Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2023-07-20 02:00:53 |
ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿರುವುದು, ಧರ್ಮಸ್ಥಳದ ಹೆಸರನ್ನು ಎಳೆದು ತಂದು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರು ತಮ್ಮ ವ್ಯಾಪ್ತಿಯ ವಿವಿಧ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪ್ರಸ್ತುತ ವಿದ್ಯಮಾನಗಳು, ಸೌಜನ್ಯಾ ಕೊಲೆ ಪ್ರಕರಣದ ಹೆಸರಲ್ಲಿ ಕ್ಷೇತ್ರದ ಹೆಸರು ಕೆಡಿಸುತ್ತಿರುವ ವಿಚಾರದ ಬಗ್ಗೆ ಹೆಗ್ಗಡೆ ಮಾತನ್ನಾಡಿದ್ದಾರೆ.
ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆಗಳಾಗಿವೆ. ಹಲವು ಸೇವೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ ಕೆಲಸ ಅನ್ನೋದು ಎರಡು ರೀತಿಯ ಕತ್ತಿ ಇದ್ದ ಹಾಗೆ. ಅದು ಎರಡೂ ಕಡೆಯಿಂದ ಕೊಯ್ತದೆ, ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಕೂಡ ಉಂಟು ಮಾಡ್ತದೆ. ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗ ಇದೆ, ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ.
ಇದಕ್ಕೆ ದ್ವೇಷ, ಅಸೂಯೆ ಕಾರಣ, ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ ದ್ವೇಷ ಬೆಳೆಸಿಕೊಂಡಿದ್ದಾರೆ. ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ. ಈಗ ಬೇಕಿದ್ದರೆ ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ, ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಎಳೀತಾರೆ ಅಂತ ಗೊತ್ತಾಗ್ತಿಲ್ಲ.
ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಕ್ಷೇತ್ರದ ವಿಚಾರ ಇದೆ. ನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ಶತ್ರುತ್ವಕ್ಕೆ ಕಾರಣ ಏನು ಅನ್ನೋದೇ ನಮಗೆ ಇರೋ ಸಮಸ್ಯೆ. ನಮ್ಮ ಸಿಬ್ಬಂದಿಗಳಿಗೆ ಇದರ ಹಿಂದಿನ ಸತ್ಯ ಗೊತ್ತಿರಬಹುದು, ಆದರೂ ನಾವು ಯಾಕೆ ಸುಮ್ಮನಿದ್ದೇವೆ ಅಂತ ಅನಿಸಬಾರದು. ನಾವು ಸುಮ್ಮನಿರೋದು ಈ ಕುರಿತು ಪರ- ವಿರೋಧ ಸಂಭಾಷಣೆ ಆರಂಭವಾಗಬಾರದು ಅಂತಷ್ಟೇ. ಅನೇಕರು ಬಂದು ಕಣ್ಣೀರು ಹಾಕ್ತಾ ಇದಾರೆ, ನಿಮಗೆ ಹೀಗಾದರೆ ಹೇಗೆ ತಡೆಯೋದು ಅಂತ. ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಅಂತ ಜನರಿಗೆ ಗೊತ್ತಾಗ್ತಿದೆ.
ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ. ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಬೇಕಾಗಿದೆ. ಧರ್ಮಸ್ಥಳದ ಸಿಬ್ಬಂದಿಯ ಕಾರಣಕ್ಕೆ ಇಲ್ಲಿ ಎಲ್ಲವೂ ಚೆನ್ನಾಗಿದೆ. ಸುಸ್ಥಿತಿಯಲ್ಲಿದೆ. ನಮ್ಮ ಒಳ್ಳೆಯ ಕಾರ್ಯಗಳು ಯಾವತ್ತೂ ನಡೆದುಕೊಂಡು ಹೋಗುತ್ತೆ, ಇದು ಮಧ್ಯದಲ್ಲಿ ಬಂದ ಮೋಡವಷ್ಟೇ. ಈ ಪರದೆ ತೆಗೀಬೇಕು, ಅದನ್ನ ದೇವರು ತೆಗೀತಾನೆ. ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ, ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ.
ವೈಯಕ್ತಿಕ ಅವಮಾನ ಮತ್ತು ವೈಯಕ್ತಿಕ ಆರೋಪ ಸರಿಯಲ್ಲ, ಅದನ್ನು ನಿಲ್ಲಿಸಬೇಕು. ನಮ್ಮ ಅಭಿಮಾನಿಗಳು ರೆಡಿ ಇದ್ದಾರೆ, ಏನಾದ್ರೂ ಮಾಡಲಿಕ್ಕೆ. ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ, ನೈತಿಕ ಶಕ್ತಿ ದೊಡ್ಡದು ಅಂದಿದ್ದೇನೆ ಎಂದು ವಿವರವಾಗಿ ಮಾತನಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಧರ್ಮಸ್ಥಳದ ಹೆಸರೆತ್ತಿ ಆರೋಪ ಮಾಡಿರುವುದು ತೀವ್ರ ಸಂಚಲನ ಮೂಡಿಸಿದೆ. ಈಗ ಧರ್ಮಾಧಿಕಾರಿ ಹೆಗ್ಗಡೆಯವರೇ ಸ್ಪಷ್ಟನೆಯ ಮೂಲಕ ಸಿಬಂದಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.
Posted by Vidyamaana on 2023-07-24 06:57:08 |
ನವದೆಹಲಿ :(ಜು.24) ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್ಫಾರ್ಮ್ ವ್ಯಾಟ್ಸ್ಆಯಪ್ ಇದೀಗ ಹೊಸ ಫೀಚರ್ಸ್ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಬಳಕೆದಾರರ ಬಹುದಿನಗಳ ಬೇಡಿಕೆಯನ್ನು ವ್ಯಾಟ್ಸ್ಆಯಪ್ ಈಡೇರಿಸಿದೆ. ಇದೀಗ ವ್ಯಾಟ್ಸ್ಆಯಪ್ ವಿಡಿಯೋ ಕಾಲ್ ವೇಳೆ ಲ್ಯಾಂಡ್ಸ್ಕೇಪ್ ಮೂಡ್ ಪ್ರವರ್ತಿಸಲಿದೆಇಷ್ಟು ದಿನ ವಿಡಿಯೋ ಕಾಲ್ ಮಾಡುವಾಗ ಕೇವಲ ಪೋರ್ಟ್ರೈಟ್ ಮೂಡ್ ಮಾತ್ರ ಅನಮತಿ ನೀಡುತ್ತಿತ್ತು. ಆದರೆ ಹೊಸ ಫೀಚರ್ನಿಂದ ವಿಡಿಯೋ ಕಾಲ್ ಮಾಡುಲ ಬಳಕೆದಾರರು ಮೊಬೈಲ್ನ್ನು ಪೋರ್ಟ್ರೈಟ್ ಅಥವಾ ಲ್ಯಾಂಡ್ಸ್ಕೇಪ್ ಯಾವುದೇ ಮೂಡ್ನಲ್ಲೂ ಕರೆ ಮಾಡಿ ಸಂಭಾಷಣೆ ನಡೆಸಬಹುದು. ಹೊಸ ಫೀಚರ್ ಇದಕ್ಕೆ ಅನುಮತಿ ನೀಡಲಿದೆ.ವಿಡಿಯೋ ಕಾಲ್ ವೇಳೆ ಲ್ಯಾಂಡ್ಸ್ಕೇಪ್ ಮೂಡ್ನಲ್ಲಿ ಮೊಬೈಲ್ ಇಟ್ಟು ಸಂಭಾಷಣೆ ನಡೆಸಲು ಅಥವಾ ಇನ್ನಿತರ ಕಾರಣಗಳಿಗೆ ಬಳಕೆದಾರರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಇದೀಗ ಬಳಕೆದಾರರು ಮೊಬೈಲ್ನ್ನು ಲ್ಯಾಂಡ್ಸ್ಕೇಪ್ ಮೂಡ್ನತ್ತ ತಿರುಗಿಸಿದರೆ ವಿಡಿಯೋ ಕಾಲ್ಗೆ ಯಾವುದೇ ಸಮಸ್ಯೆ ಇಲ್ಲ. ಕರೆಯಲ್ಲಿರುವ ವ್ಯಕ್ತಿ ಅಥವಾ ಚಿತ್ರಗಳು ಉಲ್ಟಾ ಕಾಣುವುದಿಲ್ಲ. ಬಳಕೆದಾರರ ಮುಂದಿದ್ದ ಸಮಸ್ಯೆಯೊಂದನ್ನು ವ್ಯಾಟ್ಸ್ಆಯಪ್ ಬಗೆಹರಿಸಿದೆ.ಲ್ಯಾಂಡ್ಸ್ಕೋಪ್ ಮೂಡ್ ವಿಡಿಯೋ ಕಾಲ್ ಜೊತೆಗೆ ಕಾಲ್ ಸೈಲೆಂಟ್ ಫೀಚರನ್ನು ವ್ಯಾಟ್ಸ್ಆಯಪ್ ಪರಿಚಯಿಸಿದೆ. ಈ ಮೂಲಕ ಅನಗತ್ಯ, ಸ್ಪ್ಯಾಮ್ ಕಾಲ್, ಅಪರಿಚಿತ ಕರೆಗಳನ್ನು ನಿರ್ಬಂಧಿಸಲು ಸಾಧ್ಯವಿದೆ. ವ್ಯಾಟ್ಸ್ಆಯಪ್ ಸೆಟ್ಟಿಂಗ್ ಮೂಲಕ ಪ್ರೈವೈಸ್ ಕಾಲ್ ಆಯ್ಕೆ ಮಾಡಿದರೆ ಕಿರಿಕಿರಿಯಿಂದ ದೂರ ಉಳಿಯಲು ಸಾಧ್ಯವಿದೆ. ಅಪರಿಚಿತ ಮತ್ತು ಸ್ಪಾಯಮ್ ಕರೆಗಳ ಕಿರಿಕಿರಿಯಿಂದ ಬಳಕೆದಾರರಿಗೆ ಮುಕ್ತಿ ನೀಡಲು ಫೋನ್ನಲ್ಲಿ ಸೇವ್ ಆಗಿಲ್ಲದ ನಂಬರ್ಗಳಿಂದ ಬರುವ ಫೋನ್ ಕರೆಗಳನ್ನು ಸ್ವಯಂಚಾಲಿತವಾಗಿ ಸೈಲೆಂಟ್ ಮಾಡುವ ಹೊಸ ಫೀಚರನ್ನು ವಾಟ್ಸಾಪ್ ಬಿಡುಗಡೆ ಮಾಡಿದೆ. ಇದಕ್ಕಾಗಿ ವಾಟ್ಸಾಪ್ ಸೆಟ್ಟಿಂಗ್ನಲ್ಲಿ ಸೈಲೆಂಟ್ ಅನ್ನೋನ್ ನಂಬರ್ಸ್ ಆಯ್ಕೆಯನ್ನು ಎನೇಬಲ್ ಮಾಡಿದರೆ ಸಾಕು. ಗೊತ್ತಿಲ್ಲದ ನಂಬರ್ಗಳಿಂದ ಬರುವ ಕರೆಗಳನ್ನು ವಾಟ್ಸಾಪ್ ಸೈಲೆಂಟ್ ಮಾಡಲಿದೆ. ಈ ಹೊಸ ಫೀಚರನ್ನು ಮಂಗಳವಾರ ಘೋಷಿಸಿದ ಮೆಟಾ ಸಿಇಒ ಮಾರ್ಕ್ ಜ್ಯೂಕರ್ ಬಗ್ರ್, ಈಗ ವಾಟ್ಸಾಪ್ ಅನ್ನೋನ್ ಕಾಲ್ಗಳನ್ನು ಸೈಲೆಂಟ್ ಮಾಡಲಿದೆ.ಆಯಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರು ಈಗ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಇಷ್ಟಕ್ಕೇ ವ್ಯಾಟ್ಸ್ಆಯಪ್ ಹೊಸ ಫೀಚರ್ ಕತೆ ಮುಗಿದಿಲ್ಲ. ಇದೀಗ ವ್ಯಾಟ್ಸ್ಆಯಪ್ ಚಾಟ್ ಟ್ರಾನ್ಸ್ಫರ್ ಆಯ್ಕೆಯನ್ನು ನೀಡಿದೆ. ಒಂದು ಫೋನ್ನಿಂದ ಮತ್ತೊಂದು ಫೋನ್ಗೆ ವ್ಯಾಟ್ಸ್ಆಯಪ್ನ ಚಾಟ್ಗಳನ್ನು ಯಾವುದೇ ಅಡೆ ತಡೆ ಇಲ್ಲದೆ ಟ್ರಾನ್ಸ್ಫರ್ ಮಾಡಲು ಈ ಫೀಚರ್ನಿಂದ ಸಾಧ್ಯವಿದೆ. ಹಳೇ ಫೋನ್ನಿಂದ ಹೊಸ ಫೋನ್ಗೆ ಚಾಟ್ ಟ್ರಾನ್ಸ್ಫರ್ ಸುಲಭವಾಗಿ ಮಾಡಲು ಸಾಧ್ಯವಿದೆ. ಹೊಸ ಫೀಚರ್ನಿಂದ ಐಫೋನ್ಗೂ ಚಾಟ್ ಟ್ರಾನ್ಸ್ಫರ್ ಮಾಡಲು ಸಾಧ್ಯವಿದೆ. ಇದರ ಜೊತೆಗೆ ವ್ಯಾಟ್ಸ್ಆಯಪ್ ಹೊಸ ಹೊಸ ಸ್ಟಿಕ್ಕರ್ ಬಿಡುಗಡೆ ಮಾಡಿದೆ
Posted by Vidyamaana on 2023-11-11 08:25:04 |
ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಆಯ್ಕೆಗೊಂಡಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ವಿಡಂಬನೆಯಿಂದ ಕೂಡಿದ ಆ ಪ್ರತಿಕ್ರಿಯೆ ನಾಡಿನ ಗಮನ ಸೆಳೆದಿದೆ.ಯಡಿಯೂರಪ್ಪನವರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ‘ಯಡಿಯೂರಪ್ಪನವರ ಮಗ’ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್ನ ಸೋಷಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದೆ.
ಮಾತ್ರವಲ್ಲ, ‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿಯೂ ಹೇಳಿಕೊಂಡಿದೆ.ಕಾಂಗ್ರೆಸ್ನ ಪ್ರತಿಕ್ರಿಯೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.
Posted by Vidyamaana on 2023-07-01 10:00:17 |
ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಶನಿವಾರ ಮಧ್ಯಾಹ್ನ ವರದಿಯಾಗಿದೆ.
ಮಂಜೇಶ್ವರ ಮಜಿ ಬೈಲ್ ನಿವಾಸಿ ಖಾದರ್ ಮತ್ತು ಮೊಗ್ರಾಲ್ ಕೊಪ್ಪಳ ಮೂಲದ ನಸೀಮಾ ದಂಪತಿ ಮಕ್ಕಳಾದ ನವಾಝ್ ರಹ್ಮಾನ್(22) ಮತ್ತು ನಾದಿಲ್ (17) ಮೃತಪಟ್ಟ ಸಹೋದರರು.
ಸ್ಥಳೀಯರು ಇಬ್ಬರನ್ನು ಮೇಲಕ್ಕೆತ್ತಿ ಅಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.ಈದ್ ಆಚರಣೆಗೆಂದು ಅಜ್ಜಿ ಮನೆಗೆ ಬಂದಿದ್ದ ಸಹೋದರರಿಬ್ಬರು ಸ್ನಾನ ಮಾಡಲು ಕೆರೆಗೆ ಹೋಗಿದ್ದು, ದುರಂತ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತ ದೇಹವನ್ನು ಮಂಗಲ್ಪಾಡಿ ಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ
Posted by Vidyamaana on 2023-10-01 09:35:46 |
ಉದಯಭಾಗ್ಯ ಹೋಟಲ್ ಮಾಲಕ ಸುರೇಶ್ ಪ್ರಭು ನಿಧನ
ಪುತ್ತೂರು: ಇಲ್ಲಿನ ಪುರುಷರಕಟ್ಟೆ ಉದಯಭಾಗ್ಯ ಹೊಟೇಲ್ ಮಾಲಕ ಸುರೇಶ್ ಪ್ರಭು (72) ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಪುತ್ತೂರಿನ ಹೊಟೇಲ್ ಉದ್ಯಮಗಳ ಪೈಕಿ ಉದಯಭಾಗ್ಯ ಹೋಟೆಲ್ ಕೂಡ ಒಂದು. ಸುರೇಶ್ ಪ್ರಭು ಉದ್ಯಮದ ಜೊತೆಗೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.
ಪತ್ನಿ, ಒಂದು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2023-10-22 21:10:36 |
ಈ ಜಗತ್ತನ್ನು ತೊರೆದ ತನ್ನ ಹೆಂಡತಿಯನ್ನು ನೆನಪಿಟ್ಟುಕೊಳ್ಳಲು ಈ ಪತಿ ಆಕೆ ಜೀವಂತ ಇದ್ದಾಗ ಬಳಸುತ್ತಿದ್ದ ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸುವ ವಿಧಾನವನ್ನು ಅಳವಡಿಸಿಕೊಂಡ!!! ರಿಪ್ಲೆ ಬರಲ್ಲ ಅಂತ ಗೊತ್ತಿದ್ದೂ ಕಳಿಸುತ್ತಿದ್ದ, ಆದರೆ ಕೊನೆಗೂ ಒಂದು ದಿನ ಆತ ಆ ಸಂದೇಶಗಳಿಗೆ ಉತ್ತರವನ್ನು ಪಡೆದೇಬಿಟ್ಟ! ಪ್ರೀತಿಪಾತ್ರರ ಸಾವಿನ ಆಘಾತವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ. ಅನೇಕ ಜನರು ಅದನ್ನು ಮರೆಯಲು ವರ್ಷಗಳನ್ನು ತೆಗೆದುಕೊಳ್ಳುತ್ತಾರೆ.
ಅದೇ ರೀತಿ ಬ್ರಿಟನ್ನಿನ ಈ ವ್ಯಕ್ತಿ ಹೆಂಡತಿಯ ಮರಣದ ನಂತರ ತುಂಬಾ ದುಃಖಿತನಾದನು, ಹೆಂಡತಿ ಇನ್ನು ಮುಂದೆ ಈ ಜಗತ್ತಿನಲ್ಲಿ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆತನಿಗೆ ಆಗಲೇ ಇಲ್ಲ. ತನ್ನ ಹೆಂಡತಿಯ ನೆನಪಿಗಾಗಿ ಅವನು ಅವಳ ಮೊಬೈಲ್ ಸಂಖ್ಯೆಗೆ ಸಂದೇಶಗಳನ್ನು ಕಳುಹಿಸತೊಡಗಿದನು. ವರ್ಷಗಳ ಕಾಲ ಕಳಿಸಿದರೂ ಯಾವುದೇ ರಿಪ್ಲೆ ಬರಲಿಲ್ಲ, ಬರುವುದಾದರೂ ಹೇಗೆ!
ಆದರೆ ಒಂದು ದಿನ ಅವರು ತಮ್ಮ ಹೆಂಡತಿಯ ಸಂಖ್ಯೆಯಿಂದ ರಿಪ್ಲೆ ಪಡೆದರು ಮತ್ತು ಆ ವ್ಯಕ್ತಿಗೆ ಶಾಕ್ ಆಯಿತು! ಈ ವ್ಯಕ್ತಿ ತನ್ನ ಹೆಂಡತಿಯನ್ನು ನೆನಪಿಟ್ಟುಕೊಳ್ಳುವ ಮಾರ್ಗವೆಂದರೆ, ಪ್ರತಿವರ್ಷ ತಾಯಂದಿರ ದಿನದಂದು ಅವನು ತನ್ನ ಹೆಂಡತಿಯ ಸಂಖ್ಯೆಗೆ "ಹ್ಯಾಪಿ ಮದರ್ಸ್ ಡೇ" ಸಂದೇಶವನ್ನು ಕಳುಹಿಸುತ್ತಿದ್ದನು.
ಆರಂಭದಲ್ಲಿ ಕೆಲವು ವರ್ಷ ಯಾವುದೇ ಉತ್ತರವನ್ನು ಪಡೆಯಲಿಲ್ಲ, ನಂತರ ಒಂದು ದಿನ ಅವರು ಆ ಸಂಖ್ಯೆಯಿಂದ ಉತ್ತರವನ್ನು ಪಡೆದರು. ಈ ಘಟನೆ ಅವನಿಗೆ ಆಶ್ಚರ್ಯವನ್ನುಂಟು ಮಾಡಿತು. ತನ್ನ ತೀರಿ ಹೋದ ಹೆಂಡತಿಯೇ ರಿಪ್ಲೆ ಮಾಡಿದಷ್ಟು ಖುಷಿಯಾಯಿತು.
ತಾಯಿಯ ದಿನದಂದು ಒಂದು ಮುದ್ದಾದ ಸಂದೇಶವನ್ನು ಸ್ವೀಕರಿಸಿದ ನಂತರ ತನ್ನ ಹೆಂಡತಿಯ ಸಂಖ್ಯೆಯಿಂದ ರಿಪ್ಲೆ ಬಂತು, ಅದು “ನೀವು ಯಾರು?” ಎಂಬುದಾಗಿತ್ತು. ಅದು ಆ ವ್ಯಕ್ತಿಗೆ ಸ್ವಲ್ಪ ಆಘಾತಕಾರಿಯಾಗಿತ್ತಾದರೂ, ಮೊದಲ ಬಾರಿಗೆ ಯಾರಾದರೂ ನನ್ನ ಸಂದೇಶಕ್ಕೆ ಉತ್ತರವನ್ನು ಕಳುಹಿಸಿದ್ದಾರಲ್ಲ ಎಂದು ಖುಷಿಯಾಯಿತು. ವಾಸ್ತವದಲ್ಲಿ ಅವರ ಸಂಖ್ಯೆಯನ್ನು ಬೇರೆಯವರಿಗೆ ಅಲಾಟ್ ಮಾಡಲಾಗಿತ್ತು, ಅವರೇ ರಿಪ್ಲೆ ಮಾಡಿದ್ದರು.ತಕ್ಷಣ ಆತ ಅವರಿಗೆ ರಿಪ್ಲೆ ಮಾಡಿದ “ಕ್ಷಮಿಸಿ, ಇದು ನನ್ನ ದಿವಂಗತ ಪತ್ನಿಯ ಸಂಖ್ಯೆ, ಅವಳ ನೆನಪಿಗಾಗಿ ನಾನು ಸಂದೇಶ ಕಳಿಸುತ್ತಿದ್ದೆ, ಯಾರೂ ರಿಪ್ಲೆ ಮಾಡಲ್ಲ ಅಂದುಕೊಂಡಿದ್ದೆ, ಕ್ಷಮಿಸಿ, ನಾನು ಇನ್ನು ಮುಂದೆ ಸಂದೇಶ ಕಳಿಸುವುದಿಲ್ಲ, ದೇವರು ನಿಮಗೆ ಒಳ್ಳೆದು ಮಾಡಲಿ” ಎಂಬರ್ಥದಲ್ಲಿ ಉತ್ತರಿಸಿದ.
ಸೋಶಿಯಲ್ ಮೀಡಿಯಾದಲ್ಲಿ ಜನರ ಭಾವುಕರಾದರು :
ಈ ಕಥೆಯನ್ನು ರೆಡ್ಡಿಟ್ ನಲ್ಲಿ ಓದಿದ ನಂತರ ಜನರು ಬಗ್ಗೆ ಸಾಕಷ್ಟು ಪ್ರತಿಕ್ರಿಯಿಸಿದ್ದಾರೆ. ತನ್ನ ಸೋದರ ಸಂಬಂಧಿಯ ಮರಣದ ನಂತರ ಅವನು ಸ್ವತಃ ಅದೇ ರೀತಿ ಮಾಡುತ್ತಿದ್ದನು ಎಂದು ಯಾರೋ ಬರೆದಿದ್ದಾರೆ, ಅವರು ತುಂಬಾ ಕೆಟ್ಟ ರಿಪ್ಲೆ ಪಡೆದಿದ್ದರು. ಅನೇಕ ಜನರು ತಮ್ಮ ಕಥೆಯನ್ನು ಹಂಚಿಕೊಂಡರು ಮತ್ತು ಅವರು ಅದೇ ರೀತಿ ಮಾಡುತ್ತಿದ್ದರಂತೆ.