Posted by vidyamaana on 2024-07-24 19:54:18 |
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.
ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ
Posted by Vidyamaana on 2023-10-04 11:50:03 |
ಮುಂಬೈ(ಅ.04): ಶಾರುಖ್ ಖಾನ್ ಜೊತೆಗೆ "ಸ್ವದೇಸ್" ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ನಟಿ ಗಾಯತ್ರಿ ಜೋಶಿ ತಮ್ಮ ಪತಿ ವಿಕಾಸ್ ಒಬೆರಾಯ್ ಅವರೊಂದಿಗೆ ಇಟಲಿಯಲ್ಲಿ ಪ್ರಯಾಣಿಸುತ್ತಿದ್ದಾಗ ಭೀಕರ ಅಪಘಾತಕ್ಕೆ ಒಳಗಾಗಿದ್ದಾರೆ. ಗಾಯತ್ರಿ ಅವರ ಕಾರು ಇತರ ವಾಹನಗಳು ಮತ್ತು ಕ್ಯಾಂಪರ್ ವ್ಯಾನ್ಗೆ ಡಿಕ್ಕಿ ಹೊಡೆದಿದೆ.ವರದಿಗಳ ಪ್ರಕಾರ, ಲಂಬೋರ್ಘಿನಿ ಮತ್ತು ಫೆರಾರಿ ಸೇರಿದಂತೆ ಅನೇಕ ಉನ್ನತ-ಕಾರ್ಯಕ್ಷಮತೆಯ ವಾಹನಗಳು ಏಕಕಾಲದಲ್ಲಿ ಕ್ಯಾಂಪರ್ ವ್ಯಾನ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ಸಾರ್ಡಿನಿಯಾದ ಗ್ರಾಮೀಣ ರಸ್ತೆಯಲ್ಲಿ ಪಲ್ಟಿಯಾಗಿವೆ, ಇದರಿಂದ ಈ ದುರಂತ ಸಂಭವಿಸಿದೆ.
Readmore....
ಬೆಚ್ಚಿಬೀಳಿಸುವಂತಹ ದೃಶ್ಯವೀಗ ವೈರಲ್
ದುರದೃಷ್ಟವಶಾತ್, ಫೆರಾರಿಗೆ ಬೆಂಕಿ ತಗುಲಿದೆ. ಇದರ ಪರಿಣಾಮವಾಗಿ ಒಳಗೆ ಕುಳಿತಿದ್ದ ದಂಪತಿಗಳು ಜೀವ ಕಳೆದುಕೊಂಡಿದ್ದಾರೆ, ಇದನ್ನು 63 ವರ್ಷದ ಮೆಲಿಸ್ಸಾ ಕ್ರೌಟ್ಲಿ ಮತ್ತು 67 ವರ್ಷದ ಸ್ವಿಟ್ಜರ್ಲೆಂಡ್ನ ಮಾರ್ಕಸ್ ಕ್ರೌಟ್ಲಿ ಎಂದು ಗುರುತಿಸಲಾಗಿದೆ.
ವಿಕಾಸ್ ಮತ್ತು ನಾನು ಇಟಲಿಯಲ್ಲಿದ್ದೇವೆ. ನಾವು ಇಲ್ಲಿ ಅಪಘಾತವನ್ನು ಎದುರಿಸಿದ್ದೇವೆ. ದೇವರ ದಯೆಯಿಂದ ನಾವಿಬ್ಬರೂ ಚೆನ್ನಾಗಿದ್ದೇವೆ" ಎಂದು ಗಾಯತ್ರಿ ದಿ ಫ್ರೀ ಪ್ರೆಸ್ ಜರ್ನಲ್ಗೆ ತಿಳಿಸಿದರು. ಈ ಭೀಕರ ಅಪಘಾತದ ಹಲವು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.ವರದಿಯ ಪ್ರಕಾರ, ಸಾರ್ಡಿನಿಯಾ ಸೂಪರ್ಕಾರ್ ಟೂರ್ನಲ್ಲಿ ಅಪಘಾತ ಸಂಭವಿಸಿದೆ, ಈ ಘಟನೆಯಲ್ಲಿ ಐಷಾರಾಮಿ ಕಾರುಗಳು ಟೆಯುಲಾಡಾದಿಂದ ಓಲ್ಬಿಯಾಕ್ಕೆ ತಮ್ಮ ಉನ್ನತ-ಮಟ್ಟದ ವಾಹನಗಳನ್ನು ಪ್ರದರ್ಶಿಸುತ್ತವೆ. ಗಾಯತ್ರಿ ಜೋಶಿ 2004 ರಲ್ಲಿ ವಿಮರ್ಶಕರ ಮೆಚ್ಚುಗೆ ಗಳಿಸಿದ ಸ್ವದೇಸ್ ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದರು. ಅವರು ಶಾರುಖ್ ಎದುರು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಆದರೆ, ಸ್ವದೇಸ್ ನಂತರ ಗಾಯತ್ರಿ ನಟನೆಯಿಂದ ದೂರ ಸರಿದು ತಮ್ಮ ವೈಯಕ್ತಿಕ ಜೀವನದತ್ತ ಗಮನ ಹರಿಸಲು ನಿರ್ಧರಿಸಿದ್ದಾರೆ.
ಅವರು ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ಒಬೆರಾಯ್ ಕನ್ಸ್ಟ್ರಕ್ಷನ್ನ ವ್ಯವಸ್ಥಾಪಕ ನಿರ್ದೇಶಕ ವಿಕಾಸ್ ಒಬೆರಾಯ್ ಅವರನ್ನು ವಿವಾಹವಾಗಿದ್ದಾರೆ. ಅಂದಿನಿಂದ, ಅವರು ಹೆಚ್ಚಾಗಿ ಸಾರ್ವಜನಿಕ ಕಣ್ಣಿನಿಂದ ದೂರ ಉಳಿದಿದ್ದಾರೆ ಮತ್ತು ಯಾವುದೇ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ
Posted by Vidyamaana on 2023-11-17 12:41:26 |
ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಸಂಭ್ರಮಿಸಿ ಸಂದೇಶ ಹರಿಬಿಟ್ಟಿದ್ದು, ಹಿಂದೂ ಮಂತ್ರ ಎಂಬ ಹೆಸರಿನ ಖಾತೆ ವಿರುದ್ಧ ಉಡುಪಿಯ ಸೆನ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧಕನಂತೆ ಬಿಂಬಿಸಿರುವುದು ಕಂಡುಬಂದಿದೆ.
ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ ಸಂಬಂಧ ಕಿಡಿಗೇಡಿಗಳು ಹತ್ಯೆಯನ್ನು ಸಂಭ್ರಮಿಸಿ ಹಿಂದೂ ಮಂತ್ರ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ನಲ್ಲಿ, 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಶೀರ್ಷಿಕೆ ಬರೆಯಲಾಗಿದೆ. ಅಲ್ಲದೆ, ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟದ ಎಮೋಜಿ ತೊಡಿಸಲಾಗಿದೆ. ಇದರೊಂದಿಗೆ, ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರು ಕೂಡ ಬರಲಿಲ್ಲ. ಹೀಗಾಗಿ ನಾವು ಕೂಡ ಈ ವಿಚಾರಕ್ಕೆ ಬರುವುದಿಲ್ಲ ಎಂದು ಬರೆಯಲಾಗಿದೆ
Posted by Vidyamaana on 2023-06-03 00:44:08 |
ಒಡಿಶಾ: ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.
ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.
ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Posted by Vidyamaana on 2023-05-23 11:53:32 |
ಪುತ್ತೂರು : ಪೊಲೀಸ್ ದೌರ್ಜನ್ಯ ಸಂದರ್ಭ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಗಿದ್ದಿದೆ. ಈ ಬಗ್ಗೆ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿವೆ. ವರದಿ ಹೊರ ಬರುತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿದ್ದಾರೆ.
ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದಾರೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದರು ಎಂದು ವ್ಯಾಪಕ ಪ್ರಚಾರ ಪಡೆದುಕೊಂಡ ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.
ಡಿವೈಎಸ್ಪಿ ಗೆ ಒತ್ತಡ ಹಾಕಿಸಿ ಬಿಜೆಪಿಯ ಕಾರ್ಯಕರ್ತರ ಮೇಲೆಯೇ ಡಿವೈಎಸ್ಪಿ ಕಚೇರಿಯಲ್ಲೇ ತೀವ್ರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತು.
ಮೇ.15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೊಳಗಾದವರ ಮುಚ್ಚಲಿಕೆ ಬರೆದು ಬಿಡುಗಡೆಗೊಳಿಸಿಕೊಂಡು ಬಂದಿದ್ದರು. ನಂತರ ಹಲ್ಲೆಗೊಳಗಾದವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮತ್ತೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಎಸ್ಐ , ಪುತ್ತೂರಿನ ಪೊಲೀಸ್ ಕಾನ್ಸ್ಟೆಬಲ್ ರ ಮೇಲೆ ಪ್ರಕರಣ ದಾಖಲು ನಡೆಸಿ, ಎಸ್ಐ ಮತ್ತು ಪಿಸಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿದೆ.
ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದಾಗ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಹೊರ ಬಂದಿದೆ. ಕೂಡಲೇ ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕ್ರಮ ಆಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
Posted by Vidyamaana on 2024-06-03 07:14:00 |
ಪುತ್ತೂರು: ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜೂ.೨ ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಒಂದು ದಿನದ ನಾಯಕತ್ವ, ವ್ಯಕ್ತಿತ್ವ ವಿಕಸನ ಮತ್ತು ಪರಿಣಾಮಕಾರಿ ಸಂವಹನ ವಿಚಾರ ಸಂಕೀರ್ಣ ಯುವ ವಿಕಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸಹಕಾರತ್ನ ಸವಣೂರು ಕೆ.ಸೀತಾರಾಮ ರೈಯವರು ದೀಪ ಬೆಳಗಿಸಿ, ಉದ್ಘಾಟನೆಗೈದು ಮಾತನಾಡಿ ಯುವ ಸಮುದಾಯ ಸಮಾಜದ ಶಕ್ತಿಯಾಗಿದ್ದು, ಬಂಟ ಸಮಾಜದ ಯುವ ಪೀಳಿಗೆಯ ಅಭಿವೃದ್ಧಿಗೆ ಇಂಥ ಕಾರ್ಯಕ್ರಮ ಸಹಕಾರಿ ಎಂದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು,
Posted by Vidyamaana on 2023-06-16 09:01:27 |
ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.