ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಸುದ್ದಿಗಳು News

Posted by vidyamaana on 2024-07-08 15:11:53 |

Share: | | | | |


ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

 Share: | | | | |


ಸುಳ್ಯದಲ್ಲಿ ಎರಡು ಖಾಸಗಿ ಬಸ್ ಸೀಝ್

Posted by Vidyamaana on 2023-07-06 02:15:00 |

Share: | | | | |


ಸುಳ್ಯದಲ್ಲಿ ಎರಡು ಖಾಸಗಿ ಬಸ್  ಸೀಝ್

ಸುಳ್ಯ; ಅತೀ ಹಳೆಯ ಪರ್ಮಿಟ್ ಹೊಂದಿದ್ದ ಎರಡು ಖಾಸಗಿ ಬಸ್ ಗಳನ್ನು ಆರ್ ಟಿ ಓ ಅಧಿಕಾರಿಗಳು ಸೀಝ್ ಮಾಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ - ಮಂಡೆಕೋಲು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್ ಗಳನ್ನು ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಪುತ್ತೂರು ಆರ್ ಟಿ ಓ ಅಧಿಕಾರಿಗಳ ತಂಡ ಸೀಝ್ ಮಾಡಿದೆ.


ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು - ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಅಲ್ಲದೇ ಕೆಎ-19-ಸಿ-0329 ಎಂಬ ಸಂಖ್ಯೆಯ ಇನ್ನೊಂದು ಬಸ್ ಸುಮಾರು ಮೂವತ್ತೊಂಬತ್ತು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಇವುಗಳಲ್ಲಿ ಒಂದು ಡಿಸೆಂಬರ್ ತಿಂಗಳಿನಲ್ಲಿ ಹಾಗೂ ಇನ್ನೊಂದು ಜನವರಿ ತಿಂಗಳಿನಲ್ಲಿ ಅವಧಿ ಮುಗಿದಿದ್ದರೂ ನವೀಕರಣ ಮಾಡದೇ ಬಸ್ ಗಗಳನ್ನು ಓಡಿಸುತ್ತಿರುವ ಕುರಿತು ಆರ್ ಟಿ ಓ ಅಧಿಕಾರಿಗಳಿಗೆ ದೂರು ಕೇಳಿಬಂದಿತ್ತು ಈ ಹಿನ್ನೆಲೆ ಬಸ್ ಗಳನ್ನು ಸೀಝ್ ಮಾಡಿದ್ದಾರೆ.ಸೀಝ್ ಆಗಿರುವ ಬಸ್ಸುಗಳು ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಪೋಲೀಸ್ ಸುಪರ್ದಿಗೆ ನೀಡಲಾಗಿದೆ. ಈ ಕುರಿತಂತೆ ಕಾನೂನು ರೀತಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಹಾಗೂ ಪರವಾನಿಗೆ ಹೊಂದಿದ ಮಾಲಕರು ನೋಟಿಸ್ ಗೆ ಉತ್ತರ ಸಲ್ಲಿಸಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನಲಾಗಿದೆ.

ರಾಜ್ಯದಲ್ಲಿ ಜ.17 ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ!

Posted by Vidyamaana on 2024-01-15 22:09:59 |

Share: | | | | |


ರಾಜ್ಯದಲ್ಲಿ ಜ.17 ರಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ!

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಷನ್‌ ಆಫ್‌ ಕರ್ನಾಟಕ ಲಾರಿ ಓನರ್ಸ್‌ ಅಸೋಸಿಯೇಷನ್‌ ಜ.17ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ (Lorry Drivers Protest) ಕರೆ ಕೊಟ್ಟಿದೆ. ಕೇಂದ್ರದ ಹಿಟ್‌ ಆ್ಯಂಡ್‌ ರನ್‌ ಕಾನೂನು (Hit And Run Law) ವಿರೋಧಿಸಿ ಲಾರಿ ಚಾಲಕರು ಪ್ರತಿಭಟನೆಗೆ (Lorry strike) ನಡೆಸಲಿದ್ದಾರೆ.ಉದ್ದೇಶಿತ ಕಾನೂನನ್ನು ಸಾರಿಗೆ ವಲಯದ ಪ್ರತಿನಿಧಿಗಳೊಂದಿಗೆ ಯಾವುದೇ ಸಮಲೋಚನೆಯಿಲ್ಲದೆ ಪರಿಚಯಿಸಲಾಗಿದೆ. ಪ್ರಸ್ತಾವಿತ ಕಾನೂನಿನಲ್ಲಿ ಕೆಲ ಲೋಪಗಳಿವೆ. ದೇಶದಲ್ಲಿ ಸಾರಿಗೆ ಉದ್ಯಮವು ಶೇ.27ರಷ್ಟು ಚಾಲಕರ ಕೊರತೆಯನ್ನು ಎದುರಿಸುತ್ತಿದೆ. ಹೀಗಿರುವಾಗ ಕಠಿಣ ಕಾನೂನಿನ ಭೀತಿಗೆ ಚಾಲಕ ವೃತ್ತಿಗೆ ಪ್ರವೇಶಿಸಲು ಹಿಂದೆಟ್ಟು ಹಾಕುತ್ತಿದ್ದಾರೆ. ಇದು ದೇಶದ ಪೂರೈಕೆ ಸರಪಳಿಯಲ್ಲಿ ಅಡಚಣೆಗಳಿಂದ ಕಾರಣವಾಗಬಹುದು.


10ವರ್ಷ ಜೈಲು ಶಿಕ್ಷೆ!

ಅಪಘಾತವಾದರೆ 10 ವರ್ಷಗಳ ಜೈಲು ಶಿಕ್ಷೆ ಸೇರಿದಂತೆ ಕಟ್ಟುನಿಟ್ಟಾದ ನಿಬಂಧನೆಗಳು ಚಾಲಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ದೇಶದಲ್ಲಿ ಅಪಘಾತ ತನಿಖಾ ಪ್ರೋಟೋಕಾಲ್‌ನ ಸಂಪೂರ್ಣ ಕೊರತೆ ಇದೆ. ಅಪಘಾತದ ಸಮಯದಲ್ಲಿ ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಪರಿಗಣಿಸದೇ ಭಾರಿ ವಾಹನಗಳು ಎಂಬ ಕಾರಣಕ್ಕೆ ಸುಖಾಸುಮ್ಮನೆ ದೂಷಿಸಲಾಗುತ್ತಿದೆ ಎಂದು ಚಾಲಕರು ಆರೋಪಿಸಿದ್ದಾರೆ.

ಅನೇಕ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಚಾಲಕರು ಪರಾರಿ ಆಗಿಬಿಡುತ್ತಾರೆ ಎಂಬ ಅಪವಾದವಿದೆ. ಆದರೆ ಬಹುತೇಕ ಸಂದರ್ಭದಲ್ಲಿ ಸ್ಥಳೀಯರ ಬೆದರಿಕೆ ಕಾರಣಕ್ಕೆ, ಜೀವ ಭಯಕ್ಕೆ ಚಾಲಕರು ಅಪಘಾತ ಸ್ಥಳದಿಂದ ಕಾಲ್ಕಿತ್ತಿರುತ್ತಾರೆ. ಬಳಿಕ ಸ್ವಇಚ್ಛೆಯಿಂದ ಪೊಲೀಸರಿಗೆ ಶರಣಾಗಿದ್ದಾರೆ. ಹೀಗಿರುವ ಕಾನೂನೂ ತೊಡಕುಗಳನ್ನು ಪರಿಹರಿಸದೇ ಕಠಿಣ ಕಾನೂನು ಮೊರೆ ಹೋಗುವುದು ಸಮಂಜಸವಲ್ಲ ಎಂದಿದ್ದಾರೆ.


ಸದ್ಯದ ಹೊಸ ಕಾನೂನು ಭಾರತ ಸಾರಿಗೆ ಕ್ಷೇತ್ರಕ್ಕೆ ವಿರುದ್ಧವಾಗಿದೆ. ದೇಶದಾದ್ಯಂತ ಟ್ರಕ್‌ ಚಾಲಕರ ಸಮುದಾಯದಲ್ಲಿ ಅಶಾಂತಿ ಮೂಡಿ ಉದ್ಯೋಗವನ್ನು ತ್ಯಜಿಸಬಹುದು. ಸಾರಿಗೆ ಉದ್ಯಮದ ದೃಷ್ಟಿಕೋನದಿಂದ ಗಣನೆಗೆ ತೆಗೆದುಕೊಂಡು ಹೊಸ ಕಾನೂನನ್ನು ಮರುಪರಿಶೀಲಿಸುವಂತೆ ಲಾರಿ ಮಾಲೀಕರು ಮನವಿಯನ್ನು ಮಾಡಿದ್ದಾರೆ.


ಹೊಸ ಕಾನೂನಿನಲ್ಲಿ ಏನಿದೆ?


ಅಪಘಾತ ನಡೆಸಿ ಪರಾರಿಯಾದ (ಹಿಟ್‌ ಆ್ಯಂಡ್‌ ರನ್‌) ಪ್ರಕರಣ, ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿಯ ಸಾವಿಗೆ ಕಾರಣವಾದರೆ, ಯಾವುದೇ ಚಾಲಕ ಅಪಘಾತದ ಬಗ್ಗೆ ಅಧಿಕಾರಿಗಳಿಗೆ ವರದಿ ಮಾಡದೆ. ಸ್ಥಳದಿಂದ ಪಲಾಯನ ಮಾಡುವವರಿಗೆ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡವನ್ನು ವಿಧಿಸಲಾಗುತ್ತದೆ.


ಹಿಂದೆ  ಕಾನೂನು ಏನಿತ್ತು?


ಹಳೆಯ, ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ (IPC)ಯಲ್ಲಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಿಗೆ ನಿರ್ದಿಷ್ಟ ನಿಬಂಧನೆಯನ್ನು ಹೊಂದಿರಲಿಲ್ಲ. ಐಪಿಸಿಯ ಸೆಕ್ಷನ್ 304 ಎ ಅಡಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿತ್ತು. ಆ ಪ್ರಕಾರ ಉದ್ದೇಶಪೂರ್ವಕವಲ್ಲದ ಮತ್ತು ನಿರ್ಲಕ್ಷ್ಯದ ಕೃತ್ಯದಿಂದ ಸಾವಿಗೆ ಕಾರಣ ಎಂದು IPC ಯ ಸೆಕ್ಷನ್ 304 A ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿತ್ತು. ಅದರಡಿ 2 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ / ದಂಡ ವಿಧಿಸಬಹುದಿತ್ತು.


ಈಗ ವಿರೋಧ ಯಾಕೆ?

ದೊಡ್ಡ ವಾಹನ ಮತ್ತು ಚಿಕ್ಕ ವಾಹನಗಳ ನಡುವೆ ಅಪಘಾತ ನಡೆದಾಗ ತನಿಖೇ ನಡೆಸದೆ ಭಾರಿ ಗಾತ್ರದ ವಾಹನಗಳದ್ದೇ ತಪ್ಪೆಂದು ಕೇಸ್ ಹಾಕಬಹುದು. ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಚಾಲಕರಿಗೆ 10 ವರ್ಷದವರೆಗೆ ಜೈಲು ಶಿಕ್ಷೆ ಆಗಬಹುದು. ಜತೆಗೆ ದೊಡ್ಡ ಮೊತ್ತದ ದಂಡವನ್ನು ಕೂಡ ಕೋರ್ಟ್‌ ವಿಧಿಸಬಹುದು. ಹೀಗಾಗಿ ಲಾರಿ ಹಾಗೂ ಟ್ರಕ್ ಚಾಲಕರು ಆತಂಕಕ್ಕೆ ಒಳಗಾಗಿದ್ದಾರೆ.


ಅಪಘಾತ ನಡೆದಾಗ ಲಾರಿಯನ್ನು ವಶಕ್ಕೆ ಪಡೆಯಲಾಗುತ್ತದೆ. ನಂತರ ಇಂತಹ ಲಾರಿಗಳನ್ನು ಹಿಂದಿರುಗಿಸಲು ಸತಾಯಿಸುತ್ತಾರೆ. ಸಂಚಾರ ದಟ್ಟಣೆ ನೆಪವೊಡ್ಡಿ ಲಾರಿಗಳಿಗೆ ಹೆಚ್ಚು ದಂಡ ವಿಧಿಸಲಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರದ ಈ ಕಾನೂನಿಗೆ ಹೆದರಿ ಹೊಸಬರು ಈ ವೃತ್ತಿಗೆ ಬರಲು ಹಿಂದೇಟು ಹಾಕುತ್ತಾರೆ. ಆದ್ದರಿಂದ ಕೇಂದ್ರ ಸರ್ಕಾರ ಈ ನಿಯಮವನ್ನು ಸಡಿಲಗೊಳಿಸಬೇಕೆಂದು ಜ.17ವರೆಗೆ ಲಾರಿ ಸಂಘವು ಗಡುವು ನೀಡಿದೆ.


ಲಾರಿ ಚಾಲಕರ ಬೇಡಿಕೆಗಳೇನು?

-ಗಡಿ ಭಾಗದ ಸಾರಿಗೆ ಇಲಾಖೆ ಚೆಕ್‌ಪೋಸ್ಟ್ ತೆರವು.

-ಹೆಚ್ಚುವರಿ ಪ್ರೊಜೆಕ್ಷನ್ ದಂಡ ಇಳಿಕೆ.

-ಕಪ್ಪುಪಟ್ಟಿಯಲ್ಲಿರುವ ವಾಣಿಜ್ಯ ವಾಹನಗಳಿಗೆ ಎಫ್ಸಿ ಮತ್ತು ಪರ್ಮಿಟ್ ನವೀಕರಣಕ್ಕೆ ಅನುಮತಿ.

-ಅಪಘಾತದ ವೇಳೆ ಪೊಲೀಸರು ಚಾಲನಾ ಪತ್ರ ವಶಪಡಿಸಿಕೊಳ್ಳಬಾರದು.

-ಹೊರರಾಜ್ಯ ವಾಹನಗಳ ಅಪಘಾತವಾದಾಗ ಬಿಡುಗಡೆಗೆ ಸ್ಥಳೀಯ ವ್ಯಕ್ತಿಗಳ ಭದ್ರತೆ ಹಾಗೂ ಜಾಮೀನು ಕೇಳಬಾರದು.

ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಯುವಕ-ಯುವತಿ ವಿರುದ್ಧ ಪ್ರಯಾಣಿಕ ಆಕ್ರೋಶ-ವಿಡಿಯೋ ವೈರಲ್

Posted by Vidyamaana on 2024-05-06 17:19:29 |

Share: | | | | |


ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಯುವಕ-ಯುವತಿ ವಿರುದ್ಧ ಪ್ರಯಾಣಿಕ ಆಕ್ರೋಶ-ವಿಡಿಯೋ ವೈರಲ್

ಬೆಂಗಳೂರು, ಮೇ 06: ನಮ್ಮ ಮೆಟ್ರೋ (Namma Metro) ರಾಜಧಾನಿ ಬೆಂಗಳೂರಿನ (Bengaluru) ಅತಿ ವೇಗದ ಸಂಪರ್ಕ ಸಾರಿಗೆಯಾಗಿದೆ. ಈ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮ (BMRCL) ಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ.

ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

Posted by Vidyamaana on 2023-06-05 07:01:02 |

Share: | | | | |


ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

ಹೊಸದಿಲ್ಲಿ: ಒಡಿಶಾದ ಬಾಲಸೋರ್‌ನಲ್ಲಿ 275 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ ಮೂರು ದಿನಗಳ ನಂತರ, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿದ್ದ ಮತ್ತೊಂದು ರೈಲು ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.ಬಾಲಸೋರ್ ಘಟನಾ ಸ್ಥಳದಿಂದ ಸಮಾರು 500 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್‌ ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಲೈನ್, ವ್ಯಾಗನ್‌ಗಳು ಮತ್ತು ಲೊಕೊಮೊಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಪಾರ್ಥ ಪುರುಷರಿಗಾಗಿ ವೈವಿಧ್ಯಮಯ ಕಲೆಕ್ಷನ್ಸ್ ಪ್ರದರ್ಶನ

Posted by Vidyamaana on 2023-10-27 09:20:11 |

Share: | | | | |


ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಪಾರ್ಥ ಪುರುಷರಿಗಾಗಿ ವೈವಿಧ್ಯಮಯ ಕಲೆಕ್ಷನ್ಸ್ ಪ್ರದರ್ಶನ

ಪುತ್ತೂರು: ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿರುವ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪುರುಷರಿಗಾಗಿ ಪಾರ್ಥ ಹೆಸರಿನಲ್ಲಿ ವಿಶೇಷ ಕಲೆಕ್ಷನ್‌ಗಳ ಪ್ರದರ್ಶನ ಮತ್ತು ಮಾರಾಟ ಶುಭಾರಂಭಗೊಂಡಿದೆ.


ಪುರುಷರ ಆಭರಣಗಳ ಅತೀ ದೊಡ್ಡ ಹಾಗೂ ವಿಶೇಷ ಸ೦ಗ್ರಹ


ಪಾರ್ಥವನ್ನು ಅ.25ರಂದು ನಾಯರ್ ಕನ್ ಸ್ಟಕ್ಷನ್ ಮಾಲಕರಾದ ಸೂರಜ್ ನಾಯ‌ರ್ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಅತ್ಯುತ್ತಮ ಸೇವೆ ಮತ್ತು ವಿಫುಲವಾದ ಸಂಗ್ರಹವಿದೆ. ನಾನು ಇಲ್ಲಿನ ಸಂತೃಪ್ತ ಗ್ರಾಹಕನಾಗಿದ್ದು, ಈ ಪಾರ್ಥ ಸಂಗ್ರಹದಿಂದ ಸಂಸ್ಥೆಯ ಖ್ಯಾತಿ ಇನ್ನಷ್ಟು ಉತ್ತುಂಗಕ್ಕೇರಲಿ ಎಂದು ಶುಭ ಹಾರೈಸಿದರು.


ಪಾರ್ಥ ಪುರುಷರಿಗಾಗಿನ ಅಪೂರ್ವ ಸಂಗ್ರಹದಲ್ಲಿ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆಂಟಿಕ್ ಫಿಶ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಸೇರಿದಂತೆ ಇನ್ನಷ್ಟು ವಿನೂತನ ವಿನ್ಯಾಸದ ವಿಶಿಷ್ಟ ಚಿನ್ನಾಭರಣಗಳ ಸಂಗ್ರಹ ಇಲ್ಲಿ ಅನಾವರಣಗೊಂಡಿದೆ.


ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯ, ಮ್ಯಾನೇಜರ್ ಶಂಕರ್ ಮೋಹನ್, ಸ್ಟೋರ್ ಮ್ಯಾನೇಜರ್ ಶೇಖರ್ ಗೌಡ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-06-21 04:45:02 |

Share: | | | | |


ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ   ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚಿತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು

ಅವರು ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ. ಸರಕಾರದ ಐದು ಗ್ಯಾರಂಟಿ ಜನರನ್ನು ಸಂತೋಷದಿಂದ ಇರುವಂತೆ ಮಾಡಿದೆ. ಉಚಿತ ಸರಕಾರಿ ಬಸ್ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದು ಇಂದು ರಜ್ಯದ ಪ್ರತೀಯೊಂದು ದೇವಾಲಯ, ಮಸೀದಿ, ಚರ್ಚುಗಳು ಭಕ್ತರಿಂದ ತುಂಬು ತುಳುಕುತ್ತಿದೆ. ಮಹಿಳೆಯರಿಗೆ ದೇವರ ದರ್ಶನದ ಭಾಗ್ಯವನ್ನು ಕರುಣಿಸಿದಂತಾಗಿದೆ ಇದುವೇ ನಿಜವಾದ ಹಿಂದುತ್ವ, ಇನ್ನೊಬ್ಬರಿಗೆ ಅನ್ಯಾಯ ಮಾಡುವುದು, ಗಲಭೆ ಎಬ್ಬಿಸಿ ಜನರ ಮಧ್ಯೆ ವೈರತ್ವವನ್ನು ತರುವುದು ಹಿಂದುತ್ವವಲ್ಲ ಎಂದು ಹೇಳಿದರು.


ನಾವು ಕುಚ್ಚಲಕ್ಕಿ ಕೊಡ್ತೇವೆ

ಪಡಿತರ ಮೂಲಕ ತಲಾ ೫ ಕೆ ಜಿ ಕುಚ್ಚಲಕ್ಕಿಯನ್ನು ನಾವು ಕೊಡುತ್ತೇವೆ. ಕರಾವಳಿ ಭಾಗದಲ್ಲಿ ಕುಚ್ಚಲಕ್ಕಿ ಬೇಡಿಕೆ ಇದ್ದು ಈ ಬಗ್ಗೆ ನಾನು ಸೀಎಂ ಜೊತೆ ಮಾತನಾಡಿದ್ದೇನೆ. ಕೆಲವು ತಿಂಗಳೊಳಗೆ ಈ ವ್ಯವಸ್ಥೆ ಆಗಲಿದೆ. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದೆ, ಬಡವರ ಆಶೋತ್ತರಗಳನ್ನು ನಮ್ಮ ಸರಕಾರ ಖಂಡಿತವಾಗಿಯೂ ಈಡೇರಿಸಲಿದೆ. ಬಡವರ ಉಚಿತ ಭಾಗ್ಯವನ್ನು ವಿರೋಧಿಸುವವರು ವಿರೋಧಿಸುತ್ತಲೇ ಇರಲಿ ಅದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.


೨೪ ಗಂಟೆ ಕುಡಿಯುವ ನೀರು

ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಪ್ರತೀ ಮನೆಗೆ ೨೪ ಗಂಟೆ ಕುಡಿಯುವ ನೀರಿನ ಯೋಜನೆಯನ್ನು ಜರಿಗೆ ತರಲಾಗುತ್ತದೆ. ಇದಕ್ಕಾಗಿ ಈಗಾಗಲೇ ಬಹುಕೋಟಿ ಅನುದಾನವನ್ನು ನಿರೀಕ್ಷಿಸಲಾಗಿದ್ದು ಅದು ಖಂಡಿತವಾಗಿಯೂ ಕಾರ್ಯರೂಪಕ್ಕೆ ಬರಲಿದೆ. ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ಮುಂದಿನ ಎರಡು ವರ್ಷದೊಳಗೆ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕರು ತಿಳಿಸಿದರು.


ಕೈಗಾರಿಕೆಗಳ ಆರಂಭ

ಪುತ್ತೂರಿನ ವಿವಿಧ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಬಗ್ಗೆ ಆಲೋಚನೆಯನ್ನು ಮಾಡಿದ್ದೇನೆ. ಬಹುರಾಷ್ಟ್ರೀಯ ಕಂಪೆನಿಗಳು ಪುತ್ತೂರಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭ ಮಾಡಲಿದೆ. ಜನರಿಗೆ ತೊಂದರೆಯಾಗದೆ, ಪರಿಸರಕ್ಕೂ ತೊಂದರೆಯಾಗದ ರೀತಿಯಲ್ಲಿ ಕ್ಷೇತ್ರದಲ್ಲಿ ಕೈಗಾರಿಕಾ ಕೇಂದ್ರಗಳು ಕಾರ್ಯಾಚರಿಸಲಿದೆ. ಕೈಗಾರಿಕೆಗಳು ಆರಂಭವಾದ ಬಳಿಕ ಅದರಲ್ಲಿ ಸ್ಥಳೀಯರಿಗೆ ಉದ್ಯೋಗವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.


ಹಗೆ ರಾಜಕೀಯ ಇಲ್ಲ

ನಾನಾಗಾಲಿ, ಕಾರ್ಯಕರ್ತರಾಗಲಿ ಹಗೆತನದ ರಾಜಕೀಯ ಮಾಡಬಾರದು. ಅವ ನಮಗೆ ಓಟು ಹಾಕಿಲ್ಲ, ಅವನು ಬಿಜೆಪಿ ಇವನು ಬ್ಯಾಟ್ ಎಂದೆಲ್ಲಾ ಯಾರನ್ನೂ ಕಡೆಗನಿಸಬೇಡಿ. ಪಕ್ಷದ ಯೋಜನೆಗಳನ್ನು ಎಲ್ಲರಿಗೂ ನೀಡಿ. ನಮ್ಮ ಸೇವೆಯನ್ನು ಕಂಡು ಅವರು ನಮ್ಮೊಳಗೆ ಸೇರಿಕೊಳ್ಳುವಂತೆ ಪ್ರತೀಯೊಬ್ಬ ಕಾರ್ಯಕರ್ತನೂ ಕಾರ್ಯಪೃವೃತ್ತರಾಗಬೇಕು. ೯೪ ಸಿ, ಅಕ್ರಮಸಕ್ರಮ ಸೇರಿದಂತೆ ಎಲ್ಲ ಕಡತಗಳನ್ನು ಪಕ್ಷ ನೋಡದೆ ನಾವು ಸ್ವೀಕರಿಸೋಣ, ಕಾಂಗ್ರೆಸ್ ಎಲ್ಲರ ಪಕ್ಷ ಎಂಬುದನ್ನು ಜನರಿಗೆ ತೋರಿಸಿಕೊಡಬೇಕು ಎಂದು ಹೇಳಿದರು. ಯಾರಿಗೂ ಅನ್ಯಾಯ ಮಾಡಬೇಡಿ, ಅನ್ಯಾಯ ಮಾಡಿ ನನ್ನ ಬಳಿ ಬೆಂಬಲ ಕೇಳದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.


ಹಾಲಿಗೆ ೫೦ ರೂ ಸಿಗುವಂತಾಗಬೇಕು

ಹಾಲಿಗೆ ಲೀಟರ್‍ಗೆ ೫೦ ರೂ ದೊರೆಯುವಂತಾಗಬೇಕು. ದನಗಳನ್ನು ಸಾಕುವುದು ಕಷ್ಟದ ಕೆಲಸವಾಗಿದ್ದು, ಹಾಲಿಗೆ ದರ ಹೆಚ್ಚಾದರೆ ಸಾಕಿದವನಿಗೆ ಏನಾದರು ಲಾಭ ದೊರೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಾನು ಸಂಬಂಧಿಸಿದವರ ಜೊತೆ ಮಾತನಾಡಲಿದ್ದೇನೆ ಎಂದು ಶಾಸಕರು ಹೇಳಿದರು.


೧೦ ಮಂದಿ ಮಹಿಳೆಯರ ತಂಡ

ಪ್ರತೀ ಬೂತ್‌ನಲ್ಲಿ ೧೦ ಮಂದಿ ಮಹಿಳೆಯರ ತಂಡವನ್ನು ಮಾಡಿ ಆ ತಂಡ ಗ್ರಾಮದ ಪ್ರತೀ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ತಿಳಿಸುವುದರ ಜೊತೆಗೆ ಸ್ಥಳೀಯ ದೇವಸ್ಥಾನ, ದೈವಸ್ಥಾನ , ಭಜನಾ ತಂಡದಲ್ಲಿ ನಮ್ಮ ಕಾರ್ಯಕರ್ತರು ಇರುವಂತೆ ನಾವು ವ್ಯವಸ್ಥೆ ಮಾಡಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ಹೇಳಿದರು.


ರಾಜ್ಯದಲ್ಲಿ ಸುಭದ್ರ ಸರಕಾರ ಬಂದಿದೆ: ಡಾ. ರಾಜಾರಾಂ ಕೆ ಬಿ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ರಾಜ್ಯದಲ್ಲಿ ಸುಭದ್ರ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ. ಪುತ್ತೂರು ಶಾಸಕರ ಕಾರ್ಯವೈಖರಿ ಚೆನ್ನಾಗಿದೆ. ಜನತೆಗೆ ಉಪಯೋಗವಾಗುವ ರೀತಿಯಲ್ಲಿ ಅವರು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಎಲ್ಲೆಡೆ ಶಾಸಕರ ಕಾರ್ಯಕ್ಕೆ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಪುತ್ತೂರು ಕ್ಷೇತ್ರ ಅಭಿವೃದ್ದಿ ಪಥದತ್ತ ಸಾಗಲಿದೆ ಎಂದು ಹೇಳಿದರು.


ಬಡವರ ಸೇವೆಯಿಂದ ಗೌರವ: ದೇವದಾಸ್

ಡಿಸಿಸಿ ಸದಸ್ಯ ದೇವದಾಸ್ ರೈ ಮಾತನಾಡಿ ೨೨ಸಾವಿರ ಬಡ ಕುಟುಂಬಗಳಿಗೆ ಅಧಿಕಾರದಲ್ಲಿ ಇಲ್ಲದಾಗ ಅಶೋಕ್ ರಐ ನೆರವು ನೀಡಿದ್ದಾರೆ. ಈಗ ಶಾಸಕರಾಗಿದ್ದು ಬಡವರಿಗೆ ಇನ್ನು ಸಂತಸದ ದಿನಗಳು ಬರಲಿದೆ. ಬೂತ್ ಮತ್ತು ವಲಯ ಅಧ್ಯಕ್ಷರುಗಳಿಗೆ ಸ್ಥಾನವನ್ನು ನೀಡುವ ಮೂಲಕ ಶಾಸಕರು ಗ್ರಾಮ ಮಟ್ಟದಲ್ಲಿ ಪಕ್ಷ ಬೆಳೆಯಲು ಕಾರಣರಾಗುತ್ತಿದ್ದಾರೆ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪ್ಪಿನಂಗಡಿ- ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಟಂತಬೆಟ್ಟು, ಹಿರೆಬಂಡಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವೀಂದ್ರ, ಕೋಡಿಂಬಾಡಿ ಗ್ರಾಪಂ ಸದಸ್ಯರೂ, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಕೆಮ್ಮಾರ, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ,  ಕೆಪಿಸಿಸಿ ಸಂಯೋಜಕರಾದ ಕೃಷ್ಣ ರಾವ್,  ಕಾಂಗ್ರೆಸ್ ಮುಖಂಡರುಗಳಾದ ಸೇಸಪ್ಪ ನೆಕ್ಕಿಲು, ಉಮನಾಥ ರೈ, ಲೋಕೇಶ್ ಪೆಲತ್ತಡಿ ಮೊದಲಾದವರು ಉಪಸ್ತಿತರಿದ್ದರು.

ಗ್ರಾಪಂ ಸದಸ್ಯೆ ಗೀತಾದಾಸರಮೂಲೆ ಸ್ವಾಗತಿಸಿದರು.ಸೇಸಪ್ಪ ನೆಕ್ಕುಲು ವಂದಿಸಿದರು. ಸತೀಶ್ ಶೆಟ್ಟಿ ಎನ್ನಾಳ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಸಕರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.



Leave a Comment: