ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ನಿಮ್ಮ ಫ್ರೀ ಯುನಿಟ್ ಲೆಕ್ಕಾಚಾರ ಹೇಗೆ? – ಇಲ್ಲಿದೆ ಮಾಹಿತಿ

Posted by Vidyamaana on 2023-06-03 06:25:59 |

Share: | | | | |


ನಿಮ್ಮ ಫ್ರೀ ಯುನಿಟ್ ಲೆಕ್ಕಾಚಾರ ಹೇಗೆ? – ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ‘ಗ್ಯಾರಂಟಿ’ ಆಶ್ವಾಸನೆಗಳನ್ನು ಹಂತಹಂತವಾಗಿ ಜಾರಿಗೊಳಿಸುವ ನಿರ್ಧಾರವನ್ನು ಮಾಡಿದೆ. ಈ ಐದು ಗ್ಯಾರಂಟಿಗಳ ಪೈಕಿ ಇದೀಗ ಹೆಚ್ಚು ಚರ್ಚೆಗೆ ಒಳಗಾಗಿರುವುದು 200 ಯುನಿಟ್ ಉಚಿತ ವಿದ್ಯುತ್ ಸೌಲಭ್ಯ. ಇದರ ಲೆಕ್ಕಾಚಾರ ಇನ್ನೂ ಸ್ಪಷ್ಟವಾಗಿಲ್ಲದ ಕಾರಣ ಈ ವಿಚಾರದಲ್ಲಿ ಜನಸಾಮಾನ್ಯರಲ್ಲಿ ಗೊಂದಲ ಮುಂದುವರೆದಿದೆ.


ಆದರೆ ನಿನ್ನೆ (ಜೂ.03) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿರುವ ಪ್ರಕಾರ, ಪ್ರತೀ ತಿಂಗಳು ವಿದ್ಯುತ್ ಬಳಕೆದಾರರು 200 ಯುನಿಟ್ ವರೆಗೆ ಬಳಸುವ ವಿದ್ಯುತ್ ಗೆ ಬಿಲ್ ಕಟ್ಟಬೇಕಾಗಿಲ್ಲ ಎನ್ನುವುದು ಸಂಪೂರ್ಣ ಸತ್ಯವಲ್ಲ! ಆದರೆ ಇದು ಪೂರ್ತಿ ಸುಳ್ಳೂ ಅಲ್ಲ! ಇಲ್ಲಿ ಸರಕಾರ ಒಂದು ಬುದ್ದಿವಂತಿಕೆಯನ್ನು ಬಳಸಿದೆ. ಒಂದು ಕುಟುಂಬ ಕಳೆದ 12 ತಿಂಗಳಿನಲ್ಲಿ ಎಷ್ಟು ವಿದ್ಯುತ್ ಬಳಸಿದೆ ಎಂದು ಸರಾಸರಿ ಲೆಕ್ಕ ತೆಗೆದು ಅವರ ಮೇಲೆ 10% ಯುನಿಟ್ ಸೇರಿಸಿ ಆ ಕುಟುಂಬದ ಕಟ್ ಆಫ್ ಯುನಿಟನ್ನು ಫಿಕ್ಸ್ ಮಾಡಲಾಗುತ್ತದೆ. ಆ ಯುನಿಟ್ ಆಧಾರದಲ್ಲಿ ಆ ಕುಟುಂಬಕ್ಕೆ ಜುಲೈ ತಿಂಗಳ ಬಿಲ್ಲಿನಿಂದ ಪ್ರಾರಂಭಗೊಳ್ಳುವಂತೆ ಆಗಸ್ಟ್ ತಿಂಗಳಿನಿಂದ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡಲಾಗುತ್ತದೆ.

*ಇದಕ್ಕೊಂದು ಉದಾಹರಣೆ ಲೆಕ್ಕ ಇಲ್ಲಿದೆ ನೋಡಿ..*

ಈ ಹಿಂದಿನ 12 ತಿಂಗಳ ವಿದ್ಯುತ್ ಬಳಕೆಯ ಯೂನಿಟ್ ಗಳನ್ನು ಒಟ್ಟಾಗಿ ಕೂಡಿಸಿ, ಅದನ್ನು 12 ರಿಂದ ಬಾಗಿಸಿ ಮತ್ತೆ 1.1 ರಿಂದ ಗುಣಿಸಿದಾಗ ಬರುವ ಮೊತ್ತದ ಒಳಗೆ ಈಗಿನ ನಿಮ್ಮ ಉಚಿತ ವಿದ್ಯುತ್ ಬಳಕೆಯ ಯೂನಿಟ್ ಇರತಕ್ಕದ್ದು. ಮತ್ತೆ ಅದು 200 ಯೂನಿಟ್ ಗಳನ್ನು ಮೀರಿರಬಾರದು.


*ಇದನ್ನು ಈ ಕೆಳಗಿನ ಉದಾಹರಣೆ ಮೂಲಕ ವಿವರಿಸಲಾಗಿದೆ:*

 ಸಾಮಾನ್ಯ ಮಧ್ಯಮ ಕುಟುಂಬದ ಉದಾಹರಣೆ 

ತಿಂಗಳು 1 -  180 ಯೂನಿಟ್ 

ತಿಂಗಳು 2 -  185 ಯೂನಿಟ್

ತಿಂಗಳು 3 -  185 ಯೂನಿಟ್

ತಿಂಗಳು 4 -  180 ಯೂನಿಟ್

ತಿಂಗಳು 5 -  185 ಯೂನಿಟ್

ತಿಂಗಳು 6 -  175 ಯೂನಿಟ್

ತಿಂಗಳು 7 -  180 ಯೂನಿಟ್ 

ತಿಂಗಳು 8 -  185 ಯೂನಿಟ್

ತಿಂಗಳು 9 -  185 ಯೂನಿಟ್

ತಿಂಗಳು 10 - 178 ಯೂನಿಟ್

ತಿಂಗಳು 11 - 180 ಯೂನಿಟ್

ತಿಂಗಳು 12 - 175 ಯೂನಿಟ್

ಒಟ್ಟು 2173 ಯೂನಿಟ್ಗಳು.

ಸರಾಸರಿ ಅಂದರೆ 2173/12= 181 ಯೂನಿಟ್ಗಳು. 10% ಹೆಚ್ಚವರಿ ಅಂದರೆ 181*1.1= 191 ಯೂನಿಟ್ಗಳು. ಹೀಗಿದ್ದಲ್ಲಿ ನೀವು 200 ಯೂನಿಟ್ ಉಚಿತ ವಿದ್ಯುತ್ ಬಳಸಲು ಅರ್ಹರು..

ಬಡ ಕುಟುಂಬದ ಉದಾಹರಣೆ

ತಿಂಗಳು 1 -  70 ಯೂನಿಟ್ 

ತಿಂಗಳು 2 -  80 ಯೂನಿಟ್

ತಿಂಗಳು 3 -  60 ಯೂನಿಟ್

ತಿಂಗಳು 4 -  55 ಯೂನಿಟ್

ತಿಂಗಳು 5 -  65 ಯೂನಿಟ್

ತಿಂಗಳು 6 -  70 ಯೂನಿಟ್

ತಿಂಗಳು 7 -  85 ಯೂನಿಟ್ 

ತಿಂಗಳು 8 -  55 ಯೂನಿಟ್

ತಿಂಗಳು 9 -  70 ಯೂನಿಟ್

ತಿಂಗಳು 10 - 75 ಯೂನಿಟ್

ತಿಂಗಳು 11 - 80 ಯೂನಿಟ್

ತಿಂಗಳು 12 - 55 ಯೂನಿಟ್

ಒಟ್ಟು 820 ಯೂನಿಟ್ಗಳು.

ಸರಾಸರಿ ಅಂದರೆ 820/12= 68.3 ಯೂನಿಟ್ಗಳು. 10% ಹೆಚ್ಚವರಿ ಅಂದರೆ 68.3*1.1= 75 ಯೂನಿಟ್ಗಳು. ಹೀಗಿದ್ದಲ್ಲಿ ನೀವು 75 ಯೂನಿಟ್ ಉಚಿತ ವಿದ್ಯುತ್ ಬಳಸಲು ಮಾತ್ರ ಅರ್ಹರು. ನೀವು 200 ಯೂನಿಟ್ ಬಳಸುವಂತಿಲ್ಲ. 75 ಯೂನಿಟ್ ಗಿಂತ ಜಾಸ್ತಿ ಬಳಸಿದ್ದಲ್ಲಿ ಬಿಲ್ ಕಟ್ಟತಕ್ಕದ್ದು.

ಇದನ್ನು ಕ್ರಿಕೆಟ್ ನಲ್ಲಿ ಬಳಸುವ ಡಕ್ ವರ್ತ್ ಲೂಯಿಸ್ ನಿಯಮಕ್ಕೆ ಅನ್ವಯಿಸಿಕೊಳ್ಳಬಹುದೇನೋ. ಒಟ್ಟಿನಲ್ಲಿ ಈ ಲೆಕ್ಕಾಚಾರವವನ್ನು ಅರ್ಥಮಾಡಿಕೊಳ್ಳದೇ, ನಮಗೆ 200 ಯುನಿಟ್ ಫ್ರೀ ಎಂದು ಒಟ್ರಾಶಿ ಕರೆಂಟ್ ಯೂಸ್ ಮಾಡಿದ್ರೆ ನಿಮ್ಗೆ ‘ಶಾಕ್’ ಹೊಡೆಯೋದಂತೂ ಗ್ಯಾರಂಟಿ!

ಏತ್ ಇತ್ತಂಡ ದಾನೆ..! : ಬಹುಕೋಟಿ ಉದ್ಯಮಿ ಬೀದಿ ನಾಯಿಗಳ ದಾಳಿಗೆ ಬಲಿ!

Posted by Vidyamaana on 2023-10-23 21:09:08 |

Share: | | | | |


ಏತ್ ಇತ್ತಂಡ ದಾನೆ..! : ಬಹುಕೋಟಿ ಉದ್ಯಮಿ ಬೀದಿ ನಾಯಿಗಳ ದಾಳಿಗೆ ಬಲಿ!

ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್​ನಲ್ಲಿ ಮೃತಪಟ್ಟಿದ್ದಾರೆ.


ವಾಘ್ ಬಕ್ರೀ ಟೀ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್‌ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್‌ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.


ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್‌ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್‌ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.


ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್‌ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್‌ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್‌ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.

ಪುತ್ತೂರಿನಲ್ಲಿ ಡಿ.ವಿ. ಪತ್ರಿಕಾಗೋಷ್ಠಿ

Posted by Vidyamaana on 2023-05-02 10:50:14 |

Share: | | | | |


ಪುತ್ತೂರಿನಲ್ಲಿ ಡಿ.ವಿ. ಪತ್ರಿಕಾಗೋಷ್ಠಿ

ಪುತ್ತೂರು: ಹಿಂದೆ ನಡೆದ ಶನಿಪೂಜೆಯಲ್ಲೇ ಶನಿ ಬಿಡಿಸಿದ್ದೇವೆ ಎಂದು ಹೆಸರು ಹೇಳದೇ ಅರುಣ್ ಕುಮಾರ್ ಪುತ್ತಿಲ ಅವರ ಅಭಿಮಾನಿಗಳಿಗೆ ಡಿ.ವಿ‌ ಸದಾನಂದ ಗೌಡ ಟಾಂಗ್ ನೀಡಿದರು.

ಟ್ವಿಟ್ಟರ್, ಫೇಸ್ ಬುಕಿನಲ್ಲಿ ಪುತ್ತೂರಿಗೆ ಬರುವಂತೆ ಸವಾಲು ಹಾಕಿ ಬರೆದಿದ್ದ ಸಾಲುಗಳ ಪುಟಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಮಾಜಿ ಸಿಎಂ ಡಿ.ವಿ‌ ಸದಾನಂದ ಗೌಡ, ಅರುಣ್ ಕುಮಾರ್ ಪುತ್ತಿಲ ಹಾಗೂ ಅಶೋಕ್ ಕುಮಾರ್ ರೈ ಅವರ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.

ಡಿ.ವಿ. ಸದಾನಂದ ಗೌಡ ಅವರು ಪುತ್ತೂರಿನ ಶಾಸಕರಾಗಿದ್ದಾಗ ಪುತ್ತೂರು ಮಂಡಲ ಅಧ್ಯಕ್ಷರಾಗಿದ್ದವರನ್ನು ಪತ್ರಿಕಾಗೋಷ್ಠಿಯಲ್ಲಿ ಕುಳ್ಳಿರಿಸಿಯೇ ಪತ್ರಿಕಾಗೋಷ್ಠಿ ನಡೆಸಿಕೊಟ್ಟರು.

ನಾನು ಶಾಸಕರಾಗಿದ್ದಾಗ ಭಾಸ್ಕರ್ ಆಚಾರ್ ಹಿಂದಾರು, ಪುತ್ತಿಲ ಅವರು ಮುಂಡೂರು ಭಾಗದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡ್ತಾ ಇದ್ದರು. ಶನಿ ಪೂಜೆಯ ಸಂದರ್ಭ ಶನಿ ಬಿಡಿಸಿದ್ದೇವೆ ಎಂದರು. ಯಾಕಾಗಿ ಶನಿ ಬಿಡಿಸಿದ್ದೀರಿ ಎಂದು ಪ್ರಶ್ನಿಸಿದಾಗ, ಅದನ್ನು ಮಾಧ್ಯಮಗಳಲ್ಲಿ ಹಲವಾರು ಬಾರಿ ಬರೆಯಲಾಗಿದೆ. ಮತ್ತೊಮ್ಮೆ ವಿವರಣೆ ನೀಡುವ ಅಗತ್ಯವಿಲ್ಲ ಎಂದರು.

ಎನ್ ಕೌಂಟರ್ ಮಾಡ್ತಾರೆ ಎಂಬ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ದೇಶ ವಿರೋಧಿ ಚಟುಚಟಿಕೆ ಮಾಡುವ ಯಾರನ್ನೇ ಆದರೂ ಬಿಡುವುದಿಲ್ಲ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

Posted by Vidyamaana on 2023-05-24 07:18:31 |

Share: | | | | |


ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

 ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು.ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.

ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ.ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ 

ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್​ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್​ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಲ್​ ವಸೂಲಾತಿಗೆಂದು ಅವರ ಮನೆಗೆ ಲೈನ್​ಮ್ಯಾನ್​ ಮಂಜುನಾಥ್​ ಎಂಬುವರು ತೆರಳಿದ್ದರು. ಬಿಲ್​ ಪಾವತಿಸುವಂತೆ ಚಂದ್ರಶೇಖರಯ್ಯ ಅವರನ್ನು ಕೇಳಿದರೆ, ಆತ ನಾನು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್​ ಕಟ್ಟುವುದಿಲ್ಲ. ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ ಎಂದು ವಾಗ್ವಾದಕ್ಕೆ ಇಳಿದನು.

ಚಪ್ಪಲಿಯಿಂದ ಹಲ್ಲೆ ಸರ್ಕಾರ ಇನ್ನು ಅಧಿಕೃತವಾಗಿ ಜಾರಿ ಮಾಡಿಲ್ಲ. ಜಾರಿ ಮಾಡಿದ ಬಳಿಕ ನೋಡೋಣ, ಸದ್ಯಕ್ಕೆ ಹಳೆಯ ಬಿಲ್​ ಅನ್ನು ಪಾವತಿಸಿ ಎಂದು ಮಂಜುನಾಥ್​ ಕೇಳಿದ್ದಾರೆ. ಆದರೆ, ಬಿಲ್​ ಕಟ್ಟಲು ಒಪ್ಪದ ಚಂದ್ರಶೇಖರಯ್ಯ,ಅವಾಚ್ಯ ಶಬ್ದಗಳಿಂದ ಮಂಜುನಾಥ್​ರನ್ನು ನಿಂದಿಸಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಂಜುನಾಥ್​ ಮೇಲೆ ಚಂದ್ರಶೇಖರಯ್ಯ ಚಪ್ಪಲಿಯಿಂದ ಹಲ್ಲೆ ಮಾಡಿ, ದುರ್ವರ್ತನೆ ತೋರಿದ್ದಾರೆ.ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್​ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌

ಜಮೀಲಾ ಸನಿಕ ಳಿಗೆ ಮಿಡಿದ ಹೃದಯಗಳು...

Posted by Vidyamaana on 2023-09-24 11:14:53 |

Share: | | | | |


ಜಮೀಲಾ ಸನಿಕ ಳಿಗೆ ಮಿಡಿದ ಹೃದಯಗಳು...

    ಹ್ರದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ  ಆರೋಗ್ಯ ವಂತಳಾಗಿಯೇ ಕಾಣುತ್ತಿದ್ದ ಮಗು... ಸಾವಕಾಶವಾಗಿ ಶಸ್ತ್ರಕ್ರಿಯೆ ಯೊಂದನ್ನು ನಡೆಸಲು ವೈದ್ಯರು ಸೂಚಿಸಿದ್ದರು. ಈ ಮಧ್ಯೆ ಕುಟುಂಬ ಸಮೇತ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸಿ ಬಂದಿದ್ದರು,ಮಗುವನ್ನು ಶಾಲೆಗೂ ದಾಖಲು ಮಾಡಿದ್ದರು.

ಇದ್ದಕ್ಕಿದ್ದಂತೆಯೇ ಇತ್ತೀಚೆಗೆ ಮಗು ತೀವ್ರ ಅನಾರೋಗ್ಯಳಾದಾಗ ಬೆಂಗಳೂರಿನ ನಾರಾಯಣ ಹ್ರದಯಾಲಯದಲ್ಲಿ ದಾಖಲುಮಾಡಿದ್ದರು.

  ಲಕ್ಷಾಂತರ ರೂಪಾಯಿ ಗಳನ್ನು ವ್ಯಯಿಸಿ ಚಿಕಿತ್ಸೆ ಮಾಡುತ್ತಾ ಕಂದಮ್ಮಳ ಜೀವರಕ್ಷಿಸಲು ಶತಪ್ರಯತ್ನ ಪಡುತ್ತಿದ್ದರೂ ಕೊನೆಗೆ ಶಸ್ತ್ರಕ್ರಿಯೆಗೂ ಸ್ಪಂದಿಸದೆ , ಅಲ್ಲಾಹನ ಅನುಲ್ಲಂಘನೀಯ ವಿಧಿಯ ಮುಂದೆ ಆ ಮಗು ಕೊನೆಯುಸಿರೆಳೆಯಿತು. ಅಲ್ಲಾಹನೇ...! ಸಹನೆ ನೀಡು...ಮಾತಾ ಪಿತರಿಗೆ  ಫಲಶ್ರುತಿಯಾದ ಸಂತಾನಗಳಲ್ಲಿ ಸೇರಿಸು.. ಸ್ವರ್ಗೋದ್ಯಾವನದಲ್ಲಿ ಒಂದು ಗೂಡಿಸು....ಆಮೀನ್...

*"ಅಲ್ಲಾಹನು ಹೇಳುತ್ತಿದ್ದಾನೆಂದು ಪ್ರವಾದಿ ಸ.ಅ.ರು ಹೇಳಿದರು: ನನ್ನ ದಾಸನಾದ ಸತ್ಯ ವಿಶ್ವಾಸಿಯ ನಿಕಟ ಬಂಧುವನ್ನು ನಾನು ಕರೆಸಿಕೊಂಡಾಗ (ಅರ್ಥಾತ್ ಮರಣಗೊಳಿಸಿದಾಗ) ಆ ಸತ್ಯವಿಶ್ವಾಸಿಯು ಸಹನೆಯೊಂದಿಗೆ ತನ್ನ ಪ್ರತಿಫಲವನ್ನು ಆಗ್ರಹಿಸಿದರೆ ಅವನಿಗೆ ಸ್ವರ್ಗ ವಲ್ಲದೆ ಬೇರೆ ಪ್ರತಿಫಲವಿಲ್ಲ."*




Leave a Comment: