ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಪುತ್ತೂರು : ಬೈಕ್-ಸ್ಕೂಟರ್ ನಡುವೆ ಡಿಕ್ಕಿ : ಸವಾರರಿಗೆ ಗಾಯ ; ಮಂಗಳೂರು ಆಸ್ಪತ್ರೆಗೆ ಶಿಫ್ಟ್..

Posted by Vidyamaana on 2023-10-03 15:14:10 |

Share: | | | | |


ಪುತ್ತೂರು : ಬೈಕ್-ಸ್ಕೂಟರ್ ನಡುವೆ ಡಿಕ್ಕಿ : ಸವಾರರಿಗೆ ಗಾಯ ; ಮಂಗಳೂರು ಆಸ್ಪತ್ರೆಗೆ ಶಿಫ್ಟ್..

ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೇಪುಳು ಸರ್ಕಲ್ ಬಳಿ ನಡೆದಿದೆ.

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ಘಟನೆಯಲ್ಲಿ ಬೈಕ್ ಸವಾರ ಚಂದ್ರ ಹಾಗೂ ಸ್ಕೂಟರ್ ಸವಾರ ಅಬ್ದುಲ್ ರಜಾಕ್ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಪುತ್ತೂರು : ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ತೆಂಗಿನ ಮರದಿಂದ ಬಿದ್ದು ಮೃತ್ಯು.

Posted by Vidyamaana on 2023-08-09 08:17:04 |

Share: | | | | |


ಪುತ್ತೂರು : ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ತೆಂಗಿನ ಮರದಿಂದ ಬಿದ್ದು ಮೃತ್ಯು.

ಪುತ್ತೂರು : ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಪ್ರಮೋದ್ ಬೊಳ್ಳಾಜೆ ರವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.


ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.

ಇಂದು ಪುಣ್ಚಪ್ಪಾಡಿ ಸಮೀಪ ತೆಂಗಿನ ಮರ ಹತ್ತಿದ್ದ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ..

ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

Posted by Vidyamaana on 2023-09-21 20:47:54 |

Share: | | | | |


ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

   ಮೊಬೈಲ್​​ ಕಳೆದು ಹೋದ ತಕ್ಷಣ ನಮಗಾಗುವ ಗಾಬರಿ ಅಷ್ಟಿಷ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ.ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿ ಮತ್ತು ನಮ್ಮ ಮೊಬೈಲ್​ ಡೇಟಾ ಸೋರಿಕೆಯಾಗುವ ಟೆನ್ಶನ್​ ತುಂಬಾನೆ ಇರುತ್ತೆ.ಆದ್ರೆ ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆಯಪ್( KSP Application ) ಸಹಾಯ ಮಾಡಲಿದೆ. 


ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ಸಂಚಾರ್ ಸಾಥಿ ಪೋರ್ಟಲ್ ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

ರಾಜ್ಯದಲ್ಲಿ ಹೃದಯಾಘಾತ ಹೆಚ್ಚಳ ಹಿನ್ನಲೆ

Posted by Vidyamaana on 2023-08-20 12:48:35 |

Share: | | | | |


ರಾಜ್ಯದಲ್ಲಿ ಹೃದಯಾಘಾತ ಹೆಚ್ಚಳ ಹಿನ್ನಲೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯಾಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಒಂದು ಪ್ಲಾನ್ ಮಾಡಿದೆ.ಹೃದಯಘಾತ ತಡೆಗೆ ಆರೋಗ್ಯ ಇಲಾಖೆ ಪುನೀತ್ ರಾಜಕುಮಾರ್ ಅಪ್ಪು ಹೃದಯ ಕವಚ ಯೋಜನೆ ಜಾರಿಗೆ ಮುಂದಾಗಿದೆ .ದಿಡೀರ್ ಸಾವು ಹೃದಯಘಾತದ ಸಂಖ್ಯೆ ಏರಿಕೆ ತಡೆಗೆ ಹೃದಯಾಘಾತ ತಪ್ಪಿಸಲು ಮುಂದಾದ ಆರೋಗ್ಯ ಇಲಾಖೆ,ಅಪ್ಪು ಯೋಜನೆ ಜಾರಿಗೆ ಬಂದ ಆರೋಗ್ಯ ಇಲಾಖೆ ಬಜೆಟ್ ಅಲ್ಲಿ ಈ ಕುರಿತು ಹಿಂದೆ ಘೋಷಣೆ ಮಾಡಲಾಗಿತ್ತು ಆ ಯೋಜನೆಯನ್ನು ಇದೀಗ ಅನುಷ್ಠಾನಕ್ಕೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.ಹೃದಯಾಘಾತವನ್ನು ತಡೆಗಟ್ಟಲು ಹಾಗೂ ಹೃದಯಘಾತ ಮುಂಚೆ ಯಾವ ರೀತಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬುದರ ಕುರಿತು ಅರಿವು ಮೂಡಿಸುವುದು ಈ ಯೋಜನೆಯಲ್ಲಿದೆ.


ಅಪ್ಪು ಹೃದಯ ಕವಚ ಯೋಜನೆ ಜಾರಿ ಮಾಡಲಾಗಿದ್ದು ಈ ಕುರಿತು ಜಯದೇವ ಆಸ್ಪತ್ರೆಯ ಅಡಿಯಲ್ಲಿ 45 ತಾಲೂಕು ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ. ಸಂಬಂಧಿಸಿದ ಕಂಡುಬಂದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಜ್ಞವೈದ್ಯರಿಂದ ಸಲಹೆ ನೀಡಲಾಗುತ್ತದೆ.ವಿಡಿಯೋ ಅಥವಾ ಆಡಿಯೋ ಮೂಲಕ ತಜ್ಞ ವೈದ್ಯರಿಂದ ಸಲಹೆ ನೀಡಲಾಗುತ್ತಿದ್ದು ವೈದ್ಯರ ತಂಡವು ಕೇಸ್ ಆಪರೇಟ್ ಮಾಡಲಿದ್ದಾರೆಎಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ ತಿಳಿಸಿದರು.


ಪುನೀತ್ ರಾಜಕುಮಾರ್ ಹೆಸರಲ್ಲಿ ಎಇಡಿ(ಆಟೋಮೆಟಿಕ್ ಎಕ್ಸ್ಟರ್ನಲ್ ಡೆಫಿಲೆಟರ್ಸ್) ಅಳವಡಿಕೆ


ಹೃದಯಾಘಾತ ತಡೆಗಟ್ಟಲು ಪುನೀತ್ ಹೆಸರಲ್ಲಿ ಎಇಡೀ ಅಳವಡಿಸುತ್ತಿದ್ದೂ, ಸುಮಾರು ಮೂರು ಕೋಟಿ ವೆಚ್ಚದಲ್ಲಿ ಆಸ್ಪತ್ರೆಗಳಲ್ಲಿ ಅಳವಡಿಕೆ ಮಾಡಲಾಗಿದೆ. ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹೆಸರಲ್ಲಿ ಅಳವಡಿಕೆ ಮಾಡಿದ್ದು, ಆರಂಭಿಕಾ ಹಂಥದಲ್ಲಿ 45 ಆಸ್ಪತ್ರೆಯಲ್ಲಿ ಎ ಈಡಿ ಮಾಡೆಲ್ ಅಳವಡಿಕೆ ಈ ಬಗ್ಗೆ ಬಜೆಟ್ ನಲ್ಲಿ ಸಿದ್ದರಾಮಯ್ಯನವರು ಘೋಷಿಸಿದ್ದರು. ಆಸ್ಪತ್ರೆಗಳಲ್ಲಿ ಸರ್ಕಾರ ಎಇಡಿ ಅಳವಡಿಕೆಗೆ ಟೆಂಡರ್ ಕರೆದಿದೆ.

ಏನಿದು ಎಇಡಿ? 

ಎಲೆಕ್ಟ್ರಿಕ್ ಶಾಕ್ ಮೂಲಕ ಹೃದಯ ಬಡಿತವನ್ನು ಸಾಮಾನ್ಯ ಸ್ಥಿತಿಗೆ ಬರುವಂತೆ ಮಾಡುತ್ತದೆ . ತುರ್ತು ಪ್ರಾಥಮಿಕ ಚಿಕಿತ್ಸೆ ಬಳಿಕ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಬಹುದಾಗಿದೆ.ಹೃದಯ ನಾರ್ಮಲ್ ಆಗಿ ಒಂದು ನಿಮಿಷಕ್ಕೆ 75 ರಿಂದ 80 ವರೆಗೆ ಬಡಿದುಕೊಳ್ಳುತ್ತದೆ. ಅದು ತಕ್ಷಣವಾಗಿ 300 ರಿಂದ 400ಕ್ಕೆ ಹೆಚ್ಚದರೆ ಅಲ್ಲಿ ಹೃದಯದ ಬಡಿತ ವೈಬ್ರೇಶನ್ ಉಂಟಾಗುತ್ತದೆ. ಆ ಸಂದರ್ಭದಲ್ಲಿ ಅಂತಹ ವ್ಯಕ್ತಿ ಎಲ್ಲ ಬೆವರುತ್ತಿರುತ್ತಾರೆ. ಅವರ ಕೈ ಹಾಗೂ ದೇಹ ತನ್ನಗಗಿರುತ್ತೆ. ಎಇಡಿ ವ್ಯಕ್ತಿಯ ಎದೆಯ ಮೇಲೆ ಇಟ್ಟರೆ ತಕ್ಷಣ 300 ರಿಂದ 400 ಇದ್ದ ಹೃದಯ ಬಡಿತ ಸಹಜ ಸ್ಥಿತಿಗೆ ಬರುತ್ತದೆ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ. ಅರುಣ್ ಮಾಹಿತಿ ನೀಡಿದರು.

ದಿಢೀರ್ ಅಂತ ಕುಸಿದ ವೇದಿಕೆ; ರಾಹುಲ್ ಗಾಂಧಿ ಬಚಾವ್, ವಿಡಿಯೋ ನೋಡಿ

Posted by Vidyamaana on 2024-05-28 08:00:50 |

Share: | | | | |


ದಿಢೀರ್ ಅಂತ ಕುಸಿದ ವೇದಿಕೆ; ರಾಹುಲ್ ಗಾಂಧಿ ಬಚಾವ್, ವಿಡಿಯೋ ನೋಡಿ

ಬಿಹಾರ: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಪರ ಮತಯಾಚನೆ ಮಾಡಲು ರಾಹುಲ್‌ ಗಾಂಧಿ ಪಟ್ನಾಕ್ಕೆ ಬಂದಿದ್ದರು.

ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

Posted by Vidyamaana on 2024-06-26 20:07:03 |

Share: | | | | |


ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

ದೆಹಲಿ ಜೂನ್ 26: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮಾಡಿದ ಹೇಳಿಕೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಓವೈಸಿ ಅವರು ಪ್ಯಾಲೆಸ್ತೀನ್‌ನ ಯುದ್ಧ ಪೀಡಿತ ಪ್ರದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ಆಡಳಿತಾರೂಢ ಪಕ್ಷದ ಸಂಸದರು ಖಂಡಿಸಿದ್ದಾರೆ.

ಐದು ಬಾರಿ ಹೈದರಾಬಾದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಓವೈಸಿ ಜೈ ತೆಲಂಗಾಣ ಮತ್ತು ಜೈ ಪ್ಯಾಲೆಸ್ತೀನ್ ಘೋಷಣೆಗಳನ್ನು ಕೂಗಿದ್ದರು. ಈ ಘೋಷಣೆಗೆ ಆಕ್ರೋಶ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ, ಓವೈಸಿ ಇಂಥಾ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೂ ಸಂವಿಧಾನದ ಬಗ್ಗೆ ಸ್ವಲ್ಪ ತಿಳಿದಿದೆ, ಈ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಅಸಾದುದ್ದೀನ್ ಓವೈಸಿ ಟ್ವೀಟ್



Leave a Comment: