Posted by vidyamaana on 2024-07-25 06:35:41 |
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.
ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.
ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್ಐ ಹೇಳಿದ್ದಾರೆ.
Posted by Vidyamaana on 2024-04-10 11:00:26 |
ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು.
Posted by Vidyamaana on 2024-08-28 13:19:17 |
ನವದೆಹಲಿ: ಸಿಸಿಐ ಕಾರ್ಯದರ್ಶಿ ಜಯ್ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಯ್ ಶಾ ಅವರಿಗೆ ಐಸಿಸಿ ಮಂಡಳಿಯಿಂದ ಭಾರಿ ಬೆಂಬಲ ಸಿಕ್ಕಿದ್ದು,16ರಲ್ಲಿ 15 ಸದಸ್ಯರು ಜಯ್ ಶಾ ಪರವಾಗಿದ್ದರು. ಇದರಿಂದಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ ಮೊದಲೇ ಖಚಿತವಾಗಿತ್ತು, ಅದು ಅಧಿಕೃತವಾಗಿದೆ. ನಾಮನಿರ್ದೇಶನ ಪ್ರಕ್ರಿಯೆಯು ಆಗಸ್ಟ್ 27 ರಂದು ಮುಕ್ತಾಯಗೊಂಡಿದ್ದು, ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಗೆ ಜಯ್ ಶಾ ಪಾತ್ರವಾಗಿದ್ದಾರೆ.
Posted by Vidyamaana on 2023-10-31 07:23:11 |
ಮಂಗಳೂರು: ಉಳ್ಳಾಲದ ಮಾಸ್ತಿಕಟ್ಟೆ – ಆಝಾದ್ ನಗರದ ಹುಡುಗನೊಬ್ಬ ಕಾಣೆಯಾಗಿ ದಿನದ ಬಳಿಕ ಪತ್ತೆಯಾದ ಘಟನೆ ನಡೆದಿದೆ.
ಉಳ್ಳಾಲ ಮಾಸ್ತಿ ಕಟ್ಟೆ ಆಝಾದ್ ನಗರದ ಉಸ್ಮಾನ್ ಫಯಾಝ್ ಎಂಬವರ ಮಗ ಸ್ಥಳೀಯ ಶಾಲೆ ಯೊಂದರಲ್ಲಿ 10 ನೇ ತರಗತಿಯಲ್ಲಿ ಕಲಿಸುತ್ತಿರುವ ಮೊಹಮ್ಮದ್ ಹುಝಯ್ಫ್ ಎಂಬ 16 ವರ್ಷದ ಹುಡುಗ ನಿನ್ನೆ ಸಂಜೆಯಿಂದ (28-10-2023) ಕಾಣೆಯಾಗಿದ್ದನು.ಮನೆಯವರು, ಬಂಧುಗಳು ಆತಂಕಕ್ಕೆ ಈಡಾಗಿದ್ದರು. ಇದೀಗ ಆತ ಗೋವಾದಲ್ಲಿ ಸಿಕ್ಕಿದ ಮಾಹಿತಿಯನ್ನು ಬಾಲಕನ ಕುಟುಂಬ ಹಂಚಿಕೊಂಡಿದೆ.
ಮನೆಯಿಂದ ಹೊರ ಹೋದವನು ವಾಪಸ್ ಬರದೇ ಇರುವ ಕಾರಣ ಹುಡುಗನ ಹೆತ್ತವರು ತುಂಬಾ ಆತಂಕ, ಗಾಬರಿಗೊಂಡಿದ್ದರು. ಒಂದು ದಿನದ ಬಳಿಕ ಹುಡುಗ ಪತ್ತೆಯಾಗಿದ್ದು, ನಾಪತ್ತೆಯ ಕಾರಣ ತಿಳಿದುಬಂದಿಲ್ಲ.
Posted by Vidyamaana on 2024-01-13 04:36:09 |
ಬೆಂಗಳೂರು ಜನವರಿ 13: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಹೌದು.... ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಿಜೆಪಿ ಬಯಸಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. ನಿರ್ಮಲಾ ಅವರು ಕರ್ನಾಟಕ ಮತ್ತು ಜೈಶಂಕರ್ ಬೆಂಗಳೂರು ದಕ್ಷಿಣದಿಂದ ಪ್ರತಿನಿಧಿಸುವ ಚಿಂತನೆಗಳು ನಡೆಯುತ್ತಿವೆ. ಮೂಲಗಳ ಪ್ರಕಾರ, ಪ್ರಸ್ತುತ ಕೇಸರಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರ್ಮಲಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಜೊತೆಗೆ ಜೈಶಂಕರ್ಗೆ ಹಲವು ಆಯ್ಕೆಗಳಿವೆ. ಹಿಂದುತ್ವದ ಫೈರ್ಬ್ರಾಂಡ್ ಅನಂತಕುಮಾರ್ ಹೆಗಡೆ ಪ್ರಸ್ತುತ ಸಂಸದರಾಗಿರುವ ಉತ್ತರ ಕನ್ನಡ ಬಿಜೆಪಿಯ ಮತ್ತೊಂದು ಭದ್ರಕೋಟೆಯಾಗಿದ್ದು, ರಾಜತಾಂತ್ರಿಕ-ರಾಜಕಾರಣಿ ಇಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಪಕ್ಷ ಚಿಂತಿಸುತ್ತಿದೆ. BJP Candidate List: ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ್ಯಾರು? ಇಲ್ಲಿದೆಸಂಭವನೀಯ ಪಟ್ಟಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳು ಜೈಶಂಕರ್ಗೆ ಸುರಕ್ಷಿತವಾಗಿರುತ್ತವೆ ಎಂದು ಬಿಜೆಪಿ ಭಾವಿಸಿದೆ. ಹೀಗಾಗಿ ಜೈಶಂಕರ್ ಅವರು ಬೆಂಗಳೂರಿಗೆ ಆಗಾಗ್ಗೆ ಬರುತ್ತಿದ್ದಾರೆ. ಈ ನಗರದೊಂದಿಗೆ ಅವರು ದೀರ್ಘ ವೈಯಕ್ತಿಕ ಒಡನಾಟ ಹೊಂದಿದ್ದಾರೆಂದು ಹೇಳಲಾಗುತ್ತಿದೆ. ಅವರು ಇಲ್ಲಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಬಿಜೆಪಿಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಜೈಶಂಕರ್ ಬೆಂಗಳೂರಿಗೆ ಹಲವು ಬಾರಿ ಭೇಟಿ ನೀಡಿದ್ದರು. ಅವರು ಶಿಕ್ಷಣ ಸಂಸ್ಥೆಗಳು, ಕಬ್ಬನ್ ಪಾರ್ಕ್ಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿದ್ದರು ಮತ್ತು ಪ್ರಸಿದ್ಧ ವಿವಿ ಪುರಂ ಫುಡ್ ಸ್ಟ್ರೀಟ್ನಲ್ಲಿಯೂ ತಿನ್ನಲು ಅವರು ಹೋಗಿರುವುದಿದೆ. ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಅವರು ಕಳೆದ ವಾರ ಇಲ್ಲಿಗೆ ಬಂದಿದ್ದರು. ಬೆಂಗಳೂರು ದಕ್ಷಿಣಕ್ಕೆ ಕರ್ನಾಟಕ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೆಸರು ಕೇಳಿಬರುತ್ತಿದೆ ಎಂದುಹೇಳಲಾಗುತ್ತಿದೆ. ತೇಜಸ್ವಿನಿ ದಿವಂಗತ ಎಚ್ಎನ್ ಅನಂತಕುಮಾರ್ ಅವರು ಪತ್ನಿ, ಅನಂತಕುಮಾರ್ 1996 ರಿಂದ ಸತತ ಆರು ಅವಧಿಗೆ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿದ ಬಿಜೆಪಿ ಧೀಮಂತರು. 2018 ರಲ್ಲಿ ಅವರ ಅಕಾಲಿಕ ಮರಣದ ನಂತರ, ತೇಜಸ್ವಿನಿ ಅವರು 2019 ರ ಲೋಕಸಭಾ ಅಭ್ಯರ್ಥಿಯಾಗಿ ಉತ್ತರಾಧಿಕಾರಿಯಾಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿಯು ರಾಜಕೀಯವಾಗಿ ಹಸಿರು ನಿಶಾನೆ ತೋರಿದ್ದ ಸೂರ್ಯ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.
Posted by Vidyamaana on 2024-06-18 16:47:47 |
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಬಂಧಿತ ಆರೋಪಿ.ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಉದಯ ಕುಮಾರ್ ಗೆ ಬಾರೊಂದರಲ್ಲಿ ವಸಂತ ಎಂಬಾತನ ಪರಿಚಯವಾಗಿದ್ದು, ರವಿವಾರ ರಾತ್ರಿ ಕಾಂತಮಂಗಲಕ್ಕೆ ಅಟೋ ರಿಕ್ಷಾದಲ್ಲಿ ಬಂದು ಶಾಲಾ ಜಗಲಿಯಲ್ಲಿ ಮಲಗಿದ್ದರು. ವಸಂತ ಎಂಬವರ ಬಳಿ 800
Posted by Vidyamaana on 2024-01-14 06:19:26 |
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ, ಸುಳ್ಯ ತಾಲೂಕಿನ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ (79) ನಿಧನರಾದರು.ಮೂಲತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಎಡಕ್ಕಾನ ನಿವಾಸಿಯಾಗಿರುವ ಗಣಪತಿ ಭಟ್ ಅವರು ಹಲವು ವರ್ಷಗಳ ಕಾಲ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿರುವ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಇತ್ತಿಚೆಗೆ ಅಲ್ಪಕಾಲದ ಅಸೌಖ್ಯದಿಂದ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ ಲಕ್ಷ್ಮೀ ಭಟ್, ಪುತ್ರ ಉದ್ಯಮಿ ರಾಜಾರಾಮ್ ಭಟ್ ಎಡಕ್ಕಾನ, ಪುತ್ರಿಯರಾದ ಸಂಧ್ಯಾ ಗಣಪತಿ ಭಟ್ ಹಾಗೂ ಗೀತಾ ಗಣಪತಿ ಭಟ್ ರನ್ನು ಅಗಲಿದ್ದಾರೆ.