ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಸೆ.29 : ಪುತ್ತೂರಿನಲ್ಲಿ ಶುಭಾರಂಭಗೊಳ್ಳುತ್ತಿದೆ ಕ್ಯಾಮರಾ ಸೆಂಟರ್

Posted by Vidyamaana on 2023-09-27 10:02:13 |

Share: | | | | |


ಸೆ.29 : ಪುತ್ತೂರಿನಲ್ಲಿ ಶುಭಾರಂಭಗೊಳ್ಳುತ್ತಿದೆ ಕ್ಯಾಮರಾ ಸೆಂಟರ್

ಪುತ್ತೂರು :  ಇಲ್ಲಿನ  ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ಸ್ಟ್ಯಾಂಡ್‌ನ ವಾಣಿಜ್ಯ ಸಂಕೀರ್ಣ ದ ಮೊದಲ ಮಹಡಿಯಲ್ಲಿ ಕ್ಯಾಮರ ಸೆಂಟರ್ ಸಂಸ್ಥೆಯು ಸೆ 29 ಶುಕ್ರವಾರ ದಂದು ಶುಭಾರಂಭಗೊಳ್ಳಲಿದೆ.

    ಕ್ಯಾಮೆರಾಗೆ ಸಂಬಧಿಸಿದ ಎಲ್ಲಾ ವಿಚಾರಗಳು ಒಂದೇ ಸೂರಿನಡಿಯಲ್ಲಿ ನೀಡಬೇಕೆಂಬ ಕನಸಿನೊಂದಿಗೆ, ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ಕ್ಯಾಮರ ಸೆಂಟರ್ ಸಂಸ್ಥೆ ಶುಭಾರಂಭಕ್ಕೆ ಸಿದ್ದವಾಗಿದೆ. ಕ್ಯಾಮರ ಸೆಂಟರ್‌ನಲ್ಲಿ ಗ್ರಾಹಕರಿಗೆ ಬೇಕಾದ ರೀತಿಯಲ್ಲಿ ಕ್ಯಾಮೆರಾ ಸೇಲ್ಸ್ ಮತ್ತು ಸವೀಸ್ ಮಾಡಿಕೊಡಲಾಗುತ್ತದೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಮನೆಯಲ್ಲೇ ನೇಣಿಗೆ ಶರಣಾದ ಯುವ ವೈದ್ಯೆ ಡಾ. ಪಲ್ಲವಿ

Posted by Vidyamaana on 2023-06-07 06:40:25 |

Share: | | | | |


ಮನೆಯಲ್ಲೇ ನೇಣಿಗೆ ಶರಣಾದ ಯುವ ವೈದ್ಯೆ ಡಾ. ಪಲ್ಲವಿ

ನೀರ್ಚಾಲು: ಕನ್ಯಪ್ಪಾಡಿ ನಿವಾಸಿ ಕ್ಯಾಂಪ್ಕೋ ಸಂಸ್ಥೆಯ ನಿವೃತ್ತ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ 25 ವರ್ಷ ಪ್ರಾಯದ ಡಾ| ಪಲ್ಲವಿ ಜಿ.ಕೆ. ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಜೂ. 5ರಂದು ರಾತ್ರಿ ಊಟ ಮಾಡಿ ಮಲಗಿದ್ದ ಡಾ. ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ಪಲ್ಲವಿ ಮೃತದೇಹ ಪತ್ತೆಯಾಗಿದೆ.

ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿದ್ದ ಪಲ್ಲವಿ ಬಳಿಕ ರೂರಲ್‌ ಸರ್ವೀಸ್‌ನ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನೇಮಕಗೊಂಡಿದ್ದರು. ಬಳಿಕ ಎಂ.ಡಿ. ಕೋರ್ಸ್‌ನ ಪರೀಕ್ಷೆ ಬರೆಯಲು ಅಲ್ಲಿಂದ ರಜೆಯಲ್ಲಿ ತೆರಳಿದ್ದವರು ಪರೀಕ್ಷೆ ಮುಗಿಸಿ ಬಳಿಕ ಮನೆಗೆ ಬಂದಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಬದಿಯಡ್ಕ ಪೊಲೀಸರು ಮೃತದೇಹದ ಮಹಜರು ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಯುದ್ಧ ಪೀಡಿತ ಗಾಜಾಗೆ ನೆರವು ಕಳುಹಿಸಿದ ಭಾರತ: ಈಜಿಪ್ಟ್​ನ ರಫಾ ಗಡಿಯ ಮೂಲಕ ರವಾನೆ

Posted by Vidyamaana on 2023-10-22 11:50:11 |

Share: | | | | |


ಯುದ್ಧ ಪೀಡಿತ ಗಾಜಾಗೆ ನೆರವು ಕಳುಹಿಸಿದ ಭಾರತ: ಈಜಿಪ್ಟ್​ನ ರಫಾ ಗಡಿಯ ಮೂಲಕ ರವಾನೆ

ವದೆಹಲಿ: ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಇಂದು ಭಾರತವು ಮಾನವೀಯ ಆಧಾರದ ಮೇಲೆ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ಕಳುಹಿಸಿಕೊಟ್ಟಿದೆ.. ಯುದ್ಧದ ಪರಿಣಾಮ ಲಕ್ಷಾಂತರ ನಾಗರಿಕರು ನಿರ್ಗತಿಕರಾಗಿದ್ದು, ತನ್ನ ಮಿತ್ರ ಅಮೆರಿಕದ ಮನವಿ ಮೇರೆಗೆ ಅಲ್ಲಿನ ಜನರಿಗೆ ನೆರವು ಒದಗಿಸಲು ಇಸ್ರೇಲ್​ ಒಪ್ಪಿಕೊಂಡಿದೆ.


ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಚೀಲಗಳು, ಟಾರ್ಪೌಲಿನ್‌ಗಳು, ನೈರ್ಮಲ್ಯ ಉಪಯುಕ್ತತೆಗಳು ಮತ್ತು ಇತರ ಅಗತ್ಯ ವಸ್ತುಗಳ ಜೊತೆಗೆ ನೀರು ಶುದ್ಧೀಕರಣ ಮಾತ್ರೆಗಳನ್ನು ಒಳಗೊಂಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್​ ಬಾಗ್ಚಿ ಎಕ್ಸ್​ ಮೂಲಕ ತಿಳಿಸಿದ್ದಾರೆ.


ಗಾಜಾವನ್ನು ಸಂಪೂರ್ಣ ವಶಕ್ಕೆ ಪಡೆದಿರುವುದಾಗಿ ಇಸ್ರೇಲ್​ ಘೋಷಣೆ ಮಾಡಿದ್ದು, ನೀರು, ವಿದ್ಯುತ್​, ಇಂಧನ ಮತ್ತು ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದ್ದು, ದೀರ್ಘಕಾಲ ಕೊರತೆಯನ್ನು ಸೃಷ್ಟಿಸುತ್ತಿದೆ. ಇಸ್ರೇಲ್​​ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಒಂದೇ ಗಾಜಾಗೆ ಇರುವ ಏಕೈಕ ಮಾರ್ಗವಾಗಿದೆ. ತಮ್ಮ ಮಿತ್ರ ದೇಶವಾಗಿರುವ ಯುನೈಟೆಡ್​ ಸ್ಟೇಟ್ಸ್​ ಮನವಿಯ ಮೇರೆಗೆ ಈಜಿಪ್ಟ್​ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್​ ಅನುಮತಿಸಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ.


ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಗೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್‌ ಕಚೇರಿಯು ಹೊತ್ತಿದೆ. ನಿನ್ನೆ ಇಪ್ಪತ್ತು ಟ್ರಕ್‌ಗಳು ಈಜಿಪ್ಟಿನ ಟರ್ಮಿನಲ್ ಅನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್​ ಕಡೆಯ 36 ಖಾಲಿ ಟ್ರೇಲರ್‌ಗಳು ಟರ್ಮಿನಲ್‌ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿದವು. ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಹ ಶುಕ್ರವಾರ ಈಜಿಪ್ಟ್ ಕ್ರಾಸಿಂಗ್ ಬದಿಗೆ ಭೇಟಿ ನೀಡಿ ನೆರವು ವಿತರಣೆಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಿದರು. ಇವು ಕೇವಲ ಟ್ರಕ್​ಗಳಲ್ಲ, ಜೀವರಕ್ಷಕಗಳು ಎಂದು ಮಾಧ್ಯಮಗಳಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು.


ಅ.7ರ ದಾಳಿಗೆ ಪ್ರತಿಯಾಗಿ ಇಸ್ರೇಲ್​ ನಡೆಸುತ್ತಿರುವ ದಾಳಿಗೆ ಗಾಜಾ ಸಂಪೂರ್ಣ ನಲುಗಿ ಹೋಗಿದೆ. ವೆಸ್ಟ್​ ಬ್ಯಾಂಕ್​ನಲ್ಲೂ ಇಸ್ರೇಲ್​ ರಕ್ಷಣಾ ಪಡೆಗಳು ದಾಳಿ ನಡೆಸುತ್ತಿವೆ. ಇಸ್ರೇಲ್​ ನಡೆಸಿದ ಬಾಂಬ್​ ದಾಳಿಯಲ್ಲಿ ಈವರೆಗೂ 4300ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್​ನಲ್ಲಿ ಮೃತಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ನಾಗರಿಕರು ಎಂದು ಹಮಾಸ್ ನಡೆಸುವ ಆರೋಗ್ಯ ಸಚಿವಾಲಯ ತಿಳಿಸಿದೆ.


ಇಸ್ರೇಲ್​ ಮತ್ತು ಹಮಾಸ್​ ನಡುವಿನ ಯುದ್ಧವೂ ಎರಡು ವಾರಗಳನ್ನು ಪೂರೈಸಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಕದನ ಕಾರ್ಮೋಡ ಮಾತ್ರ ತಿಳಿಯಾಗಿಲ್ಲ. ಈಜಿಪ್ಟ್​​ನಲ್ಲಿ ನಡೆದ ಶಾಂತಿ ಶೃಂಗಸಭೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಮಾನವೀಯ ಕದನ ವಿರಾಮಕ್ಕಾಗಿ ಒತ್ತಾಯಿಸಿದ್ದಾರೆ. ಆದರೂ ಇಸ್ರೇಲ್​ ಮಾತ್ರ ಗಾಜಾ ಮೇಲಿನ ತನ್ನ ದಾಳಿಯನ್ನು ಮಾತ್ರ ಮುಂದುವರಿಸಿದೆ

SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

Posted by Vidyamaana on 2023-08-08 11:28:41 |

Share: | | | | |


SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್​ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ. 


ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.


ಜತೆಗೆ, ಈ ಸಂಬಂಧ ಪ್ರಕರಣದಲ್ಲಿ ಸಿಲುಕುವವರಿಗೆ ಕಿರುಕುಳ ಮುಂದುವರೆಯಲಿದೆ ಮತ್ತು ನ್ಯಾಯ ತಪ್ಪಿದಂತಾಗಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. 


ಅಲ್ಲದೇ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೇ, ಆ ಆಸ್ತಿಯನ್ನು ಅರ್ಜಿದಾರರು ಕಳೆದ 50 ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಹಾಗೆ, ಅರ್ಜಿದಾರರು ಜಮೀನನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈಅಂಶವನ್ನು ಪರಿಗಣಿಸದೇ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.


ಪ್ರಕರಣದ ಹಿನ್ನೆಲೆ : ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರ ವಿರುದ್ಧ ತಮ್ಮ ಮನೆಯ ನೆರೆಹೊರೆಯವರು ಮನೆ ಒತ್ತುವರಿ ಮತ್ತು ನಿರಂತರ ಕಿರುಕುಳ ನೀಡಲಾಗುತ್ತಿದೆ. ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಖಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳು ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಿದ್ದರು. ಪ್ರಕರಣ ಸಂಬಂಧ ರಾಮಮೂರ್ತಿ ನಗರದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.

ಹಜರತ್ ಇಮಾಮ್ ಶಾ ವಲೀ ದರ್ಗಾಗೆ ದಸರಾ ಆನೆಗಳ ಸಲಾಂ!

Posted by Vidyamaana on 2023-10-25 08:45:27 |

Share: | | | | |


ಹಜರತ್ ಇಮಾಮ್ ಶಾ ವಲೀ ದರ್ಗಾಗೆ ದಸರಾ ಆನೆಗಳ ಸಲಾಂ!

ಮೈಸೂರು: ಅರಮನೆ ನಗರಿ ಮೈಸೂರು ಸಾಂಸ್ಕೃತಿಕ ವೈವಿಧ್ಯದಿಂದಲೂ ಶ್ರೀಮಂತ. ಅಷ್ಟೇ ಅಲ್ಲ ಸೌಹಾರ್ದದ ಪ್ರತೀಕ. ನಾಡಹಬ್ಬ ದಸರೆಯು ಎಲ್ಲರನ್ನೂ ಒಳಗೊಳ್ಳುವ ಹಬ್ಬ. ಅದನ್ನು ಸಾಬೀತು ಮಾಡುವಂತೆ ಇಲ್ಲಿ ಪರಂಪರಾಗತವಾಗಿ ಬಂದ ನೂರಾರು ಆಚರಣೆಗಳಿವೆ. ಅವು ಎಲ್ಲ ಧರ್ಮಗಳಿಗೂ ಸೇರಿವೆ.ಸೋಮವಾರ ಅರಮನೆಯಲ್ಲಿ ಜಂಬೂಸವಾರಿಗೆ ಭರದ ಸಿದ್ಧತೆಗಳು ನಡೆದಿರುವಾಗಲೇ ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ಸಲಾಂ ಮಾಡಿದವು.


ಈ ಬಹುತ್ವದ ಹಿರಿಮೆಯನ್ನು ಸಾರುವ, ವೈವಿಧ್ಯದ ಸುಂದರ  ದೃಶ್ಯವನ್ನು  ಕಣ್ಣುಂಬಿಕೊಳ್ಳಲು ನೂರಾರು ಜನರು ಜಮಾಯಿಸಿದ್ದರು. ಸೂಫಿ ಸಂತ ಇಮಾಮ್ ಶಾ ವಲೀ ಅವರಿಗೆ, ಚಾಮುಂಡೇಶ್ವರಿ ದೇವಿಗೆ ಭಕ್ತರು ಜಯಕಾರ ಹಾಕಿದರು. ನೋಡಿದವರ ಎದೆಯಲ್ಲಿ ಸೌಹಾರ್ದದ ಹೂ ಅರಳಿತು. ಭಕ್ತರಲ್ಲಿ ಕಣ್ಣಾಲಿಗಳು ತುಂಬಿದವು.


82 ವರ್ಷಗಳಿಂದಲೂ ವಿಜಯದಶಮಿಯ ಮುನ್ನಾ ದಿನ ಆನೆಗಳು ಇಲ್ಲಿಗೆ ಬರುತ್ತಿವೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅವಧಿಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಯೊಂದಕ್ಕೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು. ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಆಶೀರ್ವಾದ ಪಡೆದ ನಂತರ ಸರಿಯಾಯಿತು. ಅಂದಿನಿಂದ ಇಂದಿನವರೆಗೂ ಆನೆಗಳು ನಿರಂತರವಾಗಿ ಪ್ರತಿ ದಸರೆಯಲ್ಲೂ ಬರುತ್ತಿವೆ.ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 14 ಆನೆಗಳು ಅರಮನೆ ದಕ್ಷಿಣ ದ್ವಾರವಾದ ಬ್ರಹ್ಮಪುರಿಯಿಂದ ಆಗಮಿಸಿದವು. ಜಗನ್ನೋಹನ ಅರಮನೆ ಹಾದಿಯಲ್ಲಿ ಕ್ರಮಿಸಿ, ಕೃಷ್ಣವಿಲಾಸ ರಸ್ತೆಯಲ್ಲಿರುವ ದರ್ಗಾಕ್ಕೆ ಬಂದವು. ಧೂಪಾರತಿ ಮಾಡಿದ ನಂತರ ವಿಭೂತಿಯನ್ನು ಹಣೆಗೆ ಹಚ್ಚಲಾಯಿತು. ದರ್ಗಾದ ಚಾದರ ಮೇಲಿಟ್ಟಿದ್ದ ನವಿಲುಗರಿಯಿಂದ ಆಶೀರ್ವಾದವನ್ನು ದರ್ಗಾದ ಮುಖ್ಯಸ್ಥ ಮೊಹಮ್ಮದ್ ನಖೀಬುಲ್ಲಾ ಷಾ ಖಾದ್ರಿ ಮಾಡಿದರು.


ಇದಕ್ಕೂ ಮೊದಲು ದರ್ಗಾದ ವತಿಯಿಂದ ಡಿಸಿಎಫ್ ಸೌರಭ್ ಕುಮಾರ್‌ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಶಾಲು ಹೊದಿಸಿ ಆಶೀರ್ವದಿಸಲಾಯಿತು. ಅಭಿಮನ್ಯು, ವರಲಕ್ಷ್ಮಿ ಅರ್ಜುನ, ಮಹೇಂದ್ರ, ವಿಜಯಾ, ಪ್ರಶಾಂತ, ಸುಗ್ರೀವ, ಕಂಜನ್, ಭೀಮ, ಹಿರಣ್ಯ, ಧನಂಜಯ, ಲಕ್ಷ್ಮಿ ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿದವು. ಗೋಪಿ


ರಾಜರಿಗೆ ಔಷಧಿಯಾಗಿ ಮಣ್ಣು ನೀಡಿದರು: 1757ರಲ್ಲಿ ರಾಜರಿಗೆ ಕಾಯಿಲೆ ಬರುತ್ತದೆ. ಯಾವುದೇ ವೈದ್ಯರಿಂದಲೂ ಪರಿಹಾರವಾಗದೇ ನರಳುತ್ತಿದ್ದಾಗ, ಅವರ ಎತ್ತಿನ ಗಾಡಿಯ ಸವಾರ ಸೂಫಿ ಗುರುಗಳನ್ನು ಕಂಡರೆ ವಾಸಿಯಾಗುತ್ತದೆ ಎಂದು ಸಲಹೆ ನೀಡಿದ್ದರು. ಅದರಂತೆ ಸಿದ್ದಿಪುರುಷ ಇಮಾಮ್ ಶಾ ವಲೀ ಅವರ ಬಳಿ ರಾಜರು ಬಂದಾಗ, ಗುರುಗಳು ಪೀಠದ ಪಕ್ಕದಲ್ಲಿದ್ದ ಮಣ್ಣನ್ನು ಮೈಗೆ ಸವರಿಕೊಳ್ಳುವಂತೆ ಅವರಿಗೆ ಕೊಟ್ಟರು ಎಂದು ದರ್ಗಾದ ಮುಖ್ಯಸ್ಥ ಮೊಹಮ್ಮದ್ ನಖೀಬುಲ್ಲಾ ಷಾ ಖಾದ್ರಿ ಪ್ರಜಾವಾಣಿಗೆ ತಿಳಿಸಿದರು.


ರಾಜರು ಮಣ್ಣನ್ನು ಹಚ್ಚಿಕೊಳ್ಳಲಿಲ್ಲ. ಮೂರು ಬಾರಿ ರಾಜರ ಕನಸಿನಲ್ಲಿ ಬಂದ ಗುರುಗಳು ಔಷಧ ಹಚ್ಚಿಕೊಳ್ಳುವಂತೆ ಹೇಳಿದರು. ಕೊನೆಗೆ ರಾಜರು ಮಣ್ಣನ್ನು ಹಚ್ಚಿಕೊಂಡ ನಂತರ ಕಾಯಿಲೆ ವಾಸಿಯಾಯಿತು. ಬರಿಗಾಲಿನಲ್ಲೇ ಗುರುಗಳಿದ್ದ ಸ್ಥಳಕ್ಕೆ ಬಂದ ರಾಜರು ಆಶೀರ್ವಾದ ಪಡೆದರು. ಅಂದಿನಿಂದಲೂ ದರ್ಗಾ ರಾಜರ ಶ್ರದ್ಧಾಕೇಂದ್ರವೂ ಆಗಿದೆ ಎಂದರು.


*1758ರಲ್ಲಿ ಇಮಾಮ್ ಶಾ ವಲೀ ಅವರ ಸಮಾಧಿಯಾದ ನಂತರ 1801ರಿಂದಲೂ ರಾಜವಂಶಸ್ಥರು ಪೂಜೆ ಸಲ್ಲಿಸಿಕೊಂಡು ಬಂದಿದ್ದಾರೆ. 8 ದಶಕದಿಂದ ಆನೆಗಳು ಆಶೀರ್ವಾದ ಪಡೆಯುತ್ತಿವೆ ಎಂದು ತಿಳಿಸಿದರು.ಇಲ್ಲಿ ಬರುವ ದಸರಾ ಆನೆಗಳು ಆಶೀರ್ವಾದ ಪಡೆದ ಮೇಲೆ ದರ್ಗಾಕ್ಕೆ ಬೆನ್ನು ತೋರಿಸಿ ತಿರುಗುವುದಿಲ್ಲ. ಹಿಮ್ಮುಖವಾಗಿ ಚಲಿಸಿ ನಂತರ ಅರಮನೆಗೆ ವಾಪಸಾಗುವುದು ಅಚ್ಚರಿಯೆನ್ನುತ್ತಾರೆ ಇಲ್ಲಿನ ಭಕ್ತರು. ಆನೆಗಳಿಗೆ ತೊಂದರೆಯಾದರೆ ಇಲ್ಲಿನ ಖಾದ್ರಿಗಳು ಅರಮನೆಯ ಆನೆ ಬಿಡಾರಕ್ಕೂ ಭೇಟಿ ನೀಡಿ, ಪೂಜೆ ಸಲ್ಲಿಸಿ ದೃಷ್ಟಿ ತೆಗೆಯುತ್ತಾರೆ. ನಾಡಹಬ್ಬ ದಸರೆ, ಆನೆಗಳು ಹಾಗೂ ದರ್ಗಾದ ಗುರುಗಳಿಗೂ ನಂಟು ಶತಮಾನಗಳಿಂದ ಬೆಸೆದಿದೆ.


ದಸರಾ ನಾಡಹಬ್ಬವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುತ್ತದೆ. ಸಾಂಸ್ಕೃತಿಕ ವೈವಿಧ್ಯವನ್ನು ಸಾರುತ್ತದೆ. ಅಂಬಾರಿ ಆನೆಗಳಿಗೆ ಚಾಮುಂಡೇಶ್ವರಿ, ಇಮಾಮ್ ಶಾ ವಲೀ ಸೇರಿದಂತೆ ದೇವರ- ಗುರುಗಳ ಆಶೀರ್ವಾದ ಸಿಕ್ಕಿದೆ. ನಾಡಿನ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಡಿಸಿಎಫ್‌ ಸೌರಭ್ ಕುಮಾರ್ ತಿಳಿಸಿದರು.


ಆರ್‌ಎಫ್‌ಒ ಸಂತೋಷ್ ಹೂಗಾರ್, ಆನೆ ವೈದ್ಯ ಡಾ.ಮುಜೀಬ್ ರೆಹಮಾನ್, ಸಿಬ್ಬಂದಿ ಅಕ್ರಂ ಇದ್ದರು.

ಇಂದು (ಆ 11)ದ.ಕ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

Posted by Vidyamaana on 2023-08-11 01:57:38 |

Share: | | | | |


ಇಂದು (ಆ 11)ದ.ಕ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ವಿಮಾನದ ಮೂಲಕ ಅವರು ಆ.11ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12.30ಕ್ಕೆ ಪುತ್ತೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವರು.


 ಮಧ್ಯಾಹ್ನ 2 ಗಂಟೆಗೆ ಪುತ್ತೂರು ನಿರೀಕ್ಷಣಾ ಮಂದಿರಲ್ಲಿ ವಾಸ್ತವ್ಯ ಮಾಡಿ, ಮಧ್ಯಾಹ್ನ 3 ಗಂಟೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆ ತಪಾಸಣೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.


ಸಂಜೆ 6 ಗಂಟೆಗೆ  ದರ್ಭೆಯಲ್ಲಿರುವ ಪುತ್ತೂರು ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ಮಾಡುವರು. ರಾತ್ರಿ 8.30ಕ್ಕೆ ಮಂಗಳೂರಿಗೆ ಆಗಮಿಸಿ, 9.50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent News


Leave a Comment: