Posted by vidyamaana on 2024-07-24 23:15:54 |
ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.
ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.
ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-02-13 11:08:34 |
ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ ನಿವಾಸಿ ಇಬ್ರಾಹಿಂ ಬಂಧಿತರು.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾದ ಮಹಮ್ಮದ್ ಸಮೀವುಲ್ಲಾ (34) ಹಾಗೂ ಇಬ್ರಾಹಿಂ (35) ಎಂಬವರುಗಳು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಅವರನ್ನು ಫೆ.12 ರಂದು ಪೊಲೀಸ್ ಉಪನಿರೀಕ್ಷರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿರುತ್ತದೆ.
Posted by Vidyamaana on 2023-08-11 01:46:09 |
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಅಪಾಯಕಾರಿ ನೀರಿನಲ್ಲಿ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐಫೋನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ ಫೋನ್ ಮೊಬೈಲ್ ಜೆಟ್ಟಿ ಬಳಿ ಬೋಟ್ ನಿಲ್ಲುವ ನದಿ ನೀರಿಗೆ ಬಿದ್ದಿತ್ತು. ಮೊಬೈಲ್ ಕಳೆದುಕೊಂಡು ಚಿಂತಿತರಾದ ಅವರು ಬೇರೆಯವರ ಸಹಾಯದಿಂದ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.ತಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿನ ಆಳದಲ್ಲಿ ಹುಡುಕಾಟ ನಡೆಸಿದ್ದು ಮೊಬೈಲ್ ಪತ್ತೆ ಹಚ್ಚಿ ಹೊರತೆಗೆದು ವಾರಸುದಾರರಿಗೆ ನೀಡಿದ್ದಾರೆ. ನೆರೆದಿದ್ದ ಜನ ಈಶ್ವರ್ ಅವರ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ
Posted by Vidyamaana on 2024-05-02 07:19:40 |
ಬೆಂಗಳೂರು : ಮೇ.9 ರಿಂದ ಹಜ್ ಯಾತ್ರೆ ಪ್ರಾರಂಭವಾಗಲಿದ್ದು, ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ದೇಶದಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳ ಮತದಾನ ಪ್ರಕ್ರಿಯೆ ಮೇ.7 ರಂದು ನಡೆಯಲಿದೆ.ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂದರೆ ಮೇ.8 ರಂದು ಕಾರ್ಯಕ್ರಮ ಆಯೋಜಿಸಲು ಕರ್ನಾಟಕ ಹಜ್ ಸಮಿತಿ ಚಿಂತನೆ ನಡೆಸಿದೆ.
Posted by Vidyamaana on 2024-04-22 10:48:39 |
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ
Posted by Vidyamaana on 2024-06-13 17:25:59 |
ಬೆಂಗಳೂರು : ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ.
ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ - 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ.
Posted by Vidyamaana on 2024-06-30 12:26:53 |
ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದ್ದು, ಟೂರ್ ಏಜನ್ಸಿ ಅಜ್ಮೀರ್ ಯಾತ್ರೆಗೆ ಕರೆದುಕೊಂಡು ಹೋಗಿ ಹಣ ವಂಚಿಸಿದೆ ಎಂದು ಯಾತ್ರಾರ್ಥಿ ಕುಟುಂಬವೊಂದು ಬೆಂಗಳೂರಿನ ಪದ್ಮನಾಭನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿಯ ಫಾರೂಕ್ ಎಂಬವರಿಗೆ ಸೇರಿದ ಈ ಟೂರ್ ಏಜೆನ್ಸಿ ಮೂಲಕ ಆತೂರು ಮೂಲದ ಮಹಮ್ಮದ್ ತ್ವಾಹ ಮತ್ತು ಕುಟುಂಬಸ್ಥರು ಸೇರಿ ಒಟ್ಟು 60 ಯಾತ್ರಿಕರಿದ್ದ ತಂಡ ಅಜ್ಮೀರ್ ಯಾತ್ರೆಗೆ ತೆರಳಿತ್ತು. ಫಾರೂಕ್ ಅವರ ಟೂರ್ ಏಜೆನ್ಸಿ ಮೂಲಕ ಬೆಂಗಳೂರಿನಿಂದ ಅಜ್ಮೀರ್ ಗೆ ತಂಡ ತೆರಳಿತ್ತು. 60 ಸಾವಿರದ ಪ್ಯಾಕೇಜ್ ಮೂಲಕ ಅಜ್ಮೀರ್ ಯಾತ್ರೆಗೆ ತೆರಳಿದ್ದರು. ಆದರೆ ಅಜ್ಮೀರ್ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಮಹಮ್ಮದ್ ತ್ವಾಹ ಫ್ಯಾಮಿಲಿ ಅವರಲ್ಲಿ ಟೂರ್ ಏಜೆನ್ಸಿ ಸಿಬ್ಬಂದಿ ಹೆಚ್ಚುವರಿ ಹಣ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ.