Posted by vidyamaana on 2024-07-08 20:09:58 |
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.
Posted by Vidyamaana on 2023-12-19 21:35:14 |
ಬೆಳ್ತಂಗಡಿ: ಪತ್ನಿ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಂಠಪೂರ್ತಿ ಕುಡಿದು ಮನೆಗೆ ಬಂದ ಆರೋಪಿ ಪತಿ ಸುರೇಶ್ ಗೌಡ(55), ತನ್ನ ಹೆಂಡತಿ ಮೋಹಿನಿ(55) ಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ವಿಕೃತ ಘಟನೆ ನಡೆದಿತ್ತು. ಬಳಿಕ ಪರಾರಿಯಾಗಿ ಮನೆಯ ಹತ್ತಿರದ ತೋಟದಲ್ಲಿ ಅಡಗಿ ಕುಳಿತ್ತಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ.
Posted by Vidyamaana on 2024-01-21 00:03:21 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜ 21ರಂದು
ಬೆಳಿಗ್ಗೆ 10 ಗಂಟೆಗೆ ಭಾಂದವ್ಯ ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ
11.30 ರಿಂದ ನಗರಸಭಾ ವ್ಯಾಪ್ತಿಯಲ್ಲಿ ಗುದ್ದಲಿಪೂಜೆ
ಸಂಜೆ ಅಶೋಕ್ ರೈ ಅಭಿಮಾನಿಬಳಗ ವಾಲಿಬಾಲ್ ಪಂದ್ಯಾಟ: ಕೊಯಿಲ ಶಾಲಾ ಕ್ರೀಡಾಂಗಣ ಬಡಗನ್ನೂರು
ಸಂಜೆ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಸಿಝ್ಲರ್ ಟ್ರೋಫಿ ಕ್ರಿಕೆಟ್ ಪಂದ್ಯಾಟ
ಕೊಳ್ತಿಗೆ ಷಣ್ಮುಖ ದೇವಸ್ಥಾನದಲ್ಲಿ ಜಾತ್ರೋತ್ಸವ ಕಾರ್ಯಕ್ರಮ ಭಾಗವಹಿಸಲಿದ್ದಾರೆ
Posted by Vidyamaana on 2023-12-23 04:37:41 |
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸವಲ್ಲಿ ಯಶಸ್ಸಿಯಾಗಿದೆ.
ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಅಗ್ನಿ ಶಾಮಕ ದಳದ ನೆರವಿನಿಂದ ಬೆಂಕಿ ನಂದಿಸುವ ಕೆಲಸ ವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು, " ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ, ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತಿವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈಯವರು ಧಾವಿಸಿದ್ದಾರೆ. ಪುತ್ತೂರಿನ ವಿಹಿಂಪ ಕಛೇರಿಯಲ್ಲಿ ತಂಗಿದ್ದ ದತ್ತ ಮಾಲಾಧಾರಿಗಳು, ಹಾಗೂ ಸ್ಥಳೀಯ ಯುವಕರು ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.ತಡ ರಾತ್ರಿ 12:30 ರಿಂದ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ತಕ್ಷಣವೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ದೋಡ್ಡ ಅನಾಹುತ ತಪ್ಪಿತು. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಸ್ಪತ್ರೆ ಅಡಳಿತ ಅಧಿಕಾರಿ ಡಾ.ಅಶಾ ಪುತ್ತೂರಾಯ ಮತ್ತು ಅಸ್ಪತ್ರೆ ಸಿಬಂದಿಗಳು ರೋಗಿಗಳನ್ನು ಬೆಂಕಿ ತಗುಲಿದ ಕೋಠಡಿಯಿಂದ ತೆರವುವಗೊಳಿಸಿದ್ದರು .
ವಿಷಯ ತಿಳಿದ ತಕ್ಷಣವೇ ಪುತ್ತೂರು ವಿಶ್ವಹಿಂದೂ ಪರಿಷದ್ ಕಾರ್ಯಲಾಯದಲ್ಲಿ ಇದ್ದ ಬಜರಂಗದಳದ ದತ್ತ ಮಾಲಾದರಿಗಳು ಸ್ಥಳಕ್ಕೆ ಅಗಮಿಸಿ ಇಡಿ ಅಸ್ಪತ್ರೆಯಲ್ಲಿ ಬೂದಿಗಳಿಂದ ಕೂಡಿದ ಕೊಠಡಿಗಳನ್ನು ನೀರಿನಿಂದ ಸ್ವಚ್ಚಗೊಳಿಸಿದ್ದಾರೆ.ಮಂಗಳೂರಿನಲ್ಲಿದ್ದ ಪುತ್ತೂರಿನ ಶಾಸಕರಿಗೆ ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ಪುತ್ತೂರು ಸರಕಾರಿ ಅಸ್ಪತ್ರೆಗೆ ಅಶೋಕ್ ರೈ ದೌಡಯಿಸಿದ್ದಾರೆ
Posted by Vidyamaana on 2023-11-15 18:00:55 |
ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಏಕಮುಖ ಪ್ರೇಮವೇ ಕಾರಣ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ(35) ಅದೇ ವಿಭಾಗದಲ್ಲಿ ಕೆಲಸ ನಿರ್ವಹಿಸುವ ಕೊಲೆಯಾದ ಐನಾಝಳೊಂದಿಗೆ ಪ್ರೇಮವಾಗಿತ್ತು. ಆದರೆ ಐನಾರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಳು ಎನ್ನಲಾಗಿದೆ.
ನ.12ರಂದು 36 ಬಾರಿ ಫೋನ್ ಮಾಡಿದ್ದ ಹಂತಕ ಕಳೆದ ಕೆಲವು ದಿನಗಳ ಹಿಂದೆ ಐನಾಝ್ ಹುಟ್ಟು ಹಬ್ಬಕ್ಕೆ ನೇಜಾರು ಮನೆಗೆ ಬಂದಿದ್ದ ಹಂತಕ ಆಕೆಗೆ ಉಂಗುರವನ್ನು ಎಲ್ಲರ ಮುಂದೆ ಹಾಕಿದ್ದ
ಇದರಿಂದ ಐನಾಝ್ ಮನೆಯವರ ಮುಂದೆ ಗಲಿಬಿಲಿಗೊಂಡಿದ್ದಳು. ಆ ಬಳಿಕ ಪ್ರವೀಣ್ನನ್ನು ದೂರ ಮಾಡಲು ಯತ್ನಿಸಿದ್ದಳು. ಇದರಿಂದ ಖಿನ್ನತೆಗೆ ಒಳಗಾದ ಪ್ರವೀಣ್ ಐನಾಝ್ಗೆ ನಿರಂತರ ಫೋನ್ ಮಾಡುತ್ತಿದ್ದ. ಐನಾಝ್ ಕೊಲೆಯಾದ ದಿನವೇ ಬೆಳಿಗ್ಗೆ 11 ಗಂಟೆಗೆ ದುಬೈಗೆ ಏರ್ಇಂಡಿಯಾ ವಿಮಾನದಲ್ಲಿ ಗಗನ ಸಖಿಯಾಗಿ ಕಾರ್ಯನಿರ್ವಹಿಸಲು ಹೋಗಬೇಕಿತ್ತು. ಆದರೆ ಅಂದೇ ಬೆಳಿಗ್ಗೆ ಯಮರೂಪಿಯಾಗಿ ಬಂದ ಪ್ರವೀಣ್ ಮನೆಯಲ್ಲಿದ್ದ ನಾಲ್ವರನ್ನು ಹತ್ಯೆಗೈದು ಪರಾರಿಯಾಗಿದ್ದ.
ನಾಲ್ವರನ್ನು ಹತ್ಯೆಗೈದು ಬಸ್ ಮೂಲಕ ಮಂಗಳೂರಿಗೆ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಗೆ ಹೋಗಿ ಪರಿಚಯದ ನೀರಾವರಿ ಇಲಾಖೆಯ ಅಧಿಕಾರಿ ಮನೆಯಲ್ಲಿ ಒಂದು ದಿನ ಅಡಗಿದ್ದ. ಅಲ್ಲಿಂದ ನೇರ ತನ್ನೂರು ಸಾಂಗ್ಲಿಗೆ ಹೋಗಿ ಅವಿತುಕೊಳ್ಳುವ ಪ್ಲಾನ್ ರೂಪಿಸಿದ್ದ ಹಂತಕ,
ಕೊಲೆಯಾದ ತಕ್ಷಣ ಎಲರ್ಟ್ ಆದ ಪೊಲೀಸರು ಐನಾಝ್ ದುಡಿಯುತ್ತಿದ್ದ ಏರ್ಪೋರ್ಟ್ಗೆ ಭೇಟಿ
ನೀಡಿ ಉದ್ಯೋಗಿಗಳ ಮಾಹಿತಿ ಕಲೆ ಹಾಕಿದ್ದಾರೆ ಅಲ್ಲಿ ರಜೆ ಹಾಕಿದ್ದ ಪ್ರವೀಣ್ ಮಾಹಿತಿ ಕಲೆ ಹಾಕಿ ಫೋನ್ ಟ್ಯಾಕ್ ಮಾಡಿದ್ದರು.
ಅದರಂತೆ ಬ್ರಹ್ಮಾವರ ಇಸ್ಪೆಕ್ಟರ್ ದಿವಾಕರ್ ಪಿ.ಎಂ ನೇತೃತ್ವದ ತಂಡ ಕುಡುಚಿ ಪೊಲೀಸರ ಸಹಾಯದಿಂದ ಹಂತಕನನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
ಆಂಧ್ರಪ್ರದೇಶಕ್ಕೆ ಸಾರಲು ಸಂಚು ರೂಪಿಸಿದ ಹಂತಕ
ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎನ್ನುವುದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಈ ಹಿಂದೆ CISF ಸಿಬ್ಬಂದಿಯಾಗಿಯೂ ಕೆಲಸ ಮಾಡಿದ್ದ ಎಂದು ಹೇಳಲಾಗಿದೆ. ಬಳಿಕ ಏಪೋರ್ಟ್ ನ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ತನಿಖೆಗೆ ನೆರವಾದ ಆರೋಪಿಯ ನಡಿಗೆಯ ಶೈಲಿ : ಮಾಹಿತಿಗಳ ಪ್ರಕಾರ, ಘಟನೆಯ ಬಳಿಕ
ಲಭ್ಯವಿದ್ದ ಸಿಸಿಟಿವಿ ಸಾಕ್ಷ್ಯಗಳನ್ನು ಪರಿಶೀಲಿಸಿದ್ದ ಪೊಲೀಸರು ಆರೋಪಿಯ ನಡಿಗೆ ಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದರು ಎನ್ನಲಾಗಿದೆ. ಇದು ಆರೋಪಿಯು ರಕ್ಷಣಾ ಇಲಾಖೆಗಳಿಗೆ ಸಂಬಂಧಿಸಿದ ವ್ಯಕ್ತಿ ಎಂಬ ಸುಳಿವು ನೀಡಿತ್ತು. ಬಳಿಕ ಆರೋಪಿ, ಅರುಣ್ ಚೌಗಲೆ ಬೆನ್ನುಬಿದ್ದ ಪೊಲೀಸರು, ಆತನನ್ನು ಬೆಳಗಾವಿಯ ಕುಡಚಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾದರು.
Posted by Vidyamaana on 2023-06-21 01:33:22 |
ಪುತ್ತೂರು: ವಿದ್ಯುತ್ ದರ ಏರಿಕೆ ಸಂಬಂಧ ನಡೆಯಲಿದೆ ಎಂದು ಸುದ್ದಿಯಾಗಿದ್ದ ಬಂದ್ ಇದೀಗ ಗೊಂದಲಕ್ಕೆ ಎಡೆ ನೀಡಿದೆ.
ಜೂನ್ 22ರಂದು ಬಂದ್ ನಡೆಯಲಿದ್ದು, ಎಫ್.ಕೆ.ಸಿ.ಸಿ.ಐ. ಕರೆ ನೀಡಿದೆ ಎಂದು ಮೊದಲಿಗೆ ಸುದ್ದಿಯಾಗಿತ್ತು. ಈ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ನೈತಿಕ ಬೆಂಬಲವನ್ನು ಸೂಚಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ಈ ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಘೋಷಿಸಿದರು. ಈ ಎಲ್ಲಾ ಗೊಂದಲಗಳ ನಡುವೆ ಎಚ್ಚೆತ್ತುಕೊಂಡ ಎಫ್.ಕೆ.ಸಿ.ಸಿ.ಐ. ರಾಜ್ಯಾಧ್ಯಕ್ಷರು ಬಿ.ವಿ. ಗೋಪಾಲ್ ರೆಡ್ಡಿ ಅವರು ತಾವು ಬಂದ್ಗೆ ಕರೆಯನ್ನೇ ಕೊಟ್ಟಿಲ್ಲ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.
ಹಾಗಾದರೆ ಬಂದ್ಗೆ ಕರೆ ನೀಡಿದವರು ಯಾರು? ಈ ಗೊಂದಲ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷರು ಏನಂದರು?
ವಿದ್ಯುತ್ ದರ ಎರಿಕೆ ಖಂಡಿಸಿ ಎಫ್ಕೆಸಿಸಿಐ ಕರೆ ನೀಡಿರುವ ರಾಜ್ಯ ಬಂದ್ಗೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ. ರಾಜ್ಯ ಸರ್ಕಾರದ ಹಠಮಾರಿ ಧೋರಣೆ ಕೈಬಿಡಬೇಕು, ಉದ್ಯಮಶೀಲರಿಗೆ ಅವಕಾಶ ಕೊಡಬೇಕು. ವಿದ್ಯುತ್ ದರದ ಬಗ್ಗೆ ಉದ್ಯಮಿಗಳ ಸಮಸ್ಯೆ ಆಲಿಸಿ, ನ್ಯಾಯ ಕೊಡಿಸುವ ಹಾಗೂ ಉದ್ಯಮಶೀಲತೆಗೆ ಅವಕಾಶ ಮಾಡಿಕೊಡುವ ಕಾರ್ಯ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರುಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಿಳಿಸಿದರು.
ವರ್ತಕ ಸಂಘ
ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂ. 22ರಂದು ಕರೆ ನೀಡಿದ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ. ವಿದ್ಯುತ್ ದರ ಏರಿಕೆಯಾಗಿರುವುದಕ್ಕೆ ನಮ್ಮ ವಿರೋಧವಿದೆ. ಒಂದೆಡೆ ಉಚಿತ ಇನ್ನೊಂದೆಡೆ ದರ ಏರಿಕೆ ಮಾಡಿರುವುದು ಸರಿಯಲ್ಲ. ಆದರೆ ಬಂದ್ ಮಾಡುವುದರಿಂದ ಕೈಗಾರಿಕೋದ್ಯಮಿಗಳಿಗೆ ಹಾಗೂ ವರ್ತಕರಿಗೇ ನಷ್ಟ. ಈ ನಿಟ್ಟಿನಲ್ಲಿ ಮಂಗಳೂರು ಛೇಂಬರ್ಸ್ ಆಫ್ ಕಾಮರ್ಸ್ & ಇಂಸ್ಟ್ರೀಸ್ ಸಲಹೆಯಂತೆ ಬಂದ್ ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಜಾನ್ ಕುಟಿನ್ಹಾ, ಉಪಾಧ್ಯಕ್ಷ ಪಿ. ವಾಮನ್ ಪೈ, ನಿರ್ದೆಶಕ ಶ್ರೀಕಾಂತ್ ಕೊಳತ್ತಾಯ, ಪ್ರ.ಕಾರ್ಯದರ್ಶಿ ಉಲ್ಲಾಸ್ ಪೈ, ಮಾಜಿ ಅಧ್ಯಕ್ಷ ಕೇಶವ ಪೈ ತಿಳಿಸಿದ್ದಾರೆ.
ಎಫ್.ಕೆ.ಸಿ.ಸಿ.ಐ. ಸ್ಪಷ್ಟನೆ ಏನು?
ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ತಿಳಿಸಿರುವ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ. ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ.
Posted by Vidyamaana on 2023-11-09 11:26:22 |
ಪುತ್ತೂರು : ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ.
ಬಡಗನ್ನೂರಿನ ಶಾಲಾ ಕಾಂಪೌಂಡ್ ನಿನ್ನೆ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಕುಸಿದು ಬಿದ್ದಿದೆ.
ಘಟನೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.