Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-05-03 07:04:05 |
ಪುತ್ತೂರು ಮೂಲದ ಯುವತಿಯೋರ್ವರು ಬೆಂಗಳೂರಿನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಸೋಮಾವತಿ ರೈ ದಂಪತಿಯ ಪುತ್ರಿ ಶ್ರುತಿ ಸಿ.ರೈ (22) ಮೃತ ಯುವತಿ.ಶ್ರುತಿ ಕಳೆದೆರಡು ವರುಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಅಲ್ಲಿಯೇ ವಾಸ್ತವ್ಯ ಹೊಂದಿದ್ದರು. ಕೋರ್ಸ್ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು.
ಬಾಡಿಗೆ ರೂಂ ನಲ್ಲಿ ಕೆಲ ದಿನಗಳ ಹಿಂದೆ ಅವರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಎ.30 ರಂದು ಮೃತಪಟ್ಟಿದ್ದು, ಮೇ.1 ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಿರುವುದಾಗಿ ತಿಳಿದು ಬಂದಿದೆ..
Posted by Vidyamaana on 2024-06-26 10:30:16 |
ಉಳ್ಳಾಲ : ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು.
Posted by Vidyamaana on 2023-04-23 14:00:36 |
ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ. ನೇತ್ರಾವತಿ ವಲಯ, ಪುತ್ತೂರು, ದ.ಕ.ಜಿಲ್ಲೆ. ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಪೌಂಡೇಶನ್ ಆಶ್ರಯದಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುರುವಾರ ಮೂರು ವಿಭಾಗಗಳಲ್ಲಿ ಉದ್ಘಾಟನೆಗೊಂಡಿದ್ದ ಯೋಗ-ಜೀವನ-ದರ್ಶನ-2023 ಯೋಗ ಪ್ರಶಿಕ್ಷಣ ಶಿಬಿರವು ಭಾನುವಾರ ಸಮಾರೋಪಗೊಂಡಿತು.
Posted by Vidyamaana on 2023-09-01 01:56:48 |
ಹೊಸದಿಲ್ಲಿ: ಭಾರತೀಯ ರೈಲ್ವೇ ಮಂಡಳಿಯ ನೂತನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಜಯ ವರ್ಮಾ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. ಆಗಸ್ಟ್ 31 ರ ದಿನಾಂಕದ ಆದೇಶದಲ್ಲಿ, ಜಯ ಸಿನ್ಹಾ ಅವರು ಸೆಪ್ಟೆಂಬರ್ 1ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ. ಅವರ ಅಧಿಕಾರಾವಧಿಯು ಆಗಸ್ಟ್ 31, 2024 ರಂದು ಕೊನೆಗೊಳ್ಳಲಿದೆ. ಈ ಹಿಂದೆ ಅಧ್ಯಕ್ಷರು ಮತ್ತು ಸಿಇಒ ಆಗಿದ್ದ ಅನಿಲ್ ಕುಮಾರ್ ಲಹೋಟಿ ಅಧಿಕಾರವಧಿಯ ನಂತರ ಸಿನ್ಹಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಸಿನ್ಹಾ 35 ವರ್ಷಗಳಿಂದ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ವಿಜಿಲೆನ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ಅಂಶಗಳನ್ನು ಒಳಗೊಂಡಂತೆ ರೈಲ್ವೆಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಬಾಲಸೋರ್ ರೈಲು ಅಪಘಾತದ ನಂತರ ಜಯಾ ಅವರು ಸದಸ್ಯರಾಗಿ (ಕಾರ್ಯಾಚರಣೆಗಳು ಮತ್ತು ವ್ಯವಹಾರ ಅಭಿವೃದ್ಧಿ) ರೈಲ್ವೆಯ ಮಾಧ್ಯಮ ತೊಡಗಿಸಿಕೊಳ್ಳುವಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಸುಮಾರು 300 ಜನರ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರದ ಸಂಕೀರ್ಣ ಸಿಗ್ನಲಿಂಗ್ ವ್ಯವಸ್ಥೆಯನ್ನು ಅವರು ವಿವರಿಸಿದ್ದರು.
ಸಿನ್ಹಾ ಅವರು ಬಾಂಗ್ಲಾದೇಶದ ಢಾಕಾದಲ್ಲಿರುವ ಭಾರತದ ಹೈ ಕಮಿಷನ್ನಲ್ಲಿ ರೈಲ್ವೇ ಸಲಹೆಗಾರರ ಪಾತ್ರವನ್ನು ವಹಿಸಿಕೊಂಡು ಅಲ್ಲಿ ಅವರು ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದರು. ಕೋಲ್ಕತ್ತಾ ಮತ್ತು ಢಾಕಾ ನಡುವೆ ಕಾರ್ಯನಿರ್ವಹಿಸುವ ಮೈತ್ರೀ ಎಕ್ಸ್ಪ್ರೆಸ್ನ ಉದ್ಘಾಟನೆಯು ಬಾಂಗ್ಲಾದೇಶದಲ್ಲಿ ಅವರ ಅಧಿಕಾರಾವಧಿಯಲ್ಲಿ ನಡೆಯಿತು. ಹೆಚ್ಚುವರಿಯಾಗಿ, ಅವರು ಪೂರ್ವ ರೈಲ್ವೆಯೊಳಗಿನ ಸೀಲ್ದಾ ವಿಭಾಗಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸ್ಥಾನವನ್ನು ಹೊಂದಿದ್ದರು.
2017 ರಲ್ಲಿ, ಜಯ ವರ್ಮ ಸಿನ್ಹಾ ಅವರು ಆಗ್ನೇಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು, ಅವರು ಆಗ್ನೇಯ ರೈಲ್ವೆಯ ಹಿರಿಯ ಉಪ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ವಿಜಿಲೆನ್ಸ್ ಅಧಿಕಾರಿಯಾಗಿದ್ದರು.
Posted by Vidyamaana on 2024-06-27 12:46:15 |
ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನರ್ ಕಾರು ನಜ್ಜುಗುಜ್ಜಾಗಿದೆ.
Posted by Vidyamaana on 2024-04-21 12:56:21 |
ಆತ್ಮೀಯ ಸಮಾಜ ಭಾಂಧವರೇ....
ನಿನ್ನೆ ದಿನಾಂಕ 17/ 4/2024 ರಂದು ರಾತ್ರಿ ನರಿಮೊಗರಿನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಭಕ್ತಕೋಡಿಯ ಕಡ್ಯ ನಿವಾಸಿ ಲೋಕೇಶ್ ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದು ಅವರ ಜೊತೆಯಲ್ಲಿದ್ದ ಮಕ್ಕಳಾದ ದೀಪ್ತಿ (8 ವ), ಗಗನ್ (6ವ) ಜೀವನ್ಮರಣ ಹೋರಾಟದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರಾದ ಲೋಕೇಶ್ ರು ತನ್ನ ವೃದ್ಧ ತಾಯಿಗೆ ಔಷಧಿ ತೆಗೆದುಕೊಳ್ಳಲು ಹೊರಟಾಗ ನಮ್ಮನ್ನು ಜಾತ್ರೆಗೆ ಕರೆದುಕೊಂಡು ಹೋಗಿ ಅಪ್ಪ ... ಎಂದು ಮಕ್ಕಳಿಬ್ಬರೂ ಹಠ ಮಾಡಿದ್ದಕ್ಕೆ ಜೊತೆಯಲ್ಲಿ ಕರೆದುಕೊಂಡು ಜಾತ್ರೆಯಲ್ಲಿ ಸುತ್ತಾಡಿಸಿ ಮನೆಗೆ