by vidyamaana on 2024-07-09 08:24:41 |
ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್ಚಂದ್ರ ರವರು ಆಯ್ಕೆಯಾಗಿದ್ದಾರೆ.
ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್
ಎಂ.ಎಚ್, ಇಂಟರ್ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್ಮ್ಯಾನ್ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆರ್ ಎಫ್), ಲಾವಣ್ಯ (ಮೆಂಬರ್ಶಿಪ್ ಡೆವಲಪ್ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.
ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್ನಲ್ಲಿ ಕ್ಲಬ್ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-01-22 13:34:20 |
ಉಪ್ಪಿನಂಗಡಿ : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವ ಗ್ರಾಮ ಕೋಡಿಂಬಾಡಿ ಮಠಂತಬೆಟ್ಟುಶ್ರೀ ಮಹಿಷಮರ್ಧಿನಿ ದೇವಿಗೆ ಪುಷ್ಪ ವನ್ನು ಸಮರ್ಪಿಸುತ್ತಾ ರಾಜ್ಯ ,ದೇಶ ಮತ್ತು ವಿಶ್ವಕ್ಕೆ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ತಿಸಿದರು. ಈ ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ ಶಾಂತಿ ನೆಲಸುವಂತಾಗಲಿಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾದ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ, ನಿಹಾಲ್ ಶೆಟ್ಟಿ ಕಲ್ಲಾರೆ ,ದೇವಸ್ಥಾನದ ವ್ಯವಸ್ಥಾಪಕರಾದ ಸಂತೋಷ್ ರೈ ,ವಾರಿಸೇನ ಜೈನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Posted by Vidyamaana on 2023-11-15 11:00:56 |
ಉಡುಪಿ: ನೇಜಾರುವಿನಲ್ಲಿ ಗಗನಸಖಿ ಸಹಿತ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿಂದು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ವಿಚಾರಣೆಯಲ್ಲಿ ಈ ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಕಂಡುಬಂದಲ್ಲಿ ಆತನನ್ನು ಬಂಧಿಸಿ ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.ಪ್ರಕರಣಕ್ಕೆ ಸಂಬಂಧಿಸಿ ಐದು ತಂಡಗಳನ್ನು ರಚನೆ ಮಾಡಿ ವಿವಿಧ ಆಯಮಗಳಲ್ಲಿ ತನಿಖೆ ನಡೆಸಲಾಗಿತ್ತು. ಮಾಹಿತಿಯಂತೆ ಆರೋಪಿಯನ್ನು ಕುಡುಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆದುಕೊಂಡು ಬರಲಾಗಿದೆ. ಇದೀಗ ಆತನನ್ನು ವಿಚಾರಣೆಗೊಳಪಡಿಸಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಎಂದರು.
ಕೆಲವೊಂದು ತಾಂತ್ರಿಕ ಹಾಗೂ ಗುಪ್ತಚರ ಮಾಹಿತಿಯಂತೆ ಈ ವ್ಯಕ್ತಿ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದುಕೊಳ್ಳಲಾಗಿದೆ ಆತನ ವಿಚಾರಣೆಯಿಂದ ಕೊಲೆಗೆ ಕಾರಣ ಸೇರಿದಂತೆ ಹಲವು ಮಾಹಿತಿಗಳು ದೊರೆಯಲಿದೆ. ವಿಚಾರಣೆ ಮುಗಿದ ಬಳಿಕ ಕಾನೂನು ಪ್ರಕಾರ ಆತನನ್ನು ನ್ಯಾಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದರು.ಪ್ರಕರಣದ ತನಿಖಾಧಿಕಾರಿ ವರದಿ ನೀಡಿದ ಬಳಿಕ ಹೆಚ್ಚಿನ ಮಾಹಿತಿ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು. ನಮ್ಮ ಮಾಹಿತಿ ಪ್ರಕಾರ ಆತ ಸಿ.ಐ.ಎಸ್.ಎಫ್. ಹಾಗೂ ಸಿ.ಆರ್.ಪಿ.ಎಫ್.ನಲ್ಲಿ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಆತ ಸಿವಿಲ್ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸಿರಬಹುದು ಎಂಬ ಮಾಹಿತಿ ದೊರೆತಿದೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದವರು ಹೇಳಿದರು.
ಈ ಪ್ರಕರಣದಲ್ಲಿ ನಾವು 15-20 ಮಂದಿ ಶಂಕಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದೆವು. ಅದೇ ರೀತಿ ಪ್ರವೀಣನನ್ನು ಕೂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ಪ್ರಕರಣದ ವಿವರ:
ನ. 12ರಂದು ಬೆಳಗ್ಗೆ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಹಸೀನಾ( 48), ಮಕ್ಕಳಾದ ಅಫ್ಘಾನ್ (23), ಅಯ್ತಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಚೂರಿ ಇರಿತಕ್ಕೊಳಗಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ ಹಂತಕನಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ಅವಿತು ಜೀವ ಉಳಿಸಿಕೊಂಡಿದ್ದರು
Posted by Vidyamaana on 2024-05-23 13:54:45 |
ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೇ.23ರಂದು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ
Posted by Vidyamaana on 2024-03-16 19:18:55 |
ಮಂಗಳೂರು : ಅರುಣ್ ಕುಮಾರ್ ಪುತ್ತಿಲ ಮಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದು, ಕಾರ್ಯಕರ್ತರು ಶಾಲು ಹಾಕಿ ಸ್ವಾಗತಿಸಿದರು.ಅರುಣ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ ನೀಡುವ ಹಿನ್ನೆಲೆ ನೂರಾರು ಕಾರ್ಯಕರ್ತರು ಆಗಮಿಸಿದರು.
Posted by Vidyamaana on 2023-05-22 10:40:02 |
ಅನೇಕ ಮನೆಗಳಲ್ಲಿ, ಅಡುಗೆಮನೆ ಅಥವಾ ಆಹಾರವನ್ನು ಸಂಗ್ರಹಿಸುವ ಪ್ರದೇಶವು ಸೋಂಕಿತ ಪ್ರದೇಶವಾಗಿರುತ್ತದೆ. ಈ ಇರುವೆಗಳ ಹಿಡಿತದಿಂದ ಪಾರಾಗಲು ಹಲವು ರೀತಿಯ ಸ್ಪ್ರೇಗಳನ್ನು ಬಳಸಲಾಗುತ್ತದೆ. ಆದರೆ ಯಾವುದೇ ಫಲಿತಾಂಶವಿಲ್ಲದೆ ಗೃಹಿಣಿಯರು ಹತಾಶರಾಗುತ್ತಾರೆ. ಅಂತಹವರಿಗಾಗಿ ಇರುವೆಗಳ ಹಿಡಿತದಿಂದ ಪಾರಾಗಲು ಬೆಸ್ಟ್ ಟಿಪ್ಸ್ ತಂದಿದ್ದೇವೆ. ಈ ಟಿಪ್ಸ್ ಪ್ರಕಾರ ಯಾವುದೇ ಕೆಮಿಕಲ್ ಬಳಸಬೇಕಿಲ್ಲ.. ಅಡುಗೆ ಮನೆಯ ಸಾಮಾಗ್ರಿಗಳನ್ನು ಸಮಂಜಸವಾಗಿ ಬಳಸಿದರೆ ಸಾಕು ಕರಿಮೆಣಸು ಇರುವೆಗಳನ್ನು ಹಿಮ್ಮೆಟ್ಟಿಸಲು ಉತ್ತಮವಾಗಿ ಸಹಾಯ ಮಾಡುತ್ತದೆ. ಹೌದು, ಕಾಳುಮೆಣಸಿನ ಕಾಟಕ್ಕೆ ಇರುವೆಗಳು ಓಡಿಹೋಗುವುದು ಖಚಿತ. ಅದಕ್ಕಾಗಿ ಅಡುಗೆ ಮನೆಯಲ್ಲಿ ಇರುವೆ ಸ್ಪ್ರೇ ಬದಲು ಅಲ್ಲೊಂದು ಇಲ್ಲೊಂದು ಕಾಳುಮೆಣಸನ್ನು ಹಾಕಿದರೆ ಪರವಾಗಿಲ್ಲ.
ಇರುವೆಗಳನ್ನು ತೊಡೆದುಹಾಕಲು, ಒಂದು ಬಾಟಲಿಯಲ್ಲಿ ಎರಡು ಕಪ್ ನೀರಿನಲ್ಲಿ ಸ್ವಲ್ಪ ಪುದೀನಾ ಎಣ್ಣೆಯನ್ನು ಸೇರಿಸಿ ಮತ್ತು ಇರುವೆ ಇರುವಲ್ಲಿ ಸಿಂಪಡಿಸಿ. ಸಿಂಪಡಿಸುವಾಗ ಸಾಕುಪ್ರಾಣಿಗಳನ್ನು ಅವುಗಳಿಂದ ದೂರವಿರಿಸಲು ಮರೆಯಬೇಡಿಹಾಗೆಯೇ ಎರಡು ಲೋಟ ನೀರಿನಲ್ಲಿ ಟ್ರೀ ಆಯಿಲ್ ಸೇರಿಸಿ ಚಿಮುಕಿಸಿ, ಈ ನೀರಿನಲ್ಲಿ ಹತ್ತಿ ಉಂಡೆಗಳನ್ನು ಅದ್ದಿ ಅಡುಗೆ ಮನೆಯಲ್ಲಿಟ್ಟರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.
ದಾಲ್ಚಿನ್ನಿ ಇರುವೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಹತ್ತಿಯ ಉಂಡೆಗಳನ್ನು ದಾಲ್ಚಿನ್ನಿ ಎಣ್ಣೆಯಲ್ಲಿ ಅದ್ದಿ ಇರುವೆಗಳು ಓಡಾಡುವ ಸ್ಥಳಗಳಲ್ಲಿ ಇಟ್ಟರೆ ಅವು ಬರದಂತೆ ತಡೆಯುತ್ತವೆ.
ಬಿಳಿ ವಿನೆಗರ್ ಅನ್ನು ಇರುವೆಗಳಿರುವಲ್ಲಿ ಸಿಂಪಡಿಸಬಹುದು ಮತ್ತು ಉತ್ತಮ ಫಲಿತಾಂಶವನ್ನು ಕಾಣಬಹುದು.
ಹಾಗೆಯೇ ಎರಡು ಲೋಟ ನೀರಿಗೆ ಬೇವಿನ ಎಣ್ಣೆ ಹಾಕಿ ಬಾಟಲಿಯಲ್ಲಿ ಸ್ಪ್ರೇ ಮಾಡಿದರೆ ಇರುವೆಗಳು ನಿಮ್ಮ ಬರುವುದಿಲ್ಲ.
Posted by Vidyamaana on 2023-11-23 10:53:49 |
ಮಂಗಳೂರು: ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ.
ಯಶ್ರಾಜ್ ಎಸ್.ಸುವರ್ಣ(43) ಮೃತರು ಎಂದು ತಿಳಿದು ಬಂದಿದೆ.
ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಅನಂತರ ಲಾಡ್ಜ್ ನವರು ತೆರೆದಾಗಬೆಂಕಿ ಆವರಿಸಿತ್ತು.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.