ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ನಮ್ಮಲ್ಲಿ ಚುನಾವಣೇ ಮುಗ್ದಿದೆ ಆದ್ರೆ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ

Posted by Vidyamaana on 2024-05-01 17:00:31 |

Share: | | | | |


ನಮ್ಮಲ್ಲಿ ಚುನಾವಣೇ ಮುಗ್ದಿದೆ ಆದ್ರೆ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ

ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಪ್ರಕ್ರಿಯೆ ಮುಕ್ತಾಯಗೊಂಡಿದ್ದರೂ ಕೆಲವೊಂದು ಕಾರ್ಯಕ್ರಮಗಳಲ್ಲಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ. ರಾಜಕೀಯ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ ತಿಳಿಸಿದ್ದಾರೆ.

ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿದ ಸಹಾಯಕ ಕಮೀಷನರ್ ಕೋರ್ಟು ಸಭಾಂಗಣದಲ್ಲಿ ಮಧ್ಯಮಗಳಿಗೆ ಮಾಹಿತಿ ನೀಡಿದರು. 

ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.

ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ಭಾಗ್ಯ ವಿಧಾತ ಭಾಗ್ಯೇಶ್ ರೈ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

Posted by Vidyamaana on 2023-09-10 20:44:50 |

Share: | | | | |


ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ಭಾಗ್ಯ ವಿಧಾತ ಭಾಗ್ಯೇಶ್ ರೈ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಬೆಂಗಳೂರು : ಪುತ್ತೂರಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಾಕಾಂಕ್ಷಿಗಳ ಪಾಲಿಗೆ ಭರವಸೆಯ ಆಶಾಕಿರಣವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಸ್ಥಾಪಕರಾಗಿರುವ ಭಾಗ್ಯೇಶ್ ರೈ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಲಭಿಸಿದೆ.

‘ಜನಸಿರಿ ಫೌಂಡೇಶನ್’ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಯನ್ನು ನಗರದ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಭಾಗ್ಯೇಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.

ಹಕ್ಕಿ-ಪಿಕ್ಕಿ ಸೇರಿದಂತೆ ನಾನಾ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ವಹಿಸಿದ್ದ ಶ್ರಮ, ಸಮಾನ ಶಿಕ್ಷಣ ನೀತಿ ಜಾರಿಗೆ ಬರಬೇಕೆಂಬ ಹೋರಾಟಗಳಲ್ಲಿ ಭಾಗವಹಿಸಿದ್ದಕ್ಕೆ, ವಿದ್ಯಾಮಾತ ಸಂಸ್ಥೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳಗಳ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿರುವುದು, ವಿದ್ಯಾಮಾತಾ ಅಕಾಡೆಮಿಯ ಮೂಲಕ ನೂರಾರು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವಂತೆ ಮಾಡಿ ಸರಕಾರಿ ಉದ್ಯೋಗ ದೊರಕುವಂತೆ ಮಾಡಿದ್ದು, ಅಗ್ನಿಪಥ್ ಯೋಜನೆಯ ಮೂಲಕ 18 ಯುವಕರು ದೇಶ ಸೇವೆ ಮಾಡಲು, ಸೈನ್ಯಕ್ಕೆ ಸೇರಲು ಕಾರಣಕರ್ತರಾಗಿರುವುದು, ಹಲವಾರು ಸರಕಾರಿ ಶಾಲೆಗಳಿಗೆ ವಿದ್ಯಾಮಾತಾದ ಹಲವಾರು ಯೋಜನೆಗಳ ಮೂಲಕ ಸಹಾಯ ಮಾಡುತ್ತಿರುವುದು.. ಸೇರಿದಂತೆ ವಿದ್ಯಾಮಾತಾ ಅಕಾಡೆಮಿಯ ಬಹುಮುಖಿ ಶಿಕ್ಷಣ ಸೇವೆಗಳನ್ನು ಗುರುತಿಸಿ ಪ್ರಶಸ್ತಿಯ ಆಯ್ಕೆ ಸಮಿತಿಯು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಭಾಗ್ಯೇಶ್ ರೈ ಅವರನ್ನು ಆಯ್ಕೆ ಮಾಡಿದೆ.

ಕಾರ್ಯಕ್ರಮದಲ್ಲಿ ಕಾಲಜ್ಞಾನ ಮಠ ಗಜೇಂದ್ರಗಡದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಜ್ಞಾನ ಕಾಲಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು, ಶ್ರೀ ಬೇಲಿ ಮಠ ಮಹಾಸಂಸ್ಥಾನ ಕಾಟನ್ ಪೇಟೆ ಬೆಂಗಳೂರು ಇದರ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ ರಾಮೋಹಳ್ಳಿ ಬೆಂಗಳೂರಿನ ಡಾ. ಆರೂಢ ಭಾರತಿ ಸ್ವಾಮೀಜಿಯವರ ಸಾನಿಧ್ಯದಲ್ಲಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಕೆ ಶಿವರಾಮು, ಕರ್ನಾಟಕ ರಾಜ್ಯ ಪದವೀಧರ ವೇದಿಕೆಯ ರಾಮೋಜಿ ಗೌಡ, ನಾಡಿನ ಹಿರಿಯ ಖ್ಯಾತ ಕವಿಗಳಾದ ಬಿ ಆರ್ ಲಕ್ಷ್ಮಣ ರಾವ್ ಸೇರಿದಂತೆ ಹಲವಾರು ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಭಾಗ್ಯೇಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.

ಮಂಗಳೂರು ಜೆರೋಸಾ ಶಾಲೆ ಪ್ರಕರಣ; ತನಿಖಾಧಿಕಾರಿ ನೇಮಕ: ದಿನೇಶ್ ಗುಂಡೂರಾವ್

Posted by Vidyamaana on 2024-02-17 21:50:33 |

Share: | | | | |


ಮಂಗಳೂರು ಜೆರೋಸಾ ಶಾಲೆ ಪ್ರಕರಣ; ತನಿಖಾಧಿಕಾರಿ ನೇಮಕ: ದಿನೇಶ್ ಗುಂಡೂರಾವ್

ಮಂಗಳೂರು: ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಕೇಳಿಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. IAS ಅಧಿಕಾರಿ ಡಾ.ಎಸ್.ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.

ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಿಷೇಧ ರಾಜ್ಯ ಸರಕಾರದ ಮಹತ್ವದ ಆದೇಶಕ್ಕೆ ಇದುವೇ ಕಾರಣ...!

Posted by Vidyamaana on 2023-03-14 09:32:15 |

Share: | | | | |


ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಿಷೇಧ  ರಾಜ್ಯ ಸರಕಾರದ ಮಹತ್ವದ ಆದೇಶಕ್ಕೆ ಇದುವೇ ಕಾರಣ...!

ಬಂಟ್ವಾಳ: ಮಹತ್ವದ ಬೆಳವಣಿಗೆಯಲ್ಲಿ ಐತಿಹಾಸಿಕ ಖ್ಯಾತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಲಿನ ೨ ಕಿ.ಮೀ. ಪರಿಸರದಲ್ಲಿ ಯಾವುದೇ ಗಣಿಗಾರಿಕೆ ಅಥವಾ ಕ್ರಷರ್ ಗಣಿಗಾರಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶಿಸಿದೆ.

ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲಿನ ೨ ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳಿಗೆ ಕಾಯ್ದಿರಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಸುತ್ತಲಿನ ೨ ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮಾಡುವಂತಿಲ್ಲ ಎಂದು ಆದೆಶದಲ್ಲಿ ತಿಳಿಸಲಾಗಿದೆ‌.

ಕಳೆದ ಕೆಲ ವರ್ಷಗಳಿಂದ ಈ ಭಾಗದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದಾಗಿ ಧಾರ್ಮಿಕ ಹಾಗೂ ಐತಿಹಾಸಿಕ ಪ್ರಾಧಾನ್ಯತೆ ಹೊಂದಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನ ಅಪಾಯವನ್ನು ಎದುರು ನೋಡುವಂತಾಗಿತ್ತು. ಆದ್ದರಿಂದ ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಪ್ರಬಲ ವಿರೋಧವನ್ನು ವ್ಯಕ್ತಪಡಿಸಿತ್ತು. ಹಿಂದೂ‌ ಪರ ಸಂಘಟ‌ನೆಗಳು ಹಾಗೂ ಭಕ್ತರು ಹೋರಾಟಕ್ಕೆ ಸಾಥ್ ನೀಡಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಮಸ್ಯೆಯ ಗಂಭೀರತೆ ಅರಿತು, ರಾಜ್ಯ ಸರಕಾರದಿಂದ ಆದೇಶ ಹೊರಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದೀಗ ರಾಜ್ಯ ಸರ್ಕಾರದ ಆದೇಶ ಸ್ಥಳೀಯರಿಗೆ ನಿರಾಳತೆಯನ್ನು ನೀಡಿದೆ.

ಮೂರು ಪಿಕಪ್ ನಲ್ಲಿತ್ತು ಎಂಟು ದನಗಳು -ಬಿಜೆಪಿ ಮುಖಂಡರಿಗೆ ಸೇರಿದ ವಾಹನದಲ್ಲಿ ಅಕ್ರಮ ಗೋಸಾಗಾಟ

Posted by Vidyamaana on 2023-07-13 16:08:30 |

Share: | | | | |


ಮೂರು ಪಿಕಪ್ ನಲ್ಲಿತ್ತು ಎಂಟು ದನಗಳು -ಬಿಜೆಪಿ ಮುಖಂಡರಿಗೆ ಸೇರಿದ ವಾಹನದಲ್ಲಿ ಅಕ್ರಮ ಗೋಸಾಗಾಟ

ಬೆಳ್ತಂಗಡಿ : ಅಕ್ರಮವಾಗಿ ಮೂರು ವಾಹನಗಳಲ್ಲಿ ಹಿಂಸ್ಮಾಕ ರೀತಿಯಲ್ಲಿ ಏಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.


*ಪ್ರಕರಣದ ಸಾರಾಂಶ:* ಜುಲೈ 12 ರಂದು ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕನಾದ ಅನೀಲಕುಮಾರ್‌ ಡಿ  ರವರಿಗೆ ಸಿಕ್ಕಿದ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ಸುಮಾರು 8:45 ಗಂಟೆಗೆ ಉಜಿರೆ  ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್‌ ವಾಹನಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ರಮಾನಂದ ಸಾಲ್ಯಾನ್‌ ಸೇರಿದ ಪಿಕಪ್ ವಾಹನ KA-21B-7389 ಮತ್ತು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್ ಸೇರಿದ ಪಿಕಪ್ ವಾಹನ KA-70-0312 ಹಾಗೂ ಕೃಷ್ಣ ಎಂಬವರಿಗೆ ಸೇರಿದ  KA670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಸದ್ರಿ ವಾಹನದಲ್ಲಿ ಕಪ್ಪು ಮತ್ತು ಕಂದು ಬಣ್ಣದ  ದನ -3, ಬಿಳಿ ಬಣ್ಣದಲ್ಲಿ ಕಂದು ಮಿಶ್ರಿತ ಇರುವ ದನ-1 , ಕಂದು ಬಣ್ಣದ ದನ -2 , ಕಂದು ಬಣ್ಣದ 2 ಗಂಡು ಕರುಗಳು ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿದ್ದ 1ನೇ ಆರೋಪಿ ಚೆನ್ನಕೇಶವ ಎಂಬತನನ್ನು ವಿಚಾರಿಸಿದಲ್ಲಿ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಜಾನುವಾರುಗಳನ್ನು ಖರೀದಿಸಿ ಹಾಸನ ಕಡೆಗೆ ಮಾರಾಟ ಮಾಡಲು ಮೂರು ವಾಹನಗಳಲ್ಲಿ  ಹಿಂಸಾತ್ಮಕವಾಗಿ ಜಾನುವಾರುಗಳನ್ನು  

ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ ವಾಹನಗಳ ಸಹಿತ ಜಾನುವಾರುಗಳನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.


*ಬಂಧಿತ ಆರೋಪಿಗಳು:* 1) ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮರವಳಲು ನಿವಾಸಿ

ಬೇಲೂರಯ್ಯಮ ಮಗನಾದ ಚೆನ್ನಕೇಶವ(33) , 2)ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಒಳಗದ್ದೆ ನಿವಾಸಿ ಉಮೇಶ್ ಗೌಡರ ಮಗ ಪುಷ್ಪರಾಜ್(20) ,3) ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಆನಂದ ಬಂಗೇರ ಮಗನಾದ ಪ್ರಮೋದ್ ಸಾಲ್ಯಾನ್(49),

4) ಹೊಳೆನರಸೀಪುರ ತಾಲೂಕಿನ ಹಳೇಕೋಟೆ ನಿವಾಸಿ ವೀರಭದ್ರಯ್ಯ ಮಗನಾದ ಸಂದೀಪ್‌(27) ಬಂಧಿತ ಆರೋಪಿಗಳು.



*ವಶಪಡಿಸಿಕೊಂಡ ಸಾಮಗ್ರಿಗಳು:* ಜಾನುವಾರುಗಳ ಅಂದಾಜು ಮೌಲ್ಯ 65,000 ಸಾವಿರ ಹಾಗೂ ವಾಹನದ ಅಂದಾಜು ಮೌಲ್ಯ 7,00,000 ರೂಪಾಯಿ ಆಗಬಹುದು. ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ 7,65,000 ರೂಪಾಯಿ ಅಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 8,9,11 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಜೊತೆಗೆ ಕಲಂ:66 ಜೊತೆಗೆ 192(ಎ) ಐ ಎಂ ವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜ್ ಮಹಲ್ ಆವರಣದಲ್ಲಿ ರೀಲ್ : ಯುವತಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಯೋಧ Watch Video

Posted by Vidyamaana on 2024-04-07 13:42:45 |

Share: | | | | |


ತಾಜ್ ಮಹಲ್ ಆವರಣದಲ್ಲಿ ರೀಲ್ : ಯುವತಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಯೋಧ  Watch Video

ನವದೆಹಲಿ: ಆಗ್ರಾದ ತಾಜ್ ಮಹಲ್ನಲ್ಲಿ ಶನಿವಾರ ಸಿಐಎಸ್‌ಎಫ್ ಜವಾನ್ ಮತ್ತು ಮಹಿಳಾ ಪ್ರವಾಸಿಗರ ನಡುವೆ ಘರ್ಷಣೆ ಭುಗಿಲೆದ್ದಿದೆ.ವರದಿಗಳ ಪ್ರಕಾರ, ತಾಜ್ ಮಹಲ್ ಆವರಣದಲ್ಲಿ ರೀಲ್ ಚಿತ್ರೀಕರಿಸುವ ಬಗ್ಗೆ ವಾಗ್ವಾದದ ನಂತರ ಜಗಳ ಪ್ರಾರಂಭವಾಯಿತು. ಈ ಘಟನೆಯ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಮತ್ತು ಪ್ರಸ್ತುತ ವೈರಲ್ ಆಗುತ್ತಿದೆ.



Leave a Comment: