Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2023-08-03 08:24:27 |
ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು.
ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.
Posted by Vidyamaana on 2024-03-27 12:26:28 |
ಬೆಳ್ತಂಗಡಿ: ಕಾಂಗ್ರೆಸ್ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
Posted by Vidyamaana on 2023-10-28 08:00:00 |
ನವದೆಹಲಿ : ಪ್ರೀತಿ ಅನ್ನೋದು ಜಗತ್ತಿನ ಬ್ಯೂಟಿಫುಲ್ ಫೀಲಿಂಗ್. ಯಾರಿಗೆ ಬೇಕಾದ್ರೂ ಯಾವಾಗ ಬೇಕಾದರೂ ಆಗಬಹುದು. ಆದರೆ, ರಷ್ಯಾದಲ್ಲಿ ತಾಯಿಯೊಬ್ಬಳು ತನ್ನ ಮಗನಿಂದಲೇ ಇಂಥ ಪ್ರೀತಿಯನ್ನು ಪಡೆದುಕೊಂಡಿದ್ದಾಳೆ. ತಾಯಿ-ಮಗನ ಸಂಬಂಧಕ್ಕೆ ಭಾರತದಲ್ಲಿ ಎಷ್ಟು ಪೂಜ್ಯ ಸ್ಥಾನವಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ.ಆದರೆ, ದೂರದ ರಷ್ಯಾದಲ್ಲಿ ತಾಯಿಯೊಬ್ಬಳು ತಾನು ಬೆಳೆಸಿದ ಮಗನನ್ನೇ ವಿವಾಹವಾಗಿದ್ದಾಳೆ. ಈ ಮದುವೆ ಈಗ ರಷ್ಯಾದಲ್ಲಿ ಸಾಕಷ್ಟು ಸುದ್ದಿಯಾಗಿದೆ. ತನಗಿಂತ 31 ವರ್ಷ ಕಿರಿಯವನಾದ ಮಲ ಮಗನನ್ನು ಮದುವೆಯಾಗಿದ್ದಾಳೆ. 53 ವರ್ಷದ ಸಂಗೀತಗಾರ್ತಿಯಾಗಿರುವವ ಅಸಿಲು ಚಿಜೆವ್ಸ್ಕಯಾ ಮಿಂಗಾಲಿಮ್ ತನ್ನ 22 ವರ್ಷದ ಮಲಮಗ ಡೇನಿಯಲ್ ಚಿಜೆವ್ಸ್ಕಿಯನ್ನು ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ರಷ್ಯಾದ ಮಕ್ಕಳ ಕಲ್ಯಾಣ ಇಲಾಖೆ ಕೂಡ ಈ ಮದುವೆಗೆ ಅಚ್ಚರಿ ವ್ಯಕ್ತಪಡಿಸಿದೆ. ರಷ್ಯಾದ ರಿಪಬ್ಲಿಕ್ ಆಫ್ ಟಾಟರ್ಸ್ತಾನ್ನ ಕಜಾನ್ನಲ್ಲಿರುವ ರೆಸ್ಟೋರೆಂಟ್ನಲ್ಲಿ ದಂಪತಿಗಳು ಪರಸ್ಪರ ಒಟ್ಟಾಗಿ ಬಾಳುವುದಾಗಿ ಹಾಗೂ ಸಾಯುವವರೆಗೂ ಜೊತೆಯಾಗಿಯೇ ಇರುವುದಾಗಿ ಪ್ರಮಾಣ ಮಾಡಿ ಮದುವೆಯಾಗಿದ್ದಾರೆ.ಸ್ಥಳೀಯ ಮಾಧ್ಯಮಗಳಿಂದ ಪಡೆದ ಮಾಹಿತಿಯನ್ನು ನಂಬುವುದಾದರೆ, ಮಿಂಗಲಿಮ್ ಅವರು ಡೇನಿಯಲ್ಗೆ 13 ವರ್ಷವಾಗಿದ್ದಾಗಿನಿಂದಲೂ ಆತನನ್ನು ಸಾಕಿ ಬೆಳೆಸಿದ್ದಾಳೆ. ಅನಾಥಾಶ್ರಮದಲ್ಲಿ ಸಿಕ್ಕಿದ್ದ ಡೇನಿಯಲ್ನನ್ನು ಮಗನ ರೀತಿಯಲ್ಲಿ ದತ್ತು ಪಡೆದು ಸಾಕಿದ್ದಳು. ತನ್ನ ಮನೆಯಲ್ಲಿಯೇ ಮಿಂಗಲಿಮ್ ಡೇನಿಯಲ್ಗೆ ಸಂಗೀತ ಕಲಿಸುತ್ತಿದ್ದರು ಮತ್ತು ಆ ಸಮಯದಲ್ಲಿ ಅವರು ಕೇವಲ 13 ವರ್ಷ ವಯಸ್ಸಿನವರಾಗಿದ್ದರು ಎಂದು ಹೇಳಲಾಗಿದೆ.
ಆದರೆ, ಮಗನನ್ನೇ ಮದುವೆಯಾದ ಬಳಿಕ ಮಿಂಗಲಿಮ್ಗೆ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ರಷ್ಯಾದ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಿಂಗಲಿಮ್ ಇದ್ದ ಮನೆಯನ್ನು ಸೀಜ್ ಮಾಡಿದ್ದು, ಮಿಂಗಲಿಮ್ ಈಗಾಗಲೇ ದತ್ತು ಪಡೆದಿದ್ದ ಐದಕ್ಕೂ ಅಧಿಕ ಮಕ್ಕಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ನಾಲ್ವರು ಹೆಣ್ಣು ಮಕ್ಕಳಾಗಿದ್ದರೆ, ಇನ್ನೊಂದು ಗಂಡು ಮಗುವಾಗಿದೆ.ಮಿಂಗಲಿಮ್ ತಾನು ಬೆಳೆಸಿದ್ದ ಮಗನನ್ನೇ ಮದುವೆಯಾಗಿರುವ ಕಾರಣ ಅವರ ಉದ್ದೇಶ ಇಲ್ಲಿ ಅರ್ಥವಾಗಿದೆ. ಹಾಗಾಗಿ ಈ ಮಕ್ಕಳನ್ನು ಅವರು ಸರಿಯಾದ ರೀತಿಯಲ್ಲಿ ಬೆಳೆಸುವ ಸಾಧ್ಯತೆ ಕಡಿಮೆ ಎನ್ನುವ ಸಂಶಯ ನಮಗೆ ಬಂದಿದೆ ಎಂದು ತಿಳಿಸಿದ್ದಾರೆ.
ಡೇನಿಯಲ್ನನ್ನು ಮನೆಗೆ ನಾನು ಕರೆತಂದಾಗಲೇ ಆತನೊಂದಿಗೆ ರೊಮಾಂಟಿಕ್ ಸಂಬಂಧ ಬೆಳೆದಿತ್ತು ಎಂದು ಮಿಂಗಲಿಮ್ ಹೇಳಿದ್ದಾರೆ. ನಮ್ಮ ರಿಲೇಷನ್ಷಿಪ್ ಅತ್ಯಂತ ಪರ್ಫೆಕ್ಟ್. ನಾವಿಬ್ಬರೂ ಬೇರೆ ಬೇರೆಯಾಗಿ ಬದುಕೋದಕ್ಕೆ ಸಾಧ್ಯವೇ ಇಲ್ಲ. ಇನ್ನು ನಮ್ಮಿಬ್ಬರ ಯೋಚನೆಗಳು ಕೂಡ ಉತ್ತಮವಾಗಿ ಹೊಂದಿಕೆ ಆಗುತ್ತದೆ ಎಂದಿದ್ದಾರೆ.ಟಾಟರ್ಸ್ತಾನ್ ಟಿವಿ ಸ್ಟೇಷನ್ಗಾಗಿ ಚಲನಚಿತ್ರ ಯೋಜನೆಯ ಸಮಯದಲ್ಲಿ ಅನಾಥಾಶ್ರದಲ್ಲಿ ಡೇನಿಯಲ್ನನ್ನು ಭೇಟಿಯಾದ ನಂತರ ಮಿಂಗಾಲಿಮ್ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಪ್ರಾರಂಭಿಸಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ, ಮಿಂಗಾಲಿಮ್ ಟಾಟರ್ಸ್ತಾನ್ನಿಂದ ಹೊರಡಲು ತೀರ್ಮಾನ ಮಾಡಿದ್ದಾರೆ. ತನ್ನ ಹೊಸ ಪತಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಲು ಬಯಸಿರುವ ಮಿಂಗಲಿಮ್, ಮಾಸ್ಕೋಗೆ ತೆರಳಿ ತನ್ನ ಐವರು ಇತರ ಮಕ್ಕಳೊಂದಿಗೆ ವಾಸ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ
Posted by Vidyamaana on 2023-08-03 03:50:29 |
ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ ಮಾಡುತ್ತೀರಿ ಎಂದು ಯಾರೋ ನನ್ನನ್ನು ಇಲ್ಲಿಗೆ ತಂದು ಬಿಟ್ಟಿದ್ದಾರೆ. ದಯವಿಟ್ಟು ನನಗೆ ನೆರವು ನೀಡಿ ಎಂದು ಅಂಧ ಯುವಕ ಪುತ್ತೂರು ಶಾಸಕರ ಕಚೇರಿಯಲ್ಲಿ ಬಂದು ಕೇಳಿಕೊಂಡಿದ್ದಾನೆ.
ಯುವಕನ ನೋವನ್ನು ಆಲಿಸಿದ ಶಾಸಕರು ನಿನಗೆ ಎಷ್ಟು ಹಣ ಬೇಕು ನಾನು ಕೊಡುತ್ತೇನೆ, ಸುರಕ್ಷಿತವಾಗಿ ಊರಿಗೆ ಹೋಗಿ ಎಂದು ಅಂಧ ಯುವಕ ಊರಿಗೆ ಹೋಗಲು ಅವನು ಕೇಳಿದಷ್ಟು ಹಣ ನೀಡುವ ಮೂಲಕ ಮಾನವೀಯತೆ ಮೆರೆದರು. ಎಲ್ಲಿಂದಲೋ ಬಂದ ಯುವಕ ಶಾಸಕರ ಬಳಿ ಹಣ ಕೇಳಿದಾಗ ಆತನ ಪೂರ್ವಾ ಪರ ವಿಚಾರಿಸದೆ ಆತ ಬಡವನಾದ ಕಾರಣ ನನ್ನ ಬಳಿ ಬಂದಿದ್ದಲ್ವ ಆತನಿಗೆ ಸಹಾಯ ಮಾಡುವುದು ನನ್ನ ಧರ್ಮ ಎಂದು ಶಾಸಕರು ಈ ವೇಳೆ ಹೇಳಿದರು. ಕಚೇರಿಯಲ್ಲಿ ಸೇರಿದ್ದ ಸಾರ್ವಜನಿಕರು ಶಾಸಕರ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Posted by Vidyamaana on 2023-07-01 16:00:10 |
ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.
ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.
Posted by Vidyamaana on 2024-06-23 08:20:55 |
ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೂರಜ್ ರೇವಣ್ಣರನ್ನು ಬಂಧಿಸಲಾಗಿದೆ.
ನಿನ್ನೆ ಹಾಸನದ ಸೆನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.