ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಸುಳ್ಯ : ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಲಿ ಮೃತ್ಯು

Posted by Vidyamaana on 2023-11-06 07:11:18 |

Share: | | | | |


ಸುಳ್ಯ : ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಲಿ ಮೃತ್ಯು

ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.


ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು

ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರುಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸಹ ಪ್ರಯಾಣಿಕ ಗಾಯಗೊಂಡಿದ್ದು,ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

Posted by Vidyamaana on 2024-05-27 21:31:18 |

Share: | | | | |


ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಸುದ್ದಿಗಳುವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ನ ಮೊದಲ ಪಟ್ಟಿ ರಿಲೀಸ್

Posted by Vidyamaana on 2023-03-25 03:19:12 |

Share: | | | | |


ಸುದ್ದಿಗಳುವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ನ ಮೊದಲ ಪಟ್ಟಿ ರಿಲೀಸ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಮೊದಲ ಪಟ್ಟಿ ರಿಲೀಸ್‌ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್‌ ಘೋಷಿಸಲಾಗಿದೆ.ಪ್ರಮುಖವಾಗಿ  ಕಾಪು ಕ್ಷೇತ್ರಕ್ಕೆ ಪುತ್ತೂರಿನವರಾದ ವಿನಯ್‌ ಕುಮಾರ್‌ ಸೊರಕೆ  ಸುಳ್ಯ ಕ್ಷೇತ್ರದಿಂದ ಕೃಷ್ಣಪ್ಪ ಮೂಡಬಿದ್ರೆ ಕ್ಷೇತ್ರದಿಂದ ಮಿಥುನ್ ರೈ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್‌ ಅವರ ಪುತ್ರ ದರ್ಶನ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಹೆಚ್.ಸಿ.ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. ಗಾಂಧಿನಗರದಿಂದ ದಿನೇಶ್‌ ಗುಂಡೂರಾವ್‌, ಬಿಟಿಎಂ ಲೇಔಟ್‌ ನಿಂದ ರಾಮಲಿಂಗ ರೆಡ್ಡಿ, ರಾಮನಗರ ಕ್ಷೇತ್ರದಿಂದ ಇಕ್ಬಾಲ್‌ ಅವರಗೆ ಟಿಕೆಟ್‌ ನೀಡಲಾಗಿದೆ. ಸೊರಕೆ,ಕುಂದಾಪುರ ಕ್ಷೇತ್ರಕ್ಕೆ ಎಂ.ದಿನೇಶ್‌ ಹೆಗ್ಡೆ,ಬೈಂದೂರು ಕ್ಷೇತ್ರದಿಂದ ಗೋಪಾಲ್‌ ಪೂಜಾರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಕೋಲಾರ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ಇನ್ನು ರಿವೀಲ್‌ ಮಾಡಿಲ್ಲ.

ಕೆಮ್ಮಾರ ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-10-17 20:10:42 |

Share: | | | | |


ಕೆಮ್ಮಾರ  ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

ಉಪ್ಪಿನಂಗಡಿ; ಪ್ರತೀ ನಿಮಿಷವು ಜಗತ್ತು ಬದಲಾವಣೆಯತ್ತ ದಾಪುಗಾಲು ಹಾಕುತ್ತಿದ್ದು ಒಂದು ಸಮಾಜವು ಈ ಬದಲಾವಣೆಯನ್ನು ಅರ್ಥ ಮಾಡಿಕೊಂಡು ವಿನೂತನ ಆವಿಷ್ಕಾರಗಳ ಮೂಲಕ ಬದಲಾವಣೆಗೆ ಒಡ್ಡಿಕೊಂಡು ತಮ್ಮ ಸಮಾಜವನ್ನು ರಕ್ಷಿಸಿ ಕೊಳ್ಳಬೆಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಕೆಮ್ಮಾರ ಶಂಸುಲ್ ಉಲಮಾ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ ಎಸ್ ಬಿ ದಾರಿಮಿ ಅಭಿಪ್ರಾಯ ಪಟ್ಟಿದ್ದಾರೆ.

ಅವರು  ಕೆಮ್ಮಾರ ಶಕ್ತಿ ನಗರದ ವುಮೆನ್ಸ್ ಶರೀಹತ್ ಕಾಲೇಜಿನ ವಿಧ್ಯಾರ್ಥಿನಿಯರಿಗಾಗಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ "ಮನಾರ"ಕಲಾ ಸಾಂಸ್ಕೃತಿಕ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾನಾಡಿದರು. 

  ಹಿಂದಿನ ಕಾಲದಲ್ಲಿ ನಮ್ಮ ಮಹಿಳೆಯರು ಅಡಿಗೆ ಮನೆಗೆ ಸೀಮಿತವಾಗಿದ್ದರು.ಆದರೆ ಇಂದು ಸಮಸ್ತ ದ ಉಲಮಾಗಳ ಉತ್ತಮ ಕಾರ್ಯವೈಖರಿಯಿಂದಾಗಿ ಮುಸ್ಲಿಂ ಮಹಿಳೆಯರು ಕೂಡಾ ವೈಧ್ಯಕೀಯ ,ಶೈಕ್ಷಣಿಕ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದು ಪ್ರತಿಭಾವಂತರಾಗಿ ಮುಂದಿನ ತಲೆಮಾರನ್ನೂ ವಿದ್ಯಾವಂತರನ್ನಾಗಿಸುವಲ್ಲಿ ಸಫಲರಾಗುತ್ತಿದ್ದಾರೆ.ಇದು ಉತ್ತಮ ಬೆಳವಣಿಗೆಯಾಗಿದ್ದು,

ಮುಸ್ಲಿಮರು ಕಾಲದ ಕರೆಯನ್ನು ಸ್ವೀಕರಿಸುವುದಿಲ್ಲ ಎನ್ನುವವರಿಗೆ ಇದು ತಕ್ಕ ಉತ್ತರ ಕೂಡಾ ಆಗಿದೆ ಎಂದು ನುಡಿದರು.

ಕಾರ್ಯಕ್ರಮವನ್ನು ಪೆರಿಯಡ್ಕ ಖತೀಬರಾದ ಅಬ್ದುಲ್ ರಹಿಮಾನ್ ಪೈಝಿ ಉದ್ಗಾಟಿಸಿದರು.

ಟ್ರಸ್ಟಿ ಸದಸ್ಯರಾದ ಉಮರ್ ಹಾಜಿ ಕೋಡಿಯಾಡಿ,ಬಶೀರ್ ಹಾಜಿ ದಾರಂದಕುಕ್ಕು,ಹಸೈನಾರ್ ಹಾಜಿ ಕೊಯಿಲ,ರಶೀದ್ ಹಾಜಿ ಪರ್ಲಡ್ಕ,ಇಸಾಕ್  ಕೆಮ್ಮಾರ,ಅಬ್ದುಲ್ಲ ಉಸ್ತಾದ್ ಕೆಮ್ಮಾರ,ಇಬ್ರಾಹಿಂ ಬಡಿಲ, ಯುನಿಕ್ ಅಬ್ದುಲ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು,ಕೆ ಎಂ ಎ ಕೊಡುಂಗೈ ಸ್ವಾಗತಿಸಿ, ಕೊನೆಗೆ ವಂದಿಸಿದರು.

ಕೇಂದ್ರ ಜುಮ್ಮಾ ಮಸೀದಿ ಗೆ ಭೇಟಿ ನೀಡಿದ ಪುತ್ತೂರಿನ ನೂತನ ಶಾಸಕ ಅಶೋಕ್ ರೈ

Posted by Vidyamaana on 2023-05-13 16:12:12 |

Share: | | | | |


ಕೇಂದ್ರ ಜುಮ್ಮಾ ಮಸೀದಿ ಗೆ ಭೇಟಿ ನೀಡಿದ ಪುತ್ತೂರಿನ ನೂತನ ಶಾಸಕ ಅಶೋಕ್ ರೈ

ಪುತ್ತೂರು: ನೂತನ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ದರ್ಗಾ ಹಾಗೂ ಚರ್ಚಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಪುತ್ತೂರು ಕೇಂದ್ರ ಜುಮ್ಮಾ ಮಸೀದಿ ವಠಾರ ದಲ್ಲಿರುವ ಪುತ್ತೂರು ತಂಙಳ್ ದರ್ಗಕ್ಕೆ  ಭೇಟಿ ನೀಡಿ ಪ್ರಾರ್ಥಿಸಿದರು. ಅವರ ಜೊತೆಗೆ ಪ್ರಮುಖರು ಉಪಸ್ಥಿತರಿದ್ದರು.

ಮಂಗಳೂರು ಲಾಡ್ಜ್ ನಲ್ಲಿ ಬೆಂಕಿ: ಓರ್ವ ಮೃತ್ಯು

Posted by Vidyamaana on 2023-11-23 10:53:49 |

Share: | | | | |


ಮಂಗಳೂರು  ಲಾಡ್ಜ್ ನಲ್ಲಿ ಬೆಂಕಿ: ಓರ್ವ ಮೃತ್ಯು

ಮಂಗಳೂರು: ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ.


ಯಶ್ರಾಜ್ ಎಸ್.ಸುವರ್ಣ(43) ಮೃತರು ಎಂದು ತಿಳಿದು ಬಂದಿದೆ.


ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು. ಅನಂತರ ಲಾಡ್ಜ್ ನವರು ತೆರೆದಾಗಬೆಂಕಿ ಆವರಿಸಿತ್ತು.


ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.



Leave a Comment: