Posted by vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
ಕಾಲೇಜುನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.
ಹೆಚ್ಚುಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನುನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರುಮನವಿ ಸಲ್ಲಿಸಿದರು.
Posted by Vidyamaana on 2023-09-14 12:10:51 |
ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವ ಭರವಸೆ ನೀಡಿ ಕೋಟಿ ಕೋಟಿ ದೋಚಿದ ಆರೋಪದ ಮೇಲೆ ಚೈತ್ರ ಕುಂದಾಪುರ ಬಂಧನವಾಗಿದೆ. ಚೈತ್ರ ಕುಂದಾಪುರ ಬಂಧನದ ಬಳಿಕ ಆಕೆಯ ಕ್ರಿಮಿನಲ್ ಪ್ಲಾನ್ ಜೊತೆ ಆಕೆಯ ಪೂರ್ವಪರ ಬೆಳಕಿಗೆ ಬರುತ್ತಿದೆ. ಸದ್ಯ ಚೈತ್ರ ಕುಂದಾಪುರ (Chaitra Kundapura), ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಅತ್ಯಂತ ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಈಕೆ ಏಕಾಏಕಿ ಕೋಟ್ಯಾಧೀಶೆ ಆಗುವ ಕನಸು ಕಂಡ ಕಥೆ ಮಾತ್ರ ರೋಚಕ. ಮುಂದೆ ಓದಿ.ಚೈತ್ರ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವಳು. ಬಡ ಕುಟುಂಬದಲ್ಲಿ ಹುಟ್ಟಿದ ಇವಳ ತಂದೆ ತಾಯಿ ಹೈನುಗಾರಿಕೆ ಮಾಡಿಕೊಂಡಿದ್ದಾರೆ. ಚೈತ್ರ ಕುಂದಾಪುರ ತನ್ನ ಪದವಿ ಪೂರ್ವದವರೆಗಿನ ಶಿಕ್ಷಣವನ್ನು ಕುಂದಾಪುರದಲ್ಲಿಯೇ ಮುಗಿಸಿ, ಬಳಿಕ ಪದವಿ ಮತ್ತು ಸ್ನಾತಕೊತ್ತರ ಪದವಿಯನ್ನು ಪತ್ರಿಕೋದ್ಯಮ ವಿಭಾಗದಲ್ಲಿ ಮಂಗಳೂರಿನ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮುಗಿಸುತ್ತಾಳೆ.
ಎಬಿವಿಪಿ ಪ್ರತಿಭಟನೆಯಲ್ಲಿ ಮುಂಚೂಣಿ
ಆರಂಭದಲ್ಲಿಯೇ ಎಬಿವಿಪಿ ಹುಡಗರ ಜೊತೆ ಗುರುತಿಸಿಕೊಂಡಿದ್ದ ಇವಳು ಪದವಿ ಶಿಕ್ಷಣ ಪಡೆಯುವ ಸಮಯದಲ್ಲಿ ಪೂರ್ಣ ಪ್ರಮಾಣದಲ್ಲಿ ಎಬಿವಿಪಿಯಲ್ಲಿತೊಡಗಿಕೊಳ್ಳುತ್ತಾಳೆ. ಎಬಿವಿಪಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಾಳೆ. ಎಬಿವಿಪಿಯಲ್ಲಿ ವಿವಿಧ ಜವಾಬ್ದಾರಿಯನ್ನು ಕೂಡ ನಿರ್ವಹಿಸಿದ್ದಾಳೆ.
ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕೆಲಸ
ಕಾಲೇಜು ಮುಗಿದ ಬಳಿಕ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡಿಕೊಂಡಿದ್ದ ಚೈತ್ರ ಕುಂದಾಪುರ, ಎಬಿವಿಪಿಯಿಂದ ಹಿಂದೆ ಸರಿಯುತ್ತಾಳೆ. ನಾಲ್ಕೈದು ವರ್ಷಗಳ ಕಾಲ ಸ್ಥಳೀಯ ಖಾಸಗಿ ವಾಹಿನಿಗಳಲ್ಲಿ ಕೆಲಸ ಮಾಡಿದ ಬಳಿಕ, ಮತ್ತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುತ್ತಾಳೆ.ನಂತರ ಈ ಚೈತ್ರ ಹಿಂದೂ ಸಂಘಟನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳುತ್ತಾಳೆ. ರಾಷ್ಟ್ರೀಯತೆ, ಹಿಂದೂ ಧರ್ಮ ಹೆಸರಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಭಾಷಣಕಾರ್ತಿಯಾಗಿ ತೊಡಗಿಕೊಂಡಿದ್ದಳು. ಬಳಿಕ ಮಾಡಿದ್ದೆ ಕೋಟಿ ಕೋಟಿ ಲೂಟಿಯ ಪ್ಲ್ಯಾನ್.
ತನ್ನ ಉಗ್ರ ಭಾಷಣದಿಂದ ಸಾಕಷ್ಟು ಜನರ ವಿರೋಧಕ್ಕೆ ಗುರಿಯಾಗಿದ್ದ ಚೈತ್ರ ಕುಂದಾಪುರ, ಕೋಟಿ ಕೋಟಿ ದೋಚುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾಳೆ. ಪ್ರತಿ ಭಾರಿ ಇಂತಹ ವಿವಾದಗಳು ಪ್ರಕರಣಗಳು ನಡೆದಾಗ ತಪ್ಪಿಸಿಕೊಳ್ಳಲು ಏನೇನೋ ಕಾರಣ ಹೇಳುತ್ತಿದ್ದ ಚೈತ್ರ ಕುಂದಾಪುರ, ಈ ಬಾರಿ ಸಾಕ್ಷಿ ಸಮೇತ ಪೊಲೀಸರಿಗೆ ಲಾಕ್ ಆಗಿದ್ದಾಳೆ.
Posted by Vidyamaana on 2023-03-21 16:40:15 |
ಪುತ್ತೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ ಎಂಬ ಸುದ್ದಿ ಲಭ್ಯವಾಗಿದೆ.
ಇದರ ನಡುವೆ ಪುತ್ತೂರು ಮಹಿಳಾ ಕಾಂಗ್ರೆಸ್ ಘಟಕ ಪತ್ರಿಕಾಗೋಷ್ಠಿ ನಡೆಸಿದ್ದು, ನಿಗೂಢ ಹೆಜ್ಜೆಯೊಂದನ್ನು ಮುಂದಿಟ್ಟಿದೆ. ಇದು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆ ನೀಡಿದೆ.
ಅಶೋಕ್ ಕುಮಾರ್ ರೈ ಅವರು ಕಾಂಗ್ರೆಸ್ ಸೇರ್ಪಡೆಯ ಬಳಿಕ ವಿಧಾನಸಭಾ ಕ್ಷೇತ್ರದ ತುಂಬಾ ಓಡಾಡುತ್ತಿದ್ದಾರೆ. ಇದಕ್ಕಾಗಿ ಸಾಕಷ್ಟು ಸಮಯವನ್ನು ನೀಡುತ್ತಿದ್ದಾರೆ. ಇದರ ಹಿಂದಿನ ಮರ್ಮ ಪಕ್ಷದ ಆಕಾಂಕ್ಷಿ ಅಭ್ಯರ್ಥಿಗಳಿಗೆ ತಿಳಿಯದ ವಿಚಾರವೇನಲ್ಲ. ಈ ನಡುವೆ ಮಂಗಳವಾರ ಪುತ್ತೂರು ಮಹಿಳಾ ಕಾಂಗ್ರೆಸ್ ಘಟಕ ಪತ್ರಿಕಾಗೋಷ್ಠಿ ನಡೆಸಿ, ಶಕುಂತಳಾ ಶೆಟ್ಟಿ ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಿ ಎಂದು ಆಗ್ರಹಿಸಿದೆ. ಅಶೋಕ್ ಕುಮಾರ್ ರೈ ಅಭ್ಯರ್ಥಿಯಾಗಿ ಆಯ್ಕೆ ಅಂತಿಮ ಎಂಬ ಸುದ್ದಿ ಅದರ ಬೆನ್ನಲ್ಲೇ ಹೊರಬಿದ್ದಿರುವ ಕಾರಣ, ಮಹಿಳಾ ಕಾಂಗ್ರೆಸಿನ ಆಗ್ರಹದ ಹಿಂದಿನ ನಿಗೂಢ ನಡೆ ಬೇರೆಯೇ ಹೊಳಹನ್ನು ತೋರಿಸುವಂತಿದೆ.
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಖಜಾಂಜಿ ಶುಭ ಮಾಲಿನಿ ಮಲ್ಲಿ, ಕೆಪಿಸಿಸಿ ಕಾರ್ಯದರ್ಶಿ ಸಾಹಿರಾ ಬಾನು, ವಿಲ್ಮಾ ಗೋನ್ಸಾಲ್ವಿಸ್ ಅವರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪರ ಬ್ಯಾಟಿಂಗ್ ಬೀಸಿದ್ದಾರೆ.
ಶಕುಂತಳಾ ಶೆಟ್ಟಿ ಅವರಿಗೆ ಮುಂದೆ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆ ಇಲ್ಲ. ಆದ್ದರಿಂದ ಈ ಬಾರಿ ಟಿಕೇಟ್ ನೀಡುವಂತೆ ಕೇಳಿಕೊಳ್ಳುತ್ತಿದ್ದೇವೆ. ಮಹಿಳಾ ಮತದಾರರ ಒಲವು ಶಕುಂತಳಾ ಶೆಟ್ಟಿ ಅವರ ಪರವಾಗಿ ಇರುವುದರಿಂದ, ಗೆಲುವು ನಿಶ್ಚಿತ ಎಂದಿದ್ದಾರೆ.
ಎರಡು ಬಾರಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡವರು. ಜನರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಕಂಡು, ಅದನ್ನು ಬಗೆಹರಿಸಿದವರು. ಆದ್ದರಿಂದ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗಬೇಕು. ಅವರು ಶಾಸಕ ಅಭ್ಯರ್ಥಿಯಾದರೆ ಖಂಡಿತಾ ಜಯ ದೊರಕುತ್ತದೆ. ಆದ್ದರಿಂದ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವಂತೆ ಆಗ್ರಹಿಸಿದ್ದಾರೆ.
Posted by Vidyamaana on 2024-06-24 05:20:03 |
ಗಳೂರು, ಜೂ.23: ಖ್ಯಾತ ವೈದ್ಯ ಡಾ.ಸುಧಾರಾಮ ರೈ (80) ಅಲ್ಪ ಕಾಲದ ಅಸೌಖ್ಯದಿಂದ ಇಂಗ್ಲೆಂಡ್ನಲ್ಲಿ ರವಿವಾರ ನಿಧನರಾದರು.ಡಾ.ಸುಧಾರಾಮ ರೈ ಅವರು ಪತ್ನಿ ಮಂಜುಳಾ ಮತ್ತು ಮಕ್ಕಳಾದ ನಿತಿನ್ ಮತ್ತು ನೀಮಾ ಅವರನ್ನು ಅಗಲಿದ್ದಾರೆ.
ಹೆಸರಾಂತ ಬೆಳ್ಳಿಪಾಡಿ ಮನೆತನದವರಾದ ಡಾ.ಸುಧಾರಾಮ ರೈ ಅವರು ಆರೋಗ್ಯ ಮತ್ತು ಸಮುದಾಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಡಾ. ಸುಧಾರಾಮ ರೈ ಅವರು ಪುತ್ತೂರಿನಲ್ಲಿ ತಮ್ಮ ಆರಂಭಿಕ ಶಿಕ್ಷಣ, ಮಣಿಪಾಲ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ
Posted by Vidyamaana on 2024-01-28 15:33:22 |
ಹೈದರಾಬಾದ್: ನವವಿವಾಹಿತೆಯೊಬ್ಬಳು ಕ್ರಿಮಿನಾಶಕ ಸೇವಿಸಿ ಸಾವಿಗೆ ಶರಣಾದ ಸುದ್ದಿ ಕೇಳಿ ಆಕೆಯ ಗಂಡನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತೆಲಂಗಾಣದ ಆದಿಲಬಾದ್ನಲ್ಲಿ ನಡೆದಿದೆ.ಮೃತ ನವದಂಪತಿಯನ್ನು ವಿಜಯ್ (28) ಮತ್ತು ಪಲ್ಲವಿ (20) ಎಂದು ಗುರುತಿಸಲಾಗಿದೆ.ಕ್ರಿಮಿನಾಶಕ ಸೇವಿಸಿದ್ದ ಪಲ್ಲವಿಯನ್ನು ಆದಿಲಬಾದ್ನಲ್ಲಿರುವ ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್)ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಆದಿಲಬಾದ್ ಪೊಲೀಸರ ಪ್ರಕಾರ ಪಲ್ಲವಿ, ಶುಕ್ರವಾರ ಕ್ರಿಮಿನಾಶಕ ಸೇವನೆ ಮಾಡಿದ್ದಳು. ಶನಿವಾರ ಬೆಳಗ್ಗೆ ಅಸುನೀಗಿದ್ದಾಳೆ. ಸಾವಿನ ಸುದ್ದಿ ಕೇಳಿದ ವಿಜಯ್, ಎಲ್ಲರ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ಹೆದರಿ, ಕೀಟನಾಶಕ ಸೇವಿಸಿ ಮಣ್ಣು ಮಾಡುವ ಜಾಗಕ್ಕೆ ತೆರಳಿ ಪತ್ನಿಯ ಬಳಿಯಲ್ಲೇ ಕೊನೆಯುಸಿರೆಳೆದಿದ್ದಾನೆ. ಇಬ್ಬರು ಕಳೆದ ವರ್ಷ ಮೇ 23ರಂದು ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದರು.
ದಂಪತಿ ನಡುವೆ ಯಾವುದೇ ಕಲಹವಾಗಲಿ ಅಥವಾ ಭಿನ್ನಾಭಿಪ್ರಾಯವಾಗಲಿ ಇರಲಿಲ್ಲ. ಇಬ್ಬರು ಸುಂದರ ಜೀವನವನ್ನು ಸಾಗಿಸುತ್ತಿದ್ದರು. ಪಲ್ಲವಿಗೆ ಗಂಡನ ಮನೆ ಕೊಲ್ಹಾರಿಯಲ್ಲಿ ವಾಸಿಸಲು ಆಸಕ್ತಿ ಇರಲಿಲ್ಲ.ಹೀಗಾಗಿ ಮನೆಯಿಂದ ದೂರ ಉಳಿದಿದ್ದಳು. ಶುಕ್ರವಾರ ಆಕೆಯನ್ನು ಆಕೆಯ ಸಹೋದರ ಕೊಲ್ಹಾರಿಗೆ ಡ್ರಾಪ್ ಮಾಡಿದ್ದ. ಈ ವೇಳೆ ಕೀಟನಾಶಕ ಬಾಟಲಿ ತೆಗೆದುಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Posted by Vidyamaana on 2023-07-10 16:28:58 |
ಕಡಬ : ಹೊಳೆನೀರಿಗೆ ಬಿದ್ದು ಕೃಷಿಕ ಸಾವನ್ನಪ್ಪಿರುವ ಘಟನೆ ಕಡಬ ಸಮೀಪದ ಇಚ್ಚಂಪಾಡಿ ಗ್ರಾಮದಲ್ಲಿ ನಡೆದಿದೆ.ಇಚ್ಚಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಮೃತ ದುರ್ದೈವಿ.
ಜು.9ರಂದು ಮಧ್ಯಾಹ್ನ ಇಚ್ಚಂಪಾಡಿಯ ಕೊಕ್ಕೊ ಕಾಡಿನ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದ ವೇಳೆ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ.
ಜು.10ರಂದು ಬೆಳಿಗ್ಗೆ ಹೊಳೆಬದಿ ಮತ್ತೆ ಹುಡುಕಾಟ ನಡೆಸಿದಾಗ ಗುಂಡ್ಯಹೊಳೆ ಸೇರುವಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Posted by Vidyamaana on 2023-05-14 15:17:41 |
ಪುತ್ತೂರು: ಶನಿವಾರ ಸಂಜೆ ಕಾಂಗ್ರೆಸ್ ಗೆಲುವಿನ ಶೋಭಾಯಾತ್ರೆ ನಡೆಯುತ್ತಿತ್ತು. ಅಷ್ಟರಲ್ಲಿ ಎದುರಿನಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರ ಕಾರು ಆಗಮಿಸಿತು. ಹಿಂದುತ್ವ – ಕಾಂಗ್ರೆಸ್ ಕಾರ್ಯಕರ್ತರು ಎದುರು – ಬದುರಾದರೆ ಹೇಗೆ? ಆತಂಕ ಬೇಡ. ಅರುಣ್ ಕುಮಾರ್ ಪುತ್ತಿಲ ಅವರು ಜನನಾಯಕ ಎನ್ನುವುದು ಮತ್ತೊಮ್ಮೆ ಸಾಬೀತಾಗುವ ಪ್ರಸಂಗಕ್ಕೆ ಈ ಘಟನೆ ಸಾಕ್ಷಿಯಾಯಿತು.
ಕಾಂಗ್ರೆಸ್ ಕಾರ್ಯಕರ್ತರು, ಪುತ್ತಿಲ ಅವರಿಗೆ ಕೈ ಬೀಸಿ ತಮ್ಮ ಪ್ರೀತಿ ತೋರಿದರು. ಅರುಣ್ ಕುಮಾರ್ ಪುತ್ತಿಲ ಅವರು ಕೈಮುಗಿದು, ಅವರ ಪ್ರೀತಿಗೆ ತಲೆಬಾಗಿದರು. ಇನ್ನೂ ಕೆಲವರು ಪುತ್ತಿಲ ಅವರಿಗೆ ಕೈ ಕುಲುಕಿ ತಮ್ಮ ಪ್ರೀತಿಯನ್ನು ತೋರಿದರು.