ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಸುದ್ದಿಗಳು News

Posted by vidyamaana on 2024-07-25 16:34:52 |

Share: | | | | |


ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ಬುಧವಾರ ಮುನ್ನೆಚ್ಚರಿಕೆ ನೀಡಿದ್ದಾರೆ

ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಸದ್ಯ 60 ಸಾವಿರ ಕ್ಯುಸೆಕ್ ಒಳಹರಿವು ಇದೆ.

Additional Image


ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳು ಇದ್ದು, ಜಲಾಶಯದಲ್ಲಿ ಈಗ 1801. 20 ಅಡಿ ನೀರಿನ ಸಂಗ್ರಹ ಇದೆ. ಮಳೆ ಹೆಚ್ಚಿರುವುದರಿಂದ ಜಲಾಶಯದ ಮಟ್ಟ ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.


ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಬಹುದು ಎಂದು ಕೆಪಿಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

 Share: | | | | |


ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು ಆಘಾತಕಾರಿ ವಿಡಿಯೋ ನೋಡಿ

Posted by Vidyamaana on 2023-10-22 15:59:15 |

Share: | | | | |


ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು  ಆಘಾತಕಾರಿ ವಿಡಿಯೋ ನೋಡಿ

ಲಕ್ನೋ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕೆಲವು ಗೂಂಡಾಗಳು ಅರ್ಚಕರೊಬ್ಬರನ್ನ ಥಳಿಸಿ ನಂತರ ದೇವಾಲಯದಿಂದ ಅಪಹರಿಸಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು, ಆಘಾತಕಾರಿ ವಿಡಿಯೋ ನೋಡಿ

ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.ನಿಲ್ಲಿಸಿದ್ದ ಕಾರಿನಲ್ಲಿ ಅರ್ಚಕನನ್ನ ಸಾಗಿಸುವುದು ಅವರ ಯೋಜನೆಯಾಗಿತ್ತು. ಆದಾಗ್ಯೂ, ಗದ್ದಲದಿಂದಾಗಿ ಜನಸಂದಣಿ ಜಮಾಯಿಸಿದ ನಂತರ ಗೂಂಡಾಗಳು ಅರ್ಚಕರನ್ನ ಬಿಟ್ಟು ಸ್ಥಳದಿಂದ ಪಲಾಯನ ಮಾಡಬೇಕಾಯಿತು.

ಕೋಡಿಂಬಾಡಿ: ಕಾರು-ಲಾರಿ ಅಪಘಾತ:ಓರ್ವನಿಗೆ ಗಂಭೀರ ಗಾಯ

Posted by Vidyamaana on 2023-12-29 08:22:47 |

Share: | | | | |


ಕೋಡಿಂಬಾಡಿ: ಕಾರು-ಲಾರಿ ಅಪಘಾತ:ಓರ್ವನಿಗೆ ಗಂಭೀರ ಗಾಯ

ಪುತ್ತೂರು: ಕೋಡಿಂಬಾಡಿಯಲ್ಲಿ ಇಕೋಸ್ಪೋರ್ಟ್ಸ್ ಕಾರು ಹಾಗೂ ಈಚರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಓರ್ವರು ತೀವ್ರ ಗಾಯಗೊಂಡಿರುವ ಘಟನೆ ದ.28ರಂದು ತಡರಾತ್ರಿ  ನಡೆದಿದೆ.


ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಇಕೋಸ್ಪೋರ್ಟ್ಸ್ ಕಾರು (ಕೆಎ 21ಪಿ-9416)ಮತ್ತು ಎದುರುಗಡೆಯಿಂದ ಬರುತ್ತಿದ್ದ ಈಚರ್ ಲಾರಿ(ಕೆಎ 12-ಸಿ:2676)ರ ನಡುವೆ ಅಪಘಾತ ಸಂಭವಿಸಿದೆ.ಕಾರಿನ ಮುಂಭಾಗ ಜಖಂಗೊಂಡಿದ್ದು ಕಾರಿನ ಹಿಂಬದಿ ಸೀಟಲ್ಲಿದ್ದ ಮೆಸ್ಕಾಂ ಅಧಿಕಾರಿ ಆನಂದ ಉಕ್ಕುಡ ಎಂಬವರು ತೀವ್ರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್

Posted by Vidyamaana on 2024-06-02 18:29:49 |

Share: | | | | |


ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್

ಕೆಲವೊಮ್ಮೆ ಪ್ರಾಕೃತಿಕವಾಗಿ ಎದುರಾಗುವ ಆಘಾತಕಾರಿ ಸನ್ನಿವೇಶಗಳು ಜೀವನವನ್ನೇ ಕಸಿದುಕೊಳ್ಳುತ್ತವೆ. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಖುಷಿಖುಷಿಯಾಗಿ ಆಟವಾಡುತ್ತಿದ್ದ ಮೂವರು ಮಕ್ಕಳ ಮೇಲೆ ಸಿಡಿಲು ಬಡಿದಿದೆ. ಈ ಆಘಾತಕಾರಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ಮಳೆಗಾಲದಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಸಂತೋಷವಾಗಿ ಆಟವಾಡುತ್ತಿದ್ದ ಮೂವರ ಮಕ್ಕಳ ಮೇಲೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಿದೆ. ಈ ಆಘಾತಕಾರಿ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ

ಎ.23ರಂದು ಪುತ್ತೂರಿನಲ್ಲಿ ಅಣ್ಣಾಮಲೈ ಹವಾ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ

Posted by Vidyamaana on 2024-04-20 20:54:33 |

Share: | | | | |


ಎ.23ರಂದು ಪುತ್ತೂರಿನಲ್ಲಿ ಅಣ್ಣಾಮಲೈ ಹವಾ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಬಿಜೆಪಿ ಚುನಾವಣಾ ಸಂಯೋಜಕರಾದ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಅಂದು ಬೆಳಗ್ಗೆ ೮.೩೦ಕ್ಕೆ ಅಣ್ಣಾ ಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ೧೦.೩೦ಕ್ಕೆ ಪುತ್ತೂರಿಗೆ ಬರಲಿದ್ದುö, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಾದ ಬಳಿಕ  ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.

ಇನ್ಫೋಸಿಸ್ ಸುಧಾಮೂರ್ತಿ ಹೆಸರು ಬಳಸಿ ವಂಚನೆ

Posted by Vidyamaana on 2023-10-16 15:08:21 |

Share: | | | | |


ಇನ್ಫೋಸಿಸ್ ಸುಧಾಮೂರ್ತಿ ಹೆಸರು ಬಳಸಿ ವಂಚನೆ

ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಡಾ ಸುಧಾಮೂರ್ತಿಯವರ ಹೆಸರು ಬಳಸಿಕೊಂಡು ವಂಚನೆ ಮಾಡಲಾದ ಪ್ರಕರಣ ಸಂಬಂಧ ಕೆಲ ದಿನಗಳ ಹಿಂದಷ್ಟೇ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿತ್ತು. ಈಗ  ಮತ್ತೊಂದು ವಂಚನೆ ಬಯಲಾಗಿದೆ. ಸುಧಾ ಮೂರ್ತಿ ಅವರ ಹೆಸರಿನಲ್ಲಿ ಸುಳ್ಳು ಭರವಸೆ ನೀಡಿ ವಂಚನೆ ಮಾಡಿದ ಆರೋಪದಲ್ಲಿ 34 ವರ್ಷದ ಅರುಣ್ ಕುಮಾರ್ ಎಂಬ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ.



ಈ ಎರಡೂ ಪ್ರಕರಣದ ಹಿಂದೆ ಆರೋಪಿ ಅರುಣ್ ಮಾಸ್ಟರ್ ಮೈಂಡ್ ಇದೆ ಎಂಬುವುದು ಬಯಲಾಗಿದೆ.ಆರೋಪಿ ಅರುಣ್ ಕುಮಾರ್, ತಾನು ಸುಧಾ ಮೂರ್ತಿ ಅವರ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿಯುಎಸ್‌ಎ ನಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದರು.


ಆರೋಪಿ ಅರುಣ್ ಕುಮಾರ್ ಜನರಿಂದ 5 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಸೆಪ್ಟೆಂಬರ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ರಾಜಾಜಿನಗರದ ನಿವಾಸಿ ಅರುಣ್ ಕುಮಾರ್ ಅವರನ್ನು ಬಂಧಿಸಲಾಗಿದೆ.


ತನಿಖೆ ವೇಳೆ ಅರುಣ್ ಕುಮಾರ್ ತನ್ನ ಧ್ವನಿಯನ್ನು ಮಹಿಳೆಯಂತೆ ಬದಲಾಯಿಸಿ ಸಂಪರ್ಕಿಸಿ ಹಣ ವಂಚಿಸಿದ್ದಾನೆ ಎಂದು ಬಯಲಾಗಿದ್ದು ಸುಧಾ ಮೂರ್ತಿಯವರ ಹೆಸರು ಬಳಸಿ ಮಾಡಲಾಗಿದ್ದ ಎರಡೂ ವಂಚನೆಗಳ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಅರುಣ್ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ವಂಚನೆ ಪ್ರಕರಣದಲ್ಲಿ ಇನ್ನೆಷ್ಟು ಮಂದಿ ಶಾಮೀಲಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಅರುಣ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

BREAKING:ಪೇಟಿಎಂ SVP ಪ್ರವೀಣ್‌ ಶರ್ಮಾ ರಾಜೀನಾಮೆ

Posted by Vidyamaana on 2024-03-24 13:47:23 |

Share: | | | | |


BREAKING:ಪೇಟಿಎಂ SVP ಪ್ರವೀಣ್‌ ಶರ್ಮಾ ರಾಜೀನಾಮೆ

ನವದೆಹಲಿ:ಪೇಟಿಎಂ ಬ್ರಾಂಡ್ನ ಮಾಲೀಕತ್ವ ಹೊಂದಿರುವ ಮತ್ತು ನಿರ್ವಹಿಸುತ್ತಿರುವ ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್ (ಒಸಿಎಲ್) ಶನಿವಾರ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ, ವ್ಯವಹಾರದ ಹಿರಿಯ ಉಪಾಧ್ಯಕ್ಷ ಪ್ರವೀಣ್ ಶರ್ಮಾ ಮಾರ್ಚ್ 23 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಔಪಚಾರಿಕವಾಗಿ ಘೋಷಿಸಿದೆ.ಶರ್ಮಾ ತಮ್ಮ ವೃತ್ತಿಪರ ಪ್ರಯಾಣದ ಮುಂದಿನ ಹಂತದಲ್ಲಿ ಅವಕಾಶಗಳನ್ನು ಹುಡುಕಲು ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪೇಟಿಎಂಗೆ ಸೇರುವ ಮೊದಲು, ಶರ್ಮಾ ಭಾರತ ಮತ್ತು ಎಪಿಎಸಿ ಪ್ರದೇಶವನ್ನು ಒಳಗೊಂಡ ಗೂಗಲ್ನಲ್ಲಿ ನಾಯಕತ್ವದ ಹುದ್ದೆಗಳಲ್ಲಿ ಒಂಬತ್ತು ವರ್ಷಗಳನ್ನು ಕಳೆದರು.

ಇತ್ತೀಚಿನ ಊಹಾಪೋಹಗಳಿಗೆ ಉತ್ತರಿಸಿದ ಪೇಟಿಎಂ, ನಿರ್ದಿಷ್ಟ ವ್ಯವಹಾರ ವಿಭಾಗಗಳಲ್ಲಿ 25-50 ಪ್ರತಿಶತದಷ್ಟು ಉದ್ಯೋಗಿಗಳನ್ನು ಕಡಿತಗೊಳಿಸುವ ವರದಿಗಳನ್ನು ಬಲವಾಗಿ ನಿರಾಕರಿಸಿದೆ.

ಇಂತಹ ವರದಿಗಳು ಆಧಾರರಹಿತ ಮತ್ತು ಕಂಪನಿಯ ಕಾರ್ಯಾಚರಣೆ ಮತ್ತು ಕಾರ್ಯತಂತ್ರದ ಯೋಜನೆಯನ್ನು ತಪ್ಪಾಗಿ ಪ್ರತಿನಿಧಿಸುತ್ತವೆ ಎಂದು ಪೇಟಿಎಂ ತನ್ನ ಫೈಲಿಂಗ್ನಲ್ಲಿ ತಿಳಿಸಿದೆ.ಫೈಲಿಂಗ್ ಪ್ರಕಾರ, ಪೇಟಿಎಂ ಪ್ರಸ್ತುತ ತನ್ನ ವಾರ್ಷಿಕ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿದೆ, ಇದು ತಂಡದ ಕಾರ್ಯಕ್ಷಮತೆಯನ್ನು ನಿರ್ಣಯಿಸುವ ಮತ್ತು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಾಡಿಕೆಯ ಸಾಂಸ್ಥಿಕ ಅಭ್ಯಾಸವಾಗಿದೆ. ಕಾರ್ಯಕ್ಷಮತೆಯ ಮೌಲ್ಯಮಾಪನಗಳು ಮತ್ತು ಪಾತ್ರ ಜೋಡಣೆಗಳ ಮೇಲೆ ಕೇಂದ್ರೀಕರಿಸಿದ ಈ ಪ್ರಕ್ರಿಯೆಯು ಕೈಗಾರಿಕೆಗಳಾದ್ಯಂತ ಪ್ರಮಾಣಿತವಾಗಿದೆ ಮತ್ತು ವಜಾಗಳನ್ನು ಸೂಚಿಸುವುದಿಲ್ಲ.

ಕಂಪನಿಯು ತನ್ನ ಪುನರ್ರಚನೆ ಪ್ರಯತ್ನಗಳು ಮತ್ತು ಕಾರ್ಯಕ್ಷಮತೆಗೆ ಸಂಬಂಧಿಸಿದ ಹೊಂದಾಣಿಕೆಗಳನ್ನು ವಜಾಗೊಳಿಸುವಿಕೆ ಎಂದು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಪೇಟಿಎಂ ಬೆಳೆಯಲು ತನ್ನ ಬದ್ಧತೆಯನ್ನು ಭರವಸೆ ನೀಡುತ್ತದೆ ಎಂದು ಫೈಲಿಂಗ್ ಹೇಳುತ್ತದೆ.

Recent News


Leave a Comment: