ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

Posted by Vidyamaana on 2023-01-18 08:17:32 |

Share: | | | | |


ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿ ನಡುವಿನ ಚತುಷ್ಪಥ ಕಾಮಗಾರಿಗೆ ವೇಗ

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ.

ಬಿಗ್ BREAKING NEWS: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ

Posted by Vidyamaana on 2024-03-09 21:11:55 |

Share: | | | | |


ಬಿಗ್ BREAKING NEWS: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದರು ಮತ್ತು ಅಧ್ಯಕ್ಷ ದ್ರೌಪದಿ ಮುರ್ಮು ಅವರ ರಾಜೀನಾಮೆಯನ್ನು ಅಂಗೀಕರಿಸಿದರು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ, 2023 ರ ಸೆಕ್ಷನ್ 11 ರ ಷರತ್ತು (1) ಕ್ಕೆ ಅನುಸಾರವಾಗಿ, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ಸಲ್ಲಿಸಿದ ರಾಜೀನಾಮೆಯನ್ನು 2024 ರ ಮಾರ್ಚ್ 09 ರಿಂದ ಜಾರಿಗೆ ಬರುವಂತೆ ಸ್ವೀಕರಿಸಲು ರಾಷ್ಟ್ರಪತಿಗಳು ಸಂತೋಷಪಡುತ್ತಾರೆ" ಎಂದು ಶನಿವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಗೋಯೆಲ್ ಅವರು ನವೆಂಬರ್ 21, 2022 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.


1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅರುಣ್ ಗೋಯಲ್ ಈ ಹಿಂದೆ ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಸೋರಿಕೆ ಪ್ರಕರಣ

Posted by Vidyamaana on 2023-10-29 17:18:52 |

Share: | | | | |


ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಸೋರಿಕೆ ಪ್ರಕರಣ

ಮಂಗಳೂರು, ಅ.29: ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನಕಲಿ ಮಾಡಿಸಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮೂವರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.‌


ದೀಪಕ್ ಕುಮಾರ್ ಹೆಂಬ್ರಮ್ (33), ವಿವೇಕ್ ಕುಮಾರ್ ಬಿಶ್ವಾಸ್ (24) ಮತ್ತು ಮದನ್ ಕುಮಾರ್ (24) ಬಂಧಿತರು. ಇವರನ್ನು ಬಿಹಾರ ರಾಜ್ಯದ ಪೂರ್ನಿಯಾ ಜಿಲ್ಲೆಯಿಂದ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆಯಂತೆ ಸೈಬರ್ ಅಪರಾಧ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಿಹಾರದಲ್ಲಿ ಅಡಗಿಕೊಂಡಿದ್ದ ಮೂವರನ್ನು ಬಂಧಿಸಿ ಕರೆತಂದಿದ್ದಾರೆ.‌


ಆರೋಪಿಗಳಿಗೆ ಸಂಬಂಧಪಟ್ಟ ಹತ್ತು ಬ್ಯಾಂಕ್ ಖಾತೆಗಳಿಂದ 3,60,242 ರುಪಾಯಿಗಳನ್ನು ಸೀಜ್ ಮಾಡಲಾಗಿದೆ. ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ತಾಂತ್ರಿಕ ಸಾಕ್ಷ್ಯಗಳ ತನಿಖೆ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿ ಒಂದು ಸಾವಿರಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿ ಪ್ರತಿಗಳನ್ನು ಹಾಗೂ ಆಂಧ್ರಪ್ರದೇಶ ಸೇರಿ ಇತರ ರಾಜ್ಯಗಳಿಗೆ ಸಂಬಂಧಪಟ್ಟ 300 ಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಮಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ವೆಬ್ ಸೈಟ್ ನಿಂದ ಹ್ಯಾಕ್ ಮಾಡಿ, ಗ್ರಾಹಕರ ಆಧಾರ್ ಮಾಹಿತಿಗಳನ್ನು ಸಂಗ್ರಹಿಸಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಂಡಿದ್ದರು.


ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು. ವಿಶೇಷ ತನಿಖೆಗಾಗಿ ಸಾರ್ವಜನಿಕರ ಒತ್ತಾಯ ಕೇಳಿಬರುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದರು. ಇತ್ತೀಚೆಗೆ ಎಎಸ್ಐ ಒಬ್ಬರ ಖಾತೆಯಿಂದಲೂ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಮಾಹಿತಿ ಸೋರಿಕೆಯಾಗಿ ಹಣ ಕಳೆದುಹೋಗಿತ್ತು. ಇದೇ ರೀತಿಯ ಅಕ್ರಮ ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವು ಕಡೆ ಆಗಿದ್ದು ಪ್ರಕರಣ ದಾಖಲಾಗಿತ್ತು.

ಚಿಕ್ಕಪುತ್ತೂರು ಶೇಖ್ ಅಬ್ದುಲ್ ಸತ್ತಾರ್ ನಿಧನ

Posted by Vidyamaana on 2024-06-24 18:06:25 |

Share: | | | | |


ಚಿಕ್ಕಪುತ್ತೂರು ಶೇಖ್ ಅಬ್ದುಲ್ ಸತ್ತಾರ್  ನಿಧನ

ಪುತ್ತೂರು :- ಇಲ್ಲಿನ ಚಿಕ್ಕಪುತ್ತೂರು ರೈಲ್ವೆ ನಿಲ್ದಾಣ  ನಿವಾಸಿ  ಚಿಕ್ಕಪುತ್ತೂರು ಹಸನ್ ಸಾಹೇಬ್ ರವರ ಪುತ್ರ ಕೂಲಿ ಕೆಲಸ ಜೊತೆಗೆ ಗೋಳಿಕಟ್ಟೆ ಮೊಹ್ಯಿಯ್ಯದ್ದೀನ್ ಜುಮಾ ಮಸೀದಿಯ ಖಬರ್ ತೋಡುವ ಕೆಲಸ ನಿರ್ವಹಿಸುತ್ತಿದ್ದ  ಶೇಖ್ ಅಬ್ದುಲ್ ಸತ್ತಾರ್ (40) 

ಸುಳ್ಯ ಸಮಾವೇಶದಲ್ಲಿ ಸಚಿವರ ಮುಂದೆಯೇ ಸೋತ ಅಭ್ಯರ್ಥಿ ಕಿರಿಕ್

Posted by Vidyamaana on 2024-03-10 14:19:35 |

Share: | | | | |


ಸುಳ್ಯ ಸಮಾವೇಶದಲ್ಲಿ ಸಚಿವರ ಮುಂದೆಯೇ ಸೋತ ಅಭ್ಯರ್ಥಿ ಕಿರಿಕ್

ಸುಳ್ಯ : ಕಾರ್ಯಕ್ರಮದ ಕುರಿತು ತನಗೆ ಮಾಹಿತಿ ನೀಡಿಲ್ಲವೆಂದು ವಿಧಾನಸಭಾ ಪರಾಜಿತ ಅಭ್ಯರ್ಥಿ ಕೃಷ್ಣಪ್ಪ ಅವರು ಸಮಾವೇಶದ ಆರಂಭದಲ್ಲಿಯೇ ಕಿರಿಕ್ ಮಾಡಿದ ಪ್ರಸಂಗ ನಡೆಯಿತು.ಸಮಾವೇಶ ಆರಂಭಗೊಂಡು ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ ಸ್ವಾಗತ ಭಾಷಣ ಮಾಡುವ ಸಂದರ್ಭ ಎದುರು ಸಭಾಂಗಣದಲ್ಲಿ ಆಸೀನರಾಗಿದ್ದ ಕೃಷ್ಣಪ್ಪರವರು ಅಲ್ಲಿಂದಲೇ ಗಟ್ಟಿ ಧ್ವನಿಯಲ್ಲಿ ತನ್ನ ಅಸಹನೆ ವ್ಯಕ್ತಪಡಿಸುತ್ತಿದ್ದುದು ಕಂಡುಬಂತು. ಸ್ವಲ್ಪ ಹೊತ್ತಿನಲ್ಲಿ ಸೀದಾ ವೇದಿಕೆಗೆ ಹೋಗಿ ವಿಧಾನಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿಯವರಲ್ಲಿ ಮತ್ತು ಸಚಿವ ದಿನೇಶ್ ಗುಂಡೂರಾವ್ ರವರಲ್ಲಿ ತಾನು ಡಿಫೀಟೆಡ್ ಕ್ಯಾಂಡಿಡೇಟ್ ಅಲ್ವಾ? ನನಗೆ ಕಾರ್ಯಕ್ರಮದ ಬಗ್ಗೆ ಯಾಕೆ ಯಾವ ಮಾಹಿತಿಯನ್ನೂ ನೀಡಿಲ್ಲ ಎಂದು ಪ್ರಶ್ನಿಸತೊಡಗಿದರು. ಕಾರ್ಯಕ್ರಮ ಒಂದು ಕ್ಷಣ ಸ್ತಬ್ಧವಾಯಿತು. ಒಂದೆರಡು ನಿಮಿಷ ಈ ಹೈಡ್ರಾಮ ಮುಂದುವರಿಯಿತು. ಮಂಜುನಾಥ ಭಂಡಾರಿಯವರು ಅವರನ್ನು ಸಮಾಧಾನಪಡಿಸಿದರು. ಇತರ ಕೆಲವು ನಾಯಕರು ಕೂಡಾ ವೇದಿಕೆಗೆ ತೆರಳಿ ಪಕ್ಕದ ಕೊಠಡಿಗೆ ಅವರನ್ನು ಕರೆದೊಯ್ದರು. ಬಳಿಕ ಕಾರ್ಯಕ್ರಮ ಮುಂದುವರಿಯಿತು. ಸ್ವಲ್ಪ ಹೊತ್ತಿನಲ್ಲಿ ಕೃಷ್ಣಪ್ಪರವರು ಸಮಾವೇಶದ ಎದುರು ಬಂದು ಕುಳಿತರು

ಪುತ್ತೂರು ಪುಡಾ ಅಧ್ಯಕ್ಷ, ಸದಸ್ಯರ ಪದಗ್ರಹಣ ಕಚೇರಿ ಉದ್ಘಾಟನೆ

Posted by Vidyamaana on 2024-03-17 21:43:00 |

Share: | | | | |


ಪುತ್ತೂರು ಪುಡಾ ಅಧ್ಯಕ್ಷ, ಸದಸ್ಯರ ಪದಗ್ರಹಣ ಕಚೇರಿ ಉದ್ಘಾಟನೆ

ಪುತ್ತೂರು: ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾದ ರೈ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ್‌ನ ನಿಹಾಲ್‌ ಪಿ ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್‌, ನಗರಸಭೆ ಮಾಜಿ ಸದಸ್ಯ ಅನ್ವರ್‌ಕಾಸಿಂ ಅವರ ಅಧಿಕಾರ ಸ್ವೀಕಾರ ಮತ್ತು ಕಚೇರಿ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಪುತ್ತೂರು ಪುಡಾ ಕಚೇರಿಯಲ್ಲಿ ನಡೆಯಿತು. ನಗರಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಭಿಲಾಶ್ ಎಂ ಅವರು ನೂತನ ಅಧ್ಯಕ್ಷ, ಸದಸ್ಯರಿಗೆ ಅಧಿಕಾರ ಚಲಾವಣೆಯ ಕುರಿತು ದಾಖಲೆ ಪತ್ರಗಳಿಗೆ ಸಹಿ ಪಡೆದರು.ಕಚೇರಿಯ ದೀಪ ಪ್ರಜ್ವಲನೆ ಮಾಡಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪುಡಾದಲ್ಲಿ ಸರಕಾರ ಮತ್ತು ಕಾನೂನಿನ ತೊಡಕುಗಳಿವೆ ಅದರಲ್ಲೂ ಪುಡಾದಲ್ಲೂ ತೊಂದರೆ ಇದೆ. ಜನರು ಇಲ್ಲಿಗೆ ಬಂದು ಅಲೆದಾಡುವ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಪುಡಾದ ನೂತನ ಅಧ್ಯಕ್ಷ ಮತ್ತು ಸದಸ್ಯರು ಇಲ್ಲಿಗೆ ಯಾರು ಬಡವ ಬಂದರೂ ಅವರ ಸಮಸ್ಯೆಯನ್ನು ಎಡೆಂಡ್ ಮಾಡುವ ಕೆಲಸ ಆಗಬೇಕು. ಬೋಕರ್‌ಗಳಿಗೆ ಅವಕಾಶ ಕೊಡುವುದನ್ನು ಕಡಿಮೆ ಮಾಡಿ. ಭ್ರಷ್ಟಾಚಾರ ರಹಿತವಾಗಿ ಪುಡಾ ಕೆಲಸ ಮಾಡಬೇಕು. ಜನರಿಗೆ ಉತ್ತಮ ಸ್ಪಂದನೆ ಸಿಗಬೇಕು. ಸಮಸ್ಯೆಗಳಿಗೆ ಕಾನೂನಿನಲ್ಲಿ ಅದಕ್ಕೆ ಉಪ ಕಾನೂನು ಇದ್ದೇ ಇರುತ್ತದೆ. ಕೆಲವು ಕಡೆ ಕನ್ವರ್ಷನ್, ಖಾತೆ ಮಾಡಲು ದೊಡ್ಡ ಸಮಸ್ಯೆ, ಕಾನೂನ್ನು ಉಲ್ಲಂಘನೆ ಮಾಡಿ ಕೊಡಿ ಎಂದು ಹೇಳುವುದಿಲ್ಲ. ಯಾವುದೇ ರೀತಿಯ ಮನೆ ಕಟ್ಟಲು ತೊಂದರೆ ಆಗದಂತೆ ಕಾನೂನಿನ ಚೌಕಟಿನಲ್ಲಿ ನೋಡಿ. ಕೆಲವೊಂದು ವಿಚಾರಗಳಿಗೆ, ಸಮಸ್ಯೆಗಳಿಗೆ ಸಂಬಂಧಿಸಿ ಮೂಡಬಿದ್ರೆ, ಮಂಗಳೂರು ತರದ ಕಾನೂನನ್ನು ಪುತ್ತೂರಿಗೆ ಅನ್ವಯ ಮಾಡಬೇಕು. ಇದಕ್ಕೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿ. ಅದನ್ನು ಸರಕಾರದಿಂದ ಮಾಡಿ ಕೊಡಿಸುವ ಕೆಲಸ ಮಾಡುತ್ತೇನೆ. ಬಡವರಿಗೆ ಸ್ಪಂದನೆ ಮಾಡುವಾಗ ಒಂದು ನಿಮಿಷ ಹಿಂದೆ ಮುಂದೆ ನೋಡಬೇಡಿ ಎಂದರು

ಶಾಸಕರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ:

ಪುಡಾ ನೂತನ ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಮಾತನಾಡಿ ಶಾಸಕರು ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಬೇಕೆಂದು ಹೇಳಿದ್ದಾರೆ. ನಾನು ಇಲ್ಲಿ ತನಕ ಭ್ರಷ್ಟಾಚಾರ ಮಾಡಿಲ್ಲ. ಇನ್ನು ಮಾಡುವುದೂ ಇಲ್ಲ ಎಂಬ ಭರವಸೆ ನೀಡುತ್ತೇನೆ ಎಂದ ಅವರು ಈಗಾಗಲೇ ಕಟ್ ಕನ್ವರ್ಷನ್, ಸಿಂಗಲ್ ಲೇಔಟ್ ಸಮಸ್ಯೆಗಳನ್ನು ಸರಿ ಮಾಡಲು ಹಲವು ಮಂದಿಯ ಮನವಿ ಬಂದಿದೆ. ಕೆಲವರಿಗೆ ಪುಡಾ ಕಚೇರಿಗೆ ಹೋಗಿ ಬಂದಾಗ ಕಣ್ಣು, ಕಿವಿ, ಮೂಗಲ್ಲಿ ಬೆಂಕಿ ಬರುತ್ತದೆ ಎಂದು ಹೇಳುತ್ತಾರೆ. ಇಂತಹ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡಬೇಕು. ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಬೇಕು ಎಂಬುದು ನನ್ನ ಉದ್ದೇಶ. ಶಾಸಕರ ನಿರೀಕ್ಷೆಯಂತೆ ಜನರಿಗೆ ಸಹಾಯ ಮಾಡುವ ಉದ್ದೇಶ ನನಗೆ ಮತ್ತು ಮೂವರು ಸದಸ್ಯರಿಗೂ ಇದೆ. ನಮಗೆ ಸಾರ್ವಜನಿಕರ ಸಹಕಾರವೂ ಬೇಕಾಗಿದೆ ಎಂದರು.ಈ ಸಂದರ್ಭ ಭಾಸ್ಕರ್ ಕೋಡಿಂಬಾಳ ಅವರ ಪತ್ನಿ ಉಪ್ಪಿನಂಗಡಿ ಪುಳೀತ್ತಡಿ ಸರಕಾರಿ ಶಾಲೆಯ ಶಿಕ್ಷಕಿ ಶುಭಲತಾ, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹ‌ರ್, ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶಾರದಾ ಅರಸ್‌, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಅಮಳ ರಾಮಚಂದ್ರ, ಜೋಕಿಂ ಡಿಸೋಜ, ಜಿ.ಪಂ ಮಾಜಿ ಸದಸ್ಯ ಎಮ್.ಎಸ್ ಮಹಮ್ಮದ್, ಕೆಪಿಸಿಸಿಯ ಹೇಮನಾಥ ಶೆಟ್ಟಿ ಕಾವು, ಕಾಂಗ್ರೆಸ್ ಮುಖಂಡರಾದ ಅಮಳರಾಮಚಂದ್ರ, ನ್ಯಾಯವಾದಿಗಳಾದ ನೂರುದ್ದೀನ್ ಸಾಲ್ಮರ, ಎಂ.ಪಿ.ಅಬೂಬಕ್ಕ‌ರ್, ದೀಪಕ್ ಬೊಳುವಾರು, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌, ಉಪಾಧ್ಯಕ್ಷ ರಾಜಶೇಖರ್ ಜೈನ್, ಪ್ರಸಾದ್ ಕೌಶಲ್ ಶೆಟ್ಟಿ, ವಿಶಾಲಾಕ್ಷಿ ಬನ್ನೂರು, ಗಣೇಶ್ ರಾವ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.



Leave a Comment: