Posted by vidyamaana on 2024-06-29 08:45:20 | Last Updated by Vidyamaana on 2024-06-29 08:45:20
ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು
Posted by Vidyamaana on 2024-03-05 19:50:49 |
ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.
ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ
Posted by Vidyamaana on 2023-08-26 15:44:32 |
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಫೇಸ್ಬುಕ್ ಅಕೌಂಟ್ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್ ಮಾಡಿ ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ಕುಮಾರಸ್ವಾಮಿ ಫೇಸ್ಬುಕ್ ಅಕೌಂಟ್ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್ ಮಾಡಿದ್ದಾರೆ. ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ ಹೆಚ್.ಡಿ.ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ತಂಡ, ಬಳಿಕ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಆಗಿದ್ದ ಅಶ್ಲೀಲ ಚಿತ್ರಗಳನ್ನು ಡಿಲೀಟ್ ಮಾಡಿದೆ ಎಂದು ತಿಳಿದುಬಂದಿದೆ.
Posted by Vidyamaana on 2024-02-09 17:29:46 |
ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾದ ಕುಟುಂಬಕ್ಕೆ ಪುತ್ತಿಲ ಪರಿವಾರ ಸಹಾಯಹಸ್ತ ನೀಡಿದೆ.
ಪಡೀಲು ನಾರಾಯಣ ನಾಯ್ಕ್ ಮತ್ತು ಶಿವಪ್ರಸಾದ್ ನಾಯ್ಕ್ ಎಂಬವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾಗಿದೆ.ಅವಘಡ ನಡೆದ ದಿನದಂದೆ ಅರುಣ್ ಕುಮಾರ್ ಪುತ್ತಿಲ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿದ್ದರು.
ಫೆ.9 ರಂದು ಅವರ ಮನೆಗೆ ಭೇಟಿ ನೀಡಿ ಸಹಾಯಹಸ್ತ ನೀಡಿದರು.ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ,ಚಂದ್ರಹಾಸ ಶೆಟ್ಟಿ ಆನೆಮಜಲು,ಸತೀಶ್ ಭಂಡಾರಿ,ಪ್ರವೀಣ್ ಭಂಡಾರಿ, ಮನೀಶ್ ಕುಲಾಲ್, ಶರತ್ ರೈ ಸ್ಥಳಿಯರಾದ ಚಂದ್ರಹಾಸ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Posted by Vidyamaana on 2024-03-02 04:26:28 |
ಪುತ್ತೂರು : ಇಲ್ಲಿನ ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಅದರೆ ಘಟನೆಯಿಂದ ತೀವ್ರ ನಷ್ಟವಾಗಿದೆ.
Posted by Vidyamaana on 2024-06-20 20:32:19 |
ಮಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭ ವರ್ಗಾವಣೆಗೊಂಡಿದ್ದ ಎಸ್ಸೈಗಳನ್ನು ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮತ್ತೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಆಂಜನೇಯ ರೆಡ್ಡಿ ಪುತ್ತೂರು ಠಾಣೆಗೆ, ಉದಯರವಿ ವೈ.ಎಂ. ಪುತ್ತೂರು ಸಂಚಾರ ಠಾಣೆಗೆ, ನಂದಕುಮಾರ್ ಎಂ. ಪುಂಜಾಲಕಟ್ಟೆ ಠಾಣೆಗೆ, ಸಂಜೀವ ಕೆ.ಬಂಟ್ವಾಳ ಸಂಚಾರ ಠಾಣೆಗೆ, ಸೇಸಮ್ಮ ಕೆ.ಎಸ್. ಪುತ್ತೂರು ನಗರ ಠಾಣೆಗೆ, ಕುಟ್ಟಿ ಮೇರ ಪುತ್ತೂರು ಸಂಚಾರ ಠಾಣೆಗೆ, ಎನ್.ಕೆ. ಓಮನ ಪುಂಜಾಲಕಟ್ಟೆ ಠಾಣೆಗೆ, ರುಕ್ಮ ನಾಯ್ಕ್ ಉಪ್ಪಿನಂಗಡಿ ಠಾಣೆಗೆ, ಭಾರತಿ ಬಂಟ್ವಾಳ ಗ್ರಾಮಾಂತರ ಠಾಣೆಗೆ, ಲೋಲಾಕ್ಷ ಕೆ. ಬಂಟ್ವಾಳ ಗ್ರಾಮಾಂತರ ಠಾಣೆಗೆ, ಕಲೈಮಾರ್ ಬಂಟ್ವಾಳ ನಗರ ಠಾಣೆಗೆ, ರತ್ನಕುಮಾರ್ ಎಂ. ವಿಟ್ಲಕ್ಕೆ, ಕೃಷ್ಣ ಬಿ.
Posted by Vidyamaana on 2023-10-04 20:58:11 |
ಬೆಂಗಳೂರು: ಶಿವಮೊಗ್ಗ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಬಿಜೆಪಿಯು ಪಕ್ಷದ ಹಿರಿಯ ಮುಖಂಡರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಗುರುವಾರ ಶಿವಮೊಗ್ಗದ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತಂಡ ಭೇಟಿ ನೀಡಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಸಿ.ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಆರಗ ಜನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂ.ಎಲ್.ಸಿ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ಎಂಎಲ್ಸಿಗಳಾದ ಎಸ್.ರುದ್ರೇಗೌಡ, ಡಿ ಎಸ್ ಅರುಣ್ ಮತ್ತು ಭಾರತಿ ಶೆಟ್ಟಿ ತಂಡದಲ್ಲಿದ್ದಾರೆ