ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಡ್ರಾಮಾ ಜೂನಿಯರ್ ಸೀಸನ್ 5 - ಕುಡ್ಲದ ರಿಷಿಕಾ ಕುಂದೇಶ್ವರ ಮತ್ತು ಕುಣಿಗಲ್‌ನ ವಿಷ್ಣು ಜಂಟಿ ವಿನ್ನರ್

Posted by Vidyamaana on 2024-04-22 13:28:29 |

Share: | | | | |


ಡ್ರಾಮಾ ಜೂನಿಯರ್ ಸೀಸನ್ 5 - ಕುಡ್ಲದ ರಿಷಿಕಾ ಕುಂದೇಶ್ವರ ಮತ್ತು ಕುಣಿಗಲ್‌ನ ವಿಷ್ಣು ಜಂಟಿ ವಿನ್ನರ್

ಮಂಗಳೂರು, ಎ.22: ಜೀ ಕನ್ನಡ ವಾಹಿನಿಯ ಡ್ರಾಮಾ ಜೂನಿಯರ್ ಸೀಸನ್ 5ರಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್‌ನ ವಿಷ್ಣು ಡ್ರಾಮಾ ಜೂನಿಯರ್ ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ. 

ಭಾನುವಾರ ರಾತ್ರಿ ಸೀಸನ್‌ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ ಮೂಲಕ ಕಾರ್ಯಕ್ರಮ ಮುಕ್ತಾಯ ಕಂಡಿದೆ. ಈ ಸಲ ಇಬ್ಬರನ್ನು ವಿಜೇತರಾಗಿ ಆಯ್ಕೆ ಮಾಡಲಾಗಿದೆ‌. ರಾಜ್ಯದ 31 ಜಿಲ್ಲೆಗಳಿಂದ ಹಲವಾರು ಬಾಲ ಪ್ರತಿಭೆಗಳನ್ನು ಆಡಿಷನ್‌ ಮೂಲಕ ಆಯ್ಕೆ ಮಾಡಲಾಗಿತ್ತು. ಮೊದಲ ವಾರದಿಂದಲೇ ಶುರುವಾದ ಮಕ್ಕಳ ಆಟ, ಫಿನಾಲೆ ಹಂತಕ್ಕೆ ಬರುವ ವರೆಗೂ ಬರೋಬ್ಬರಿ 200ಕ್ಕೂ ಅಧಿಕ ಸ್ಕಿಟ್‌ಗಳನ್ನು ಮಾಡಿ ಮುಗಿಸಿದ್ದರು. ಪುಟಾಣಿಗಳು. ಪೌರಾಣಿಕ, ಸಾಮಾಜಿಕ, ಹಾಸ್ಯ ಪ್ರಧಾನ ಎಲ್ಲ ಬಗೆಯ ಶೋಗಳಿಂದಲೇ ಈ ಸಲದ ವೇದಿಕೆಯನ್ನು ರಂಗಾಗಿಸಿದ್ದರು. 21 ವಾರ ಕರುನಾಡನ್ನು ಮನರಂಜಿಸಿದ 14 ಮಕ್ಕಳ ಪೈಕಿ ಯಾರು ವಿಜೇತರು ಎಂಬ ಕೌತುಕಕ್ಕೆ ಭಾನುವಾರ ತೆರೆಬಿದ್ದಿದೆ. ಈ ಬಾರಿ ಎಲ್ಲ14 ಮಂದಿ ಪುಟಾಣಿಗಳು ಫಿನಾಲೆ ಸುತ್ತಿನಲ್ಲಿದ್ದರು. ಆ ಪೈಕಿ ಫಿನಾಲೆ ರೌಂಡ್‌ನಲ್ಲಿ ಭದ್ರಾವತಿಯ ಇಂಚರ, ಶಿವಮೊಗ್ಗದ ಮಹಾಲಕ್ಷ್ಮೀ, ಮಂಗಳೂರಿನ ರಿಶಿಕಾ,

ಸುಳ್ಯ : ಕಾರು ಡಿಯೋ ನಡುವೆ ಮುಖಾಮುಖಿ ಡಿಕ್ಕಿ ನಜ್ಜು ಗುಜ್ಜಾದ ದ್ವಿಚಕ್ರ ವಾಹನ!

Posted by Vidyamaana on 2023-02-19 09:58:08 |

Share: | | | | |


ಸುಳ್ಯ : ಕಾರು ಡಿಯೋ ನಡುವೆ ಮುಖಾಮುಖಿ ಡಿಕ್ಕಿ ನಜ್ಜು ಗುಜ್ಜಾದ ದ್ವಿಚಕ್ರ ವಾಹನ!

 ಸುಳ್ಯ :ಕಾರು ಮತ್ತು ಡಿಯೋ ಮುಖಾಮುಖಿ ಡಿಕ್ಕಿಯಾದ ಘಟನೆ ಫೆ .19 ಭಾನುವಾರ ಸುಳ್ಯದ ಕೋಲ್ಚಾರ್ ಸಮೀಪ ಸಂಭವಿಸಿದ್ದು ಇಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಕೋಲ್ಚಾರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ , ಸ್ಕೂಟರ್ ಸಂಪೂರ್ಣ ನಜ್ಜು-ಗುಜ್ಜಾಗಿದೆ. ಇಬ್ಬರು ದ್ವಿಚಕ್ರ ಸವಾರರಾದ ಜತೀನ್ ಮತ್ತು ಮೋಹನ್ ಇವರಿಗೆ ಗಾಯಗಳಾದ ಬಗ್ಗೆ ವರದಿಯಾಗಿದೆ.

ಗಾಯಾಳುಗಳನ್ನು ಕೊಲ್ಲಮೊಗ್ರದ ಸತೀಶ್ ಮತ್ತು ಸಹೋದರರು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಶ್ವೇತಾ ನಾಪತ್ತೆ

Posted by Vidyamaana on 2024-05-30 22:29:35 |

Share: | | | | |


ಶ್ವೇತಾ ನಾಪತ್ತೆ

ಮಂಗಳೂರು: ಮನೆಯಿಂದ ಹೊರಗೆ ತೆರಳಿದ್ದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕಂಪಾಡಿ ಮೀನಕಳಿಯ ನಿವಾಸಿಗಳಾಗಿರುವ ಶ್ವೇತಾ(31) ಮತ್ತು ಇಶಿಕಾ(6) ನಾಪತ್ತೆಯಾದ ತಾಯಿ ಹಾಗೂ ಮಗಳು ಎಂದು ತಿಳಿದು ಬಂದಿದೆ.

ಕುಂಬ್ರ - ಕಾರುಗಳ ಮಧ್ಯೆ ಭೀಕರ ಅಪಘಾತ : ಮಡಿಕೇರಿ ಮೂಲದ ರವೀಂದ್ರ, ಲೊಕೇಶ್ ಮೃತ್ಯು

Posted by Vidyamaana on 2024-06-16 18:38:37 |

Share: | | | | |


ಕುಂಬ್ರ - ಕಾರುಗಳ ಮಧ್ಯೆ ಭೀಕರ ಅಪಘಾತ : ಮಡಿಕೇರಿ ಮೂಲದ ರವೀಂದ್ರ, ಲೊಕೇಶ್  ಮೃತ್ಯು

ಪುತ್ತೂರು: ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

ಹಿಂ.ಜಾ.ವೇ. ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ರಮೇಶ್ ಸುವರ್ಣ ನಿಧನ .

Posted by Vidyamaana on 2023-02-03 04:11:25 |

Share: | | | | |


ಹಿಂ.ಜಾ.ವೇ. ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ರಮೇಶ್ ಸುವರ್ಣ ನಿಧನ .

ಪುತ್ತೂರು: ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ಆರ್ಯಾಪು ಮೇರ್ಲದ ರಮೇಶ್ ಸುವರ್ಣ ರವರು ನಿಧನರಾದರು.ರಮೇಶ್ ಸುವರ್ಣ ರವರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯಾ ನಿರ್ವಹಿಸುತ್ತಿದ್ದು, ಕೆಲ ವರುಷಗಳ ಹಿಂದೆ ನಿವೃತ್ತರಾಗಿದ್ದರು.ಮೃತರು ಮನೆಯವರು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

2019ರಲ್ಲಿ ಸೆ.3 ರಂದು ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸುತ್ತಿದ್ದ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ರನ್ನು ಹತ್ಯೆ ಮಾಡಲಾಗಿತ್ತು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 68 ನೇ ಕನ್ನಡ ರಾಜ್ಯೋತ್ಸವ

Posted by Vidyamaana on 2023-11-02 08:23:17 |

Share: | | | | |


ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 68 ನೇ ಕನ್ನಡ ರಾಜ್ಯೋತ್ಸವ

ಪುತ್ತೂರು: ಕರ್ನಾಟಕ ಮರು ನಾಮಕರಣಗೊಂಡು 50ನೇ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ಭುವನೇಶ್ವರಿ ಮೆರವಣಿಗೆಯೊಂದಿಗೆ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಬುಧವಾರ ಆಚರಿಸಲಾಯಿತು.

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಧೈಯ ವಾಕ್ಯದೊಂದಿಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆಗೆ ಶಾಸಕ ಅಶೋಕ್ ಕುಮಾರ್ ರೈ ದರ್ಬೆ ವೃತ್ತದ ಬಳಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು. ಬಳಿಕ ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಕೊರ್ಟ್‌ ರಸ್ತೆ ಮೂಲಕ ಪುರಭವನಕ್ಕೆ ತೆರಳಿತು. ಕಿಲ್ಲೆ ಮೈದಾನದಲ್ಲಿರುವ ಮಂಗಲ್ ಪಾಂಡೆ ಚೌಕಿಯಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್ ರಾಷ್ಟ್ರ ಧ್ವಜಾರೋಹಣ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಕನ್ನಡ ಧ್ವಜಾರೋಹಣ ಮಾಡಿದರು.


ಬಳಿಕ ಪುರಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ 10 ಮಂದಿ ವಿವಿಧ ಕ್ಷೇತ್ರದ ಸಾಧಕರಾದ ಹಿರಿಯ ಪ್ರಸೂತಿ ತಜ್ಞ ಡಾ.ಸುಬ್ರಾಯ ಭಟ್ (ವೈದ್ಯಕೀಯ), ಎ.ಪಿ.ನಾರಾಯಣ ಮರಿಕೆ (ಕೃಷಿ), ನಿರ್ಮಲಾ ಸುರತ್ಕಲ್ (ಸಾಹಿತ್ಯ), ನಾರಾಯಣ ಕೆ. (ಶಿಕ್ಷಣ), ದಯಾನಂದ ರೈ ಕೋರ್ಮಂಡ (ಕ್ರೀಡೆ), ಸುಂದರ ರೈ ಮಂದಾರ (ರಂಗಭೂಮಿ), ರೆ.ವಿಜಯ ಹಾರ್ವಿನ್ (ಶಿಕ್ಷಣ ಸಮನ್ವಯ), ಡಾ.ಅಜಯ್ (ಸಮಾಜ ಸೇವೆ), ನಾರಾಯಣ ಕುಂಬ್ರ (ಸಾಹಿತ್ಯ ಸಂಘಟನೆ), ಸಿದ್ದಿಕ್ ನಿರಾಜೆ (ಪತ್ರಿಕೋದ್ಯಮ) ಅವರನ್ನು ಕನ್ನಡ ಪೇಟ ತೊಡಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.ಬಳಿಕ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಕನ್ನಡಕ್ಕಾಗಿ ನೀಡಿದ ಪೂರ್ವಜರ ಕೊಡುಗೆ ಅಪಾರವಾಗಿದ್ದು, ಅದನ್ನು ನೆನಪಿಸುವುದು ನಮ್ಮೆಲ್ಲರ ಕರ್ತವ್ಯ. ಕನ್ನಡ ರಾಜ್ಯೋತ್ಸವದ ಮೂಲಕ ಕನ್ನಡ ಭಾಷೆಯ ಅಭಿಮಾನ, ಪ್ರೀತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದರು.ವೇದಿಕೆಯಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ ಜೆ., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಉಪಸ್ಥಿತರಿದ್ದರು.


ಪವಿತ್ರಾ ರೂಪೇಶ್, ಸುಚಿತ್ರಾ ಹೊಳ್ಳ ಮತ್ತು ಬಳಗದವರು ಐದು ಕನ್ನಡದ ಹಾಡುಗಳನ್ನು ಪ್ರಸ್ತುತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.



Leave a Comment: