ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಸುಳ್ಯ : ವಿದ್ಯುತ್​ ಶಾಕ್​ ತಗುಲಿ ಲೈನ್ ಮ್ಯಾನ್​ ಹಾಸನ ಮೂಲದ ರಘು ಮೃತ್ಯು

Posted by Vidyamaana on 2024-01-05 18:49:42 |

Share: | | | | |


ಸುಳ್ಯ : ವಿದ್ಯುತ್​ ಶಾಕ್​ ತಗುಲಿ ಲೈನ್ ಮ್ಯಾನ್​ ಹಾಸನ ಮೂಲದ ರಘು ಮೃತ್ಯು

ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತರು ಎಂದು ಗುರುತಿಸಲಾಗಿದೆ.ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

Posted by Vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

Posted by Vidyamaana on 2024-02-28 04:26:48 |

Share: | | | | |


ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್‌. ನಗರ ನಿವಾಸಿ ಶೈನಾಜ್‌ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ.ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಶೈನಾಜ್‌ ಫೆ.25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.

ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್‌ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್‌ ಜಹಾನ್‌ ಕಾಪು ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಶೈನಾಜ್‌ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್‌ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

Posted by Vidyamaana on 2024-03-24 21:28:06 |

Share: | | | | |


BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅನಂತ್ ಕುಮಾರ್ ಹೆಗಡೆ ಬದಲು ಇದೀಗ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಿದೆ.ಅಲ್ಲದೆ ಇದೇ ವೇಳೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಜಗದೀಶ್ ಶೆಟ್ಟರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬದಲು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಹೈಕಮಾಂಡ್ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಮಾಜಿ ಸಚಿವ ಸುಧಾಕರ್ ಅವರಿಗೆ ಕೂಡ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ.ಬಿಜೆಪಿ 5ನೇ ಪಟ್ಟೆ ಬಿಡುಗಡೆಯಾಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ


1)ಉತ್ತರ ಕನ್ನಡ ಲೋಕಸಭಾ ಕ್ಷೇತ್ರ - ವಿಶ್ವೇಶ್ವರ ಹೆಗಡೆ ಕಾಗೇರಿ

2)ಚಿಕ್ಕಬಳ್ಳಾಪುರ ಕ್ಷೇತ್ರ -ಡಾ. ಕೆ ಸುಧಾಕರ್

3) ಬೆಳಗಾವಿ ಲೋಕಸಭಾ ಕ್ಷೇತ್ರ- ಜಗದೀಶ್ ಶೆಟ್ಟರ್

4). ರಾಯಚೂರು ಲೋಕಸಭಾ ಕ್ಷೇತ್ರ-ರಾಜಾಅಮರೇಶ್ವರ ನಾಯಕಗೆ ಬಿಜೆಪಿ ಟಿಕೇಟ್ ನೀಡಿದೆ.

ಅತಿಯಾಗಿ ಸೆಕ್ಸ್​​ಗೆ ಒತ್ತಾಯಿಸಿದಕ್ಕೆ ಇನ್​​ಸ್ಟಾ ಗೆಳತಿ ಕಥೆಯನ್ನೇ ಮುಗಿಸಿದ್ದ ಆರೋಪಿ ನವೀನ್ ಅರೆಸ್ಟ್

Posted by Vidyamaana on 2024-04-23 15:24:20 |

Share: | | | | |


ಅತಿಯಾಗಿ ಸೆಕ್ಸ್​​ಗೆ ಒತ್ತಾಯಿಸಿದಕ್ಕೆ ಇನ್​​ಸ್ಟಾ ಗೆಳತಿ ಕಥೆಯನ್ನೇ ಮುಗಿಸಿದ್ದ ಆರೋಪಿ ನವೀನ್ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನ (Bengaluru) ಕೊಡಿಗೇಹಳ್ಳಿ ಒಂಟಿ ಮಹಿಳೆ (Single Women) ಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ಮನೆಯಲ್ಲೇ ಮಹಿಳೆಯನ್ನು ಕೊಲೆ ಮಾಡಿ (Murder Case) ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು (Kodigenahalli Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದು, ಏಪ್ರಿಲ್ 19ನೇ ತಾರೀಖು 48 ವರ್ಷದ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನಸ್ಥಿತಿಯಲ್ಲಿ ಪತ್ತೆಯಾಗಿತ್ತು.


ಆರೋಪಿ ನವೀನ್​​ ಸಾಮಾಜಿಕ ಜಾಲತಾಣ ಇನ್​​ಸ್ಟಾದಲ್ಲಿ ಮೃತ ಮಹಿಳೆ ಶೋಭಾರನ್ನು ಪರಿಚಯ ಮಾಡಿಕೊಂಡಿದ್ದನಂತೆ. ಇಬ್ಬರ ನಡುವಿನ ಸ್ನೇಹ ಕೆಲ ದಿನಗಳ ಬಳಿಕ ಅನೈತಿಕ ಸಂಬಂಧಕ್ಕೆ ತಿರುಗಿತ್ತು ಎನ್ನಲಾಗಿದೆ. ಕೊಲೆ ನಡೆದ ದಿನವೂ ಮಹಿಳೆ ಮನೆಗೆ ನವೀನ್​ ಬಂದಿದ್ದನಂತೆ. ಈ ವೇಳೆ ಅತಿಯಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದರಿಂದ ಬೇಸರಗೊಂಡು ಮಹಿಳೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನ ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ನಿಮಗೊಂದು ಸೆಲ್ಯೂಟ್! - ನೀರಿನ ಸಂಪಿಗೆ ಬಿದ್ದಿದ್ದ ಮಗುವನ್ನು ರಕ್ಷಿಸಿದ ಸೂಪರ್ ಕಾಪ್

Posted by Vidyamaana on 2024-03-07 12:55:36 |

Share: | | | | |


ನಿಮಗೊಂದು ಸೆಲ್ಯೂಟ್! - ನೀರಿನ ಸಂಪಿಗೆ ಬಿದ್ದಿದ್ದ ಮಗುವನ್ನು ರಕ್ಷಿಸಿದ ಸೂಪರ್ ಕಾಪ್

ಬೆಂಗಳೂರು: ಪೊಲೀಸರೆಂದರೆ ಸಾಮಾನ್ಯವಾಗಿ ಮೂಗು ಮುರಿಯುವವರೇ ಹೆಚ್ಚು. ಏಕೆಂದರೆ, ಕೆಲ ಪೊಲೀಸರು ಎಸಗುವ ದೌರ್ಜನ್ಯ, ಲಂಚಗುಳಿತನ ಹಾಗೂ ಏರು ಧ್ವನಿಯಲ್ಲೇ ಮಾತನಾಡಿಸುವ ಮೂಲಕ ಜನರಲ್ಲಿ ಭಯ ಹುಟ್ಟಿಸುವುದು ಮತ್ತು ದುಡ್ಡು ಇರುವವರ ಪರ ಕೆಲಸ ಮಾಡುತ್ತಾರೆ ಎಂಬ ಆರೋಪ ಪೊಲೀಸರ ಮೇಲೆ ನಕಾರಾತ್ಮಕ ಭಾವನೆ ಉಂಟು ಮಾಡಿದೆ.

ಆದರೆ, ಎಲ್ಲ ಪೊಲೀಸರು ಆ ರೀತಿ ಇರುವುದಿಲ್ಲ, ಜನಸ್ನೇಹಿಗಳಾಗಿರುತ್ತಾರೆ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಘಟನೆ ಒಂದು ಉತ್ತಮ ಉದಾಹರಣೆಯಾಗಿದೆ.

ಅನೇಕ ಪೊಲೀಸರು ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಜನರ ಸೇವೆ ಮಾಡುತ್ತಿದ್ದು ಉತ್ತಮ ಮನ್ನಣೆ ಪಡೆಯುತ್ತಿದ್ದಾರೆ. ಅಲ್ಲದೆ, ಕೆಲ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಅಪಾಯದಲ್ಲಿರುವ ಎಷ್ಟೋ ಜನ ಸಾಮಾನ್ಯರನ್ನು ರಕ್ಷಿಸಿ ಪ್ರಾಣ ಉಳಿಸುತ್ತಿದ್ದಾರೆ. ಈ ಹಿಂದೆ ಹೃದಯಾಘಾತಕ್ಕೆ ಒಳಗಾದವರನ್ನು ಸಿಪಿಆರ್ ಮಾಡಿ ರಕ್ಷಿಸಿದ ಘಟನೆಗಳು ಸಾಕಷ್ಟಿವೆ. ನಿನ್ನೆ (ಮಾರ್ಚ್​ 07) 10 ಅಡಿ ಆಳದ ನೀರಿನ ಸಂಪಿನಲ್ಲಿ ಬಿದ್ದಿದ್ದ 2 ವರ್ಷ 6 ತಿಂಗಳ ಮಗುವನ್ನು ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ರಕ್ಷಣೆ ಮಾಡಿರುವ ಘಟನೆ ಬ್ಯಾಟರಾಯನಪುರ ಪುರದಲ್ಲಿ ನಡೆದಿದೆ.

ಬ್ಯಾಟರಾಯನಪುರ ಸಂಚಾರಿ ಪೊಲೀಸ್​ ಠಾಣೆಯ ಸಬ್ ಇನ್ಸ್​ಪೆಕ್ಟರ್ ನಾಗರಾಜ್ ಅವರೇ ಮಗುವನ್ನು ರಕ್ಷಣೆ ಮಾಡಿದವರು. ಬ್ಯಾಡರಹಳ್ಳಿಯ ಬಿ.ಇ.ಎಲ್​. ಬಡಾವಣೆಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಕಾಲು ಜಾರಿ ಸಂಪಿನೊಳಗೆ ಬಿದ್ದು, ಪ್ರಜ್ಞೆ ತಪ್ಪಿತ್ತು. ಇದನ್ನು ನೋಡಿದ ಮನೆಯವರು ಆಘಾತಗೊಂಡು, ತಕ್ಷಣಕ್ಕೆ ಏನು ಮಾಡುವುದು ಎಂದು ತೋಚದೆ ಸಹಾಯಕ್ಕಾಗಿ ಕೂಗಿಕೊಳ್ಳುತ್ತಿದ್ದರು. ಈ ವೇಳೆ ಕರ್ತವ್ಯ ಮುಗಿಸಿ ಅದೇ ದಾರಿಯಲ್ಲಿ ಮನೆಗೆ ತೆರಳುತ್ತಿದ್ದ ಎಸ್​ಐ ನಾಗರಾಜು, ಮನೆಯವರು ಕೂಗಾಡುವುದನ್ನು ಕೇಳಿ, ತಕ್ಷಣ ಸ್ಥಳಕ್ಕೆ ಧಾವಿಸಿ, ಮನೆಯವರಿಗೆ ಧೈರ್ಯ ತುಂಬಿ, ಟ್ರಾಫಿಕ್​ ಸಮವಸ್ತ್ರದಲ್ಲೇ ಸಂಪಿನ ಒಳಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ಹೊರಗೆ ತಂದರು.


ಹೊರತಂದ ಸಮಯದಲ್ಲಿ ಮಗು ಪ್ರಜ್ಞೆ ತಪ್ಪಿತ್ತು. ದೇಹದ ಒಳಗೆ ನೀರು ಹೋಗಿರಬಹುದೆಂದು ತಿಳಿದು, ತಕ್ಷಣ ಮಗುವಿಗೆ ಶ್ವಾಸಕೋಶ ಪ್ರಚೋದಕ ಸಿಪಿಆರ್​ ಮಾಡಿ, ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಸೂಕ್ತ ಸಮಯದಲ್ಲಿ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ ಸರಿಯಾದ ಚಿಕಿತ್ಸೆ ದೊರಕಿ, ಸಾವಿನ ದವಡೆಯಲ್ಲಿ ಸಿಲುಕಿದ್ದ ಮಗು ಮರುಜನ್ಮ ಪಡೆದಿದೆ. ಸಕಾಲಕ್ಕೆ ಸ್ಪಂದಿಸಿ ಮಗುವಿನ ಜೀವ ಉಳಿದ ಶ್ರೇಯಸ್ಸು ನಾಗರಾಜು ಅವರಿಗೆ ಸಲ್ಲುತ್ತದೆ.


ಈ ಘಟನೆ ಬಳಿಕ ಎಸ್​ಐ ನಾಗರಾಜು ಅವರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ತಮ್ಮ ಮಗುವಿನ ಪ್ರಾಣ ಉಳಿಸಿದ್ದಕ್ಕೆ ಕುಟುಂಬಸ್ಥರು ಅವರಿಗೆ ತುಂಬು ಹೃದಯದಿಂದ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇಷ್ಟೇ ಅಲ್ಲದೆ, ವಿಜಯನಗರ ಕಾಂಗ್ರೆಸ್​ ಶಾಸಕ ಎಂ.ಕೃಷ್ಣಪ್ಪ, ಪೊಲೀಸ್​ ಆಯುಕ್ತ ದಯಾನಂದ್​ ಸೇರಿದಂತೆ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



Leave a Comment: