Posted by vidyamaana on 2024-07-26 15:01:18 |
ಪುತ್ತೂರು: 33 ವರ್ಷಗಳ ಹಿಂದೆಯೇ ನಾಡಿನ ಶೈಕ್ಷಣಿಕ ಕ್ರಾಂತಿಗೆ ನಾಂದಿಯನ್ನು ಹಾಡಿದ ಬಾಸೆಲ್ ಮಿಷನ್ ಸಂಸ್ಥೆಯ ಮೂಲದಿಂದ ಸುದಾನ ವಿದ್ಯಾಸಂಸ್ಥೆಗಳ ಉದಯವಾಗಿದ್ದು ಇದೀಗ ವಿಸ್ತರಿತ ಶೈಕ್ಷಣಿಕ ಸೇವೆಯಲ್ಲೊಂದು ಹೊಸ ಹೆಜ್ಜೆಯನ್ನಿರಿಸಿದ ಸುದಾನ ಸಮೂಹ ಶಿಕ್ಷಣ ಸಂಸ್ಥೆಯು ಸುದಾನ ಕ್ಯಾಂಪಸ್ಸಿನಲ್ಲಿ ಸುಧಾನ ಪದವಿ ಪೂರ್ವ ಕಾಲೇಜ್ ಅನ್ನು ಪ್ರಾರಂಭಿಸಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಜು.27 ರಂದು ಸಂಸ್ಥೆಯ ಸುದಾನ ಎಡ್ವರ್ಡ್ ಸಭಾಂಗಣದಲ್ಲಿ ಜರಗಲಿದೆ.
ನೂತನ ಸುದಾನ ಪದವಿ ಪೂರ್ವ ಕಾಲೇಜ್ ಅನ್ನು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣರವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುದಾನ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಕೇಂದ್ರದ ಅಧ್ಯಕ್ಷ ರೆ.ವಿಜಯ ಹಾರ್ವಿನ್ರವರು ವಹಿಸಿಕೊಳ್ಳಲಿದ್ದಾರೆ.
ಗೌರವ ಅತಿಥಿಗಳಾಗಿ ಪ್ರತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ, ಸಂಜೀವ ಮಠಂದೂರು, ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಸುದಾನ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಕೇಂದ್ರದ ಕಾರ್ಯದರ್ಶಿ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಕೋಶಾಧಿಕಾರಿ ಆಸ್ಕರ್ ಆನಂದ್, ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಯಪಾಲ ಸುಪ್ರೀತ್ ಕೆ.ಸಿರವರು ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಗೌರವ ಅತಿಥಿಗಳಾಗಿ ಪ್ರತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ, ಸಂಜೀವ ಮಠಂದೂರು, ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಸುದಾನ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಕೇಂದ್ರದ ಕಾರ್ಯದರ್ಶಿ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಕೋಶಾಧಿಕಾರಿ ಆಸ್ಕರ್ ಆನಂದ್, ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಪ್ರೀತ್ ಕೆ.ಸಿರವರು ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Posted by Vidyamaana on 2023-11-11 19:55:28 |
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಸಂಸ್ಥಾಪಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರವು ನ.10ರಂದು ನೆರವೇರಿತು.
ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಮಾತನಾಡಿ, ನನ್ನ ವಿದ್ಯಾರ್ಥಿ ಜೀವನದಲ್ಲಿಯೇ ಜಿ.ಎಲ್ ಆಚಾರ್ಯ ಜ್ಯವೆಲ್ಲರ್ಸ್ ಪುತ್ತೂರಿನ ಪ್ರತಿಷ್ಠಿತ ಜ್ಯುವೆಲ್ಸರ್ಸ್ ಎಂಬ ಖ್ಯಾತಿ ಪಡೆದಿತ್ತು. ಅಂದಿನಿಂದ ಇಂದಿನ ತನಕ ವ್ಯವಹಾರದಲ್ಲಿ ನೈತಿಕಯನ್ನು ಇಂದಿಗೂ ಬೆಳೆಸಿಕೊಂಡು ಬಂದಿದ್ದಾರೆ. ಜಿ.ಎಲ್ ಆಚಾರ್ಯ ಕುಟುಂಬದವರು ರೋಟರಿ ಸಂಸ್ಥೆಯ ಅಸ್ಥಿತ್ವಕ್ಕೂ ಬಹಳಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಸಂಸ್ಥಾಪಕರ ದಿನಾಚರಣೆಯು ಅರ್ಥಪೂರ್ಣವಾದ ದಿನವಾಗಿ ಆಚರಿಸಲಾಗುತ್ತಿದೆ. ಅವರ ಕುಟುಂಬವು ಸಮಾಜ ಸೇವೆಗೆ ತ್ಯಾಗ ಮಾಡುವ ಉದ್ದೇಶದಲ್ಲಿದ್ದು ರಕ್ತದಾನ ಶಿಬಿರವು ಸದುದ್ದೇಶದಿಂದ ಆಯೋಜಿಸಿಕೊಳ್ಳಲಾಗಿದೆ ಎಂದರು.
ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಮಾತನಾಡಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ ಜಿ.ಎಲ್ ಆಚಾರ್ಯ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಬ್ಲಡ್ ಬ್ಯಾಂಕ್ನ ಬೆಳ್ಳಿ ಹಬ್ಬ ಸಂಭ್ರಮವನ್ನು ಬಂಗಾರದ ಅಂಗಡಿಯಲ್ಲಿ ಆಚರಿಸಲಾಗುತ್ತಿದೆ. ವರ್ಷದ 365 ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಬ್ಲಡ್ ಬ್ಯಾಂಕ್ ಐದು ತಾಲೂಕಿಗೆ ರಕ್ತ ಸರಬರಾಜ ಮಾಡಲಾಗುತ್ತದೆ ಎಂದರು.
ಸಂಸ್ಥೆಯ ಮ್ಹಾಲಕ ಬಲರಾಮ ಆಚಾರ್ಯ ಮಾತನಾಡಿ, ಸಂಸ್ಥೆಯ ಸಂಸ್ಥಾಪಕರ ದಿನದ ಅಂಗವಾಗಿ ನಮ್ಮ ಸಿಬ್ಬಂದಿ ವರ್ಗದವರೇ ಆಸಕ್ತಿಯಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದಾರೆ. ಮಳಿಗೆ ಎಲ್ಲಾ ಸಿಬ್ಬಂದಿಗಳು ಹಾಗೂ ನಮ್ಮ ಮಕ್ಕಳು ರಕ್ತದಾನ ಮಾಡಲಿದ್ದಾರೆ. ಅಲ್ಲದೆ ಸಂಸ್ಥಾಪಕರ ದಿನದ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಕರಗಳ ಖರೀದಿಗೆ ದೇಣಿಗೆ ನೀಡಲಾಗುವುದು ಎಂದರು.
ರೋಟರಿ ಕ್ಲಬ್ ಕಾರ್ಯದರ್ಶಿ ಸುಜಿತ್ ರೈ, ಜಿ.ಎಲ್ ಆಚಾರ್ಯ ಮಳಿಗೆಯ ಸುದನ್ವ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಟ್ಟೆ ಶಾಲೆಗೆ ದೇಣಿಗೆ:
ಮಳಿಗೆಯ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ದೇಣಿಗೆ ನೀಡಲಾಗಿದ್ದು ಶಿಕ್ಷಕ ವಿಶ್ವನಾಥರವರು ಚೆಕ್ ಸ್ವೀಕರಿಸಿದರು. ಬಲರಾಮ ಆಚಾರ್ಯ ಸ್ವಾಗತಿಸಿದರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀಕಾಂತ ಆಚಾರ್ಯ ವಂದಿಸಿದರು.
Posted by Vidyamaana on 2024-08-05 22:01:09 |
ಮುಂಬೈ :ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ನಡೆಯಲು ಆಗದಷ್ಟು ಫುಲ್ ಟೈಟಾಗಿ ತೂರಾಡಿದ್ದಾರೆ.ಅವರು ನಡೆಯಲು ಕಷ್ಟಪಡುತ್ತಿರುವ ಮತ್ತು ಸರಿಯಾಗಿ ನಿಲ್ಲಲು ಸಾಧ್ಯವಾಗದೇ ಬೈಕ್ ಹಿಡಿದುಕೊಂಡು ನಿಲ್ಲಲು ಪ್ರಯತ್ನಿಸಿದ ವಿಡಿಯೋ ವೈರಲ್ ಆಗಿದೆ.
ಕಾಂಬ್ಳಿ ಅವರು ನಡೆಯಲು ಕಷ್ಟಪಡುವುದನ್ನು ನೋಡಲಾಗದ ಕೆಲವರು ಅವರಿಗೆ ಸಹಾಯ ಮಾಡಿದ್ದಾರೆ. ಘಟನೆಯ ವೀಡಿಯೊವನ್ನು ಹಲವಾರು ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
2013ರಲ್ಲಿ ಚೆಂಬೂರಿನಿಂದ ವಾಹನ ಚಲಾಯಿಸಿಕೊಂಡು ಬರುತ್ತಿದ್ದಾಗ ಕಾಂಬ್ಳಿ ಅವರಿಗೆ ಹೃದಯಾಘಾತವಾಗಿತ್ತು. ಪೊಲೀಸ್ ಅಧಿಕಾರಿಯೊಬ್ಬರು ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು ಪ್ರಾಣ ಉಳಿಸಿದ್ದರು. 52 ವರ್ಷ ವಯಸ್ಸಿನ ಅವರು ತಮ್ಮ ಎರಡು ಬ್ಲಾಕ್ ಅಪಧಮನಿಗಳಲ್ಲಿ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.
ಕಾಂಬ್ಳಿ ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ದೇಶೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಸಮೃದ್ಧ ರನ್ ಗಳಿಸುತ್ತಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಎಡಗೈ ಆಟಗಾರ ಕಾಂಬ್ಳಿ 129 ಪಂದ್ಯಗಳಲ್ಲಿ 9965 ರನ್ಗಳಿಗೆ 59.67 ಸರಾಸರಿ ಹೊಂದಿದ್ದರು.
Posted by Vidyamaana on 2023-11-10 14:47:29 |
ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ತಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಕೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಟ್ಸಾಪ್ ಗ್ರೂಪ್ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ
Posted by Vidyamaana on 2024-06-04 21:58:36 |
ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ.
ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.
Posted by Vidyamaana on 2024-04-10 21:46:08 |
ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು,. ಈ ಬಾರಿ 84.87% ಬಾಲಕಿಯರು ಉತ್ತೀರ್ಣರಾಗಿದ್ದು, 76.98% ಬಾಲಕರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದ ಟಾಪರ್ ಆದ ವಿಜಯಪುರದ ವೇದಾಂತ್ ಜ್ಞಾನುಭನವಿ, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂದು ಹೇಳಿದ್ದಾರೆ.
ವಿಜಯಪುರದ ವೇದಾಂತ್ ಜ್ಞಾನುಭನವಿ ಮತ್ತು ಕವಿತಾ ಬಿ.ವಿ. 600ಕ್ಕೆ 596 ಅಂಕ ಪಡೆದಿದ್ದಾರೆ