ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 3

Posted by Vidyamaana on 2023-09-03 01:50:16 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 3

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 3 ರಂದು



ಬೆಳಿಗ್ಗೆ 10 ಗಂಟೆಗೆ ದ ಕ ಜಿಲ್ಲಾ ಟ್ಯಾಕ್ಸಿಮೆನ್ ,ಮ್ಯಾಕ್ಸಿಕ್ಯಾಬ್  ಅಸೋಸಿಯೇಶನ್ ಸುರ್ಣಮಹೋತ್ಸವ


ಸ್ಥಳ: ಮಂಗಳೂರು ಪುರಭವನ


11 ಗಂಟೆಗೆ ಕೆಪಿಟಿ ಮಂಗಳೂರಿನಲ್ಲಿ ಅಭಿಮತ ಚಾನೆಲ್ ಉದ್ಘಾಟನೆ


12 ಗಂಟೆಗೆ ಕಂಬಳಬೆಟ್ಟುವಿನಲ್ಲಿ ಸೇವಾ ಸಹಕಾರಿ ಸಂಘ ಉದ್ಘಾಟ‌ನೆ


4 ಗಂಟೆಗೆ ಅಜ್ಜನಡ್ಕ ಸೌಹಾರ್ಧ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ 

 ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ

ಪುತ್ತೂರು ಬೆಥನಿ ಶಾಲಾ ವಿದ್ಯಾರ್ಥಿನಿ ಫಾತಿಮಾ ಅಫ್ನಾ ನಾಪತ್ತೆ

Posted by Vidyamaana on 2024-02-01 18:21:30 |

Share: | | | | |


ಪುತ್ತೂರು ಬೆಥನಿ ಶಾಲಾ ವಿದ್ಯಾರ್ಥಿನಿ ಫಾತಿಮಾ ಅಫ್ನಾ ನಾಪತ್ತೆ

ಪುತ್ತೂರು: ಇಲ್ಲಿನ ಬೆಥನಿ ಪ್ರಾಥಮಿಕ ಶಾಲೆಯ ವಿದ್ಯಾರ್ಥೀನಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ಬಾಲಕಿಯನ್ನು ಫಾತಿಮಾ ಅಫ್ನಾ ಎಂದು ಗುರುತಿಸಲಾಗಿದೆ.

ಭಾವಚಿತ್ರದಲ್ಲಿರುವ ಬಾಲಕಿ ಸಿಕ್ಕಿದಲ್ಲಿ ಮಾಹಿತಿ ನೀಡಲು ಸಂಪರ್ಕಿಸಿ 7899860151.

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ತೀರ್ಥಲತಾ ನಾಪತ್ತೆ

Posted by Vidyamaana on 2023-08-02 10:49:33 |

Share: | | | | |


ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ   ತೀರ್ಥಲತಾ ನಾಪತ್ತೆ

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.


ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

Posted by Vidyamaana on 2023-12-30 12:08:01 |

Share: | | | | |


ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.‌‌ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.


ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಬಳಿಕ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು

ನಕಲಿ ದಾಖಲೆ ಸೃಷ್ಟಿ ವಂಚನೆ ಬೆಳಕಿಗೆ

Posted by Vidyamaana on 2023-07-11 10:40:21 |

Share: | | | | |


ನಕಲಿ ದಾಖಲೆ ಸೃಷ್ಟಿ ವಂಚನೆ ಬೆಳಕಿಗೆ

ಪುತ್ತೂರು: ಸರ್ಕಾರಿ ದಾಖಲೆಗಳ ನಕಲಿ ಜಾಲವನ್ನು ಬೇಧಿಸಿರುವ ಪುತ್ತೂರು ತಾಪಂ ಇಓ ನೇತೃತ್ವದ ತಂಡ, ನಕಲಿ ದಾಖಲೆ, ನಕಲಿ ಸೀಲ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪುತ್ತೂರಿನ ಪಡೀಲಿನಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವನಾಥ್ ಎಂಬವರಿಗೆ ಸೇರಿದ ಬಿ.ಬಿ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಸೆಂಟರಿನಲ್ಲಿ ಅಕ್ರಮ ಜಾಲವನ್ನು ಪತ್ತೆ ಹಚ್ಚಲಾಗಿದೆ. ಸರ್ಕಾರದಿಂದ ಅನುಮತಿ‌ ಪಡೆದ ಗುತ್ತಿಗೆದಾರರು ಇವರಾಗಿದ್ದು, ಮೆಸ್ಕಾಂನ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದರು.


ವಿದ್ಯುತ್ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದ ಈ ಅಂಗಡಿಯಲ್ಲಿ, ಪುತ್ತೂರು ನಗರಸಭೆ, ಕಡಬ ತಾಲೂಕು ಪಂಚಾಯತ್ ಹಾಗೂ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಗಳ ಸೀಲ್ ಗಳನ್ನೇ ಹೋಲುವ ನಕಲಿ ಸೀಲ್ ಗಳು‌ ಪತ್ತೆಯಾಗಿವೆ.

ದಾಖಲೆ ಪತ್ರಗಳಿಗೆ ಫೋರ್ಜರಿ ಸಹಿ‌ ಹಾಕಿ, ಅದಕ್ಕೆ ನಕಲಿ ಸೀಲ್ ಗಳನ್ನು ಹಾಕಲಾಗುತ್ತಿತ್ತು. ಸಾರ್ವಜನಿಕ ದೂರಿನ‌ ಮೇರೆಗೆ ತಾಪಂ ಇಓ ನವೀನ್ ಭಂಡಾರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲಿಸಿದಾಗ ವಂಚನೆ ಜಾಲ ಬೆಳಕಿಗೆ ಬಂದಿದೆ.

ಬಂಟ್ವಾಳ : ಶೋಭಾಯಾತ್ರೆಯ ಮಾರ್ಗ ಬದಲಾವಣೆಗೆ ಒಪ್ಪದ ತಾಯಿ ಶಾರದೆ

Posted by Vidyamaana on 2023-09-10 20:10:13 |

Share: | | | | |


ಬಂಟ್ವಾಳ : ಶೋಭಾಯಾತ್ರೆಯ ಮಾರ್ಗ ಬದಲಾವಣೆಗೆ ಒಪ್ಪದ ತಾಯಿ ಶಾರದೆ

ಬಂಟ್ವಾಳ: ಬೇಂಕ್ಯ ಸುಭಾಶ್ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ 97ನೇ ವರ್ಷದ ಶಾರದಾ ಪೂಜಾ ಕಾರ್ಯಕ್ರಮವು ಈ ಬಾರಿ ನಾಲ್ಕು ದಿನಗಳ ಕಾಲ ಸಜೀಪಮೂಡ ಬೇಂಕ್ಯ ಶಾಲೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಈ ಹಿನ್ನಲೆಯಲ್ಲಿ ಇಂದು (ಸೆ.10) ಮೂರು ಹಂತದ ಸಿದ್ಧಾತ ಸಭೆ ನಡೆಯಿತು. ಶಾರದ ನಗರ ಮಂದಿರದಲ್ಲಿ ನಡೆದ ಎರಡನೇ ಹಂತದ ಸಭೆಯಲ್ಲಿ ತಾಯಿ ಶಾರದೆಯ ಶೋಭಯಾತ್ರೆಯ ಕುರಿತಾಗಿ ಚರ್ಚೆ ನಡೆದುಸಭೆಯಲ್ಲಿದ್ದವರು ತಮ್ಮ ತಮ್ಮ ಸಲಹೆಗಳನ್ನು ನೀಡಿದರು.

ಈ ಸಭೆಯಲ್ಲಿ ಪ್ರಮುಖವಾಗಿ ಶೋಭಯಾತ್ರೆಯ ಮಾರ್ಗ ಬದಲಾವಣೆ ಕುರಿತಾಗಿಯೂ ಚರ್ಚೆ ಕೂಡ ನಡೆಯಿತು.

ಆ ಬಳಿಕ ಸಂಘದ ಹಿರಿಯರು ಹಾಗೂ ಅಧ್ಯಕ್ಷರು, ‘ತಾಯಿ ಶಾರದೆಗೆ ಶೋಭಯಾತ್ರೆಯ ಮಾರ್ಗ ಬದಲಾವಣೆಯ ಒಪ್ಪಿಗೆ ಇದೆಯಾ..?’ ಎಂದು ಮಂಗಳಾದೇವಿ ದೇವಸ್ಥಾನದಲ್ಲಿ ಗಣೇಶ್ ಐತಾಳ್ ಅವರಲ್ಲಿ ತಾಂಬೂಲ ಪ್ರಶ್ನೆ ಇರಿಸಿದ್ದು, ಈ ಸಂದರ್ಭ ತಾಯಿ ಶಾರದೆಗೆ ಮಾರ್ಗ ಬದಲಾವಣೆಯ ಒಪ್ಪಿಗೆ ಇಲ್ಲ ಎಂದು ಪ್ರಶ್ನೆಯಲ್ಲಿ ಕಂಡು ಬಂದಿದ್ದು,’ಇಷ್ಟು ವರ್ಷ ಯಾವ ಮಾರ್ಗದಲ್ಲಿ ತಾಯಿ ಶಾರದೆಯ ಮೆರವಣಿಗೆ ಸಾಗುತ್ತಿತ್ತೋ ಅದೇ ದಾರಿಯಲ್ಲೇ ನನ್ನ ಶೋಭಯಾತ್ರೆ ನಡೆಯಲಿ..’ ಎಂದು ತಾಯಿ ಶಾರದೆ ತಾಂಬೂಲ ಪ್ರಶ್ನೆಯಲ್ಲಿ ಸೂಚಿಸಿದ್ದಾಳೆ ಎಂದು ಕಂಡುಬಂತು.

ಹೀಗಾಗಿ ಇಂದು ನಡೆದ ಮೂರನೇ ಹಂತದ ಸಭೆಯಲ್ಲಿ ತಾಂಬೂಲ ಪ್ರಶ್ನೆಯಲ್ಲಿ ಕಂಡುಬಂದ ಹಾಗೆ ಈ ಮೊದಲಿನಂತೆ ಶೋಭಯಾತ್ರೆ ನಡೆಯುತ್ತಿದ್ದ ಮಾರ್ಗದಲ್ಲೇ ಈ ಬಾರಿಯೂ ಶೋಭಾಯಾತ್ರೆ ಸಾಗಲಿ ಎಂದು ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ತೀರ್ಮಾನಿಸಿದ್ದಾರೆ.

ಈ ಸಂದರ್ಭ ಶಾರದಾ ಪೂಜಾ ಸಮಿತಿಯ ಅಧ್ಯಕ್ಷರಾದ ವಸಂತ್ ಕುಮಾರ್ ಬರ್ಕೆ, ಮಾಜಿ ಅಧ್ಯಕ್ಷರಾದ ಶ್ರೀನಾಥ ಶೆಟ್ಟಿ, ಪಂಚಾಯತ್ ಸದಸ್ಯರಾದ ಯೋಗೀಶ್ ಬೆಳ್ಚಾಡ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ದೇವಿ ಪ್ರಸಾದ್ ಪೂಂಜಾ, ಸದಾನಂದ ಶೆಟ್ಟಿ,ಪ್ರಹ್ಲಾದ್ ಬೇಂಕ್ಯ ಹಾಗೂ ಸಂಘದ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.



Leave a Comment: