ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಕುಂದಾಪುರ : ಕಾಲೇಜ್ ಹುಡುಗಿಗೆ ನಜೀರ್ ನಿಂದ ಲೈಂಗಿಕ ಕಿರುಕುಳ - ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿನಿ, ವಿಡಿಯೋ ವೈರಲ್.

Posted by Vidyamaana on 2023-06-09 16:23:41 |

Share: | | | | |


ಕುಂದಾಪುರ : ಕಾಲೇಜ್ ಹುಡುಗಿಗೆ  ನಜೀರ್ ನಿಂದ ಲೈಂಗಿಕ ಕಿರುಕುಳ -  ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿನಿ, ವಿಡಿಯೋ ವೈರಲ್.

ಕುಂದಾಪುರ :ಇಂದು ಮುಂಜಾನೆ ವಿದ್ಯಾರ್ಥಿನಿಯೊಬ್ಬಳು ಬೀಜಾಡಿ - ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ನಜೀರ್ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು ಆಕೆ ಕೂಗಿಕೊಂಡಿದ್ದಾಳೆ.ಕೂಡಲೇ ಸ್ಥಳೀಯರು ಆಗಮಿಸಿ ಆರೋಪಿಯನ್ನು ಹಿಡಿದುಕೊಂಡಿದ್ದು ವಿಚಾರಿಸಿದಾಗ ವಿದ್ಯಾರ್ಥಿನಿ‌ ನಡೆದ ಘಟನೆ ವಿವರಿಸಿದ್ದಾಳೆ. ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು, ಘಟನೆಯ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.ಬಳಿಕ ಸ್ಥಳೀಯರು ಆರೋಪಿಯನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡಿದ್ದು,‌ ಆರೋಪಿಯ ವಿಚಾರಣೆ ನಡೆಸಿದ್ದಾರೆ.

ನಾಳೆ (ಜೂ.23) ಪುತ್ತೂರು : ಪ್ರಕಾಶ್ ಪುರುಷರಕಟ್ಟೆ ರವರ ಉತ್ತರಕ್ರಿಯೆ

Posted by Vidyamaana on 2024-06-22 21:58:58 |

Share: | | | | |


ನಾಳೆ (ಜೂ.23) ಪುತ್ತೂರು : ಪ್ರಕಾಶ್ ಪುರುಷರಕಟ್ಟೆ ರವರ ಉತ್ತರಕ್ರಿಯೆ

ಪುತ್ತೂರು :ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ  ಪುರುಷರಕಟ್ಟೆ ನಿವಾಸಿ ಪ್ರಕಾಶ್ ಜೋಗಿ ರವರ ಉತ್ತರಕ್ರಿಯೆ ಜೂ.23 ರಂದು ನಡೆಯಲಿದೆ.

ಬಂಟ್ವಾಳ ; ಹಗಲು ವೇಳೆ ಮನೆಗೆ ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಎಸ್ಕೇಪ್ ಮಾಡಿದ ಕಳ್ಳರಿಬ್ಬರ ಸೆರೆ, 15 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ

Posted by Vidyamaana on 2023-09-19 06:13:51 |

Share: | | | | |


ಬಂಟ್ವಾಳ ; ಹಗಲು ವೇಳೆ ಮನೆಗೆ ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಎಸ್ಕೇಪ್ ಮಾಡಿದ ಕಳ್ಳರಿಬ್ಬರ ಸೆರೆ, 15 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ, ಸೆ.18: ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ‌ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.


ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27 ವ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ತೌಸಿಫ್ ಅಹಮ್ಮದ್  (34) ಬಂಧಿತ ಆರೋಪಿಗಳು.


ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್‌ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಕಪಾಟುಗಳಿಂದ 115 ಗ್ರಾಂ ತೂಕದ ಸುಮಾರು 5,36,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು‌.

ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

Posted by Vidyamaana on 2023-10-19 07:22:53 |

Share: | | | | |


ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

ಪುತ್ತೂರು: ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್‌ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್‌ ಸೋರಿಕೆ ರಸ್ತೆಯಲ್ಲೆಲ್ಲಾ ಹರಿದು ಹೋದ ಘಟನೆ ಅ.18ರ ರಾತ್ರಿ ಇಲ್ಲಿನ ಬೈಪಾಸ್‌ ರಸ್ತೆ ಉರ್ಲಂಡಿಯಲ್ಲಿ ನಡೆದಿದೆ.


ರಾತ್ರಿ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.ಟ್ಯಾಂಕ‌ ಪಲ್ಟಿಯಾದ ಶಬ್ದ ಕೇಳುತ್ತಲೇ ಸ್ಥಳೀಯರು ಆಗಮಿಸಿ ಇತರರಿಗೆ ಮಾಹಿತಿ ನೀಡಿದ್ದರುಘಟನೆಯಿಂದ ವಿದ್ಯುತ್‌ ತಂತಿ ತುಂಡರಿಸಲ್ಪಟ್ಟಿದ್ದು ಸಂಪರ್ಕ ಕಡಿತಗೊಂಡಿದೆ.ಟ್ಯಾಂಕರ್‌ ವಿದ್ಯುತ್‌ ಕಂಬ, ತಂತಿಗಳಿಗೆ ತಾಗಿತ್ತಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕ‌ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.ಅಗ್ನಿ ಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.ಘಟನಾಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದರು.


10 ಸಾವಿರ ಲೀ ಪಾಮ್ ಆಯಿಲ್ ಸೋರಿಕೆ: ಟ್ಯಾಂಕರ್‌ನಲ್ಲಿ 30 ಸಾವಿರ ಲೀ. ಪಾಮ್ ಆಯಿಲ್ ತುಂಬಿಸಲಾಗಿದ್ದು, ಅದರಲ್ಲಿದ್ದ 10 ಸಾವಿರ ಲೀ. ಪಾಮ್ ಆಯಿಲ್ ಸೋರಿಕೆಯಾಗಿ ಹೋಗಿದೆ ಎಂದು ತಿಳಿದು ಬಂದಿದೆ.

ಸಿಕ್ಸರ್ ಸಿಡಿಸಿದ ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ! ಕಾದು ಸುಸ್ತಾದ ಅಂಪೈರ್ಸ್; ವಿಡಿಯೋ ನೋಡಿ

Posted by Vidyamaana on 2024-01-15 09:29:14 |

Share: | | | | |


ಸಿಕ್ಸರ್ ಸಿಡಿಸಿದ ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ! ಕಾದು ಸುಸ್ತಾದ ಅಂಪೈರ್ಸ್; ವಿಡಿಯೋ ನೋಡಿ

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ (New Zealand Beat Pakistan) ನಡುವೆ ನಡೆಯುತ್ತಿರುವ ಟಿ20 ಸರಣಿಯಲ್ಲಿ ಕಿವೀಸ್ ತಂಡ ಸತತ ಎರಡನೇ ಗೆಲುವು ದಾಖಲಿಸಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು 21 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯರು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 173 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ವಿಡಿಯೋ ನೋಡಲು ಕ್ಲಿಕ್ ಮಾಡಿ

ವಿಡಿಯೋ ನೋಡಲು ಕ್ಲಿಕ್ ಮಾಡಿ


ಪಾಕ್ ಪರ ಬಾಬರ್ (Babar Azam) ಹಾಗೂ ಫಖರ್ ಜಮಾನ್ (Fakhar Zaman) ತಲಾ ಅರ್ಧಶತಕ ಸಿಡಿಸಿ ಗೆಲುವಿಗಾಗಿ ಹೋರಾಡಿದರಾದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಆದರೆ ಈ ಇಬ್ಬರು ಬೌಂಡರಿ ಸಿಕ್ಸರ್​ಗಳ ಸುರಿಮಳೆಗೈಯುವ ಮೂಲಕ ಮೈದಾನದಲ್ಲಿ ನೆರೆದಿದ್ದವರಿಗೆ ಮನರಂಜನೆ ನೀಡುವಲ್ಲಿ ಯಶಸ್ವಿಯಾದರು. ಇದೇ ವೇಳೆ ಪಂದ್ಯಕ್ಕೆ ಬಳಸಿದ್ದ ಬಾಲ್ ಕಳತ್ತನವಾದ ಪ್ರಸಂಗವೂ ನಡೆಯಿತು. ಇದರಿಂದ ಆಟ ಕೊಂಚ ಸಮಯ ಸ್ಥಗಿತ ಕೂಡ ಆಯಿತು.


ಬಾಬರ್ ಮತ್ತು ಫಖರ್ ಅರ್ಧಶತಕ


ವಾಸ್ತವವಾಗಿ ನ್ಯೂಜಿಲೆಂಡ್‌ನ ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲೂ ಮೊದಲ ಪಂದ್ಯದಂತೆ ರನ್ ಮಳೆಯೇ ಹರಿಯಿತು. ಹೀಗಾಗಿ ನ್ಯೂಜಿಲೆಂಡ್ ತಂಡ ಫಿನ್ ಅಲೆನ್ ಅವರ 74 ರನ್​ಗಳ ಕೊಡುಗೆಯಿಂದಾಗಿ 20 ಓವರ್‌ಗಳಲ್ಲಿ 194 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡಕ್ಕೆ ಆರಂಭದಲ್ಲೇ ಎರಡು ವಿಕೆಟ್​ಗಳ ಆಘಾತ ಎದುರಾಯಿತು. ನಂತರ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಬಾಬರ್ ಮತ್ತು ಫಖರ್ ಜಮಾನ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಬ್ಯಾಟ್​ ಬೀಸಿದರು. ಒಂದೆಡೆ ಬಾಬರ್ ಬೌಂಡರಿ ಬಾರಿಸುತ್ತಿದ್ದರೆ, ಮತ್ತೊಂದೆಡೆ ಫಖರ್ ಬಿಗ್ ಬಿಗ್ ಸಿಕ್ಸರ್ ಬಾರಿಸುತ್ತಿದ್ದರು.


ಇದೇ ವೇಳೆ ಪಾಕ್ ಇನ್ನಿಂಗ್ಸ್​ ನಡೆಯುತ್ತಿದ್ದ ಸಮಯದಲ್ಲಿ ಆಟ ನೋಡಲು ಮೈದಾನಕ್ಕೆ ಬಂದಿದ್ದ ಪ್ರೇಕ್ಷಕನೊಬ್ಬ ಬಾಲ್ ಕದ್ದು ಪರಾರಿಯಾದ ಪ್ರಸಂಗವೂ ನಡೆಯಿತು. ವಾಸ್ತವವಾಗಿ ನ್ಯೂಜಿಲೆಂಡ್ ವೇಗಿ ಬೆನ್ ಸಿಯರ್ಸ್ ಬೌಲ್ ಮಾಡಿದ 6ನೇ ಓವರ್​ನಲ್ಲಿ ಫಖರ್ ಜಮಾನ್ ಬಿಗ್ ಸಿಕ್ಸರ್ ಬಾರಿಸಿದರು. ಫಖರ್ ಶಕ್ತಿಯ ಮುಂದೆ ತಲೆಬಾಗಿದ ಚೆಂಡು ನೇರವಾಗಿ ಕ್ರೀಡಾಂಗಣದ ಹೊರಗೆ ಹೋಗಿ ರಸ್ತೆಯಲ್ಲಿ ಬಿದ್ದಿತು. ಇದನ್ನು ನೋಡಿದ್ದ ಅಲ್ಲಿದ್ದ ಕೆಲವು ಅಭಿಮಾನಿಗಳು ಚೆಂಡನ್ನು ಹಿಡಿಯಲು ಓಡಿದರು.ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ


ಈ ವೇಳೆ ಒಬ್ಬ ಪ್ರೇಕ್ಷಕ ಆ ಚೆಂಡನ್ನು ಎತ್ತಿಕೊಂಡು ಮೈದಾನದೊಳಕ್ಕೆ ಎಸೆಯದೆ, ರಸ್ತೆಯಲ್ಲಿ ಓಡಲಾರಂಭಿಸಿದನು. ಎಲ್ಲರೂ ಆತ ವಾಪಸ್ ಬರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಾಲನ್ನು ಎತ್ತಿಕೊಂಡ ಆ ವ್ಯಕ್ತಿ ಮತ್ತೆ ಮೈದಾನಕ್ಕೆ ಬರಲೇ ಇಲ್ಲ. ಹೀಗಾಗಿ ಮೈದಾನದಲ್ಲಿದ್ದ ಅಂಪೈರ್ ಮತ್ತೊಂದು ಬಾಲ್‌ ತರಿಸಿಕೊಂಡು ಪಂದ್ಯವನ್ನು ಮತ್ತೆ ಪ್ರಾರಂಭಿಸಿದರು. ಇದೀಗ ಪ್ರೇಕ್ಷಕ ಬಾಲ್ ಕದ್ದು ಓಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.ಪಾಕ್ ತಂಡಕ್ಕೆ ಮತ್ತೊಂದು ಸೋಲು


ಪಂದ್ಯದ ಮಟ್ಟಿಗೆ ಹೇಳುವುದಾದರೆ, ಪಾಕಿಸ್ತಾನ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು. ನ್ಯೂಜಿಲೆಂಡ್ ನೀಡಿದ 195 ರನ್‌ಗಳ ಗುರಿಯನ್ನು ಸಾಧಿಸುವ ಯತ್ನದಲ್ಲಿ ಇಡೀ ತಂಡವು 19.3 ಓವರ್‌ಗಳಲ್ಲಿ ಕೇವಲ 173 ರನ್‌ಗಳಿಗೆ ಕುಸಿದು 21 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಪಾಕಿಸ್ತಾನ ಪರ ಬಾಬರ್ ಆಝಂ (66) ಮತ್ತು ಫಖರ್ ಜಮಾನ್ (50) ಅರ್ಧಶತಕ ಸಿಡಿಸಿದರು. ಆದರೆ ಅವರನ್ನು ಹೊರತುಪಡಿಸಿ ಇತರ ಬ್ಯಾಟ್ಸ್‌ಮನ್‌ಗಳು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

Posted by Vidyamaana on 2024-05-24 21:08:42 |

Share: | | | | |


ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು: ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ಮೇ 24 ನೇ ಶುಕ್ರವಾರ ದಂದು ಬೆಥನಿ ಶಾಲೆಯ ಸಭಾಂಗಣದಲ್ಲಿ,ಬೆಥನಿ ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. 

ಸಂಪನ್ಮೂಲ ವ್ಯಕ್ತಿಗಳಾದ ವಂದನೀಯ ಭಗಿನಿ ಅನ್ನಾ ಮರಿಯ ಕಾರ್ಯದರ್ಶಿಗಳು, ಜೀವಂಧಾರ ಸಮಾಜ ಸೇವಾ ಸಂಘ ಕುಲಶೇಖರ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ವೇದಿಕೆಯಲ್ಲಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆಯ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ನ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರ ಬಿ ಎಸ್ ಹಾಗೂ ಬೆಥನಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಆಗ್ನೇಸ್ ಶಾಂತಿ ಬಿ ಎಸ್ ಉಪಸ್ಥಿತರಿದ್ದರು.

  

Recent News


Leave a Comment: